ದೆಹಲಿ ತುಳು ಸಿರಿ ಅಧ್ಯಕ್ಷರಾಗಿ ಡಾ. ಪುರುಷೋತ್ತಮ ಬಿಳಿಮಲೆ ಆಯ್ಕೆ

Wednesday, August 12th, 2015
Purushatama

ನವದೆಹಲಿ: ತುಳು ಭಾಷೆ ಮತ್ತು ಸಂಸ್ಕೃತಿಯ ಕುರಿತು ದೆಹಲಿಯಲ್ಲಿ ಚಟುವಟಿಕೆಗಳನ್ನು ನಡೆಸುತ್ತಿರುವ ಸಂಸ್ಥೆ ದೆಹಲಿ ತುಳು ಸಿರಿಯ ಅಧ್ಯಕ್ಷರಾಗಿ ಹಿರಿಯ ವಿದ್ವಾಂಸ ಡಾ. ಪುರುಷೋತ್ತಮ ಬಿಳಿಮಲೆ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ದೆಹಲಿಯಲ್ಲಿದ್ದು ಕನ್ನಡ ಮತ್ತು ತುಳು ಭಾಷೆಗಳಿಗೆ ಅಪೂರ್ವ ಕೊಡುಗೆಗಳನ್ನು ನೀಡಿರುವ ಡಾ. ಪುರುಷೋತ್ತಮ ಬಿಳಿಮಲೆ ಅವರು ಅಮೇರಿಕನ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯನ್ ಸ್ಟಡೀಸ್‌ನಲ್ಲಿ ನಿರ್ದೇಶಕರಾಗಿದ್ದಾರೆ. ಡಾ. ಬಿಳಿಮಲೆ ಅವರು ದೆಹಲಿ ಕರ್ನಾಟಕ ಸಂಘದಲ್ಲಿ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಮಹತ್ವಾಕಾಂಕ್ಷೆಯ ಸಾಂಸ್ಕೃತಿಕ ಸಮುಚ್ಛಯದ ನಿರ್ಮಾಣವಾಯಿತು. ಇದೇ ಆಗಸ್ಟ್ ೯ರಂದು […]

ಫೆಬ್ರವರಿ 24 ರಂದು ದೆಹಲಿಯಲ್ಲಿ ನಡೆಯಲಿರುವ ತುಳುವರ ಜಾಗತಿಕ ಸಮ್ಮೇಳನ ‘ದೆಹಲಿ ತುಳು ಸಿರಿ’

Tuesday, February 19th, 2013
Delhi Tulu Siri

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಇದರ ವತಿಯಿಂದ ಫೆಬ್ರವರಿ 24 ರಂದು ಬಾನುವಾರ ದೆಹಲಿಯಲ್ಲಿ ಬೃಹತ್ ‘ದೆಹಲಿ ತುಳು ಸಿರಿ’ ತುಳುವರ ಸಮ್ಮೇಳನವನ್ನು ಅಯೋಜಿಸಲಾಗಿದ್ದು. ಈ ಸಮ್ಮೆಳನದಲ್ಲಿ  ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಸಲುವಾಗಿ ಕೇಂದ್ರ ಸರಕಾರವನ್ನು ಒತ್ತಾಯಿಸಿ ಮನವಿ ಸಲ್ಲಿಸಲಾಗುವುದು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಶ್ರೀ ಉಮಾನಾಥ ಎ.ಕೋಟ್ಯಾನ್ ಅವರು ಇಂದಿಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ತುಳು ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಹಾಗೂ ಮಾನ್ಯತೆಗಾಗಿ ಕರ್ನಾಟಕ ತುಳು […]