ಉಪೇಂದ್ರ ಬಿಜೆಪಿಗೆ ಬಂದರೆ ಸ್ವಾಗತ: ಅಶೋಕ್‌‌

Tuesday, March 6th, 2018
upendra

ಬೆಂಗಳೂರು: ಕೆಪಿಜೆಪಿ ಬಿಕ್ಕಟ್ಟಿನಲ್ಲಿ ಸಿಲುಕಿರುವ ನಟ ಉಪೇಂದ್ರ ಬಿಜೆಪಿಗೆ ಬಂದರೆ ಸ್ವಾಗತಿಸುವುದಾಗಿ ಮಾಜಿ ಡಿಸಿಎಂ ಆರ್.ಅಶೋಕ್ ಹೇಳಿದ್ದಾರೆ. ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬೆಂಗಳೂರು ರಕ್ಷಿಸಿ ಪಾದಯಾತ್ರೆ ಆರಂಭಗೊಂಡಿದೆ. ಆರ್.ಅಶೋಕ್, ತಾರಾ, ಮಾಳವಿಕಾ, ಕಟ್ಟಾ ಸುಬ್ರಮಣ್ಯ ನಾಯ್ಡು, ಬಿ.ವಿ.ಗಣೇಶ್ ಸೇರಿದಂತೆ ಹಲವರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಮಾತನಾಡಿದ ಅಶೋಕ್, ನಟ ಉಪೇಂದ್ರ ಬಿಜೆಪಿಗೆ ಬಂದರೆ ಅವರನ್ನು ಸ್ವಾಗತಿಸುತ್ತೇವೆ. ಆದರೆ ಇದುವರೆಗೆ ಯಾರೂ ನಮ್ಮೊಂದಿಗೆ ಮಾತುಕತೆ ನಡೆಸಿಲ್ಲ. ಅವರಿಗೆ ಬಿಜೆಪಿ ಬಾಗಿಲು ತೆರೆದಿದೆ ಎಂದು ಪಕ್ಷ ಸೇರುವಂತೆ […]

ಹಿರಿಯ ನಟ, ನಿರ್ದೇಶಕ, ಕಾಶಿನಾಥ್‌ ನಿಧನ 

Thursday, January 18th, 2018
kashinath

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಕಾಶಿನಾಥ್‌ ಇನ್ನಿಲ್ಲ. ಬೆಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಕಾಶಿನಾಥ್‌ ಇಂದು ವಿಧಿವಶರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಕಾಶಿನಾಥ್‌ 2 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ನಗರದ ಶ್ರೀಶಂಕರ್‌ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೆ ಕಾಶಿನಾಥ್‌ ಕೊನೆಯುಸಿರುಳೆದಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆ ಸೃಷ್ಟಿಸಿದ್ದವರು ಕಾಶಿನಾಥ್‌. ಉಪೇಂದ್ರ, ಮನೋಹರ್, ಸುನೀಲ್‍ಕುಮಾರ್ ದೇಸಾಯಿ ಮುಂತಾದ ಹೆಸರಾಂತ ನಿರ್ದೇಶಕರನ್ನು ಕಾಶಿನಾಥ್‌ ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ್ದರು. ಚಿತ್ರರಂಗದಲ್ಲಿ ಹೊಸ […]

