ಮೆಸ್ಕಾಂ ಅಧಿಕಾರಿಗಳ ಕಾರಿನ ಮೇಲೆಯೇ ಬಿದ್ದ ಬೃಹತ್ ವಿದ್ಯುತ್ ಟವರ್

Monday, November 6th, 2023
Power-line

ಬೆಳ್ತಂಗಡಿ : ಬೆಳ್ತಂಗಡಿಯ ಉಜಿರೆ-ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್‌ ಬಳಿ ವಿದ್ಯುತ್‌ ಟವರ್‌ ಉರುಳಿ ಬಿದ್ದು ಅಧಿಕಾರಿಗಳ ಕಾರು ಮತ್ತು ದ್ವಿಚಕ್ರ ವಾಹನಕ್ಕೆ ಹಾನಿಯಾಗಿದೆ. ಅದೃಷ್ಟವಶತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಭಾನುವಾರ ಸಂಜೆ ಸುರಿದ ಮಳೆಗೆ ಕಿರಿಯಾಡಿ ಬಳಿ ಬೆಳ್ತಂಗಡಿ-ಧರ್ಮಸ್ಥಳ 33 ಕೆ.ವಿ ವಿದ್ಯುತ್ ಸಂಪರ್ಕದ ಮುಖ್ಯ ಲೈನ್ ವಿದ್ಯುತ್ ಟವರ್ ನೆಲದತ್ತವಾಲುತ್ತಿರುವುದನ್ನು ಗಮನಿಸಿದ ಮೆಸ್ಕಾಂ ಪವರ್ ಮ್ಯಾನ್ ಕೂಡಲೇ ಉಜಿರೆ ಉಪವಿಭಾಗಕ್ಕೆ ಮಾಹಿತಿ ನೀಡಿದರು. ಕೂಡಲೇ ಮೆಸ್ಕಾಂ ಅಧಿಕಾರಿಗಳು ದೊಂಡೋಲೆಯ ಪವರ್ ಪ್ರಾಜೆಕ್ಟ್ ಅಧಿಕಾರಿಗಳಿಗೆ ಮಾಹಿತಿ ನೀಡಿ […]

ಪಾಣೆಮಂಗಳೂರಿನ ನೇತ್ರಾವತಿ ಹಳೆಯ ಸೇತುವೆಯಲ್ಲಿ ಬಿರುಕು, ಸ್ಥಳೀಯರಲ್ಲಿ ಆತಂಕ

Monday, October 9th, 2023
ಪಾಣೆಮಂಗಳೂರಿನ ನೇತ್ರಾವತಿ ಹಳೆಯ ಸೇತುವೆಯಲ್ಲಿ ಬಿರುಕು, ಸ್ಥಳೀಯರಲ್ಲಿ ಆತಂಕ

ಬಂಟ್ವಾಳ : ಪಾಣೆಮಂಗಳೂರಿನ ನೇತ್ರಾವತಿ ಹಳೆಯ ಉಕ್ಕಿನ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು ರವಿವಾರ ರಾತ್ರಿ ದ್ವಿಚಕ್ರ ವಾಹನ ಸವ್ವಾರರೊಬ್ಬರು ಬಂಟ್ವಾಳ ನಗರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪಾಣೆಮಂಗಳೂರು ಕಡೆಯಿಂದ ನಾಲ್ಕನೇ ಪಿಲ್ಲರ್ ಬಳಿ ಬಿರುಕು ಕಾಣಿಸಿಕೊಂಡಿದೆ. ರಸ್ತೆಯ ಡಾಮರು ಎದ್ದು ಹೋಗಿದ್ದು, ಬಿರುಕು ಗೋಚರಿಸುತ್ತಿದೆ. ಆದರೆ ಇದು ಸೇತುವೆ ಬಿರುಕು ಬಿಟ್ಟಿರುವುದೋ ಅಥವಾ ಮೇಲಿನ ರಸ್ತೆಯ ಭಾಗದಲ್ಲಿ ಮಾತ್ರ ಬಿರುಕು ಕಂಡುಬಂದಿದೆಯೇ ಎಂಬುದು ಖಚಿತಗೊಂಡಿಲ್ಲ. ಈ ಕುರಿತು ಸಂಬಂಧಪಟ್ಟ ತಜ್ಞರು ಪರಿಶೀಲನೆ ನಡೆಸಿ ವರದಿ ನೀಡಬೇಕಿದೆ […]

ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯಲ್ಲಿ ವಾಹನ ಸವಾರರನ್ನು ಓಡಿಸಿದ ಕಾಡಾನೆ

Sunday, July 11th, 2021
Elephant

ಕಡಬ :   ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಅನಿಲ ಎಂಬಲ್ಲಿ ಕಾಡಾನೆಯೊಂದು ರಸ್ತೆಯಲ್ಲಿ ಸಂಚರಿಸುವ ವಾಹನಗಳನ್ನು ಅಟ್ಟಾಡಿಸಿದ ಘಟನೆ ಭಾನುವಾರ ನಡೆದಿದೆ. ಸಿರಿಬಾಗಿಲು ಗ್ರಾಮದ ಅನಿಲ ಸಮೀಪ ಹೆದ್ದಾರಿಗೆ ಆಗಮಿಸಿದ ಒಂಟಿ ಕಾಡಾನೆಯು ಕಾರು ಹಾಗೂ ದ್ವಿಚಕ್ರ ವಾಹನ ಸವಾರರನ್ನು ಓಡಿಸಿದೆ ಎಂದು ತಿಳಿದು ಬಂದಿದೆ.

ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಪಲ್ಟಿ ಹೊಡೆದ ಹೊಸ ಕಾರು, ಸವಾರ ಗಂಭೀರ ಗಾಯ

Thursday, May 27th, 2021
Pumpwell-Accident

ಮಂಗಳೂರು : ಇನ್ನೂ ನೋಂದಣಿ ಗೊಳ್ಳದ ಹೊಸ ಕಾರೊಂದು  ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ರಸ್ತೆಯಲ್ಲಿ ಪಲ್ಟಿ ಹೊಡೆದ ಘಟನೆ ನಗರದ ಪಂಪ್ ವೆಲ್ ನಲ್ಲಿರುವ ಫ್ಲೈಓವರ್ ನಲ್ಲಿ ಗುರುವಾರ  ಬೆಳಗ್ಗೆ 7 ಗಂಟೆ ಸುಮಾರಿಗೆ ಸಂಭವಿಸಿದೆ. ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ನಗರದ ಗೋರಿಗುಡ್ಡ ಕಡೆಯಿಂದ ನಂತೂರು ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಫ್ಲೈಓವರ್ ಮೇಲೆ ಸಂಚರಿಸುತ್ತಿದ್ದ ವೇಳೆ ಕಾರು ಹಿಂದುಗಡೆಯಿಂದ ಬಂದು ಢಿಕ್ಕಿ ಹೊಡೆದಿದೆಯೆನ್ನಲಾಗಿದೆ. ಇದರಿಂದ […]

ದ್ವಿಚಕ್ರ ವಾಹನಕ್ಕೆ ಫಾರ್ಚುನರ್ ಡಿಕ್ಕಿ, ಯುವತಿ ಸಾವು

Sunday, November 29th, 2020
Shreya

ಕೋಟ: ದ್ವಿಚಕ್ರ ವಾಹನಕ್ಕೆ ಫಾರ್ಚುನರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿಯಲ್ಲಿದ್ದ ಬೇಳೂರು ನಿವಾಸಿ ಶ್ರೇಯಾ ಶಾನುಭಾಗ್ (24) ಮೃತಪಟ್ಟಿದ್ದು, ಆಕೆಯ ಸ್ನೇಹಿತೆ ಉಜಿರೆ ಮೂಲದ ಕುಂದಾಪುರ ಕೋಡಿಯ ಪ್ರಜ್ಞಾ (25)ಸ್ಥಿತಿ ಚಿಂತಾಜನಕವಾಗಿದೆ. ಕೋಟದ ರಾಷ್ಟ್ರೀಯ ಹೆದ್ದಾರಿ ಕೃಷ್ಣಭವನ ಹೋಟೆಲ್ ಎದುರುಗಡೆ ಶನಿವಾರ ಕುಂದಾಪುರದಿಂದ ಉಡುಪಿ ಕಡೆ ಸ್ಕೂಟಿಯಲ್ಲಿ ಇಬ್ಬರು ಯುವತಿಯರು ಸಾಗುತ್ತಿದ್ದಾಗ ಹಿಂದಿನಿಂದ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟಿಯಲ್ಲಿದ್ದ ಇಬ್ಬರೂ ಗಂಭೀರ ಗಾಯಗೊಂಡಿದ್ದು, ಶ್ರೇಯಾ ಉಡುಪಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರೆ, ಪ್ರಜ್ಞಾ […]

ಸ್ಕೂಟರಿಗೆ ಅಪರಿಚಿತ ದ್ವಿಚಕ್ರ ವಾಹನ ಹಿಟ್ ಎಂಡ್ ರನ್, ತಲೆಗೆ ಗಾಯಗೊಂಡಿದ್ದ ಸವಾರ ಸಾವು

Tuesday, September 1st, 2020
Scooter hit

ಬಂಟ್ವಾಳ: ಬಿ.ಸಿ.ರೋಡು ಸರ್ಕಲ್ ಬಳಿಯಲ್ಲಿ ದ್ವಿಚಕ್ರ ವಾಹನ ಸವಾರನಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ವಾಹನವನ್ನು ಮೆಲ್ಕಾರ್ ಟ್ರಾಫಿಕ್ ಠಾಣಾ ಎಸ್. ಐ.ರಾಜೇಶ್ ಕೆ.ವಿ.ನೇತೃತ್ವದ ತಂಡ ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿ ವಾಹನ ಚಾಲಕನ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಸೋಮವಾರ ಸಂಜೆ ನಡೆದ ಹಿಟ್ ಎಂಡ್ ರನ್ ಪ್ರಕರಣದಲ್ಲಿ ಗಂಭೀರ ಸ್ವರೂಪದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ದ್ವಿಚಕ್ರ ವಾಹನ ಸವಾರ ಪ್ರಕಾಶ್ ಆರ್. ಚೌಟ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ಮೃತಪಟ್ಟಿದ್ದಾರೆ. ನಿನ್ನೆ ಸಂಜೆ ವೇಳೆ ಬಿ.ಸಿ.ರೋಡು […]

ದ್ವಿಚಕ್ರ ವಾಹನ ಕಳ್ಳತನ ಮಾಡುವ ವ್ಯಕ್ತಿ ಬಂಧನ

Saturday, January 18th, 2020
cheluvayya

ಮೈಸೂರು : ಮೈಸೂರು ನಗರ ಸಿ.ಸಿ.ಬಿ. ಪೊಲೀಸರು ಮಾಹಿತಿ ಮೇರೆಗೆ 16.01.2020 ರಂದು ಹೂಟಗಳ್ಳಿ, ಎಸ್.ಆರ್.ಎಸ್. ಕಾಲೋನಿಯ ಕೆ.ಇ.ಬಿ. ಕಛೇರಿಯ ಬಳಿ ಕಾರ್ಯಾಚರಣೆ ನಡೆಸಿ, ದ್ವಿಚಕ್ರ ವಾಹನ ಕಳ್ಳತನ ಮಾಡುವ ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ. ಬಂಧಿತನನ್ನು ಮಹದೇವ ಬಿನ್ ಚೆಲುವಯ್ಯ,( 22), ಲಕ್ಷ್ಮಿಪುರ ಗ್ರಾಮ, ಕೆ.ಆರ್.ನಗರ ಮೈಸೂರು ಜಿಲ್ಲೆ ಎಂದು ಗುರುತಿಸಲಾಗಿದ್ದು, ಈತನನ್ನು ವಶಕ್ಕೆ ಪಡೆದು, ವಿಚಾರಣೆಗೊಳಪಡಿಸಲಾಗಿ, ಈತ ಮೈಸೂರು ನಗರ, ಮೈಸೂರು ಜಿಲ್ಲೆ, ಬೆಂಗಳೂರಿನಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಈತನಿಂದ 6,00,000ರೂ. ಮೌಲ್ಯದ ವಿವಿಧ […]

