“ಫೆ.22ರಂದು ಹೊಂಬೆಳಕು ಎರಡನೇ ಆವೃತ್ತಿಯ ಕಾರ್ಯಕ್ರಮ“ -ಮಂಜುನಾಥ ಭಂಡಾರಿ

Wednesday, February 5th, 2025
Hombelaku

ಮಂಗಳೂರು: “ಫೆ.22ರಂದು ಸಹ್ಯಾದ್ರಿ ಕ್ಯಾಂಪಸ್ ನಲ್ಲಿ ಗ್ರಾಮ ಸ್ವರಾಜ್ ಪ್ರತಿಷ್ಠಾನದ ಆಶ್ರಯದಲ್ಲಿ ಎರಡನೇ ಆವೃತ್ತಿಯ “ಹೊಂಬೆಳಕು“ ಕಾರ್ಯಕ್ರಮ ಏರ್ಪಡಿಸಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 355 ಗ್ರಾಮ ಪಂಚಾಯತ್ ನ 6082 ಮಂದಿ ಚುನಾಯಿತ ಸದಸ್ಯರಿದ್ದಾರೆ. 2000-2500 ಮಂದಿ ಪಂಚಾಯತ್ ನೌಕರರಿದ್ದಾರೆ. ಅವರೆಲ್ಲರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಜಿಲ್ಲಾ ಪಂಚಾಯತಿಗಳ ಸಹಕಾರದೊಂದಿಗೆ ಹೊಂಬೆಳಕು ಕ್ರೀಡೋತ್ಸವ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ“ ಎಂದು ವಿಧಾನ ಪರಿಷತ್ ಶಾಸಕ ಹಾಗೂ ಸಂಘಟನೆಯ ಅಧ್ಯಕ್ಷರಾದ ಮಂಜುನಾಥ ಭಂಡಾರಿ ಅವರು ಪತ್ರಿಕಾಗೋಷ್ಟಿಯಲ್ಲಿ […]

ಸಭಾಪತಿಗಳಾಗಿ ಕಲಾಪ ನಡೆಸಿ ಸೈ ಅನ್ನಿಸಿಕೊಂಡ ಶಾಸಕ ಮಂಜುನಾಥ ಭಂಡಾರಿ!

Friday, December 13th, 2024
Manjunatha-Bhandary

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ 154ನೇ ಚಳಿಗಾಲದ ಅಧಿವೇಶನದ 4ನೇ ದಿನವಾದ ಇಂದು ವಿಧಾನ ಪರಿಷತ್ ಸದನದಲ್ಲಿ ಸಭಾಪತಿಗಳಾಗಿ ಪರಿಷತ್ ಶಾಸಕ ಮಂಜುನಾಥ ಭಂಡಾರಿಯವರು ಯಶಸ್ವಿ ಕಲಾಪ ನಡೆಸಿಕೊಟ್ಟರು. ಗುರುವಾರದಂದು ನಡೆದ ಅಧಿವೇಶನ ಸಂದರ್ಭ ಸಭಾಪತಿ ಬಸವರಾಜ ಹೊರಟ್ಟಿ ಅವರ ಸ್ಥಾನದಲ್ಲಿ ಕುಳಿತ ಮಂಜುನಾಥ ಭಂಡಾರಿ ಅವರು ಕಲಾಪವನ್ನು ಯಶಸ್ವಿಯಾಗಿ ನಿರ್ವಹಿಸುವ ಮೂಲಕ ಸೈ ಅನ್ನಿಸಿಕೊಂಡರು. ಚಳಿಗಾಲ ಅಧಿವೇಶನ ಪ್ರಾರಂಭದ ದಿನದಿಂದಲೂ ಮಂಜುನಾಥ ಭಂಡಾರಿ ಅವರು ರಾಜ್ಯದ ಜನರ ಪರವಾಗಿ ನಾನಾ ಸಮಸ್ಯೆಗಳ ಬಗ್ಗೆ ಸದನದಲ್ಲಿ […]

