ತಲಪಾಡಿ ಟೋಲ್‌ಗೇಟ್‌ ನಲ್ಲಿ ಹಣ ಪಡೆದು ಕಾರು ಚಾಲಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ, ದೂರು ದಾಖಲು

Thursday, November 30th, 2023
Tollgate

ಮಂಗಳೂರು : ಕಾರು ಚಾಲಕರೋರ್ವರನ್ನು ತಲಪಾಡಿ ಟೋಲ್‌ಗೇಟ್‌ ಸಿಬ್ಬಂದಿ ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೆ ಯತ್ನಿಸಿದ್ದಾನೆ ಎಂದು ಆರೋಪಿಸಿ ಕಾರು ಚಾಲಕ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ. ಅಬ್ದುಲ್ ಕರೀಂ ಎಂಬವರ ಕಾರಿನ ಫಾಸ್ಟ್ ಟ್ಯಾಗ್ ನಿಂದ ಹಣ ಪಾವತಿಯಾದರೂ ಸಿಬ್ಬಂದಿ ಗೇಟ್ ತೆರೆಯದ ಕಾರಣ ಪ್ರಶ್ನಿಸಿದ್ದಾರೆ. ಈ ಸಂದರ್ಭ ಸಿಬ್ಬಂದಿ ಅವಾಚ್ಯ ಶಬ್ದಗಳಿಂದ ಬೈದಿದ್ದು, ಇದನ್ನು ಪ್ರಶ್ನಿಸಿದ ಕರೀಂ ಅವರ ಮೇಲೆ ಕೋಪಗೊಂಡ ಸಿಬ್ಬಂದಿ, ಅವರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆಂದು ತಿಳಿದು ಬಂದಿದೆ. ಈ […]

ಮೂಡುಬಿದಿರೆಯ ತಾಲೂಕು : ತಾಲೂಕು ಪಂಚಾಯತ್‌ ಸದಸ್ಯನ ಅಪಹರಣ, ದೂರು

Tuesday, August 4th, 2020
sukumar

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ತಾಲೂಕು ಪಂಚಾಯತ್‌ ಚುನಾವಣೆ ವೇಳೆ ತನ್ನನು ಅಪಹರಣ ಮಾಡಲಾಗಿದೆ ಎಂದು ಸದಸ್ಯರೋರ್ವರು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮೂಡುಬಿದಿರೆ ತಾಲೂಕಿನ ಕಲ್ಲಮುಂಡ್ಕೂರು ತಾಪಂ ಸದಸ್ಯ ಸುಕುಮಾರ್ ಸನಿಲ್ ಅಪಹರಣಕ್ಕೊಳಗಾದವರು. ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಸುಕುಮಾರ್ ಸನಿಲ್ ಸೋಮವಾರ ಮೂಡುಬಿದಿರೆ ತಾಲೂಕು ಕಚೇರಿಯಲ್ಲಿ ನಡೆಯಬೇಕಿದ್ದ ತಾಪಂ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕಿತ್ತು. ಆದರೆ ಅದನ್ನು ತಡೆಯಲು ನನ್ನನ್ನು ಅಪಹರಣಗೈದು ಉಡುಪಿಗೆ ತಂದು ಬಿಡಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. […]

ವಿದ್ಯುತ್ ಸಂಭಂದಿತ ದೂರುಗಳಿಗೆ 1912ಗೆ ಕರೆ ಮಾಡಿ

Thursday, April 26th, 2018
Mescom