ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚಿನ ತಪಾಸಣೆಗೆ ಸಚಿವರ ಸೂಚನೆ ತಪ್ಪಿದ್ದಲ್ಲೀ ತಾಲೂಕು ಆರೋಗ್ಯಾಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ

Monday, September 6th, 2021
Angara

ಮಂಗಳೂರು :  ಕೋವಿಡ್-19 ಸೋಂಕು ಹೆಚ್ಚು ಕಂಡುಬರುವ ಪ್ರದೇಶಗಳಲ್ಲಿ ಸಂಬಂಧಿಸಿದ ಆಯಾ ತಾಲೂಕುಗಳ ಆರೋಗ್ಯಾಧಿಕಾರಿಗಳು ಹೆಚ್ಚಿನ ತಪಾಸಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ಈ ನಿರ್ದೇಶನವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ಅವರು ತಿಳಿಸಿದರು. ಸೆ. 6ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋವಿಡ್-19 ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಈಗಾಗಲೇ ಜಾರಿಯಲ್ಲಿರುವ ನಿರ್ಬಂಧಗಳ ಕುರಿತು ಚರ್ಚಿಸುವ ಸಲುವಾಗಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ […]

ಸರಳ, ಸಾಂಪ್ರದಾಯಿಕ ದಸರಾ ಆಚರಣೆ: ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನ

Saturday, September 4th, 2021
dasara

ಬೆಂಗಳೂರು :  ಕೋವಿಡ್ 19 ಹಿನ್ನೆಲೆಯಲ್ಲಿ ಈ ವರ್ಷವೂ ಸರಳವಾಗಿ, ಸಾಂಪ್ರದಾಯಿಕವಾಗಿ ದಸರಾ ಆಚರಿಸಲು ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2021 ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ ಹಾಗೂ ಮೈಸೂರು ಅರಮನೆ ಆವರಣದಲ್ಲಿ ಜಂಬೂ ಸವಾರಿ, ಹತ್ತು ದಿನಗಳ ದೀಪಾಲಂಕಾರ ಮೊದಲಾದ ಕಾರ್ಯಕ್ರಮ ಏರ್ಪಡಿಸಲು ನಿರ್ಧರಿಸಲಾಯಿತು. ಮೈಸೂರು, ಚಾಮರಾಜನಗರ ಹಾಗೂ ಶ್ರೀರಂಗಪಟ್ಟಣದಲ್ಲಿ ದಸರಾ ಆಚರಣೆ ನಡೆಸಲು ಆರು ಕೋಟಿ ರೂ. ಅನುದಾನ ಬಿಡುಗಡೆ […]

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಇಲ್ಲಿದೆ ನೋಡಿ

Friday, July 30th, 2021
cbse-result

ಬೆಂಗಳೂರು  : ಸರಕಾರ  ಕೋವಿಡ್-19 ಎರಡನೇ ಅಲೆ ತೀವ್ರವಾದ ಹಿನ್ನೆಲೆಯಲ್ಲಿ ಈ ವರ್ಷ ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಪರ್ಯಾಯ ಮೌಲ್ಯಮಾಪನ ನೀತಿಯಡಿ ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಿ ಇಂದು ಫಲಿತಾಂಶ ಪ್ರಕಟಿಸಿದೆ. ಜುಲೈ 30ರಂದು ಮಧ್ಯಾಹ್ನ ಪ್ರಕಟಗೊಂಡಿರುವ CBSE 12ನೇ ತರಗತಿ ಫಲಿತಾಂಶವನ್ನು ಬೋರ್ಡ್ ಅಧಿಕೃತ ಜಾಲತಾಣ cbse.nic.in ಇಲ್ಲವೇ cbseresults.nic.in ಗೆ ಭೇಟಿ ನೀಡಿ, ನೋಂದಣಿ ಸಂಖ್ಯೆ ನಮೂದಿಸಿ ನೋಡಬಹುದು. ಅಲ್ಲದೇ ಇದಲ್ಲದೇ ವಿದ್ಯಾರ್ಥಿಗಳು ಡಿಜಿಲಾಕರ್ ನಲ್ಲಿ ತಮ್ಮ ಫಲಿತಾಂಶ ಪಡೆಯಬಹುದು. 2021ರ […]

