ಗ್ಯಾರಂಟಿ ಯೋಜನೆಗಳ ಕಲಾಜಾಥಾ ಸಂಚಾರಿ ವಾಹನಕ್ಕೆ ಚಾಲನೆ

Thursday, March 7th, 2024
Guarantee

ಮಂಗಳೂರು : ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾದ “ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮೀ, ಯುವನಿಧಿ ಯೋಜನೆಗಳ ಹಾಗೂ ಇತರ ಯೋಜನೆಗಳು, ಕಾರ್ಯಕ್ರಮಗಳನ್ನು ಜನರಿಗೆ ಮತ್ತಷ್ಟು ತಲುಪಿಸುವ ಉದ್ದೇಶದಿಂದ ಬೆಂಗಳೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ “ಕಲಾಜಾಥ” ಸಂಚಾರಿ ಪ್ರದರ್ಶನ ನೀಡುವ ಸಂಚಾರಿ ವಾಹನಕ್ಕೆ ಮಾ.7ರ ಗುರುವಾರ ನಗರದ ಕರಾವಳಿ ಮೈದಾನದಲ್ಲಿ ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್ ಹಾಗೂ ಡಾ. ಮಂಜುನಾಥ್ ಭಂಡಾರಿ ಅವರು ಚಾಲನೆ ನೀಡಿದರು. ಈ ಕಲಾಜಾಥಾ ಸಂಚಾರಿ ವಾಹನವು ಜಿಲ್ಲೆಯಾದ್ಯಂತ ಮುಂದಿನ […]

ಇಂದಿರಾ ಕ್ಯಾಂಟೀನ್, ಅನ್ನಭಾಗ್ಯ ಸಹಿತ ಎಲ್ಲ ಭಾಗ್ಯ ಯೋಜನೆಗಳು ಮುಂದುವರಿಯಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ

Saturday, June 9th, 2018
siddaramaih

ಬಾದಾಮಿ: ಇಂದಿರಾ ಕ್ಯಾಂಟೀನ್, ಅನ್ನಭಾಗ್ಯ ಸೇರಿದಂತೆ ಹಿಂದಿನ ಸರ್ಕಾರ ಜಾರಿಗೆ ತಂದಿರುವ ಯಾವುದೇ ಯೋಜನೆ ಸ್ಥಗಿತಗೊಳ್ಳುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಬಾದಾಮಿ ಶಾಸಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಕ್ಷೇತ್ರ ಪ್ರವಾಸ ಸಂದರ್ಭದಲ್ಲಿ ಮತದಾರರಿಗೆ ಕೃತಜ್ಞತೆ ಸಲ್ಲಿಸಿ ಮಾತನಾಡಿದ ಅವರು, ಹಿಂದಿನ ಸರ್ಕಾರ ಜಾರಿಗೆ ತಂದಿರುವ ಯಾವುದೇ ಜನಪರ ಕಾರ್ಯಕ್ರಮ ನಿಲ್ಲಲು ಬಿಡುವುದಿಲ್ಲ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಇದ್ದರೂ ಅನ್ನಭಾಗ್ಯ, ಕ್ಷೀರಭಾಗ್ಯ, ಕ್ಷೀರಧಾರೆ, ಇಂದಿರಾ ಕ್ಯಾಂಟೀನ್ ಸೇರಿದಂತೆ ಎಲ್ಲ ಭಾಗ್ಯ ಯೋಜನೆಗಳು ಯಥಾವತ್ತಾಗಿ ಮುಂದುವರಿಯಲಿದೆ ಎಂದರು. ಚುನಾವಣೆಯಲ್ಲಿ ನಮಗೆ […]

ಅನ್ನಭಾಗ್ಯ ದೇಶಕ್ಕೇ ಮಾದರಿ ಯೋಜನೆ: ಯು.ಟಿ. ಖಾದರ್

Thursday, January 18th, 2018
u-t-kader

ಮಂಗಳೂರು: ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆ ದೇಶಕ್ಕೆ ಮಾದರಿ ಯೋಜನೆಯಾಗಿದೆ. ಯೋಜನೆಯನ್ನು ಆನ್ ಲೈನ್ ವ್ಯವಸ್ಥೆಗೆ ಪರಿವರ್ತಿಸಿದ್ದು ಬೋಗಸ್ ಕಾರ್ಡ್‌ಗಳನ್ನು ಪತ್ತೆ ಹಚ್ಚಿ ಬೊಕ್ಕಸಕ್ಕೆ ಕೋಟ್ಯಾಂತರ ರೂ.ಗಳ ಉಳಿತಾಯ ಮಾಡಿದ್ದೇವೆ ಎಂದು ಆಹಾರ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಆಹಾರ ಇಲಾಖೆಗೆ ರಾಷ್ಟ್ರ ಮಟ್ಟದ ಅವಾರ್ಡ್ ಬಂದಿದೆ. ಜನಜಾಗೃತಿ, ಪಡಿತರ ವಿತರಣೆಗಾಗಿ ಈ ಅವಾರ್ಡ್ ಬಂದಿದೆ. ಹಿಂದಿನ ಸಚಿವರು, ಇಲಾಖೆಯ ಎಲ್ಲ ಸಿಬ್ಬಂದಿಗಳ ಶ್ರಮಕ್ಕೆ ಇದರ ಶ್ರೇಯಸ್ಸು […]