ದ್ವಿಚಕ್ರ ವಾಹನಗಳ ಢಿಕ್ಕಿ ; ಸವಾರಿಬ್ಬರು ಮೃತ್ಯು

Wednesday, January 15th, 2020
Mani Accident

ಬಂಟ್ವಾಳ: ದ್ವಿಚಕ್ರ ವಾಹನಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಸವಾರಿಬ್ಬರು ಮೃತಪಟ್ಟು, ಸಹಸವಾರೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಾಣಿ ಸಮೀಪದ ಕೊಡಾಜೆ ಎಂಬಲ್ಲಿ ಮಂಗಳವಾರ ಸಂಭವಿಸಿದೆ. ಕಲ್ಲಡ್ಕ ಶಾಲಾಬಳಿ ನಿವಾಸಿ ಕರೀಂ ಎಂಬವರ ಪುತ್ರ ಮುಹಮ್ಮದ್ ಅಜ್ಮಲ್(19), ಮಾಣಿ ಬರೆನೆಕ್ಕರೆ ನಿವಾಸಿ ಮೋನಪ್ಪ ಪೂಜಾರಿ ಎಂಬವರ ಪುತ್ರ ಪರೀಕ್ಷಿತ್ (19) ಮೃತಪಟ್ಟ ದ್ವಿಚಕ್ರ ವಾಹನ ಸವಾರರಾಗಿದ್ದು, ಸ್ಥಳೀಯ ನಿವಾಸಿ, ಸಹಸವಾರ ಪದ್ಮನಾಭ ಗೌಡ (28) ಎಂಬವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಪರೀಕ್ಷಿತ್ ಹಾಗೂ […]

ಹೆದ್ದಾರಿಯಯಲ್ಲಿ ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಢಿಕ್ಕಿ ಮಹಿಳೆ ಮೃತ್ಯು

Wednesday, November 27th, 2019
priya suvarna

ಮಂಗಳೂರು : ಕುಂಟಿಕಾನ ಹೆದ್ದಾರಿಯ ಖಾಸಗಿ ಹೋಟೆಲ್ ಸಮೀಪ ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸ್ಥಳೀಯ ಮಹಿಳೆಯೋರ್ವರು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ  ಬುಧವಾರ ನಡೆದಿದೆ. ಕಾವೂರು ನಿವಾಸಿ ಪ್ರಿಯಾ ಸುವರ್ಣ (42) ಮೃತರು ಎಂದು ಗುರುತಿಸಲಾಗಿದೆ. ಅವರು ದ್ವಿಚಕ್ರ ವಾಹನದಲ್ಲಿ ಮನೆಯಿಂದ ಕೆಪಿಟಿ ಕಡೆಗೆ ತೆರಳುತ್ತಿದ್ದರು. ಈ ವೇಳೆ ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ರಸ್ತೆಗೆಸೆಯಲ್ಪಟ್ಟ ಪ್ರಿಯಾ ಸುವರ್ಣ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲೇ ತೀವ್ರ ರಕ್ತಸ್ರಾವದಿಂದ ಮೃತಪಟ್ಟರು […]

ದ್ವಿಚಕ್ರ ವಾಹನಕ್ಕೆ ಪಿಕಪ್ ಢಿಕ್ಕಿ: ಗಾಯಗೊಂಡ ಯುವಕ ಆಸ್ಪತ್ರೆಯಲ್ಲಿ ಮೃತ್ಯು

Wednesday, November 27th, 2019
Shariff

ಮಂಜೇಶ್ವರ : ದ್ವಿಚಕ್ರ ವಾಹನವೊಂದಕ್ಕೆ ಪಿಕಪ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ಮುಂಜಾನೆ ಸಂಭವಿಸಿದೆ. ಆರಿಕ್ಕಾಡಿ ಕುನ್ನಿಲ್ ನಿವಾಸಿ ಅಬೂಬಕರ್ ಎಂಬವರ ಪುತ್ರ ಮುಹಮ್ಮದ್ ಶರೀಫ್ (34) ಮೃತಪಟ್ಟವರು. ಮುಹಮ್ಮದ್ ಶರೀಫ್ ಮಂಗಳವಾರ ಬೆಳಗ್ಗೆ ಪತ್ನಿ ಮನೆಯಿಂದ ಸ್ಕೂಟರ್‌ನಲ್ಲಿ ನಾದಿನಿ ಮುನೀರಾ(19) ಎಂಬವರನ್ನು ಕರೆದುಕೊಂಡು ಬಂದ್ಯೋಡಿನತ್ತ ತೆರಳುತ್ತಿದ್ದ ವೇಳೆ ಅಡ್ಕ ಒಳಯಂ ಬಳಿ ಪಿಕಪ್ ವಾಹನ ಢಿಕ್ಕಿ ಹೊಡೆದಿದೆ. ಅಪಘಾತದಿಂದ ಗಂಭೀರ ಗಾಯಗೊಂಡಿದ್ದ […]