ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ದಲ್ಲಿ ‘ಮಂಗಳೂರು ದಸರಾ’ ಶೋಭಾಯಾತ್ರೆ

Wednesday, October 25th, 2023
mangalore-Dasara

ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ದಲ್ಲಿ ‘ಮಂಗಳೂರು ದಸರಾ’ ಶೋಭಾಯಾತ್ರೆ ನವದುರ್ಗೆಯರು ಮತ್ತು ಶಾರದಾ ಮಾತೆಯ ವಿಗ್ರಹಗಳ ಜಲ ಸ್ತಂಭನದೊಂದಿಗೆ ಸಮಾಪನಗೊಂಡಿದೆ. ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ಧಾರ್ಮಿಕ ಪೂಜಾ ವಿಧಿ ವಿಧಾನಗಳೊಂದಿಗೆ ಮಹಾಗಣಪತಿ, ಶಾರದಾ ಮಾತೆಯೊಂದಿಗೆ ನವದುರ್ಗೆಯರಾದ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಿ, ಕೂಷ್ಮಾಂಡಿನಿ, ಸ್ಕಂದ ಮಾತಾ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ಧಿಧಾತ್ರಿಯರ ಪೂಜೆ ಯೊಂದಿಗೆ ಮಂಗಳವಾರ ಸಂಜೆ ಶೋಭಾಯಾತ್ರೆ ಮೆರವಣಿಗೆ ಆರಂಭಗೊಂಡಿತ್ತು. ಸುಮಾರು 7 ಕಿ.ಮೀ. ನಗರ ಪ್ರದಕ್ಷಿಣೆಯ ಬಳಿಕ ಬುಧವಾರ ಮುಂಜಾನೆ ಮರಳಿ […]

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಮಹೋತ್ಸವಕ್ಕೆ ಚಾಲನೆ

Friday, October 8th, 2021
Mangaluru Dasara

ಮಂಗಳೂರು  :  ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಂಗಳೂರು ದಸರಾ ಮಹೋತ್ಸವಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌ ಅದ್ಧೂರಿ ಚಾಲನೆ ನೀಡಿದರು. ಅಕ್ಟೋಬರ್ 7 ರಿಂದ  16ರವರೆಗೆ ʼನಮ್ಮ ದಸರಾ – ನಮ್ಮ ಸುರಕ್ಷೆ’ ಎಂಬ ಘೋಷವಾಕ್ಯದಡಿ ನವರಾತ್ರಿ ಮಹೋತ್ಸವ ಹಾಗೂ ಮಂಗಳೂರು ದಸರಾ ಮಹೋತ್ಸವ ನಡೆಯಲಿದೆ. ಇಂದು ದೇವಳದಲ್ಲಿ ಶ್ರೀ ಶಾರದಾ ಮಾತೆ, ಶ್ರೀ ಮಹಾಗಣಪತಿ ದೇವರ ಸಹಿತ ನವದುರ್ಗೆಯರ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಯಿತು. ಅ.16ರಂದು ನವರಾತ್ರಿ ಮಹೋತ್ಸವ ಸಂಪನ್ನಗೊಂಡು ಶ್ರೀ ಶಾರದಾ ಮಾತೆ, […]

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಿಂದ ತೌಡುಗೋಳಿ ದುರ್ಗಾ ಬಾಲಗೋಕುಲಕ್ಕೆ 2.5 ಕ್ವಿಂಟಾಲ್ ಅಕ್ಕಿ

