ಕೆಪಿಸಿಸಿ ರಾಜ್ಯ ವಕ್ತಾರರಾಗಿ ಎಂ ಜಿ ಹೆಗಡೆ ನೇಮಕ

4:12 PM, Wednesday, March 13th, 2024
Share
1 Star2 Stars3 Stars4 Stars5 Stars
(No Ratings Yet)
Loading...

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ರಾಜ್ಯ ವಕ್ತಾರರಾಗಿ ಎಂ ಜಿ ಹೆಗಡೆ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ಅನುಮೋದನೆ ನೀಡಿದ್ದಾರೆ.

ಈ ಸಂಬಂಧ ಮಾರ್ಚ್ 13ರಂದು ಕೆಪಿಸಿಸಿ ಸಂವಹನ ಮತ್ತು ಸಾಮಾಜಿಕ ಜಾಲತಾಣಗಳ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಅಧಿಸೂಚನೆ ಹೊರಡಿಸಿದ್ದಾರೆ.

ಹೆಗ್ಗಡೆಯವರು ತಮ್ಮ ತೀಕ್ಷ್ಣವಾದ ಬುದ್ಧಿ ಮತ್ತು ನಿರರ್ಗಳ ಮಾತುಗಾರಿಕೆಗೆ ಹೆಸರಾದವರು. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಜಿಲ್ಲಾ ವಕ್ತಾರರಾಗಿ ಕೆಲಸ ಮಾಡಿದ್ದಾರೆ.

ವಿವಿಧ ಕಾರಣಗಳಿಗಾಗಿ ಹೋರಾಡುವ ಕಾಂಗ್ರೆಸ್ಸಿಗನಿಗಿಂತ ಹೆಚ್ಚಾಗಿ ಸಾಮಾಜಿಕ ಕಾರ್ಯಕರ್ತನಾಗಿಯೂ ಗುರುತಿಸಿಕೊಂಡಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English