ಮಂಗಳೂರು : ಅಡ್ಯಾರಿನ ಬೊಂಡ ಫ್ಯಾಕ್ಟರಿ ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಜಿಲ್ಲಾ ಅಂಕಿತ ಅಧಿಕಾರಿ ಆಹಾರ ಸುರಕ್ಷತೆ, ಜಿಲ್ಲಾ ಸರ್ವೇಕ್ಷಣಾಧಿಕಾರಿ, ತಾಲ್ಲೂಕು ಆರೋಗ್ಯಾಧಿಕಾರಿ ಮಂಗಳೂರು ಮತ್ತು ತಂಡದವರು ಏಪ್ರಿಲ್ 11 ರಂದು ಪುನಃ ಸ್ಥಳ ಪರಿಶೀಲನೆ ಮಾಡಿ ಸಂಸ್ಥೆಯ ಮುಖ್ಯಸ್ಥರೊಂದಿಗೆ ಚರ್ಚಿಸಿ ತಾತ್ಕಾಲಿಕವಾಗಿ ಮತ್ತು ಮುಂದಿನ ಆದೇಶದವರೆಗೆ ಎಳನೀರು ಮತ್ತು ಇತರೆ ಆಹಾರ ಪದಾರ್ಥಗಳನ್ನು ಮಾರಾಟ ಮಾಡದಂತೆ ತಿಳುವಳಿಕೆ ನೋಟೀಸ್ ನೀಡಿ ಬಂದ್ ಮಾಡಿಸಲಾಯಿತು.
ಆನಂತರ ತುಂಬೆಯಲ್ಲರುವ ಫಾದರ್ ಮುಲ್ಲರ್ ಆಸ್ಪತ್ರೆ, ಬಿ.ಸಿ.ರಸ್ತೆಯ ಪೆರ್ಲಯ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ ಬಂಟವಾಳ, ಕಲ್ಲಡ್ಕದ ಪುಷ್ಪರಾಜ್ ಆಸ್ಪತ್ರೆ, ಮಂಗಳೂರು ನಗರದ ಹೈಲ್ಯಾಂಡ್ , ಯುನಿಟಿ , ಕಣಚೂರು,
ಯೆನೆಪೋಯ, ಇಂಡಿಯಾನ, ಕೊಲಾಸೊ ಹಾಗೂ ಇತರೆ ವಿವಿಧ ಆಸ್ಪತ್ರೆಗಳಿಗೆ ತಂಡಗಳಾಗಿ ಭೇಟಿ ನೀಡಿ ಪರಿಶೀಲನೆ ಮಾಡಲಾಯಿತು.
ಇದುವರೆಗೆ 137 ಮಂದಿ ಎಳನೀರು ಕುಡಿದಿರುವುದರಿಂದ ಅಸ್ವಸ್ಥರಾಗಿದ್ದು, ಹೊರರೋಗಿಗಳಾಗಿ 84, ಒಳರೋಗಿಗಳಾಗಿ 53 ಮಂದಿ ಚಿಕಿತ್ಸೆ ಪಡೆದಿದ್ದಾರೆ. ಇದುವರೆಗೆ 23 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿರುತ್ತಾರೆ. ಆಸ್ಪತ್ರೆಯಲ್ಲಿರುವ ಎಲ್ಲರ ಆರೋಗ್ಯವು ಸ್ಥಿರವಾಗಿರುತ್ತದೆ. ಆರೋಗ್ಯ ಇಲಾಖೆಯಿಂದ ನಿರಂತರವಾಗಿ ಪರಿಸ್ಥಿತಿಯ ಮೇಲೆ ನಿಗಾ ವಹಿಸಲಾಗಿರುತ್ತದೆ.
Click this button or press Ctrl+G to toggle between Kannada and English