ಪುತ್ತೂರು : ವಿಶ್ವ ಹಿಂದೂ ಪರಿಷತ್ ನ ನೂತನ ಜಿಲ್ಲಾ ಕಾರ್ಯಾಲಯಕ್ಕೆ ಶಿಲಾನ್ಯಾಸ, ಪುತ್ತೂರಿನ ಕಾಂಗ್ರೆಸ್ ಶಾಸಕರು ಭಾಗಿ

Wednesday, October 23rd, 2024
Putturu-VHP

ಪುತ್ತೂರು : ವಿಶ್ವ ಹಿಂದೂ ಪರಿಷತ್ ನ ನೂತನ ಜಿಲ್ಲಾ ಕಾರ್ಯಾಲಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಬುಧವಾರ ನಡೆದಿದ್ದು, ಕಾರ್ಯಕ್ರಮದಲ್ಲಿ ಪುತ್ತೂರಿನ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಭಾಗವಹಿಸಿದ್ದರು. ಪುತ್ತೂರಿನ ವಿಹಿಂಪ ನಿವೇಶನದಲ್ಲಿ ನಡೆದ ಕಾರ್ಯಕ್ರಮಕ್ಕೆ ಆಗಮಿಸಿದ ಶಾಸಕ ಅಶೋಕ್ ರೈಯವರನ್ನು ಸಂಘಟಕರು ಶಾಲು ಹೊದಿಸಿ ಗೌರವಿಸಿದರು. ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಾಜಿ ಶಾಸಕ ಶಕುಂತಳಾ ಶೆಟ್ಟಿಯವರು ಕಾಂಗ್ರೆಸ್ ಪಕ್ಷ ಸೇರಿ ಶಾಸಕರಾಗುವ ಮೊದಲು ಬಿಜೆಪಿಯಲ್ಲಿದ್ದರು. […]