ಹೆಂಡತಿಯೊಂದಿಗೆ ಕಾಲ ಕಳೆಯದ ಗಂಡ, ನೊಂದು ಆತ್ಮಹತ್ಯೆ

Wednesday, January 27th, 2021
Pallavi

ಕಾರವಾರ: ಗೆಳೆಯರೊಂದಿಗೆ ಕಾಲ ಕಳೆಯುತ್ತಿದ್ದ ಗಂಡನಿಂದ ಬೇಸತ್ತ ಗೃಹಿಣಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಇಂದಿರಾ ನಗರದಲ್ಲಿ ನಡೆದಿದೆ. ಮೂಲತಃ ಶಿರಸಿ ತಾಲೂಕಿನ ಗಿಡಮಾವಿನಕಟ್ಟೆಯ ನಿವಾಸಿಯಾಗಿದ್ದ ಪಲ್ಲವಿ ವಿಜಯ ದೇವಾಡಿಗ (27) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಎರಡು ವರ್ಷಗಳಿಂದ ಪತಿಯೊಂದಿಗೆ ಇಂದಿರಾ ನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಪತಿ ತನ್ನ ಜೊತೆ ಹೆಚ್ಚಿನ ಸಮಯ ಕಳೆಯುವುದಿಲ್ಲ ಎಂದು ಕೊರಗುತ್ತಿದ್ದರು. ಇಂದು ಪತಿ ಗೆಳೆಯರೊಂದಿಗೆ ಕ್ರಿಕೆಟ್ ನೋಡಲು ತೆರಳಿದ್ದರಿಂದ ಪಲ್ಲವಿ ಸಿಟ್ಟಾಗಿದ್ದರು. […]

ಲಾಕ್ಡೌನ್ ನಿಂದ ಮನೆಯಲ್ಲೇ ಇರುತಿದ್ದ ಗಂಡನನ್ನುಕಲ್ಲುಎತ್ತಿ ಹಾಕಿ ಸಾಯಿಸಿದ ಹೆಂಡತಿ ಮತ್ತು ಗೆಳೆಯರು

Saturday, July 18th, 2020
amrutahalli

ಬೆಂಗಳೂರು : ಲಾಕ್ಡೌನ್ ನಿಂದ ಮನೆಯಲ್ಲೇ ಹೆಂಡತಿ ಜೊತೆ ಇರುತಿದ್ದ ಗಂಡನನ್ನುಇಬ್ಬರು ಚೂರಿಯಿಂದ ತಿವಿದು ಕಲ್ಲುಎತ್ತಿ ಹಾಕಿ ಸಾಯಿಸಿದ ಘಟನೆ  ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೆಂಡತಿಯ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ವ್ಯಕ್ತಿ ಸ್ನೇಹಿತನ ಜೊತೆ ಸೇರಿ ಈ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ. ಪ್ರಿಯಕರನ ಜೊತೆ ಸೇರಿ ಗಂಡನನ್ನು ಕೊಲೆ ಮಾಡಿದ್ದ ಆರೋಪದಡಿ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಹರೀಶ್ ಮೃತ ವ್ಯಕ್ತಿಯಾಗಿದ್ದು, ಆತನ ಪತ್ನಿ, ಪ್ರಿಯಕರ ಅಭಿಲಾಷ್ ಮತ್ತು ಸ್ನೇಹಿತ ರಫೀಕ್ ನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. […]