Sunday, May 10th, 2020
Balagokula

ಮಂಗಳೂರು : ತೌಡುಗೋಳಿ ಶ್ರೀ ದುರ್ಗಾದೇವಿ ದೇವಸ್ಥಾನ ಮತ್ತು ಅಯ್ಯಪ್ಪ ಸ್ವಾಮಿ ಮಂದಿರದ ವಠಾರದಲ್ಲಿ ಶ್ರೀ ದುರ್ಗಾ ಬಾಲಗೋಕುಲದ ವತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಹಯೋಗದೊಂದಿಗೆ ಸುಮಾರು 2.5 ಕ್ವಿಂಟಾಲ್ ಅಕ್ಕಿ ಮತ್ತು ದಿನಸಿ ಸಾಮಾಗ್ರಿಗಳನ್ನು ಎರಡನೇ ಹಂತದಲ್ಲಿ ಪರಿಸರದ ಅರ್ಹ ಕುಟುಂಬಗಳಿಗೆ ಮೇ 10 ಭಾನುವಾರದಂದು ವಿತರಿಸಲಾಯಿತು. ಕಳೆದ 50 ದಿನಗಳಿಂದ ಲಾಕ್‌ಡೌನ್ ನಿಂದ ಸಂಕಷ್ಟಕ್ಕೆ ಒಳಗಾದವರಿಗೆ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಆಡಳಿತ ಮಂಡಳಿ ಅನ್ನದಾನ ಮತ್ತು ದಿನಸಿಗಳನ್ನು ನೀಡುತ್ತಾ ಬಂದು ಜಿಲ್ಲೆಯ ಜನತೆಯಿಂದ ಮೆಚ್ಚುಗೆ ಗಳಿಸಿದೆ. […]

ಕರಾವಳಿಯ ಶಿವನ ದೇವಸ್ಥಾನಗಳಲ್ಲಿ ಶಿವರಾಧನೆ

Wednesday, February 14th, 2018
shivrathri

ಮಂಗಳೂರು: ಮಹಾಶಿವರಾತ್ರಿ ಪ್ರಯುಕ್ತ ಕರಾವಳಿಯ ಶಿವನ ದೇವಸ್ಥಾನಗಳಲ್ಲಿ ಶಿವರಾಧನೆ ಶ್ರದ್ಧಾ-ಭಕ್ತಿಯಿಂದ ನಡೆಯುತ್ತಿದೆ. ಜಿಲ್ಲೆಯ ಬಹುತೇಕ ಶಿವನ ದೇವಸ್ಥಾನಗಳಲ್ಲಿ ಜಾತ್ರೆ, ರುದ್ರಾಭಿಷೇಕ, ವಿಶೇಷ ಪೂಜೆಯ ಸಂಭ್ರಮ ನಡೆಯುತ್ತಿದೆ. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶಿವರಾತ್ರಿ ಮಹೋತ್ಸವ, ಬೆಳ್ಳಿ ರಥೋತ್ಸವ, ಮಹಾರುದ್ರಾಭಿಷೇಕ, ವಿಷ್ಣು ಬಲಿ ಉತ್ಸವ, ರಥೋತ್ಸವ, ಶಿವಬಲಿ, ಜಾಗರಣೆ ಬಲಿ, ಕಟ್ಟೆಪೂಜೆ, ಕೆರೆದೀಪ, ಮಂಟಪ ಪೂಜೆ ನೆರವೇರಿದೆ. ಶ್ರೀ ಕ್ಷೇತ್ರ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ವಿಶೇಷವಾಗಿ ರುದ್ರಾಭಿಷೇಕ, ಶಿವಪೂಜೆ, ರಾತ್ರಿ ರಂಗಪೂಜೆ, ಬಂಡಿ ಉತ್ಸವ, ಬೆಳ್ಳಿ ರಥೋತ್ಸವ, ಇದೇ […]

ನಟ ಶಿವರಾಜ್‌ಕುಮಾರ್ ಕುಟುಂಬ ಮಂಗಳೂರಲ್ಲಿ

Friday, January 20th, 2017
shivarajKumar

ಮಂಗಳೂರು:  ಕನ್ನಡ ಚಿತ್ರರಂಗದ ಹ್ಯಾಟ್ರಿಕ್‌ ಹೀರೋ ಡಾ. ಶಿವರಾಜ್‌ಕುಮಾರ್ ಕುಟುಂಬ ಸಮೇತ  ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಶುಕ್ರವಾರ ಭೇಟಿ ನೀಡಿ ದೇವರ ದರ್ಶನ ಪಡೆದರು. ಶಿವರಾಜ್ ಕುಮಾರ್, ಪತ್ನಿ ಗೀತಾ ಶಿವರಾಜ್ ಕುಮಾರ್, ಪುತ್ರಿ ನಿವೇದಿತಾ, ನಿರ್ಮಾಪಕ ಕೆ.ಪಿ. ಶ್ರೀಕಾಂತ್, ದೇವಸ್ಥಾನದ ಆಡಳಿತ ಮಂಡಳಿ ವ್ಯವಸ್ಥಾಪಕ ಸಾಯಿರಾಂ, ವ್ಯವಸ್ಥಾಪಕ ವಿನೀತ್, ರಾಜೇಶ್ ಭಟ್ ಅವರೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು. ಶಿವರಾಜ್‌‌ಕುಮಾರ್ ಕುಟುಂಬ ಶ್ರೀ ಕ್ಷೇತ್ರ ಕೊಲ್ಲೂರು, ಉಡುಪಿ ಶ್ರೀ ಕೃಷ್ಣ ಮಠಕ್ಕೆ  ಭೇಟಿ ನೀಡಿದ್ದಾರೆ.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಿರ್ಮಿಸಲಾಗಿರುವ ಶಿರ್ಡಿ ಸಾಯಿಬಾಬಾ ಮಂದಿರದ ಉದ್ಘಾಟನೆ

