ಕರಾವಳಿಯಾದ್ಯಂತ ಸಮುದ್ರ ತೀರ ಸ್ವಚ್ಛತಾ ಅಭಿಯಾನ

Monday, September 18th, 2023
clean-beach

ಮಂಗಳೂರು : ಸ್ವಚ್ಚ ಸಾಗರ ಸುರಕ್ಷಿತ ಸಾಗರಅಭಿಯಾನ ದೇಶದಾದ್ಯಂತ ಈಬಾರಿಯೂ ಯಶಸ್ವಿಯಾಗಿ ನಡೆಸಲಾಗಿದೆ ಎಂದು ಪರ್ಯವರಣ ಸಂರಕ್ಷಣ ಮಂಗಳೂರು ಮಹಾನಗರ ಸಂಯೋಜಕ ,ನ್ಯಾಯವಾದಿ ಸತೀಶ ಮಹಿತಿ ನೀಡಿದ್ದಾರೆ.. ಪರ್ಯಾವರಣ ಸಂರಕ್ಷಣ ಗತಿ ವಿಧಿ ಮತ್ತು ಕರಾವಳಿ ಕಲ್ಯಾಣ ಪರಿಷತ್ತು ಸಂಯೋಜನೆಯಲ್ಲಿ ರೋಟರಿ/ಲಯನ್ಸ/ ಏನ್ ಸಿಸಿ ,ಎನ್ಎಸ್ಎಸ್ಜ್ಯ ಶಾಲಾ ಕಾಲೇಜುಗಳು ಒಟ್ಟಾಗಿ ಈ ಅಭಿಯಾನವನ್ನು ಯಶಸ್ವಿಗೊಳಿಸಿದ್ದಾರೆ. ಪರ್ಯಾವರಣ ಗತಿ ವಿಧಿಯ ರಾಜ್ಯ ಸಂಯೋಜಕ ಜಯರಾಮ್ ಬೊಳ್ಳಾಜೆ ಸಾಗರದ ಸುರಕ್ಷೆ ಕುರಿತು ಮನೆಗಳಿಂದ ಏನು ಉಪಕ್ರಮ ಕೈಗೊಳ್ಳಬೇಕು ಎಂಬ ಮಾಹಿತಿಯನ್ನು […]

ಕರಾವಳಿಯಾದ್ಯಂತ ನಾಗರಪಂಚಮಿ ಆಚರಣೆ

Friday, August 13th, 2021
Nagarapanchami

ಮಂಗಳೂರು : ನಾಗರಪಂಚಮಿಯನ್ನು ಕರಾವಳಿಯಾದ್ಯಂತ  ಸಾಂಪ್ರದಾಯಿಕವಾಗಿ  ವೈದಿಕ ವಿಧಿ ವಿಧಾನಗಳು ಮತ್ತು  ವಿಶೇಷ ಪೂಜೆಯೊಂದಿಗೆ ಕೋವಿಡ್ ನಿಯಮಗಳಿಗನುಸಾರವಾಗಿ ಸರಳವಾಗಿ ಆಚರಿಸಲಾಯಿತು. ಮಂಗಳೂರಿನ ಕುಡುಪು ಅನಂತಪದ್ಮನಾಭ ದೇವಸ್ಥಾನದಲ್ಲಿ ನಾಗರಪಂಚಮಿಯನ್ನು ಸರಳ ರೀತಿಯಲ್ಲಿ ಆಚರಿಸಲಾಯಿತು. ಭಕ್ತರು ತಮ್ಮ ಪ್ರಾರ್ಥನೆಯನ್ನು  ದೇವಸ್ಥಾನದ  ಗೇಟ್‌ಗಳ ಹೊರಗೆ ಮಾಡಿದರು. ದೇವಸ್ಥಾನಗಳಲ್ಲಿ ವಿಶೇಷ ಸೇವೆ ಗಳು ಇರಲಿಲ್ಲ , ಭಕ್ತರು ತಮ್ಮ ಕುಟುಂಬದ ನಾಗಬನಗಳಲ್ಲಿ ಸೀಯಾಳಾಭಿಷೇಕ, ಹಾಲೆರೆಯುವ ಮೂಲಕ ಪೂಜೆ ಸಲ್ಲಿಸುತ್ತಿದ್ದಾರೆ. ನಗರದ ಶರವು ದೇವಾಲಯದಲ್ಲಿ ಸರಕಾರದ ಮಾರ್ಗಸೂಚಿಯಂತೆ ನಾಗರಪಂಚಮಿ ಆಚರಿಸಲಾಯಿತು. ಕುಕ್ಕೆ ಸುಬ್ರಹ್ಮಣ್ಯೇಶ್ವರ ದೇವಸ್ಥಾನ, ಮಂಜೇಶ್ವರ ಅನಂತೇಶ್ವರ ದೇವಸ್ಥಾನ, ಮಂಗಳಾದೇವಿ ದೇವಸ್ಥಾನಗಳಲ್ಲೂ ನಾಗರ […]