ಸಾರ್ಥಕ ಸಾಧನೆ : ಗೋವಿಂದ ಎಂ. ಕಾರಜೋಳ ಅವರಿಂದ ಕೃತಜ್ಞತೆ

Friday, July 30th, 2021
Govinda Karajola

ಬೆಂಗಳೂರು : ಜನಪ್ರಿಯ ಮುಖ್ಯಮಂತ್ರಿಗಳಾಗಿದ್ದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರದಲ್ಲಿ ತಾವು ಉಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಿರ್ವಹಿಸಿದ ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆಯು ಕೋವಿಡ್ 19, ಪ್ರವಾಹ, ಅತಿವೃಷ್ಠಿಯ ವಿಷಮ ಪರಿಸ್ಥಿತಿಯ ಸಂಕಷ್ಟದ ಸಂದರ್ಭದಲ್ಲೂ ಇಲಾಖೆಗೂ ಹಾಗೂ ತಮಗೂ ಶ್ರೇಯಸ್ಸು ದೊರಕುವಂತೆ ಅಲ್ಲದೇ, ಜನತೆಯ ಪ್ರಶಂಸೆಗೂ ಪಾತ್ರವಾಗುವಂತೆ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಗೊಳಿಸಿ, ರಾಜ್ಯದ ಬಲವರ್ಧನೆಗೆ ಪೂರಕವಾಗಿ ಸದೃಢ ರಸ್ತೆಗಳು, ಸೇತುವೆಗಳು, ಕಟ್ಟಡಗಳನ್ನು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಿ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಿದ ಇಲಾಖೆಯ […]

ಷರತ್ತಿಗೊಳಪಟ್ಟು ನಾಳೆಯಿಂದ ಕಾಸರಗೋಡು ಬಸ್ ಸಂಚಾರ ಆರಂಭ

Sunday, July 18th, 2021
KV Rajendra

ಮಂಗಳೂರು : ಜಿಲ್ಲೆಯಲ್ಲಿ ಕೋವಿಡ್-19 ಆನ್ ಲಾಕ್ ಪ್ರಕ್ರಿಯೆ ಜಾರಿಯಲ್ಲಿದ್ದು, ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಹೆಚ್ಚಿನ ಜಾಗರೂಕತೆಯನ್ನು ಅನುಸರಿಸುವ ಅನಿವಾರ್ಯವಿದ್ದು, ಮುಂಬರುವ ದಿನಗಳಲ್ಲಿ ಸಂಭಾವ್ಯ 3 ನೇ ಅಲೆಯನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಎಲ್ಲಾ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪ್ರಸ್ತುತ ರಾಜ್ಯ ಸರ್ಕಾರವು ಕೇರಳ ರಾಜ್ಯದಲ್ಲಿನ ಕೋವಿಡ್-19 ಪರಿಸ್ಥಿತಿಯನ್ನು ಅವಲೋಕಿಸಿ, ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಿಂದ ವಿದ್ಯಾಭ್ಯಾಸ, ಕಚೇರಿ ಕಲಸ, ವ್ಯಾಪಾರ ವ್ಯವಹಾರ ಸೇರಿದಂತೆ ಇತರ ಕಾರಣಗಳಿಗೆ ಸಂಖ್ಯೆಯಲ್ಲಿ ದಿನನಿತ್ಯ ವಿದ್ಯಾರ್ಥಿಗಳು, […]

ಬಕ್ರೀದ್ ದಿನದಂದು ಈದ್ಗಾಗಳಲ್ಲಿ ಸಾಮೂಹಿಕ ಪ್ರಾರ್ಥನೆ ಇಲ್ಲ, ಪ್ರಾಣಿ ವಧೆ ಮತ್ತು ಬಲಿದಾನ ಮಾಡುವಂತಿಲ್ಲ

