ನೆರೆಪರಿಹಾರದಲ್ಲಿ ನಿರ್ಲಕ್ಷ್ಯ ಆರೋಪ : ವಿಧಾನಸಭಾ ಅಧಿವೇಶನ ಬಹಿಷ್ಕಾರದ ಎಚ್ಚರಿಕೆ; ಐವನ್ ಡಿಸೋಜ

Wednesday, October 2nd, 2019
Ivan-disoza

ಮಂಗಳೂರು : ನೆರೆ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಾಜ್ಯವನ್ನು ನಿರ್ಲಕ್ಷಿಸಿರುವುದರಿಂದ ಅ.10 ರಿಂದ ನಡೆಯುವ ವಿಧಾನಸಭಾ ಅಧಿವೇಶನದಲ್ಲಿ ಕಾಂಗ್ರೆಸ್ನಿಂದ ಪ್ರತಿಭಟನೆ ನಡೆಸಲಾಗುವುದು. ನಾವು ಅಧಿವೇಶನ ಬಹಿಷ್ಕರಿಸಿದರೆ ಅದಕ್ಕೆ ಬಿಜೆಪಿ ಕಾರಣವೆಂದು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನೆರೆ ಹಾನಿಯಿಂದ 35 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಸರ್ಕಾರವೇ ಹೇಳಿದೆ. ಆದರೆ ಕೇಂದ್ರ ಸರ್ಕಾರ ಈವರೆಗೂ ನೆರೆ ಪರಿಹಾರ ಬಿಡುಗಡೆ ಮಾಡಿಲ್ಲ. ಬಿಹಾರದಲ್ಲಿ ಪ್ರವಾಹವಾದಾಗ ಟ್ವೀಟ್ ಮೂಲಕ ನೆರವಿನ‌ […]

ಕೋಟ ಶ್ರೀನಿವಾಸ್ ಪೂಜಾರಿ : ನೆರೆ ಸಂತ್ರಸ್ತರಿಗೆ ತುರ್ತು ಪರಿಹಾರ

Thursday, August 22nd, 2019
Shreenivas-poojari

ಮಂಗಳೂರು : ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಇಂದು ಮಂಗಳೂರಿಗೆ ಆಗಮಿಸಿದ ಕೋಟ ಶ್ರೀನಿವಾಸ್ ಪೂಜಾರಿ ಅವರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ನೆರೆಪರಿಹಾರಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಪರಿಹಾರ ಕ್ರಮವನ್ನು ಕೈಗೊಂಡಿದ್ದಾರೆ. ನೆರೆ ಸಂತ್ರಸ್ತರಿಗೆ ತುರ್ತು ಪರಿಹಾರವಾಗಿ ತಲಾ 10,000 ರೂ. ಈಗಾಗಲೇ ಪೂರ್ಣ ಪ್ರಮಾಣದಲ್ಲಿ ಸಂತ್ರಸ್ತರ ಖಾತೆಗೆ ಜಮಾ ಆಗಿದೆ. ಎಂದು ಹೇಳಿದರು. ನೆರೆ ಪರಿಸ್ಥಿತಿ ನಿಭಾಯಿಸಲು ರಾಜ್ಯದ ಜಿಲ್ಲಾಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸುವ ಬಗ್ಗೆ ಮುಖ್ಯಮಂತ್ರಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಶಾಸಕ […]