Blog Archive

ಸಿದ್ದರಾಮಯ್ಯ ಮತ್ತು ಎಚ್. ಡಿ.ಕುಮಾರಸ್ವಾಮಿ ಪರಸ್ಪರ ಆರೋಪ ಮಾಡುದನ್ನು ನಿಲ್ಲಿಸಬೇಕು : ಬಸವರಾಜ ಹೊರಟ್ಟಿ

Tuesday, September 24th, 2019
kumarswamy

ಹುಬ್ಬಳ್ಳಿ : ಸಮ್ಮಿಶ್ರ ಸರ್ಕಾರದಲ್ಲಿ ಪಾಲುದಾರರಾಗಿದ್ದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್. ಡಿ.ಕುಮಾರಸ್ವಾಮಿ ಅವರು ಪರಸ್ಪರ ಆರೋಪ ಮಾಡುದನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ತಪ್ಪು ಸಂದೇಶ ರವಾನೆಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 14 ತಿಂಗಳ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷರಾದ ಇಬ್ಬರು ನಾಯಕರು ಇದೀಗ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಸಂದರ್ಭದಲ್ಲಿ ಈ ರೀತಿಯ ಆರೋಪಗಳನ್ನು ಮಾಡುತ್ತಿರುವುದು ಎರಡೂ ಪಕ್ಷಗಳಿಗೂ ಒಳ್ಳೆಯದಲ್ಲ ಎಂಬುದನ್ನು […]

ಎರಡು ದಿನಗಳಲ್ಲಿ ಉಪಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಸಿದ್ದರಾಮಯ್ಯ

Tuesday, September 24th, 2019
siddaramayya

ಹುಬ್ಬಳ್ಳಿ : ಉಪಚುನಾವಣೆಗೆ ನಾವು ಸಿದ್ಧರಾಗಿದ್ದು, ಮುಂದಿನ ಎರಡು ದಿನಗಳಲ್ಲಿ ಉಪಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಪಕ್ಷಾಂತರಿಗಳನ್ನು ಮತದಾರರು ಯಾವತ್ತೂ ಕ್ಷಮಿಸುವುದಿಲ್ಲ. ಉಪಚುನಾವಣೆಯಲ್ಲಿ ನಾವು 15 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಎಂದು ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ ಮಾಜಿ ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಕುಮಾರಸ್ವಾಮಿ ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಾಗುತ್ತಿಲ್ಲ. ಅವರು ಪ್ರಜ್ಞೆ ಇಟ್ಟುಕೊಂಡು ಮಾತನಾಡಬೇಕು. ಮೈಸೂರು, ಚಾಮರಾಜನಗರದಲ್ಲಿ ಬಿಜೆಪಿ ಅಭ್ಯರ್ಥಿಗೆ […]

ಮಂದಾರ ಸಂತ್ರಸ್ಥರಿಗೆ ಶಾಶ್ವತ ಪರಿಹಾರ ನೀಡಿ : ಸಿದ್ದರಾಮಯ್ಯ ಆಗ್ರಹ

Saturday, August 31st, 2019
pacchanadi

ಮಂಗಳೂರು : ಯಾವುದೇ ಮುಂಜಾಗೃತ ಕ್ರಮ ಕೈಗೊಳ್ಳದೆ ಅವೈಜ್ಞಾನಿಕವಾಗಿ ಪಚ್ಚನಾಡಿಯಲ್ಲಿ ತ್ಯಾಜ್ಯ ಸಂಗ್ರಹ ಮಾಡಿದ್ದರಿಂದ ನೆರೆ ಸಂದರ್ಭದಲ್ಲಿ ಬಹಳಷ್ಟು ಮನೆಗಳಿಗೆ ಹಾನಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಪಚ್ಚನಾಡಿ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ಮಾತನಾಡಿದ ಅವರು, ಈ ಭಾಗದಲ್ಲಿ ತ್ಯಾಜ್ಯ ಹಾಕುವ ಮೊದಲು ಮುನ್ನೆಚ್ಚರಿಕೆ ವಹಿಸಬೇಕಿತ್ತು. ಮೊದಲೇ ರಿಟೈನಿಂಗ್ ಹಾಲ್ ಹಾಕಿದ್ದರೆ ಈ ರೀತಿ ಹಾನಿ ಆಗುತ್ತಿರಲಿಲ್ಲ. ಈಗಾಗಲೇ 27 ಮನೆಗಳಿಗೆ ಹಾನಿಯಾಗಿದೆ. ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಸಂತ್ರಸ್ತರಿಗೆ ಸೂಕ್ತ ಪರಿಹಾರ […]

ಬೆಂಗಳೂರು : ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ

Thursday, August 29th, 2019
Congress-pratibhatane

ಬೆಂಗಳೂರು : ಅತಿವೃಷ್ಟಿ ಬಗ್ಗೆ ರಾಜ್ಯ ಸರಕಾರದ ನಿರ್ಲಕ್ಷ ಮತ್ತು ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯನ್ನು ವಿರೋಧಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಕಾಂಗ್ರೆಸ್ ಧರಣಿ ನಡೆಸುತ್ತಿದೆ . ನಗರದ ಮೌರ್ಯ ಸರ್ಕಲ್ ನಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದು, ಕಾಂಗ್ರೆಸ್ ಶಾಸಕರು, ನಾಯಕರು ಸಾಥ್ ನೀಡಿದ್ದಾರೆ. ಇಂದು ಸಂಜೆ 5ವರೆಗೂ ಈ ಧರಣಿ ಸತ್ಯಾಗ್ರಹ ನಡೆಯಲಿದ್ದು ಬಳಿಕ ಕಾಂಗ್ರೆಸ್ ನಾಯಕರು ರಾಜ್ಯಪಾಲರ ಭೇಟಿಯಾಗಿ ಮನವಿ ಪತ್ರ ನೀಡಲಿದ್ದಾರೆ.    

ಮಂಗಳೂರು : ಆಗಸ್ಟ್ 31ರಂದು ನೆರೆಪೀಡಿತ ಪ್ರದೇಶಗಳಿಗೆ ಸಿದ್ದರಾಮಯ್ಯ ಭೇಟಿ

Monday, August 26th, 2019
siddaramayya

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ನೆರೆಪೀಡಿತ ಪ್ರದೇಶಗಳಿಗೆ ಆಗಸ್ಟ್ 31ರಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಇತ್ತೀಚೆಗೆ ಸುರಿದ ಭಾರೀ ಮಳೆ ಮತ್ತು ನೆರೆ ಹಾವಳಿಗೆ ತತ್ತರಿಸಿರುವ ಜನರಿಗೆ ಸಾಂತ್ವನ ಹೇಳಲು ಮತ್ತು ವಸ್ತುಸ್ಥಿತಿ ಪರಿಶೀಲನೆ ನಡೆಸಲು ಸಿದ್ದರಾಮಯ್ಯ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ಆಗಸ್ಟ್ 31ರಂದು ಸಿದ್ದರಾಮಯ್ಯ ಅವರು ಮಂಗಳೂರಿಗೆ ಆಗಮಿಸಿ, ಮಂಗಳೂರು ಹೊರವಲಯದಲ್ಲಿ ತ್ಯಾಜ್ಯ ಕುಸಿತದಿಂದ […]

ಮನುಷ್ಯ ಮನುಷ್ಯನನ್ನು ದ್ವೇಷಿಸುವ ಧರ್ಮ ಯಾವುದು ಇರಲು ಸಾಧ್ಯ ಇಲ್ಲ: ಸಿದ್ದರಾಮಯ್ಯ

Tuesday, December 4th, 2018
siddaramaih

ಮಂಗಳೂರು: ನಾಲ್ಕು ವರ್ಷಗಳಿಂದ ಕೇಂದ್ರ ಸರ್ಕಾರ ಎಲ್ಲ ಕಾರ್ಯಗಳಲ್ಲಿ ವಿಫಲವಾಗಿದ್ದು, ಅವರ ಮಾತುಗಳೆಲ್ಲವೂ ಸುಳ್ಳಾಗಿವೆ. ಅಧಿಕಾರ ಅನುಭವಿಸುವಾಗ ರಾಮನ ಮರೆತ ಅವರು, ಈಗ ಅವರಿಗೆ ರಾಮನ ನೆನಪಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆದ ಸಾಮುದಾಯಿಕ ಸಮ್ಮಿಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಮನುಷ್ಯ ಮನುಷ್ಯನನ್ನು ದ್ವೇಷಿಸುವ ಧರ್ಮ ಯಾವುದು ಇರಲು ಸಾಧ್ಯ ಇಲ್ಲ. ಮನುಷ್ಯ ಮನುಷ್ಯನನ್ನು ಪ್ರೀತಿಸುವಂತಹ ಧರ್ಮವೇ ಎಲ್ಲ ಧರ್ಮಗಳ ಜೀವಾಳ. ಪ್ರೀತಿ-ವಿಶ್ವಾಸ ಇಲ್ಲದಿದ್ದರೆ ಅದು ಧರ್ಮವೇ ಅಲ್ಲ. ಕೆಲವರು […]

ಸಿದ್ದರಾಮಯ್ಯ ಮುಖಂಡತ್ವದಲ್ಲಿ ಮೈಸೂರು ಮೇಯರ್​ ವಿವಾದ ಬಗೆ ಹರಿಸುತ್ತೇವೆ: ಹೆಚ್ ಡಿ ದೇವೇಗೌಡ

Friday, November 16th, 2018
devegouda

ದೇವನಹಳ್ಳಿ: ತಾಲೂಕಿನ ಗ್ರಾಮ ಕೆಂಪೇಗೌಡ ಪ್ರತಿಮೆ ಅನಾವರಣಗೊಳಿಸಿದ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣಾ ವಿಚಾರ ಕುರಿತಾಗಿ ಪ್ರತಿಕ್ರಿಯಿಸಿದರು. ಈ ಕುರಿತು ಮಾತನಾಡಿದ ಅವರು ಕಾಂಗ್ರೆಸ್ -ಜೆಡಿಎಸ್ ಎರಡು ಪಕ್ಷಗಳು ಮೈತ್ರಿಯಾಗಿವೆ. ಸಿದ್ದರಾಮಯ್ಯ ನವರ ಮುಖಂಡತ್ವದಲ್ಲಿ ಸಮಸ್ಯೆ ಬಗೆ ಹರಿಸುತ್ತೇವೆ ಎಂದರು. ಮೇಯರ್ ಆಯ್ಕೆಗೆ ನಾಳೆಯವರೆಗೂ ಸಮಯಕಾಶವಿದೆ. ಎಲ್ಲರೂ ಓಗ್ಗಟ್ಟಾಗಿ ಸೇರಿ ಮೇಯರ್ ಆಯ್ಕೆ ಮಾಡ್ತಾರೆ ಎಂದು ದೇವೇಗೌಡ ತಿಳಿಸಿದ್ರು.

ಸಿದ್ದರಾಮಯ್ಯಗೆ ಸನ್ಮಾನ ಮಾಡಿದ ಮುಸ್ಲಿಂ ಧಾರ್ಮಿಕ ಮುಖಂಡರು..!

Saturday, November 10th, 2018
siddaramaih

ಬೆಂಗಳೂರು: ಟಿಪ್ಪು ಜಯಂತಿ ಆಚರಣೆ ಸಂದರ್ಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಮುಸ್ಲಿಂ ಧಾರ್ಮಿಕ ಮುಖಂಡರು ಅಭಿನಂದಿಸಿದ್ದಾರೆ. ಇಂದು ಬೆಂಗಳೂರಿನ ಸಿದ್ದರಾಮಯ್ಯ ನಿವಾಸ ಕಾವೇರಿಗೆ ಸಚಿವ ಜಮೀರ್ ಅಹಮದ್ ನೇತೃತ್ವದಲ್ಲಿ ತೆರಳಿದ ಹಲವು ಮುಸ್ಲಿಂ ಧರ್ಮಗುರುಗಳು, ಸಿದ್ದರಾಮಯ್ಯರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಇದೇ ವೇಳೆ ಸಿದ್ದರಾಮಯ್ಯರನ್ನು ಧರ್ಮಗುರುಗಳು ಸನ್ಮಾನಿಸಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದ ಸಮಯದಲ್ಲಿ ಟಿಪ್ಪು ಜಯಂತಿಯನ್ನು ಆರಂಭಿಸಿದ್ದರು. ಹಾಗಾಗಿ ಅವರ ಕಾರ್ಯವನ್ನು ಗೌರವಿಸುವ ನಿಟ್ಟಿನಲ್ಲಿ ಈ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬೆಳಗ್ಗೆ ಸಿದ್ದರಾಮಯ್ಯ ಚಿತ್ರದುರ್ಗಕ್ಕೆ ತೆರಳುವ […]