Friday, July 16th, 2021
Bakrid

ಮಂಗಳೂರು : ಕೋವಿಡ್-19 ಹಿನ್ನೆಲೆಯಲ್ಲಿ  ರಾಜ್ಯಾದ್ಯಂತ ಜು.21ರಂದು ನಡೆಯುವ ಬಕ್ರೀದ್ ಹಬ್ಬಕ್ಕೆ ಸಂಬಂಧಿಸಿ ಕೇಂದ್ರ ಸರಕಾರದ ನಿರ್ದೇಶನದಂತೆ ರಾಜ್ಯ ಸರಕಾರವು  ಮಾರ್ಗಸೂಚಿಯನ್ನು ಪ್ರಕಟಿಸಿದೆ. ಬಕ್ರೀದ್ ದಿನದಂದು ಈದ್ಗಾಗಳಲ್ಲಿ ಸಾಮೂಹಿಕ ಪ್ರಾರ್ಥನೆ (ನಮಾಝ್)ಗೆ ನಿರ್ಬಂಧ ಹೇರಲಾಗಿದೆ. ಮಸೀದಿಗಳಲ್ಲಿ 50 ಮಂದಿಗಿಂತ ಹೆಚ್ಚು ಜನರು ಸೇರಿ ಸಾಮೂಹಿಕ ಪ್ರಾರ್ಥನೆ ಮಾಡಬಾರದು. ಒಂದು ವೇಳೆ ಅಧಿಕ ಮಂದಿ ಮಸೀದಿಗೆ ಆಗಮಿಸಿದರೆ ಹಂತ ಹಂತವಾಗಿ ನಮಾಝ್ ನಿರ್ವಹಿಸಲು ಅವಕಾಶ ಕಲ್ಪಿಸಬಹುದಾಗಿದೆ. ಮಸೀದಿಗಳಲ್ಲಿ ಮಾಸ್ಕನ್ನು ಕಡ್ಡಾಯವಾಗಿ ಧರಿಸಬೇಕು, 65 ವರ್ಷ ಮೇಲ್ಪಟ್ಟವರು ಮತ್ತು 10 […]

ಮೂರನೇ ಅಲೆ ಸಂದರ್ಭದಲ್ಲಿ ಮಕ್ಕಳಿಗೆ ಹೆಚ್ಚಾಗಿ ಸೋಂಕು ತಗಲುವ ಸಾಧ್ಯತೆ ಇದೆ : ತಜ್ಞರ ಸಮಿತಿ ಸಲಹೆ

Tuesday, June 22nd, 2021
yedyurappa

ಬೆಂಗಳೂರು  :  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ  ಕೋವಿಡ್ 19 ಮೂರನೇ ಅಲೆ ತಡೆಗಟ್ಟಲು ರಚಿಸಿರುವ ಉನ್ನತ ಮಟ್ಟದ ತಜ್ಞರ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಸಭೆ ನಡೆಸಿದರು. ಇದೆ ಸಂದರ್ಭದಲ್ಲಿ ಸಮಿತಿಯು ಸರ್ಕಾರಕ್ಕೆ ಮಧ್ಯಂತರ ವರದಿಯನ್ನು ಸಲ್ಲಿಸಿತು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ: ಕೆ.ಸುಧಾಕರ್, ತಜ್ಞರ ಸಮಿತಿ ಅಧ್ಯಕ್ಷ ಡಾ: ದೇವಿಶೆಟ್ಟಿ ಹಾಗೂ ಸದಸ್ಯರು ಉಪಸ್ಥಿತರಿದ್ದರು. ಸಭೆಯ ಮುಖ್ಯಾಂಶಗಳು : ಮೂರನೇ ಅಲೆ ಸಂದರ್ಭದಲ್ಲಿ ಮಕ್ಕಳಿಗೆ ಹೆಚ್ಚಾಗಿ ಸೋಂಕು ತಗಲುವ ಸಾಧ್ಯತೆ ಇದೆ […]

ರಾಜ್ಯದ 16 ಜಿಲ್ಲೆಗಳಲ್ಲಿ ಜೂನ್ 21 ರಿಂದ ಲಾಕ್ ಡೌನ್ ಸಡಿಲಿಕೆ, 13 ಜಿಲ್ಲೆಗಳಲ್ಲಿ ಮದ್ಯಾಹ್ನ 2 ರ ವರೆಗೆ ಸಡಿಲಿಕೆ

