Blog Archive

ವಿಧಾನಪರಿಷತ್ ಅಭ್ಯರ್ಥಿಯಿಂದ ನಕಲಿ ಅಂಚೆ ಚೀಟಿ ಬಳಕೆ ಆರೋಪ!

Thursday, June 7th, 2018
election

ಮಂಗಳೂರು: ವಿಧಾನಪರಿಷತ್ ನೈಋತ್ಯ ಶಿಕ್ಷಕ ಕ್ಷೇತ್ರದ ಅಭ್ಯರ್ಥಿಯಾಗಿರುವ ಒಬ್ಬರು ಅಂಚೆ ಇಲಾಖೆಯನ್ನೆ ಯಾಮಾರಿಸಿ ಮತದಾರರನ್ನು ತಲುಪಲು ಯತ್ನಿಸಿರುವ ಘಟನೆಯೊಂದು ನಗರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಅಭ್ಯರ್ಥಿ ಮತದಾರರಿಗೆ ಕಳುಹಿಸಿದ ಮನವಿ ಪತ್ರಗಳಿಗೆ ನಕಲಿ ಅಂಚೆ ಚೀಟಿಗಳನ್ನು ಬಳಸಿದ್ದು, ಈ ಕುರಿತು ಮಂಗಳವಾರ ಬಲ್ಮಠದ ಅಂಚೆ ವಿಭಾಗೀಯ ಕಚೇರಿಗೆ ಬೆಂಗಳೂರಿನ ಪ್ರಾದೇಶಿಕ ಕಚೇರಿಯಿಂದ ಮಾಹಿತಿ ಬಂದ ಹಿನ್ನೆಲೆಯಲ್ಲಿ ಅವರ ಎಲ್ಲಾ ಮನವಿ ಪತ್ರಗಳನ್ನು ತಡೆಹಿಡಿಯಲಾಗಿದೆ. ವಿಧಾನ ಪರಿಷತ್ ನೈಋತ್ಯ ಶಿಕ್ಷಕ ಪದವೀಧರ ಕ್ಷೇತ್ರಕ್ಕೆ ಜೂ.8ರಂದು ಚುನಾವಣೆ ನಡೆಯಲಿದೆ. ಮತದಾರರನ್ನು […]

ದೇಶದಲ್ಲಿ ಎಲ್ಲಾ ರಾಜಕೀಯ ಪಕ್ಷಗಳಿಗೆ ಮೋದಿ ಭಯ, ಮೋದಿ ಜ್ವರ ಶುರುವಾಗಿದೆ: ಸಿ ಟಿ ರವಿ

Tuesday, June 5th, 2018
c-t-ravi

ಮಂಗಳೂರು: ರಾಜ್ಯದಲ್ಲಿ ಅಸ್ತಿತ್ವದಲ್ಲಿರುವುದು ಹಳಸಿದವರ ಮತ್ತು ಹಸಿದವರ ಸರ್ಕಾರ ಎಂದು ಬಿಜೆಪಿ ವಕ್ತಾರ ಸಿ ಟಿ ರವಿ ವ್ಯಂಗ್ಯವಾಡಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿ.ಟಿ. ರವಿ, ಜನಾದೇಶ ಕಳೆದುಕೊಂಡ ಕಾಂಗ್ರೆಸ್ ಜೆಡಿಎಸ್ ಅಪವಿತ್ರ ಮೈತ್ರಿ ಮಾಡಿಕೊಂಡಿದೆ. ದೇಶದಲ್ಲಿ ಎಲ್ಲಾ ರಾಜಕೀಯ ಪಕ್ಷಗಳಿಗೆ ಮೋದಿ ಭಯ, ಮೋದಿ ಜ್ವರ ಶುರುವಾಗಿದೆ. ಅದಕ್ಕಾಗಿ ಬಿಜೆಪಿ ವಿರುದ್ದ ಎಲ್ಲಾ ಪಕ್ಷಗಳು ಒಟ್ಟಾಗುತ್ತಿದೆ. ಶಿಕ್ಷಕ ಮತ್ತು ಪದವೀದರ ಕ್ಷೇತ್ರದ ‌ವಿಧಾನಪರಿಷತ್ ಚುನಾವಣೆ ಯಲ್ಲಿ ಕಾಂಗ್ರೆಸ್, ಜೆಡಿಎಸ್ ಗುಂಡು ತುಂಡುಗಳ ಪಾರ್ಟಿ, ಹಣದ ಆಮೀಷ […]