ರಾಣೆಬೆನ್ನೂರು ಕೆಪಿಜೆಪಿ ಶಾಸಕ ಆರ್‌.ಶಂಕರ್‌ ಕಾಂಗ್ರೆಸ್‌ಗೆ ಸೇರ್ಪಡೆ..!

Wednesday, May 16th, 2018
r-shankar

ಬೆಂಗಳೂರು: ಬಿಜೆಪಿ ಬೆಂಬಲಿಸುವುದಾಗಿ ಹೇಳಿದ್ದ ರಾಣೆ ಬೆನ್ನೂರು ಕೆಪಿಜೆಪಿ ಶಾಸಕ ಮೈತ್ರಿ ಸರ್ಕಾರ ಬರುವ ಸಾಧ್ಯತೆಗಳು ಹೆಚ್ಚಾಗಿರುವ ಹಿನ್ನಲೆಯಲ್ಲಿ ಕೊನೆ ಕ್ಷಣದಲ್ಲಿ ಕಾಂಗ್ರೆಸ್‌ಗೆ ಬೆಂಬಲಸೂಚಿಸಿದ್ದಾರೆ. ಬೆಳಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ನಿವಾಸಕ್ಕೆ ತೆರಳಿದ್ದ ಶಂಕರ್‌ ಸಂಜೆ ಕೆಪಿಸಿಸಿ ಕಚೇರಿಗೆ ಆಗಮಿಸಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಲು ಬೆಂಬಲ ಸೂಚಿಸುವ ಪತ್ರಕ್ಕೆ ಸಹಿ ಹಾಕಿದ್ದಾರೆ. 78 ಶಾಸಕರ ಬೆಂಬಲ ಹೊಂದಿರುವ ಕಾಂಗ್ರೆಸ್‌, 38 ಸ್ಥಾನಗಳನ್ನು ಹೊಂದಿರುವ ಜೆಡಿಎಸ್‌ ಸಂಪೂರ್ಣ ಬಹುಮತಕ್ಕೆ ಬೇಕಾದ ಸ್ಥಾನಗಳನ್ನು ಹೊಂದಿದೆ.