ಉಡುಪಿ ಆಶ್ರಮದ 12 ಮಂದಿ ಪುಟಾಣಿ ಮಕ್ಕಳಿಗೆ ಹಾಗೂ ಒಂಭತ್ತು ಸಿಬ್ಬಂದಿ ಗೆ ಕೊರೋನ ಸೋಂಕು

Thursday, May 27th, 2021
krishnanugraha

ಉಡುಪಿ : ಮಕ್ಕಳ ದತ್ತು ಸ್ವೀಕಾರ ಕೇಂದ್ರ ‘ಕೃಷ್ಣಾನುಗ್ರಹ’ದ 14 ವರ್ಷದೊಳಗಿನ 12 ಮಂದಿ ಪುಟಾಣಿ ಮಕ್ಕಳು ಕೊರೋನ ಸೋಂಕಿಗೆ ಪಾಸಿಟಿವ್ ಬಂದಿದ್ದಾರೆ. ಇಲ್ಲಿನ ಸಂತೆಕಟ್ಟೆ ಬಳಿ ಇರುವ  ಈ ಕೇಂದ್ರದಲ್ಲಿ ಆಶ್ರಮದ ಆಯಾ ಸೇರಿದಂತೆ ಒಂಭತ್ತು ಸಿಬ್ಬಂದಿ ಸಹ ಸೋಂಕಿಗೆ ಒಳಗಾಗಿದ್ದಾರೆ. ಪಾಸಿಟಿವ್ ಬಂದಿರುವ ಎಲ್ಲಾ 21 ಮಕ್ಕಳನ್ನು ಕೃಷ್ಣಾನುಗ್ರಹ ಆಶ್ರಮದಲ್ಲೇ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರತಿದಿನ ಎರಡು ಬಾರಿ ವೈದ್ಯರು ಬಂದು ಮಕ್ಕಳ ತಪಾಸಣೆ ನಡೆಸುತ್ತಿದ್ದಾರೆ. ಯಾರಲ್ಲೂ ರೋಗದ ಲಕ್ಷಣಗಳು ಕಂಡುಬಂದಿಲ್ಲ ಎಂದು ಅವರು ಮಾಹಿತಿ […]

ದುರ್ಗಾ ಫ್ರೆಂಡ್ಸ್ ಕ್ಲಬ್ ವತಿಯಿಂದ ಮೂರು ಬಡ ವಿದ್ಯಾರ್ಥಿಗಳ ದತ್ತು ಸ್ವೀಕಾರ

Monday, May 18th, 2015
Adoption

ಬಂಟ್ವಾಳ: ಆರ್ಥಿಕವಾಗಿ ದುರ್ಬಲ ಕುಟುಂಬದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರೋತ್ಸಾಹಕ್ಕಾಗಿ ತಾಲೂಕಿನ ಮೂಡುನಡುಗೋಡು ಗ್ರಾಮದ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಮೂರು ಮಂದಿ ಬಡ ವಿದ್ಯಾರ್ಥಿಗಳನ್ನು ದತ್ತು ಸ್ವೀಕರಿಸಿಕೊಂಡು ಸಂಪೂರ್ಣ ವಿದ್ಯಾಭ್ಯಾಸ ನೀಡಲು ಮುಂದಾಗಿದೆ. ಭಾನುವಾರ ಕರೆಂಕಿ ಶ್ರೀ ದುರ್ಗಾ ಪರಮೇಶ್ವರೀ ದೇವಿ ದೇವಸ್ಥಾನದ ವಠಾರದಲ್ಲಿ ನಡೆದ ಬಡ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಹಾಗೂ ಬಡ ವಿದ್ಯಾರ್ಥಿಗಳ ದತ್ತು ಸ್ವೀಕರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪೋಷಕರ ಒಪ್ಪಿಗೆಯಂತೆ ದತ್ತು ಸ್ವೀಕಾರ ನಡೆಯಿತು. ತಂದೆ- ತಾಯಿಯನ್ನು ಕಳೆದುಕೊಂಡು ದೊಡ್ಡಮ್ಮನ ಆಶ್ರಯಲ್ಲಿ […]