ಸರ್ವೀಸ್ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಸಾವು

Thursday, July 7th, 2016
Sarfaraj

ಮಂಗಳೂರು: ಸರ್ವೀಸ್ ಬಸ್ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ನಗರದ ಮೋತಿಮಹಲ್ ಹೋಟೆಲ್ ಬಳಿ ನಡೆದಿದೆ. ಗೋವಾ ಮೂಲದ ಸರ್ಫರಾಜ್(34) ಮೃತ ವ್ಯಕ್ತಿ. ಬಿ.ಸಿ.ರೋಡ್‌ನಿಂದ ಮಂಗಳೂರಿಗೆ ವೇಗವಾಗಿ ಬರುತ್ತಿದ್ದ ಎನ್ಎಸ್‌ ಬಸ್ ಮೋತಿ ಮಹಲ್ ಬಳಿ ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಸರ್ಫರಾಜ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ , ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಮಂಗಳೂರಿನ ಎಕ್ಕೂರು ಗ್ರಾಮದ ಯುವತಿಯನ್ನು ಮದುವೆಯಾಗಿದ್ದ […]

ಮೀಯಪದವು ವಿದ್ಯಾವರ್ಧಕ ವಿದ್ಯಾಸಂಸ್ಥೆಗಳ ಸುವರ್ಣ ಮಹೋತ್ಸವ

Wednesday, January 27th, 2016
vidyavarthaka

ಮಂಜೇಶ್ವರ: ವಿದ್ಯಾಭ್ಯಾಸದಿಂದ ಮಾನವೀಯ ಮೌಲ್ಯಗಳು ಬೆಳೆಯಬೇಕು.ಮೌಲ್ಯಯುತ ಶಿಕ್ಷಣ ನೀಡುವ ಸಂಸ್ಥೆಗಳಿಂದ ಅಭಿಮಾನ ಉಂಟಾಗಿ ಪ್ರತಿಭೆಗಳ ಅನಾವರಣಕ್ಕೆ ದಾರಿ ಸುಗಮಗೊಳಿಸುತ್ತದೆ.ಕಲೆ,ಸಂಸ್ಕ್ರತಿಗಳ ಬೆಳವಣಿಗೆ,ಪ್ರೋತ್ಸಾಹಗಳಿಗೆ ಶಿಕ್ಷಣ ಸಂಸ್ಥೆಗಳ ಕ್ರೀಯಾಶೀಲ ಚಟುವಟಿಕೆಗಳು ಬೆನ್ನೆಲುಬಾದಾಗ ನೈಜ ಅರ್ಥದ ಶಿಕ್ಷಣ ನೀಡಿದಂತಾಗುತ್ತದೆಯೆಂದು ಜಿಲ್ಲಾ ಪಂಚಾಯತ್ ಅಭಿವೃದ್ದಿ ಸ್ಥಾಯೀ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ ಅಭಿಪ್ರಾಯ ವ್ಯಕ್ತಪಡಿಸದರು. ಮೀಯಪದವು ವಿದ್ಯಾವರ್ಧಕ ವಿದ್ಯಾಸಂಸ್ಥೆಗಳ ಸುವರ್ಣ ಮಹೋತ್ಸವದ ಪೂರ್ವಭಾವಿಯಾಗಿ ನಡೆಸಲಾಗುವ ಒಂದು ವರ್ಷಗಳ ನಿರಂತರ ಕಾರ್ಯಕ್ರಮಗಳ ಸುವರ್ಣ ಅಭಿಯಾನ ಉದ್ಘಾಟನಾ ಕಾರ್ಯಕ್ರಮದ ವೇದಿಕೆಯಲಲಿ ಅವರು ಮಾತನಾಡುತ್ತಿದ್ದರು. ವಿದ್ಯಾವರ್ಧಕ ಸಂಘದ ಹಿರಿಯ […]