ಭಾರತೀಯ ಸೇನೆಯ ಗಡಿಭದ್ರತಾ ಪಡೆಗೆ ಕರಾವಳಿಯ ಇಬ್ಬರು ಯುವತಿಯರ ಸರ್ಪಡೆ

Tuesday, March 30th, 2021
Military

ಮಂಗಳೂರು :  ಭಾರತೀಯ ಸೇನೆಯ ಗಡಿಭದ್ರತಾ ಪಡೆ ( ಬಾರ್ಡರ್ ಸೆಕ್ಯುರಿಟಿ ಫೋರ್ಸ್) ಗೆ  ಕರಾವಳಿಯ ಇಬ್ಬರು ವನಿತೆಯರು, ದೇಶ ಸೇವೆಗೆ ಆಯ್ಕೆಯಾಗಿದ್ದು, ಇದೇ ಏಪ್ರಿಲ್ 1ರಿಂದ ಭಾರತೀಯ ಸೇನೆಗೆ ಸೇರ್ಪಡೆಯಾಗಲಿದ್ದಾರೆ. ಭಾರತೀಯ ಸೇನೆಯ ಗಡಿಭದ್ರತಾ ಪಡೆ ( ಬಾರ್ಡರ್ ಸೆಕ್ಯುರಿಟಿ ಫೋರ್ಸ್) ಗೆ ಆಯ್ಕೆಯಾಗಿರುವ ಪುತ್ತೂರು ತಾಲೂಕಿನ ಬಲ್ನಾಡಿನ ರಮ್ಯಾ ಹಾಗೂ ಕಡಬ ತಾಲೂಕಿನ ಕಾಣಿಯೂರಿನ ಯೋಗಿತಾ ಇನ್ನೆರಡು ದಿನದಲ್ಲಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಪುತ್ತೂರು ಬಲ್ನಾಡು ಗ್ರಾಮದ ಪದ್ಮಯ್ಯ ಗೌಡ ಹಾಗೂ ತೇಜಾವತಿ ದಂಪತಿಯ ಪುತ್ರಿಯಾಗಿರುವ […]

ಕರಾವಳಿಯ ಗಂಡುಕಲೆ ಯಕ್ಷಗಾನ ಪ್ರದರ್ಶನ ಜಿಲ್ಲೆಯಾದ್ಯಂತ ನವೆಂಬರ್ ಅಂತ್ಯಕ್ಕೆ ಪ್ರಾರಂಭ – ಕೋಟ ಶ್ರೀನಿವಾಸ ಪೂಜಾರಿ

Tuesday, October 6th, 2020
yakshagana

ಮಂಗಳೂರು :  ಯಕ್ಷಗಾನ ಕಲಾವಿದರು ವೃತ್ತಿಯನ್ನು ಕಳೆದುಕೊಳ್ಳಬಾರದು ಎಲ್ಲಾ ರೀತಿಯ ಸೂಕ್ತ ಮುಂಜಾಗೃತ ಕ್ರಮದೊಂದಿಗೆ ಸಂಪ್ರದಾಯದ ಪ್ರಕಾರ ಕರಾವಳಿಯ ಗಂಡುಕಲೆ ಯಕ್ಷಗಾನ ಜಿಲ್ಲೆಯಾದ್ಯಂತ ನವೆಂಬರ್ ಅಂತ್ಯಕ್ಕೆ ಪ್ರದರ್ಶನಗೊಳ್ಳಲಿದೆ ಎಂದು ಮುಜುರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಯಕ್ಷಗಾನ ಮೇಳಗಳ ಸಂಚಾಲಕರ ಸಭೆಯನ್ನುದ್ಧೇಶಿಸಿ ಮಾತನಾಡಿದ ಅವರು, ಕೋವಿಡ್–19 ನಿಂದಾಗಿ ಯಕ್ಷಗಾನ ಕಲಾವಿದರ ಸ್ಥಿತಿ ಸಂಕಷ್ಟದಲ್ಲಿ ಸಿಲುಕಿದ್ದು, ಯಾವುದೇ ಕಲಾವಿದನಿಗೆ ಅನ್ಯಾಯವಾಗದಂತೆ ಶೀಘ್ರದಲ್ಲಿಯೇ ಸರಕಾರದಿಂದ ಆರ್ಥಿಕ ನೆರವು ನೀಡಲು ಕ್ರಮ ಕೈಗೊಳ್ಳಲಾಗುವುದು […]