ಟಿಪ್ಪು ಸುಲ್ತಾನ್​ ನಂತರ ಈ ರಾಜ್ಯವನ್ನು ಆಳಿದ ಮತಾಂಧ ಯಾರೆಂದು ಹೇಳಿದರೆ ಅದು ಸಿದ್ದರಾಮಯ್ಯ: ನಳಿನ್​ ಕುಮಾರ್ ವ್ಯಂಗ್ಯ

Saturday, November 10th, 2018
Tippu-protest-4

ಮಂಗಳೂರು: ರಾಜ್ಯದ ಸಿಎಂ ಕುಮಾರಸ್ವಾಮಿ‌ ಬಹಳ ಬುದ್ಧಿವಂತರು. ಸಿದ್ದರಾಮಯ್ಯ ಟಿಪ್ಪು ಜಯಂತಿಯನ್ನು ಆಚರಿಸುತ್ತಿದ್ದರು ಎಂಬ ಕಾರಣಕ್ಕೆ ತಾವು ಅಚರಿಸುತ್ತಿರುವುದಾಗಿ ಹೇಳಿದರು. ಕಾಂಗ್ರೆಸ್ನವರ ಋಣದಲ್ಲಿದ್ದಾರೆ ಎಂಬ ಕಾರಣಕ್ಕೆ ಅದನ್ನು ಮುಂದುವರಿಸಿದ್ದಾರೆ ಸಂಸದ ನಳಿನ್ ಕುಮಾರ್ ಕಟೀಲು ಕಿಡಿಕಾರಿದ್ದಾರೆ. ರಾಜ್ಯ ಸರ್ಕಾರ ಆಚರಿಸುತ್ತಿರುವ ಟಿಪ್ಪು ಜಯಂತಿ ವಿರುದ್ಧ ದ.ಕ.ಜಿಲ್ಲಾ ಬಿಜೆಪಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನಡೆದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು. ಸಿಎಂ ಟಿಪ್ಪು ಜಯಂತಿ ಕಾರ್ಯಕ್ರಮದಿಂದ ಅಂತರ ಕಾಯ್ದುಕೊಂಡು ಆಚೆಯೂ ಅಲ್ಲ, ಈಚೆಯೂ ಅಲ್ಲ ಅನ್ನುವಂತಾಗಿದೆ. ಅಲ್ಲದೆ, ಇದೇ […]

ನನ್ನ ಬಗ್ಗೆ ಏಕವಚನದಲ್ಲಿ ಮಾತನಾಡುವಷ್ಟು ಸಲುಗೆ ಸಿದ್ದರಾಮಯ್ಯ ಜೊತೆಗಿಲ್ಲ: ಹಾಲಾಡಿ ಶ್ರೀನಿವಾಸ ಶೆಟ್ಟಿ

Saturday, October 27th, 2018
srinivas-shetty

ಕುಂದಾಪುರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಬೈಂದೂರಿನ ನಾಗೂರಿನಲ್ಲಿ ನಡೆದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರ ಸಭೆಯಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಮುಖವನ್ನೇ ನೋಡಿಲ್ಲ ಎಂದು ಏಕವಚನದಲ್ಲಿ ಮಾತನಾಡಿದ್ದಕ್ಕೆ ಶುಕ್ರವಾರ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮಾಜಿ ಮುಖ್ಯಮಂತ್ರಿಯಾಗಿದ್ದುಕೊಂಡು ಒರ್ವ ಶಾಸಕನ ಬಗ್ಗೆ ಏಕವಚನದಲ್ಲಿ ಮಾತನಾಡುವಷ್ಟು ಸಲುಗೆ ನಮಗೆ ಅವರೊಂದಿಗಿಲ್ಲ. ಸಲುಗೆ ಇದ್ದವರ ಜೊತೆ ಬೇಕಾದರೆ ಅವರು ಮಾತನಾಡಲಿ ನಮ್ಮ ಅಭ್ಯಂತರವೇನು ಇಲ್ಲ. ಅವರು ಯಾವ ಉದ್ದೇಶದಿಂದ ಹಾಗೆ ಮಾತನಾಡಿದರು ಎಂಬುದು ನನಗೆ ತಿಳಿದಿಲ್ಲ. ಅವರೇ […]