Saturday, June 19th, 2021
yedyurappa

ಬೆಂಗಳೂರು : ರಾಜ್ಯದ ಹದಿನಾರು ಜಿಲ್ಲೆಗಳಲ್ಲಿ ಕೋವಿಡ್-19 ಪಾಸಿಟಿವಿಟಿ ಪ್ರಮಾಣ ಶೇಕಡಾ 5ಕ್ಕಿಂತಲೂ ಕಡಿಮೆ ಇರುವುದರಿಂದ ಸೋಮವಾರದಿಂದ ಲಾಕ್ ಡೌನ್ ಸಡಿಲಿಕೆ ಮಾಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು. ಉತ್ತರ ಕನ್ನಡ, ಬೆಳಗಾವಿ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ, ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ, ಬೀದರ್, ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಲು ನಿರ್ಧರಿಸಲಾಗಿದೆ. ಇಲ್ಲಿಸೋಮವಾರದಿಂದ ಹೋಟೆಲ್ ಆರಂಭಿಸಲು, ಅಂಗಡಿ ಮುಂಗಟ್ಟುಗಳನ್ನು ಸಂಜೆ 5 ಗಂಟೆಯವರೆಗೂ […]

ಬೆಂಗಳೂರು ನಗರ ಸೇರಿ 19 ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಕೆ, ಉಳಿದ 11 ಜಿಲ್ಲೆಗಳಲ್ಲಿ ಲಾಕ್ ಡೌನ್ ಯಥಾಸ್ಥಿತಿ

Thursday, June 10th, 2021
CM Yedyurappa

ಬೆಂಗಳೂರು : ರಾಜ್ಯದ ಕೋವಿಡ್-19 ಸೋಂಕು ಪ್ರಸರಣ ಇಳಿಕೆಯಾದ ಪ್ರದೇಶದಲ್ಲಿ ಜೂನ್ 14 ರಿಂದ  ಈಗಿರುವ ಸಮಯ ಬೆಳಿಗ್ಗೆ 6 ರಿಂದ 10 ಗಂಟೆಯನ್ನು ವಿಸ್ತರಿಸಿ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಜೂ.10 ರಂದು ಸಿಎಂ ಯಡಿಯೂರಪ್ಪ ಕೋವಿಡ್-19 ತಡೆ ನಿಟ್ಟಿನಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ಲಾಕ್ ಡೌನ್ ಗೆ ಸಂಬಂಧಿಸಿದಂತೆ ಪರಿಷ್ಕೃತ ನಿಯಮಗಳನ್ನು ಪ್ರಕಟಿಸಿದ್ದಾರೆ. ಪರಿಷ್ಕೃತ ನೀತಿಯ ಪ್ರಕಾರವಾಗಿ ರಾಜ್ಯದ 11 ಜಿಲ್ಲೆಗಳಲ್ಲಿ ಮತ್ತೆ ಪೂರ್ಣ ಪ್ರಮಾಣದ ಲಾಕ್ ಡೌನ್ […]

ಕೋವಿಡ್-19 ಸುಳ್ಳು ಸುದ್ದಿಗಳ ಬಗ್ಗೆ ಎಚ್ಚರ

Monday, June 7th, 2021
Yunani

ಬೆಂಗಳೂರು : ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಗುಣಪಡಿಸಲಾಗುತ್ತದೆ ಎಂಬ ಸುಳ್ಳು ಆಶ್ವಾಸನೆ ನೀಡುವುದು ಹಾಗೂ ಮಾಧ್ಯಮಗಳಲ್ಲಿ ಪ್ರಚಾರ ಮಾಡುವುದು ಕಾನೂನಿನಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದ್ದು, ಇಂತಹವರ ವಿರುದ್ಧ ಕರ್ನಾಟಕ ಆಯುರ್ವೇದ ಮತ್ತು ಯುನಾನಿ ವೈದ್ಯ ಮಂಡಳಿಗೆ ಸಾರ್ವಜನಿಕರು ದೂರು ನೀಡಿದಲ್ಲಿ ಪರಿಶೀಲಿಸಿ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ನೋಂದಣಾಧಿಕಾರಿಗಳು ತಿಳಿಸಿದ್ದಾರೆ. ಕೋವಿಡ್-19 ಎರಡನೆ ಅಲೆ ತೀವ್ರವಾಗಿ ಪ್ರಸರಣಗೊಳ್ಳುತ್ತಿರುವ ಈ ಸಂದರ್ಭದಲ್ಲಿ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಜ್ವರ, ನೆಗಡಿ, ಕೆಮ್ಮು ಮತ್ತು ಮೈ-ಕೈ ನೋವಿನಂತಹ ಲಕ್ಷಣಗಳಿಂದ […]