ಕರಾವಳಿಯ ಕೆಲವಡೆ ಹಸುರು ಬಣ್ಣಕ್ಕೆ ತಿರುಗಿದ ಸಮುದ್ರದ ನೀರು

Wednesday, September 16th, 2020
green Water

ಸುರತ್ಕಲ್‌:  ಕರಾವಳಿಯ ಕೆಲವಡೆ ಸಮುದ್ರದ ನೀರು  ಹಸುರು ಬಣ್ಣದಲ್ಲಿ ರಾತ್ರಿ ವೇಳೆ ನೀಲಿ ಬಣ್ಣದಲ್ಲೂ ಗೋಚರವಾಗಿರುವುದು ಮಂಗಳವಾರ ಕಂಡು ಬಂದಿದೆ. ಸಮೀಪದ ಹೊಸಬೆಟ್ಟು, ಮುಕ್ಕ ಸಮುದ್ರದಲ್ಲಿ ಈ ರೀತಿ ಗೋಚರವಾಗಿದ್ದು ಕೆಲವು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ವಿವಿಧೆಡೆಯಿಂದ ನೀರು ಸಮುದ್ರ ಸೇರಿದೆ. ನೀರಿನಲ್ಲಿ ಅತೀ ಸೂಕ್ಷ್ಮ ಆಲ್ಗಾಲ್ ನಿಂದ‌ ಹೆಚ್ಚಾಗಿ ಉಪ್ಪು ನೀರಿನ ಬಣ್ಣ ಬಣ್ಣ ಬದಲಾಗುತ್ತದೆ. ಹೀಗಾಗಿ ಸಮುದ್ರದ ಬಣ್ಣ ಹಸುರಾಗಿ ಗೋಚರಿಸುತ್ತದೆ. ಇದು ಸಮುದ್ರ ತೀರದುದ್ದಕ್ಕೂ ಗೋಚರಿಸದೇ ಕೆಲವು ಭಾಗದ ದಡದಲ್ಲಿ ಮಾತ್ರ ಕಂಡು ಬರುತ್ತದೆ […]

ಕರಾವಳಿಯಾದ್ಯಂತ ಮೊಂತಿ ಹಬ್ಬ ಮತ್ತು ತೆನೆ ಹಬ್ಬ ಆಚರಣೆ

Tuesday, September 8th, 2020
montifest

ಮಂಗಳೂರು : ಕರಾವಳಿಯಾದ್ಯಂತ  ಕ್ರಿಶ್ಚಿಯನ್ ಬಾಂಧವರು ಮಂಗಳವಾರ ಮೊಂತಿ  ಹಬ್ಬ ಮತ್ತು ತೆನೆ ಹಬ್ಬವನ್ನು ಜೊತೆಯಾಗಿ ಆಚರಿಸಿದರು. ಯೇಸುಕ್ರಿಸ್ತರ ತಾಯಿ ಮೇರಿ ಮಾತೆಯ ಜನ್ಮದಿನವಾದ ಸೆ. 8ಅನ್ನು ಮೊಂತಿ ಫೆಸ್ತ್ ಹಬ್ಬವಾಗಿ ಆಚರಿಸಲಾಗುತ್ತದೆ. ಚರ್ಚ್‌ಗಳಲ್ಲಿ ಹಬ್ಬದ ಬಲಿಪೂಜೆ ನೆರವೇರಿಸಲಾಯಿತು. ಮೇರಿ ಮಾತೆಗೆ ಹೂವುಗಳನ್ನು ಅರ್ಪಿಸಿ ನಮಿಸಿ ಪ್ರಾರ್ಥನೆ ಸಲ್ಲಿಸಲಾಯಿತು. ಕೊರೊನಾ ಹಿನ್ನೆಲೆಯಲ್ಲಿ ಹಬ್ಬವನ್ನು ಸರಳವಾಗಿ ಆಚರಿಸಲಾಯಿತು. ಮಂಗಳೂರಿನ ರೊಜಾರಿಯೋ ಕೆಥೆಡ್ರಲ್‌ನಲ್ಲಿ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್‌ ವಂ| ಡಾ| ಪೀಟರ್‌ ಪಾವ್ಲ್ ಸಲ್ಡಾನ್ಹಾ ಅವರು ಪ್ರಧಾನ ಬಲಿಪೂಜೆ ನೆರವೇರಿಸಿದರು. ರೊಸಾರಿಯೊ […]

