ರಾಜಕೀಯದಲ್ಲಿ ಇದೆಲ್ಲ ಸಹಜ, ಮುಂದಿನ ದಿನಗಳಲ್ಲಿ ಸಚಿವನಾಗುವ ನಿರೀಕ್ಷೆ ಇದೆ : ಮಾಜಿ ಶಾಸಕ ಎಚ್. ವಿಶ್ವನಾಥ್ ವಿಶ್ವಾಸ

Thursday, February 6th, 2020
h-vishwanath

ಬೆಂಗಳೂರು : ನೂತನ ಸಚಿವರ ಪಟ್ಟಿ ಪ್ರಕಟವಾಗುತ್ತಿದ್ದಂತೆ ಬಿಜೆಪಿಯಲ್ಲಿ ಒಳಗಿಂದೊಳಗೆ ಅಸಮಾಧಾನ ತಲೆದೋರಿದೆ. ಮಂತ್ರಿ ಸ್ಥಾನದಿಂದ ವಂಚಿತರಾಗಿರುವ ಎಚ್. ವಿಶ್ವನಾಥ್ ತಮ್ಮ ಅಸಮಾಧಾನದ ನಡುವೆಯೂ ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡುತ್ತಿರುವವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗಿದ್ದವರು ಸಚಿವರಾಗುತ್ತಿರುವುದು ಸಂತೋಷ ತಂದಿದೆ. ನೂತನ ಸಚಿವರಿಂದ ಅಭಿವೃದ್ಧಿ ಸಾಧ್ಯವಾಗಲಿ. ಸಂದರ್ಭ, ಸಮಯ ಬಂದಾಗ ನನಗೂ ಸ್ಥಾನ ಸಿಗುತ್ತದೆ. ರಾಜಕಾರಣದಲ್ಲಿ ಇದೆಲ್ಲ ಸಹಜ. ಮುಂದಿನ ದಿನಗಳಲ್ಲಿ ಸಚಿವನಾಗುವ ನಿರೀಕ್ಷೆ ಇದೆ ಎಂದು ಮಾಜಿ ಶಾಸಕ ಎಚ್. ವಿಶ್ವನಾಥ್ ಹೇಳಿದ್ದಾರೆ. ಜೆಡಿಎಸ್ ತೊರೆದು […]

ಉಪಚುನಾವಣೆಯಲ್ಲಿ ನಾನು ಸೋತಿರಬಹುದು, ಹಾಗಂತ ನಾನು ಸತ್ತಿಲ್ಲ : ಎಚ್​. ವಿಶ್ವನಾಥ್ ಗುಡುಗು

Wednesday, December 18th, 2019
H.-Vishwanath

ಹುಣಸೂರು : ಉಪಚುನಾವಣೆಯಲ್ಲಿ ನಾನು ಸೋತಿರಬಹುದು. ಹಾಗಂತ ನಾನು ಸತ್ತಿಲ್ಲ. ರಾಜಕೀಯವಾಗಿ, ಸಾರ್ವಜನಿಕವಾಗಿ ಅಭಿವೃದ್ಧಿ ವಿಚಾರದಲ್ಲಿ ಬದುಕಿದ್ದೇನೆ ಎಂದು ಹುಣಸೂರು ಪರಾಜಿತ ಬಿಜೆಪಿ ಅಭ್ಯರ್ಥಿ ಎಚ್. ವಿಶ್ವನಾಥ್ ತಿಳಿಸಿದ್ದಾರೆ. ಸೋಲಿನ ಬಳಿಕ ಮಾತನಾಡಿದ ಅವರು, ಬಿಜೆಪಿ ಸೇರಲು ನಾನು ಹಣ ತಿಂದಿದ್ದೇನೆ ಎಂದು ಕೆಲವರು ಅಪಪ್ರಚಾರ ನಡೆಸುತ್ತಿದ್ದಾರೆ. ಸತ್ಯವಂತರಂತೆ ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ನಾನು ಹಣ ತಿಂದವನಲ್ಲ. ತಿನ್ನಿಸಿದವನು. ಯಾರ ಅನ್ನಕ್ಕೂ ಕೈ ಹಾಕಿಲ್ಲ ಎಂದು ಗುಡುಗಿದರು. ನಾನು ಯಾರ ಅನ್ನವನ್ನು ಕಿತ್ತುಕೊಂಡಿಲ್ಲ. 85ಲಕ್ಷ ಮಕ್ಕಳಿಗೆ […]