ವಲಸೆ ಕಾರ್ಮಿಕರಿಗೆ ಅಕ್ಕಿ: ಸಚಿವ ಆಗ್ರಹ

Wednesday, January 10th, 2018
U-T-Kader

ಮಂಗಳೂರು: ದೇಶದ ವಿವಿಧ ಭಾಗ ಗಳಿಂದ ದುಡಿಮೆಗಾಗಿ ಕರ್ನಾಟಕಕ್ಕೆ ವಲಸೆ ಬರುವ ಕಾರ್ಮಿಕರಿಗೆ ಉಚಿತ ವಾಗಿ ಅಥವಾ ರಿಯಾಯಿತಿ ದರದಲ್ಲಿ ಅಕ್ಕಿ ವಿತರಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್‌ ಹೇಳಿದರು. ಅವರು ಮಂಗಳವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿ, ‘ಕಾರ್ಮಿಕ ವರ್ಗದ ಬಗ್ಗೆ ಕೇಂದ್ರ ಸರ್ಕಾರಕ್ಕೆ ನಿಜವಾದ ಕಾಳಜಿ ಇದ್ದರೆ, ಉತ್ತರ ಪ್ರದೇಶ, ಅಸ್ಸಾಂ, ಬಿಹಾರ, ಒಡಿಶಾ ಮುಂತಾದ ರಾಜ್ಯಗಳಿಂದ ಕೆಲಸಕ್ಕಾಗಿ ಕರ್ನಾಟಕಕ್ಕೆ ಬರುವ ಕಾರ್ಮಿಕರಿಗೆ ರಿಯಾಯಿತಿ […]

ವಿಷಯವಿಲ್ಲದ್ದಕ್ಕೆ “ಅನ್ನಭಾಗ್ಯ’ ಟೀಕೆ: ಖಾದರ್‌

Saturday, December 30th, 2017
U-T-Kader

ಮಂಗಳೂರು: ರಾಜ್ಯ ಸರ್ಕಾರದ ಬಗ್ಗೆ ಮಾತನಾಡಲು ಯಾವುದೇ ವಿಚಾರ ಸಿಗದ ಹಿನ್ನೆಲೆಯಲ್ಲಿ ಬಿಜೆಪಿಯವರು ಈಗ ಅನ್ನಭಾಗ್ಯ ವನ್ನು ನಮ್ಮ ಭಾಗ್ಯ ಎನ್ನುತ್ತಿದ್ದಾರೆ ಎಂದು ಆಹಾರ ಸಚಿವ ಯು.ಟಿ.ಖಾದರ್‌ ಟೀಕಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಅಕ್ಕಿಗೆ ಕೇಂದ್ರ ಸರ್ಕಾರ ಸಬ್ಸಿಡಿ ನೀಡುತ್ತಿರುವುದು ನಿಜ. ಆಹಾರ ಭದ್ರತೆ ಕಾಯಿದೆ ಯನ್ನು ಯುಪಿಎ ಸರ್ಕಾರ ಜಾರಿಗೆ ತಂದ ನಂತರ ಕೇಂದ್ರದಿಂದ ಸಬ್ಸಿಡಿ ಕೊಡಲಾಗುತ್ತಿದೆ. ಸಬ್ಸಿಡಿಯನ್ನು ಕೇವಲ ಕರ್ನಾಟಕಕ್ಕೆ ಮಾತ್ರ ಕೊಡುತ್ತಿಲ್ಲ. ಅದನ್ನು ಎಲ್ಲ ರಾಜ್ಯಗಳಿಗೂ ಕೊಡುತ್ತಿದೆ. ಎಲ್ಲ ರಾಜ್ಯಗಳಿಗೂ ಸಬ್ಸಿಡಿ […]

ಒಂದು ರೂಪಾಯಿಗೆ ಕೆ.ಜಿ. ಅಕ್ಕಿ; ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಸಚಿವ ರೈ ಚಾಲನೆ

Wednesday, July 10th, 2013
Anna Bhagya

ಮಂಗಳೂರು : ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರು ಇಂದು ಬೆಳಗ್ಗೆ ನಗರದ ಪುರಭವನದಲ್ಲಿ ಬಡಕುಟುಂಬವೊಂದಕ್ಕೆ 30 ಕೆ.ಜಿ. ಅಕ್ಕಿಯನ್ನು ನೀಡುವುದರ ಮೂಲಕ  ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಬಿಪಿಎಲ್ ಪಟ್ಟಿಯಲ್ಲಿರುವ ಪ್ರತಿಯೊಂದು ಕುಟುಂಬಕ್ಕೆ ತಿಂಗಳಿಗೆ 30 ಕೆ.ಜಿ. ಅಕ್ಕಿಯನ್ನು ಕೆ.ಜಿ.ಗೆ ಒಂದು ರೂಪಾಯಿಯಂತೆ ನೀಡಲಾಗುವುದು. ಈ ಯೋಜನೆ ಬಡವರಿಗೆ ತಲುಪುವಂತೆ ಮಾಡಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ರೈ ಹೇಳಿದರು. ರಾಷ್ಟ್ರದಲ್ಲಿ ಈ […]