ಸರ್ಕಾರದ ಯೋಜನೆಗಳ ಪ್ರಚಾರಕ್ಕೆ ಖರ್ಚಾಗಿದ್ದು ಬರೊಬ್ಬರಿ 5 ಸಾವಿರ ಕೋಟಿ..!

Friday, December 28th, 2018
new-delhi

ನವದೆಹಲಿ: ಸರ್ಕಾರದ ಯೋಜನೆಗಳ ಪ್ರಚಾರಕ್ಕೆ ನಾಲ್ಕು ವರ್ಷದಲ್ಲಿ 5000 ಕೋಟಿ ರೂಪಾಯಿ ಹಣ ಉಪಯೋಗಿಸಲಾಗಿದೆ ಎಂದು ಮಾಹಿತಿ ಮತ್ತು ಪ್ರಚಾರ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ನಿನ್ನೆ ಲೋಕಸಭೆಗೆ ಅಂಕಿ ಅಂಶಗಳ ಸಮೇತ ವರದಿ ನೀಡಿದ್ದಾರೆ. 2014 ರಿಂದ 2018ರ ಡಿಸೆಂಬರ್ 7ರ ವರೆಗೆ ಸರ್ಕಾರದ ಯೋಜನೆಗಳ ಪ್ರಚಾರ ಕಾರ್ಯಕ್ಕೆ 5,245.73 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ. ವಿವಿಧ ಯೋಜನೆಗಳನ್ನು ಹೊರ ತರುವ ಸಚಿವಾಲಯಗಳಲ್ಲಿನ ಕಾರ್ಯಕ್ರಮಗಳ ಬಗೆಗಿನ ಪ್ರಚಾರಕ್ಕೆ ಪೂರಕವಾಗುವ ಮತ್ತು ಫಲಾನುಭವಿಗಳಿಗೆ ನೀಡಬೇಕಾದ ಮಾಹಿತಿಯನ್ನು ಹೊಂದಿರುತ್ತವೆ. […]

ನವದೆಹಲಿಯ ಐಇಎಸ್ಎ – ಮೇಘಾನ್ 2018: ಸಹ್ಯಾದ್ರಿ ರನ್ನರ್ಸ್ ಅಪ್

Friday, December 21st, 2018
sayadri

ಮಂಗಳೂರು: ತಯಾರಕರ ಸಮುದಾಯವನ್ನು ಭಾರತ ಡ್ರೈವ್ ತಂತ್ರಜ್ಞಾನದ ನಾವೀನ್ಯತೆಗೆ ಸಕ್ರಿಯಗೊಳಿಸಲು ಭಾರತೀಯ ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ ಅಸೋಸಿಯೇಷನ್ (ಐಇಎಸ್ಎ) ಉಪಕ್ರಮವು ;ಐಇಎಸ್ಎ ಮೇಕಾಥೊನ್ ದಕ್ಷಿಣ ಏಷ್ಯಾದಲ್ಲಿ ಅತಿದೊಡ್ಡ ವಿನ್ಯಾಸದ ಕಾರ್ಯಕ್ರಮವಾಗಿದ್ದು, 36 ಗಂಟೆಗಳ ರಾತ್ರಿಯ ವಿನ್ಯಾಸದ ಸವಾಲಿನಿಂದ 5 ನಗರಗಳಾದ್ಯಂತ ಒಟ್ಟು 20 ತಂಡಗಳನ್ನು ಆಯ್ಕೆ ಮಾಡಲಾಯಿತು. ಸಹ್ಯಾದ್ರಿಯ ಐದನೇ ಸೆಮಿಸ್ಟರ್ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ಸ್ ಎಂಜಿನಿಯರಿಂಗ್ನ ವಿದ್ಯಾರ್ಥಿ ಶ್ರೀ ನಿತಿನ್ ಟಿ ಮತ್ತು ಸಹ್ಯಾದ್ರಿ ಕಾಲೇಜು ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ಸ್ ಇಂಜಿನಿಯರಿಂಗ್ ವಿಭಾಗದಿಂದ ಶ್ರೀ ಪ್ರದೀಪ್ […]

ಕಮಲ್​ನಾಥ್​ ಮುಖ್ಯಮಂತ್ರಿಯಾಗುವ ಎಲ್ಲಾ ಸಾಧ್ಯತೆ: ಅಧಿಕೃತ ಪ್ರಕಟಣೆ ಅಷ್ಟೇ ಬಾಕಿ..!

Thursday, December 13th, 2018
kamalnath

ನವದೆಹಲಿ: ಪಂಚ ರಾಜ್ಯಗಳ ಚುನಾವಣೆಯಲ್ಲಿ ಗೆಲುವು ದಾಖಲಿಸಿರುವ ಕಾಂಗ್ರೆಸ್ ಈಗ ಮುಖ್ಯಮಂತ್ರಿಗಳ ಅಂತಿಮ ಆಯ್ಕೆ ಪ್ರಕಟಿಸಲಿದೆ. ಮಧ್ಯಪ್ರದೇಶದಲ್ಲಿ ಈಗಾಗಲೇ ಕಮಲ್ನಾಥ್ ಮುಖ್ಯಮಂತ್ರಿಯಾಗುವ ಎಲ್ಲಾ ಸಾಧ್ಯತೆಗಳು ಗೋಚರಿಸಿವೆ. ಮೂಲಗಳ ಪ್ರಕಾರ ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ನಾಥ್ ಅವರನ್ನು ಈಗಾಗಲೇ ಮುಖ್ಯಮಂತ್ರಿ ಸ್ಥಾನಕ್ಕೆ ಅಂತಿಮಗೊಳಿಸಲಾಗಿದ್ದು, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಂದ ಗುರುವಾರ ಅಧಿಕೃತ ಪ್ರಕಟಣೆ ಹೊರಬರಬೇಕಿದೆ. ಮಾಜಿ ಸಿಎಂ ದಿಗ್ವಿಜಯ್ ಸಿಂಗ್, ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ವಿವೇಕ್ ಟಂಖಾ ಅವರು ಈಗಾಗಲೇ ಗವರ್ನರ್ ಆನಂದಿ ಬೇನ್ ಪಟೇಲ್ ಅವರನ್ನು […]