“ಜಲಜೀವನ ಮಿಷನ್” ಅನುಷ್ಠಾನ ಕುರಿತು ಸರಕಾರದ ಗಮನ ಸೆಳೆದ ಶಾಸಕ ಮಂಜುನಾಥ ಭಂಡಾರಿ

Monday, December 9th, 2024
Manjunath-Bhandary-Belagavi

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಲಜೀವನ ಮಿಷನ್ ಯೋಜನೆಯಡಿಯಲ್ಲಿ ಕಾಮಗಾರಿಗಳು ಅನುಷ್ಠಾನಗೊಳ್ಳದ ಕುರಿತು ಸರಕಾರದ ಗಮನನ್ನು ಸೆಳೆದರು. ಜಲಜೀವನ ಮಿಷನ್ ಯೋಜನೆಯಲ್ಲಿ ನೀರಿನ ಮೂಲಗಳು ಅನುಷ್ಠಾನವಾಗದ ಕುರಿತು ಪ್ರಸ್ತಾಪಿಸಿ ಶೀಘ್ರವಾಗಿ ಯೋಜನೆಗೆ ಸಂಬಂಧಿಸಿದ ನೀರಿನ ಮೂಲಗಳನ್ನು ಪ್ರಥಮವಾಗಿ ಶೋಧಿಸಿ ಅಳವಡಿಸುವ ಮೂಲಕ ಸಮರ್ಪಕ ಅನುಷ್ಠಾನಕ್ಕಾಗಿ ಶೂನ್ಯ ವೇಳೆಯಲ್ಲಿ ಸರಕಾರವನ್ನು ಒತ್ತಾಯಿಸಿದರು. ಮಳೆಗಾಲ ಮುಗಿದು ಚಳಿ ಕಾಲಿರಿಸಿದ್ದರೂ ಕರಾವಳಿಯಲ್ಲಿ […]

ಶಿಗ್ಗಾವಿ ಉಪಚುನಾವಣೆ: ಶಾಸಕ ಮಂಜುನಾಥ ಭಂಡಾರಿ ಬಿರುಸಿನ ಪ್ರಚಾರ

Wednesday, November 6th, 2024
Manjunath-Bhandary-shiggavi

ಮಂಗಳೂರು: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಸವಣೂರು ಪುರಸಭೆ ವ್ಯಾಪ್ತಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿಯವರು ಬಿರುಸಿನ ಪ್ರಚಾರ ಕಾರ್ಯ ನಡೆಸಿದರು. ಈ ವೇಳೆ ಕಾರ್ಯಕರ್ತರ ಸಭೆ ನಡೆಸಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಲು ಕರೆ ನೀಡಿದರು. ಕಾಂಗ್ರೆಸ್ ಯುವನಾಯಕ ಸಿ.ಎಂ. ಫಯಾಜ್ ತಮ್ಮ ಬೆಂಬಲಿಗರ ಜೊತೆ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಶಾಸಕ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ […]

ಬಾವುಟಗುಡ್ಡೆಯಲ್ಲಿ ಅತೀ ಎತ್ತರದ ಧ್ವಜಸ್ಥಂಭ ನಿರ್ಮಾಣಕ್ಕೆ ಶಂಕುಸ್ಥಾಪನೆ

Monday, September 16th, 2024
Bavuta gudda Flag pole

ಮಂಗಳೂರು: ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಕ್ರಾಂತಿಕಾರಿ ಹೋರಾಟ ಮಾಡಿದ್ದ ಕೆದಂಬಾಡಿ ರಾಮಯ್ಯ ಗೌಡರ ಸ್ಮರಣೆಗಾಗಿ “ಸ್ಮಾರ್ಟ್ ಸಿಟಿ” ಯೋಜನೆಯ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಅತಿ ಎತ್ತರವಾದ ಧ್ವಜಸ್ಥಂಭ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮ ಬಾವುಟಗುಡ್ಡೆಯಲ್ಲಿ ಆದಿತ್ಯವಾರ ನೆರವೇರಿತು. 1837ರಲ್ಲಿ ಮಂಗಳೂರನ್ನು ಕೇಂದ್ರ ಸ್ಥಾನವನ್ನಾಗಿ ಮಾಡಿ ಆಡಳಿತ ನಡೆಸುತ್ತಿದ್ದ ಬ್ರಿಟಿಷರನ್ನು ಕೆದಂಬಾಡಿ ರಾಮಯ್ಯ ಗೌಡರು ರೈತವೀರರನ್ನು ಸಂಘಟಿಸಿ ಹೋರಾಟ ಮಾಡಿ ಬಾವುಟಗುಡ್ಡೆಯಲ್ಲಿ ಬ್ರಿಟಿಷ್ ಧ್ವಜವನ್ನು ಇಳಿಸಿ ನಮ್ಮ ದೇಶವನ್ನು ಸ್ವತಂತ್ರವೆಂದು ಘೋಷಿಸಿ ಸುಮಾರು 13 ದಿವಸಗಳವರೆಗೆ ನಮ್ಮ ನೆಲದ […]

ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಹೆಚ್ಚಿಸಸಲು ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ಆಗ್ರಹ

Tuesday, March 8th, 2022
Manjunatha Bhandary

ಮಂಗಳೂರು  : ವಿಧಾನ ಪರಿಷತ್ತಿನ ಶಾಸಕರಾದ ಮಂಜುನಾಥ ಭಂಡಾರಿಯವರು ಇಂದು ನಡೆದ ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ನಿಯಮ 330ರ ಅಡಿಯಲ್ಲಿ ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಹೆಚ್ಚಿಸಬೇಕೆಂದು ಆಗ್ರಹಿಸಿರು. ಅಧಿವೇಶನದಲ್ಲಿ ಮಾತನಾಡಿದ ಅವರು ‘ಪ್ರಜಾ ಪ್ರಭುತ್ವದಲ್ಲಿ ಗ್ರಾಮ ಪಂಚಾಯತಿಯೇ ತಳಹದಿ. ಆ ತಳಹದಿಯನ್ನು ನಾವು ಬಲಿಷ್ಠವಾಗಿಸಿದರೆ ಮಾತ್ರ ಮಾಹಾತ್ಮ ಗಾಂಧೀಜಿಯವರು ಕಂಡ ಗ್ರಾಮ ಸ್ವರಾಜ್ಯದ ಕನಸು ನನಸಾಗುವುದು. ಆದರೆ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಮೀಸಲಾತಿ ಪ್ರಕಾರ ಶೇಕಡ 50 ರಷ್ಟು ಮಹಿಳೆಯರು ಮತ್ತು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ […]

ಬಜೆಟ್ ಅತ್ಯಂತ ನಿರಾಶಾದಾಯಕ – ಮಂಜುನಾಥ ಭಂಡಾರಿ

Friday, March 4th, 2022
Manjunatha Bhandary

ಮಂಗಳೂರು  : ಈ ವರ್ಷದ ರಾಜ್ಯ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಗ್ರಾಮ ಪಂಚಾಯತಿಗೆ ಕೊಡುವಂತಹ ಅನುದಾನ ಹಾಗೂ ಗ್ರಾಮ ಪಂಚಾಯತಿ ಸದಸ್ಯರ ಗೌರವಧನ ಮತ್ತು ಇತರ ಭತ್ಯೆಗಳನ್ನು ಹೆಚ್ಚಿಸಬೇಕೆಂದು ಚುನಾಯಿತ ಪ್ರತಿನಿಧಿಗಳಾದ ನಾವು ಸರಕಾರದ ಮುಂದಿಟ್ಟ ಬೇಡಿಕೆಯನ್ನು ನಿರ್ಲಕ್ಷಿಸಿದ್ದಕ್ಕೆ ಅತ್ಯಂತ ಬೇಸರವಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಮಾರ್ಗಸೂಚಿಯಂತೆ ಶೈಕ್ಷಣಿಕ ಕ್ಷೇತ್ರದಲ್ಲಿ ಯಾವುದೇ ಮಹತ್ವದ ಘೋಷಣೆಯಾಗಿಲ್ಲ ಹಾಗೂ ಈಗಾಗಲೇ ಇದ್ದ ಸರಕಾರಿ ಕಾಲೇಜುಗಳನ್ನು ನಡೆಸಲು ಸಾಧ್ಯವಾಗದ ಸರಕಾರ ಹಳೆಯ ಸರಕಾರಿ ಇಂಜಿನಿಯರಿಂಗ್ ಕಾಲೇಜುಗಳ ಹೆಸರನ್ನು ಕರ್ನಾಟಕ […]

ನನ್ನಂತಹ ಸಾಮಾನ್ಯ ಕಾರ್ಯಕರ್ತನನ್ನು ಚುನಾಯಿಸಿದ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಿಗೆ ಕೃತಜ್ಞತೆಗಳು : ಮಂಜುನಾಥ ಭಂಡಾರಿ

