ದತ್ತಪೀಠದಲ್ಲಿ ಪೂಜೆಗೆ ಮೌಲ್ವಿ ನೇಮಕ ರದ್ದುಗೊಳಿಸಿರುವ ಕರ್ನಾಟಕ ಹೈಕೋರ್ಟ್, ಬಿಜೆಪಿ ಮುಖಂಡರಿಂದ ಸ್ವಾಗತ

Tuesday, September 28th, 2021
Datta Peeta

ಚಿಕ್ಕಮಗಳೂರು : ದತ್ತಪೀಠದಲ್ಲಿ ಪೂಜೆಗೆ ಮೌಲ್ವಿ ನೇಮಕ ಮಾಡಿದ್ದ ಕಾಂಗ್ರೆಸ್ ಸರಕಾರದ ನಿರ್ಧಾರವನ್ನು ರದ್ದುಗೊಳಿಸಿರುವ ಕರ್ನಾಟಕ ಹೈಕೋರ್ಟ್, ಪೂಜಾ ವಿಧಾನದ ಕುರಿತು ಹೊಸದಾಗಿ ತೀರ್ಮಾನ ತೆಗೆದುಕೊಳ್ಳುವಂತೆ ನೀಡಿರುವ ಆದೇಶವನ್ನು ರಾಜ್ಯ ಬಿಜೆಪಿ ಮುಖಂಡರು ಸ್ವಾಗತಿಸಿದ್ದಾರೆ. ದತ್ತ ಪೀಠದ ವಿಚಾರದಲ್ಲಿ ಹಿಂದೂಗಳ ಹೋರಾಟಕ್ಕೆ ಜಯ ಸಿಕ್ಕಿದೆ. ದತ್ತ ಮಾಲಾಧಾರಿಗಳು ಮತ್ತು ದತ್ತ ಪೀಠದ ಮೇಲೆ ನಂಬಿಕೆ ಇರಿಸಿರುವ ಅಸಂಖ್ಯಾತ ಭಕ್ತರಿಗೆ ಶುಭ ವಿಚಾರ ಬಂದಿದೆ. ಹೈಕೋರ್ಟ್ ನೀಡಿದ ತೀರ್ಪನ್ನು ಸ್ವಾಗತಿಸುತ್ತೇನೆ. ಯಾವತ್ತೂ ಸತ್ಯಕ್ಕೆ ಜಯ ಖಚಿತ ಎಂಬುದು ಇದರಿಂದ ಋಜುವಾತಾಗಿದೆ. […]