ವೆನ್ಲಾಕ್ ಆಸ್ಪತ್ರೆ ಕಾರ್ಮಿಕರಿಂದ ಜಿಲ್ಲಾ ಅಧೀಕ್ಷಕರ ಕಚೇರಿಗೆ ಮುತ್ತಿಗೆ

Saturday, November 24th, 2018
wenlock

ಮಂಗಳೂರು : ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ದುಡಿಯುತ್ತಿರುವ ಗುತ್ತಿಗೆ ಕಾರ್ಮಿಕರನ್ನು ವಿನಾಃ ಕಾರಣ ಕೆಲಸದಿಂದ ವಜಾ ಮಾಡಿದ್ದು,ಅವರ ಮರು ನೇಮಕವಾಗಬೇಕು,ಹಾಗೂ ಕಾರ್ಮಿಕರಿಗೆ ಸಂಬಳ ನೀಡದೆ ಸತಾಯಿಸುತ್ತಿರುವ ಸಾಯಿ ಸೆಕ್ಯುರಿಟಿ ಸಂಸ್ಥೆ ಹಾಗೂ ಜಿಲ್ಲಾ ಅಧೀಕ್ಷಕರ ಸರ್ವಾಧಿಕಾರಿ ಧೋರಣೆ ಖಂಡಿಸಿ CITU ನೇತ್ರತ್ವದಲ್ಲಿ ಗುತ್ತಿಗೆ ಕಾರ್ಮಿಕರಿಂದ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರ ಕಚೇರಿಗೆ ಮುತ್ತಿಗೆ ಹಾಕಲಾಯಿತು. ಪ್ರತಿಭಟನ ಸಭೆಯನ್ನುದ್ದೇಶಿಸಿ ಮಾತನಾಡಿದ CITU ದ.ಕ.ಜಿಲ್ಲಾ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಲೈಸನ್ಸ್ ಪಡೆಯದೆ ಸರಕಾರಿ ಆಸ್ಪತ್ರೆಯಲ್ಲಿ ಗುತ್ತಿಗೆ ವಹಿಸಿದ ಸಾಯಿ […]

ಅಲೆಮಾರಿಗಳ ಸೋಗಿನಲ್ಲಿದ್ದ ಕುಖ್ಯಾತ ಕಳ್ಳಿಯರು ಪೊಲೀಸ್ ಬಲೆಗೆ

Thursday, November 15th, 2018
arrested

ಮಂಗಳೂರು: ಅಲೆಮಾರಿಗಳ ಸೋಗಿನಲ್ಲಿ ಮನೆಗಳಿಗೆ ಬಂದು ಕಳವು ಮಾಡುತ್ತಿದ್ದ ಮೂವರು ಕುಖ್ಯಾತ ಕಳ್ಳಿಯರನ್ನು ಪೊಲೀಸರು ಬಂಧಿಸಿದ್ದಾರೆ. ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕು ಹನುಮಪ್ಪನ ಗುಡಿಯ ಬಳಿ ನಿವಾಸಿಗಳಾದ ದೇವಮ್ಮ (19), ನಾಗಮ್ಮ ಅಲಿಯಾಸ್ ರೂಪಾ (18 ವರ್ಷ) ಗೀತಾ(24) ಬಂಧಿತ ಆರೋಪಿಗಳು. ಬಂಧಿತರಿಂದ ಚಿನ್ನದ ರೋಪ್ ಚೈನ್, ಚಿನ್ನದ ಉಂಗುರಗಳು, ಚಿನ್ನದ ಕಡಗಗಳು, ಎರಡು ಮೊಬೈಲ್, ಸಹಿತ ಒಟ್ಟು 4,31,680 ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಅಲೆಮಾರಿಗಳಂತೆ ಮೂವರು ಹೆಂಗಸರು ಚಿಕ್ಕಮಕ್ಕಳೊಂದಿಗೆ […]

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗೆ ಇಂದು 56 ನೇ ಹುಟ್ಟುಹಬ್ಬದ ಸಂಭ್ರಮ..!

Thursday, July 12th, 2018
shivrajkumar

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಇಂದು ತಮ್ಮ 56 ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ನಿನ್ನೆ ರಾತ್ರಿ ಮಾನ್ಯತಾ ಟೆಕ್ ಪಾರ್ಕಿನಲ್ಲಿರುವ ಶಿವಣ್ಣ ನಿವಾಸದಲ್ಲಿ ಕುಟುಂಬದವರು ಹಾಗೂ ಆಪ್ತರು ಶಿವಣ್ಣನ ಬರ್ತಡೇ ಆಚರಿಸಿದರು. ನಿನ್ನೆ ರಾತ್ರಿಯಿಂದಲೇ ಶಿವಣ್ಣ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಪತ್ನಿ ಗೀತಾ, ಮಕ್ಕಳು, ಸ್ನೇಹಿತರೊಂದಿಗೆ ಶಿವಣ್ಣ ಅವರಿಗಾಗಿ ತರಿಸಿದ್ದ ವಿಶೇಷ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡರು. ರಾತ್ರಿಯೇ ಹುಟ್ಟುಹಬ್ಬದ ಶುಭಾಶಯ ಕೋರಲು ಬಹಳಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಶಿವಣ್ಣ ಮನೆ ಮುಂದೆ ಜಮಾಯಿಸಿದ್ದರು. ಜನರನ್ನು ನಿಯಂತ್ರಿಸಲು […]

ಪುತ್ತೂರು ಬಳಿ ಗುಡುಗು ಸಿಡಿಲಿನ ಅಬ್ಬರ… ಓರ್ವ ಸಾವು, ಇಬ್ಬರಿಗೆ ಗಾಯ

Tuesday, March 20th, 2018
puttur

ಮಂಗಳೂರು: ಸಿಡಿಲು ಬಡಿಲು ವ್ಯಕ್ತಿವೋರ್ವ ಮೃತಪಟ್ಟು ಇಬ್ಬರು ಗಾಯಗೊಂಡಿರುವ ಘಟನೆ ಪುತ್ತೂರು ತಾಲೂಕು ಸವಣೂರು ಗ್ರಾಮದ ಪುಣ್ಯಪ್ಪಾಡಿ ಎಂಬಲ್ಲಿ ಸಂಜೆ ನಡೆದಿದೆ. ಮೃತರನ್ನು ಧನಂಜಯ (35)ಎಂದು ಗುರುತಿಸಲಾಗಿದೆ. ಮೃತನ ಸಹೋದರಿ ಗೀತಾ ಹಾಗೂ ದೊಡ್ಡಪ್ಪ ಕುಂಡ ಎಂಬುವರು ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.