ಅನರ್ಹ ಶಾಸಕ ಎಂದು ಟೀಕೆ ಮಾಡುತ್ತಿದ್ದಾರೆ, ನಾನು ಅನರ್ಹ ಅಲ್ಲ ನಾನು ಅರ್ಹ : ಎಚ್.ವಿಶ್ವನಾಥ್

Tuesday, November 19th, 2019
H-Vishwanath

ಮೈಸೂರು : ನನ್ನನ್ನು ಅನರ್ಹ ಶಾಸಕ ಎಂದು ಟೀಕೆ ಮಾಡುತ್ತಿದ್ದಾರೆ. ನಾನು ಅನರ್ಹ ಅಲ್ಲ ನಾನು ಅರ್ಹ ಎಂದು ಟೀಕಾರರ ವಿರುದ್ಧ ಬಿಜೆಪಿ ಅಭ್ಯರ್ಥಿ ಎಚ್.ವಿಶ್ವನಾಥ್ ಕಿಡಿ ಕಾರಿದರು. ಹುಣಸೂರಿನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ವೇಳೆ ಮಾತನಾಡಿದ ಅವರು, ವಿಶ್ವನಾಥ್ ಭ್ರಷ್ಟಚಾರಿ ಅಲ್ಲ, ವಿಶ್ವನಾಥ್ ಅಸಮರ್ಥ ಅಲ್ಲ. ಹೀಗಾಗಿ ನನ್ನ ವಿರುದ್ಧ ಮಾತನಾಡಲು ಏನೂ ಇಲ್ಲದೆ ನನ್ನನ್ನು ಅನರ್ಹ ಶಾಸಕ ಎಂದು ಟೀಕೆ ಮಾಡುತ್ತಿದ್ದಾರೆ. ನಾನು ಅನರ್ಹ ಅಲ್ಲ ನಾನು ಅರ್ಹ. ಎಲ್ಲ ರೀತಿಯಲ್ಲೂ ಅರ್ಹ […]

ನನ್ನನ್ನು ಯಾರೂ ಈ ನಿಟ್ಟಿನಲ್ಲಿ ಸಂಪರ್ಕ ಮಾಡಿಲ್ಲ… ಆ ಧೈರ್ಯ ಯಾರಿಗೂ ಇಲ್ಲ: ಎಚ್. ವಿಶ್ವನಾಥ್

Friday, May 18th, 2018
H-vishwanath;

ಹೈದರಾಬಾದ್: ರಾಜ್ಯ ಸರ್ಕಾರ ರಚನೆ ಕಸರತ್ತಿನ ಹಿನ್ನೆಲೆಯಲ್ಲಿ ಬಹುಮತ ಸಾಬೀತಿಗೆ ರಾಜಕೀಯ ಪಕ್ಷಗಳಿಗೆ ಸುಪ್ರೀಂಕೋರ್ಟ್ ನಾಳೆ ದಿನಾಂಕ ನಿಗದಿಪಡಿಸಿದೆ. ಈ ನಡುವೆ ಬಿಜೆಪಿಯಿಂದ ಕುದುರೆ ವ್ಯಾಪಾರ ನಡೆಯಲು ಪ್ರಯತ್ನ ನಡೆಯುತ್ತಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಆದರೆ ನನ್ನನ್ನು ಯಾರೂ ಈ ನಿಟ್ಟಿನಲ್ಲಿ ಸಂಪರ್ಕ ಮಾಡಿಲ್ಲ. ಆ ಧೈರ್ಯ ಯಾರಿಗೂ ಇಲ್ಲ ಎಂದು ಹಿರಿಯ ಕಾಂಗ್ರೆಸ್ ಶಾಸಕ ಎಚ್. ವಿಶ್ವನಾಥ್ ಹೇಳಿದ್ದಾರೆ. ತಮ್ಮ ತಂದೆಯವರನ್ನು ಖರೀದಿ ಮಾಡುವ ಪ್ರಯತ್ನ ಸಫಲವಾಗುವುದಿಲ್ಲ ಎಂದು ಶಾಸಕ ವಿಶ್ವನಾಥ್ ಅವರ ಪುತ್ರ ಹಾಕಿರುವ […]