ಮಂಗಳೂರಿನಲ್ಲಿ ಸರ್ಜಿಕಲ್ ಸ್ಟ್ರೈಕ್ ಶೌರ್ಯ ದಿನಾಚರಣೆ

Saturday, September 29th, 2018
vedvyasa-kamath

ಮಂಗಳೂರು: ಸರ್ಜಿಕಲ್ ಸ್ಟ್ರೈಕ್ಗೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ ಇಂದು ಮಂಗಳೂರಿನಲ್ಲಿ ಸರ್ಜಿಕಲ್ ಸ್ಟ್ರೈಕ್ ಶೌರ್ಯ ದಿನಾಚರಣೆ ಆಚರಿಸಲಾಯಿತು. ಮಂಗಳೂರಿನ ಕದ್ರಿಯಲ್ಲಿರುವ ಹುತಾತ್ಮರ ಸ್ಮಾರಕದಲ್ಲಿ ಬಿಜೆಪಿ ಈ ಕಾರ್ಯಕ್ರಮ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ಶಾಸಕ ವೇದವ್ಯಾಸ ಕಾಮತ್, ಮಾಜಿ ವಿಧಾನಪರಿಷತ್ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್, ಮಾಜಿ ಸೈನಿಕರು ಮೊದಲಾದವರು ಉಪಸ್ಥಿತರಿದ್ದು ಹುತಾತ್ಮ ಸೈನಿಕರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.