ಪಕ್ಷದ ಮೇಲೆ ನಂಬಿಕೆ ಇಟ್ಟು ಬರುವವರಿಗೆ ಪ್ರಜಾಕೀಯದ ಬಾಗಿಲು ಸದಾ ತೆರೆದಿರುತ್ತದೆ : ಉಪೇಂದ್ರ

Tuesday, December 5th, 2017
Upendra

ಮಂಗಳೂರು: ಒಬ್ಬ ಕಾರ್ಮಿಕನಾಗಿ ಜನರ ಮುಂದೆ ಹೋಗುತ್ತಿದ್ದೇನೆ. ನನ್ನ ಯೋಚನೆಗಳನ್ನು ಮುಂದಿಟ್ಟು ಅವರೊಂದಿಗೆ ಮಾತನಾಡುತ್ತಿದ್ದೇನೆ. ಸಮಾಜದಲ್ಲಿನ ಪ್ರಜ್ಞಾವಂತರು ಪಕ್ಷಕ್ಕೆ ಬನ್ನಿ ಎಂದು  ಕೆಪಿಜೆಪಿ-ಪ್ರಜಾಕೀಯ ಪಕ್ಷ ದ ಸ್ಥಾಪಕ  ಉಪೇಂದ್ರ ಕರೆ ನೀಡಿದರು. ಮಂಗಳವಾರ ಮಂಗಳೂರಿನ ಪತ್ರಿಕಾ ಭವನದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಉಪೇಂದ್ರ ರಾಜಕೀಯಕ್ಕೆ ಬೇಕಾಗಿರುವುದು ನಾಯಕರು, ಸೇವಕರಲ್ಲ. ಆದರೆ, ಇಂದು ವ್ಯವಸ್ಥೆ ಬದಲಾಗಿದೆ. ಗೆದ್ದ ಮೇಲೆ ಜನನಾಯಕರನ್ನು ಹುಡುಕುವುದೇ ಕಷ್ಟವಾಗಿದೆ. ಆದರೆ, ಪ್ರಜಾಕೀಯದಲ್ಲಿ ಹಾಗಲ್ಲ. ಚುನಾವಣೆಗೆ ದುಡ್ಡು ಖರ್ಚು ಮಾಡುವುದಿಲ್ಲ. ಪಕ್ಷ ಬಲವರ್ಧನೆಗೆ ದುಡ್ಡು ಸಂಗ್ರಹವಿಲ್ಲ. ಬೆಂಗಾವಲಿಗರನ್ನು ಇಟ್ಟುಕೊಂಡು ಜೈಕಾರ ಹಾಕಿ […]

ಉಪೇಂದ್ರ ಹೊಸ ಚಿತ್ರ ‘ಶ್ರೀಮತಿ’

Wednesday, July 6th, 2011
srimathi/ ಶ್ರೀಮತಿ

ಹಿಂದಿಯ ‘ಐತ್‌ರಾಜ್’ ಚಿತ್ರದ ರೀಮೇಕ್ ‘ಶ್ರೀಮತಿ’ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದಲ್ಲಿ ತಯಾರಾಗಿದೆ. ಅಂದ ಹಾಗೆ ಈ  ಚಿತ್ರ ವಯಸ್ಕರಿಗೆ ಮಾತ್ರ. ಉಪ್ಪಿ ಜೊತೆ ಅವರ ಶ್ರೀಮತಿ ಪ್ರಿಯಾಂಕಾ ಉಪೇಂದ್ರಕೂಡಾ ಅಭಿನಯಿಸಿದ್ದಾರೆ.  ಸೆಲೀನಾ ಜೇಟ್ಲಿ, ಪ್ರೇಮ್ ಚೋಪ್ರಾ, ಕೋಟ, ಸಯ್ಯಾಜಿ ಶಿಂಧೆ ತಾರಾಗಣದ ಈ  ಚಿತ್ರಕ್ಕೆ ಪ್ರಾದೇಶಿಕ ಸೆನ್ಸಾರ್ ಮಂಡಳಿ ‘ಎ’ ಸರ್ಟಿಫಿಕೇಟ್ ನೀಡಿದೆ. ಹದಿ ಹರೆಯದ ಯುವಕರನ್ನು ಬೆಚ್ಚಗೆ ಮಾಡುವ ಕೆಲವು ದೃಶ್ಯಗಳಿರುವುದೇ “ವಯಸ್ಕರ ಚಿತ್ರ”ದ ಹಣೆಪಟ್ಟಿ ಬೀಳಲು ಕಾರಣ ಎನ್ನಲಾಗಿದೆ. ಜುಲೈ 8ಕ್ಕೆ ಉಪೇಂದ್ರ […]