ಜು.31ರಂದು  ಕನ್ನಡ -ತಮಿಳು ದ್ವಿಭಾಷೆಯಲ್ಲಿ ವಿನೂತನ ಚಿತ್ರ `ಹವಾಲ’ ಒಟಿಟಿಯಲ್ಲಿ ಬಿಡುಗಡೆ

Sunday, July 19th, 2020
hawala

ಮಂಗಳೂರು: ಕೊರೋನಾ ಲಾಕ್‌ಡೌನ್ ಸಿನಿಮಾ ರಂಗಕ್ಕೂ ಬಲವಾದ ಪೆಟ್ಟು ನೀಡಿದೆ. ಆದರೆ ಚಿತ್ರತಂಡದ ಹುಮ್ಮಸ್ಸು ಮಾತ್ರ ಕಡಿಮೆಯಾಗಿಲ್ಲ. ಚಿತ್ರ ಪ್ರೇಮಿಗಳಿಗಾಗಿ ವಿನೂತನವಾದ ಕಥಾ ಹಂದರ ಹೊಂದಿದ `ಹವಾಲ’ ಚಿತ್ರ ನಿರ್ಮಾಣಗೊಂಡಿದ್ದು, ಇದೇ ಜು.31 ರಂದು ವರ್ಲ್ಡ್ ಪ್ರೀಮಿಯರ್ (ಒಟಿಟಿ)ನಲ್ಲಿ ಕನ್ನಡ ಮತ್ತು ತಮಿಳು ಭಾಷೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಲಿದೆ. ಶಶಿ ಕುಮಾರ್ ಪಂಡಿತ್ ಅರ್ಪಿಸುವ ಈ ಚಿತ್ರದ ನಿರ್ಮಾಣವನ್ನು ನಿರ್ಮಾಪಕ ಪುತ್ತೂರಿನ ಪ್ರವೀಣ್ ಶೆಟ್ಟಿ ಮಾಡಿದ್ದು, ಚಿತ್ರ ಭೂಗತ ಲೋಕದ ಅತ್ಯದ್ಭುತವಾದ ರೋಚಕ ಕಥೆಯನ್ನೊಳಗೊಂಡಿದೆ. ಸೋಚ್ ಸಿನಿಮಾಸ್ ಇವರ […]

ಕೊರೋನಾ ನಡುವೆ ಮಂಗಳೂರಿಗೆ ‘ಅಂಫಾನ್’ ಚಂಡಮಾರುತ ಭೀತಿ

Sunday, May 17th, 2020
amfan

ಮಂಗಳೂರು : ಒಂದೆಡೆ ಕೊರೋನಾ ಭೀತಿ ಮುಂದುವರಿಯುತ್ತಿರುವಾಗಲೇ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರ ಪರಿಣಾಮ ಕರಾವಳಿ ತೀರದಲ್ಲಿ ‘ಅಂಫಾನ್’ ಎಂಬ ಹೆಸರಿನ ಚಂಡಮಾರುತದ ಭೀತಿಯೂ ಎದುರಾಗಿದೆ. ಭಾರತೀಯ ಹವಾಮಾನ ಇಲಾಖೆ ಮಾಹಿತಿಯ ಪ್ರಕಾರ ಮೇ 18ರಂದು ಈ ಚಂಡಮಾರುತವು ತೀವ್ರ ಸ್ವರೂಪ ಪಡೆಯಲಿದೆ. ಆ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಭಾಗದಲ್ಲಿ ‘ಎಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ. ಅಲ್ಲದೆ ಮುಂಗಾರು ಪ್ರವೇಶಕ್ಕೆ ಈ ಚಂಡಮಾರುತವು ತೀವ್ರ ಪರಿಣಾಮ ಬೀರಬಹುದು ಎಂದು ಹವಾಮಾನ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಅರಬ್ಬೀ ಸಮುದ್ರದಲ್ಲಿ […]

