Blog Archive

ಅಗರಬತ್ತಿ ಪ್ರಚಾರಕ್ಕೆ ಅನುಮತಿ ಪಡೆಯದೇ ಗೋಲ್ಡನ್ ಸ್ಟಾರ್ ಗಣೇಶ್ ಚಿತ್ರ ಬಳಕೆ..75 ಲಕ್ಷ ಪರಿಹಾರ ನೀಡುವಂತೆ ಕೋರ್ಟ್ ಆದೇಶ!

Monday, April 2nd, 2018
ganesh

ಬೆಂಗಳೂರು: ಅಗರಬತ್ತಿ ಪ್ರಚಾರಕ್ಕೆ ಅನುಮತಿ ಪಡೆಯದೇ ಗೋಲ್ಡನ್ ಸ್ಟಾರ್ ಗಣೇಶ್ ಚಿತ್ರ ಬಳಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ 75 ಲಕ್ಷ ಪರಿಹಾರ ನೀಡುವಂತೆ ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ. ನಟ ಗಣೇಶ್‌ಗೆ ಪರಿಹಾರ ನೀಡುವಂತೆ ಸಿಟಿ ಸಿವಿಲ್ ಕೋರ್ಟ್ ಆದೇಶಿಸಿದೆ. 2008ರಲ್ಲಿ ಈ ಬಗ್ಗೆ ನಟ ಗಣೇಶ್ ಕೋರ್ಟ್‌ನಲ್ಲಿ ದಾವೆ ಹೂಡಿದ್ದರು. ತಮ್ಮ ಅನುಮತಿ ಪಡೆಯದೇ ಮೋಕ್ಷ್ ಅಗರಬತ್ತಿ ಕಂಪನಿ ಚೆಲುವಿನ ಚಿತ್ತಾರ ಚಿತ್ರದ ತಮ್ಮ ಪೋಸ್ಟರ್ ಬಳಸಿಕೊಂಡಿದೆ ಎಂದು ಆರೋಪಿಸಿ ಗಣೇಶ್ ಕೋರ್ಟ್ ಮೆಟ್ಟಿಲೇರಿದ್ದರು. ಜಾಹೀರಾತು […]

ಚಮಕ್

Friday, December 29th, 2017
chamak

ಗಣೇಶ್‌ ಮತ್ತು ರಶ್ಮಿಕಾ ಮಂದಣ್ಣ ಕಾಂಬಿನೇಷನ್‌ನ ಚಮಕ್‌ ಸಿನಿಮಾ ಇಂದು (ಡಿ.29) ರಾಜ್ಯಾದ್ಯಂತ ರಿಲೀಸ್‌ ಆಗಿದೆ. ಮನರಂಜನೆಯ ಜತೆಗೆ ಕೌಟುಂಬಿಕ ಹಿನ್ನೆಲೆಯ ಕತೆಯನ್ನು ಈ ಚಿತ್ರಕ್ಕಾಗಿ ಆಯ್ಕೆ ಮಾಡಿಕೊಂಡಿದ್ದಾರಂತೆ ನಿರ್ದೇಶಕ ಸುನಿ. ಕ್ರಿಸ್ಟಲ್‌ ಪಾರ್ಕ್‌ ಸಿನಿಮಾಸ್‌ ಅಡಿಯಲ್ಲಿ ಟಿ.ಆರ್‌ ಚಂದ್ರಶೇಖರ್‌ ಚಿತ್ರವನ್ನು ನಿರ್ಮಾಣ ಮಾಡಿದ್ದು, ಜೂಡಾ ಸ್ಯಾಂಡಿ ಸಂಗೀತ ನೀಡಿದ್ದಾರೆ. ಸಂತೋಷ್‌ ರಾಯ್‌ ಪತಾಜೆ ಸಿನಿಮಾಟೋಗ್ರಫಿ ಚಿತ್ರಕ್ಕಿದೆ. ಸಾಧು ಕೋಕಿಲ, ಹನುಮಂತೆ ಗೌಡ್ರು, ವಿಜಯಲಕ್ಷ್ಮಿ ಉಪಾಧ್ಯ, ಸುಮಿತ್ರಮ್ಮ ಸೇರಿದಂತೆ ಹೆಸರಾಂತ ತಾರಾಗಣವೇ ಸಿನಿಮಾದಲ್ಲಿದೆ.

ನೋಡಬಹುದಾದ ”ಮದುವೆ ಮನೆ”

Sunday, November 27th, 2011
Ganesh Shruda Arya

ಬೆಂಗಳೂರು : ನಿರ್ದೇಶಕ ಸುನಿಲ್ ಕುಮಾರ್ ಸಿಂಗ್ ಚೊಚ್ಚಲ ನಿರ್ದೇಶನದಲ್ಲಿಯೇ ಸದಭಿರುಚಿಯ ಉತ್ತಮ ಚಿತ್ರವೊಂದನ್ನು ಪ್ರೆಕ್ಷಕರಿಗೆ ನೀಡಿದ್ದಾರೆ. ಸೋಲಿನ ಸೆರಗಲ್ಲಿ ತೇಲಾಡುತಿದ್ದ ಗಣೇಶ್‌ಗೆ ಇಂತಹ ಚಿತ್ರವೊಂದರ ಅಗತ್ಯವಿತ್ತು. ಕತೆ, ಚಿತ್ರಕತೆ, ಸಂಭಾಷಣೆ, ಸಂಗೀತ, ಛಾಯಾಗ್ರಹಣ ಸೇರಿದಂತೆ ಎಲ್ಲಾ ವಿಭಾಗದಲ್ಲಿಯೂ ಈ ಚಿತ್ರ ಯಶಷ್ವಿಯಾಗಿದೆ. ಚಿತ್ರದ ನಾಯಕಿ ಸುಮಾಳನ್ನು (ಶ್ರದ್ಧಾ ಆರ್ಯ) ಚಿತ್ರದ ನಾಯಕ ಸೂರಜ್ (ಗಣೇಶ್) ಅನಿರೀಕ್ಷಿತ ಸಂದರ್ಭದಲ್ಲಿ ಭೇಟಿಯಾಗುತ್ತಾನೆ. ಸುಮಾಳಿಗೆ ಮದುವೆ ಗೊತ್ತಾಗಿರುತ್ತದೆ. ಮದುವೆಯಾಗುವವನು ಎಸಿಪಿ ದುಷ್ಯಂತ್ (ಚಿರಂತ್). ಆದರೆ ಮದುವೆ ಮನೆಯ ಸಂಭ್ರಮದಲ್ಲಿ ಭಾಗಿಯಾಗಿದ್ದ […]