Saturday, October 12th, 2013
temple

ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಿರ್ಮಿಸಲಾಗಿರುವ ಶಿರ್ಡಿ ಸಾಯಿಬಾಬಾ ಮಂದಿರದ ಉದ್ಘಾಟನೆಯನ್ನು ಜನಾರ್ದನ ಪೂಜಾರಿ ಅವರ ಅತ್ತೆ ಬೆಳ್ತಂಗಡಿಯ ದಿ| ಸಂಜೀವ ಕಾರಂದೂರು ಅವರ ಪತ್ನಿ ಪುಷ್ಪಾವತಿ ಅವರು ಶುಕ್ರವಾರ ಸಂಜೆ ನೆರವೇರಿಸಿದರು. ನೂತನ ಮಂದಿರದ ಸಂಪೂರ್ಣ ವೆಚ್ಚವನ್ನು ಜನಾರ್ದನ ಪೂಜಾರಿ ಅವರ ಪುತ್ರ ಸಂತೋಷ್‌ ಕುಮಾರ್‌ ಪೂಜಾರಿ ದಂಪತಿ ಭರಿಸಿದ್ದಾರೆ. ಚೆಂಡೆ ವಾದ್ಯಗಳ ಸಮೇತ ಪುಷ್ಪಾವತಿ ಅವರನ್ನು ಕುದ್ರೋಳಿ ಕ್ಷೇತ್ರಕ್ಕೆ ಸ್ವಾಗತಿಸಲಾಯಿತು. ದೇವಸ್ಥಾನದಲ್ಲಿ ಪೂಜೆ ನಡೆದ ಬಳಿಕ ನವದುರ್ಗೆಯರ ಪೂಜೆಯಲ್ಲಿ ಭಾಗವಹಿಸಿದ ಅವರು […]

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ವರ್ಣರಂಜಿತ ದಸರಾ ಶೋಭಾಯಾತ್ರೆ

Thursday, October 25th, 2012
Kudroli Sharadha

ಮಂಗಳೂರು: ಮಂಗಳೂರು ದಸರಾದ ಭವ್ಯ ಶೋಭಾಯಾತ್ರೆಯು ಬುಧವಾರ ವೈಭವದಿಂದ ನಡೆಯಿತು. ನೂರರ ಸಂಭ್ರಮ ಆಚರಣೆಯ ಅಲೆಯಲ್ಲಿರುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನನರಾತ್ರಿಯ ಉತ್ಸವದ ಅಂಗವಾಗಿ ನಡೆಯುವ ನವದುರ್ಗೆಯರು ಸೇರಿದಂತೆ ಟ್ಯಾಬ್ಲೋಗಳ ಭವ್ಯ ಮೆರವಣಿಗೆ ಸಂಜೆ 4.15ರ ವೇಳಗೆ ಕ್ಷೇತ್ರದ ನವೀಕರಣ ಮತ್ತು ಮಂಗಳೂರು ದಸರಾ ರೂವಾರಿ, ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ಅವರು ಶೋಭಾಯಾತ್ರೆಗೆ ಚಾಲನೆ ನೀಡಿದರು. ಕುದ್ರೋಳಿ ದೇವಸ್ಥಾನದ ಸ್ವರ್ಣ ಮಂಟಪದಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿ, ಆದಿಶಕ್ತಿ, ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟ, ಕೂಷ್ಮಾಂಡಿನಿ, ಸ್ಕಂದ […]