ಪ್ರಧಾನಿ ನರೇಂದ್ರ ಮೋದಿ ಜನತಾ ಕರ್ಫ್ಯೂಗೆ ಕರೆಗೆ ಕರಾವಳಿಯಲ್ಲಿ ಬೆಂಬಲ

Sunday, March 22nd, 2020
kaladka

ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ಕರೆಕೊಟ್ಟಿರುವ ಜನತಾ ಕರ್ಫ್ಯೂಗೆ ಕರಾವಳಿಯಲ್ಲಿ ಬೆಂಬಲ ವ್ಯಕ್ತವಾಗಿದೆ. ಮಂಗಳೂರು- ಉಡುಪಿ ನಗರದಲ್ಲಿ ಯಾವುದೇ ಕೆಎಸ್ ಆರ್ ಟಿಸಿ ಮತ್ತು ಖಾಸಗಿ ಬಸ್ ಗಳು ಸಂಚರಿಸುತ್ತಿಲ್ಲ. ಉಭಯ ಜಿಲ್ಲೆಗಳ ಸಾರ್ವಜನಿಕ ಸಂಚಾರ ಸಂಪೂರ್ಣ ಸ್ಥಬ್ಧವಾಗಿದೆ. ಹೊಟೇಲ್ ಗಳು, ಪಬ್, ಬಾರ್ ಆಂಡ್ ರೆಸ್ಟೋರೆಂಟ್ ಗಳು ಬಂದ್ ಗಳು ಸಂಪೂರ್ಣ ಬಂದ್ ಆಗಿದೆ. ಆಟೋ, ಮ್ಯಾಕ್ಸಿ ಕ್ಯಾಬ್ ಗಳು ಬೀದಿಗಿಳಿದಿಲ್ಲ. ತುರ್ತು ಸೇವೆಗಳನ್ನು ಹೊರತು ಪಡಿಸಿ ನಗರ ಪೂರ್ತಿ ಬಂದ್‌ ಆಗಿದೆ. ಮಂಗಳೂರಿನಲ್ಲಿ […]

ಕೊರೊನಾ ಆತಂಕ : ಕರಾವಳಿಯಾದ್ಯಂತ ಮುನ್ನೆಚ್ಚರಿಕೆ ಘೋಷಣೆ

Wednesday, March 4th, 2020
karavali

ಮಂಗಳೂರು : ದೇಶಾದ್ಯಂತ ಕೊರೊನಾ ವೈರಸ್‌ ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳು ಬಿಗಿಗೊಳ್ಳುತ್ತಿದ್ದು, ಅವಿಭಜಿತ ದ.ಕ. ಜಿಲ್ಲೆಯಲ್ಲಿಯೂ ಮುಂಜಾಗ್ರತಾ ಕ್ರಮ ಮುಂದುವರಿದಿದೆ. ಮಂಗಳೂರು ವಿಮಾನ ನಿಲ್ದಾಣಕ್ಕೆ ಹಾಗೂ ನವಮಂಗಳೂರು ಬಂದರಿಗೆ ಆಗಮಿಸುವ ಮತ್ತು ಇಲ್ಲಿಂದ ತೆರಳುವವರ ತಪಾಸಣ ಕಾರ್ಯ ಮುಂದುವರಿಯುತ್ತಿದ್ದು, ಈವರೆಗೆ 20 ಸಾವಿರ ಮಂದಿಯನ್ನು ತಪಾಸಣೆಗೊಳಪಡಿಸಲಾಗಿದೆ. ಯಾವುದೇ ಪಾಸಿಟಿವ್‌ ಪ್ರಕರಣ ಪತ್ತೆಯಾಗಿಲ್ಲ. ಜಿಲ್ಲಾ ವೆನ್ಲಾಕ್  ಆಸ್ಪತ್ರೆಯಲ್ಲಿ 19 ಬೆಡ್‌ ಸಾಮರ್ಥ್ಯದ ಐಸೋಲೇಟೆಡ್‌ ವಾರ್ಡ್‌. ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲೂ ಪ್ರತ್ಯೇಕ ವಾರ್ಡ್‌ ಮಾಡಲಾಗಿದೆ. ಈಗಾಗಲೇ ಕಾರ್ಯ ನಿರ್ವಹಿಸುತ್ತಿದ್ದು, ಪ್ರಕರಣ […]