Tuesday, December 14th, 2021
Manjunatha-Bhandary

ಮಂಗಳೂರು : ನನ್ನಂತಹ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ, ಕರ್ನಾಟಕ ವಿಧಾನ ಪರಿಷತ್ ಸದಸ್ಯನಾಗಿ ಆರಿಸಿದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳಿಗೆ ನನ್ನ ತುಂಬು ಹೃದಯದ ಧನ್ಯವಾದಗಳು. ನನ್ನ ಮೇಲೆ ಅಭಿಮಾನ ಮತ್ತು ನಂಬಿಕೆ ಇಟ್ಟು ದಕ್ಷಿಣ ಕನ್ನಡ ಮತ್ತು ಉಡುಪಿ ಸ್ಥಳೀಯ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿ ನನ್ನ ಗೆಲುವಿಗೆ ಸಹಕರಿಸಿದ  ಪಕ್ಷದ ಎಲ್ಲಾ ನಾಯಕರುಗಳಿಗೆ ನಾನು ಆಭಾರಿಯಾಗಿದ್ದೇನೆ. ಪಕ್ಷದ ನಾಯಕರು ನನ್ನ ಮೇಲಿಟ್ಟ ನಂಬಿಕೆ ಮತ್ತು ಅಭಿಮಾನ […]

ದ.ಕ. ಮತ್ತು ಉಡುಪಿ ಜಿಲ್ಲೆ ವಿಧಾನ ಪರಿಷತ್‌ನ ಚುನಾವಣೆ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಮಂಜುನಾಥ ಭಂಡಾರಿಗೆ ಜಯ

Tuesday, December 14th, 2021
Manjunatha Bhandary SrinivasaPoojary

ಮಂಗಳೂರು : ದ.ಕ. ಮತ್ತು ಉಡುಪಿ ಜಿಲ್ಲೆಯನ್ನು ಒಳಗೊಂಡ ಸ್ಥಳೀಯಾಡಳಿತದ ವಿಧಾನ ಪರಿಷತ್‌ನ  ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ, ಹಾಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಇಬ್ಬರೂ ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಜಯ ಗಳಿಸಿದ್ದಾರೆ. ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಖಾತೆ ಸಚಿವರಾಗಿರುವ ಕೋಟ ಶ್ರೀನಿವಾಸ 3,672 ಮತಗಳನ್ನು ಗಳಿಸಿ ಮತ್ತೊಮ್ಮೆ ರಾಜ್ಯ ಶಾಸಕಾಂಗದ ‘ಮೇಲ್ಮನೆ’ ಪ್ರವೇಶಿಸಿದ್ದಾರೆ. ಮಂಜುನಾಥ ಭಂಡಾರಿ 2,079 ಮತಗಳನ್ನು ಗಳಿಸಿ ಮೊದಲ ಬಾರಿ […]

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಚುನಾವಣಾ ಪೂರ್ವ ಸಿದ್ಧತಾ ಸಭೆ

Monday, December 6th, 2021
Manjunath Bhandary

ಮಂಗಳೂರು  : ವಿಧಾನ ಪರಿಷತ್ತಿಗೆ ದ.ಕ. ಸ್ಥಳೀಯ ಪ್ರಾಧಿಕಾರ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಅವರ ಗೆಲುವಿಗೆ ಸಂಬಂಧಿಸಿ ಚುನಾವಣಾ ಪೂರ್ವ ಸಿದ್ಧತಾ ಸಭೆ ಸೋಮವಾರ ನಗರದ ಓಶಿಯನ್ ಪರ್ಲ್ ಹೊಟೇಲ್ ಸಭಾಂಗಣದಲ್ಲಿ ಜರಗಿತು. ಡಿ. 4 ರಂದು ನಡೆದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಎಲ್ಲಾ 13 ವಿಧಾನ ಸಭಾಕ್ಷೇತ್ರಗಳ ಎರಡೆರಡು ಬ್ಲಾಕ್‌ಗಳ ಅಧ್ಯಕ್ಷರು ಮತ್ತು ಪಕ್ಷದ ವೀಕ್ಷಕರ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಸೋಮವಾರದ ಈ ಸಭೆ ಜರಗಿದ್ದು, ಎಲ್ಲಾ 13 […]