ಲೋಕಸಭೆ ಚುನಾವಣೆಗೆ ಪಂಚರಾಜ್ಯ ಫಲಿತಾಂಶ ಪ್ರಭಾವ ಬೀರದು: ಅರುಣ್​ ಜೇಟ್ಲಿ

Wednesday, December 12th, 2018
arun-jatley

ನವದೆಹಲಿ: ಈ ಬಾರಿಯ ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿಯ ಯಾವುದೇ ಆಟ ನಡೆಯದೆ, ಹೀನಾಯ ಸೋಲು ಒಪ್ಪಿಕೊಂಡಿದೆ. ಇದರ ಬೆನ್ನಲ್ಲೇ ಈ ಚುನಾವಣೆ ಮುಂದಿನ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂಬ ಮಾತುಗಳನ್ನು ಹಣಕಾಸು ಸಚಿವ ಅರುಣ್ ಜೇಟ್ಲಿ ತಳ್ಳಿಹಾಕಿದ್ದಾರೆ. 2019ರ ಲೋಕಸಭೆ ಚುನಾವಣೆಗೆ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಯಾವುದೇ ಪ್ರಭಾವ ಬೀರದು. ಕೇಂದ್ರ ಸರ್ಕಾರದ ಕಾರ್ಯ ಆಧರಿಸಿಯೇ ಲೋಕಸಭೆ ಚುನಾವಣೆ ಫಲಿತಾಂಶ ಹೊರಬೀಳಲಿದೆ ಎಂದು ಅವರು ಹೇಳಿದ್ದಾರೆ. ರಾಜ್ಯ ಚುನಾವಣೆಯ ವಿಚಾರಗಳೇ ಬೇರೆ. ಇದೇ ಮೂರು ರಾಜ್ಯಗಳಲ್ಲಿ […]

ಕೇಂದ್ರದ ಮುಖ್ಯ ಆರ್ಥಿಕ ಸಲಹೆಗಾರ ಸ್ಥಾನಕ್ಕೆ ನೂತನ ಸಾರಥಿ ನೇಮಕ

Friday, December 7th, 2018
central-govt

ನವದೆಹಲಿ: ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರಾಗಿ ಐಎಸ್ಬಿ ಹೈದಾರಾಬಾದ್ ಪ್ರೊಫೆಸರ್ ಕೃಷ್ಣಮೂರ್ತಿ ಸುಬ್ರಮಣಿಯನ್ ಅವರನ್ನ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಅರವಿಂದ್ ಸುಬ್ರಮಣಿಯನ್ ಅವರ ತೆರವಾದ ಸ್ಥಾನಕ್ಕೆ ಕೃಷ್ಣಮೂರ್ತಿ ಅವರನ್ನ ನೇಮಕ ಮಾಡಲಾಗಿದೆ. ಕಳೆದ ನಾಲ್ಕು ವರ್ಷಗಳಿಂದ ಸೇವೆ ಸಲ್ಲಿಸಿದ್ದ ಅರವಿಂದ್ ಸುಬ್ರಮಣಿಯನ್ ಇದೇ ವರ್ಷದ ಆರಂಭದಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರಾಗಿ ಕೃಷ್ಣಮೂರ್ತಿ ಮೂರು ವರ್ಷಗಳ ಕಾಲ ಆ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ. ಕ್ಯಾಬಿನೆಟ್ನ ನೇಮಕ ಸಮಿತಿ ಕೃಷ್ಣಮೂರ್ತಿ […]

ರಫೇಲ್ ಡೀಲ್​ನಲ್ಲಿ ಭ್ರಷ್ಟಾಚಾರ ನಡೆದಿದೆ, ಇದಕ್ಕೆ ಪ್ರಧಾನಿಯೇ ನೇರಹೊಣೆ: ರಾಹುಲ್​ ಗಾಂಧಿ

Friday, November 2nd, 2018
Rahul-gandhi

ನವದೆಹಲಿ: ರಫೇಲ್ ಡೀಲ್ನಲ್ಲಿ ಭ್ರಷ್ಟಾಚಾರ ನಡೆದಿದೆ, ಇದಕ್ಕೆ ಪ್ರಧಾನಿಯೇ ನೇರಹೊಣೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇವತ್ತು ಸುದ್ದಿಗೋಷ್ಠಿ ನಡೆಸಿ ಮತ್ತೊಂದು ಆರೋಪ ಮಾಡಿದ್ದಾರೆ. ಅನಿಲ್ ಅಂಬಾನಿ ಅವರು ಜಮೀನು ಹೊಂದಿರುವ ಏಕೈಕ ಕಾರಣಕ್ಕೆ ಡಸಾಲ್ಟ್ ಸಬ್ ಕಾಂಟ್ರಾಕ್ಟ್ ನೀಡಿದೆ ಎಂದು ಕಂಪನಿ ಸಿಇಒ ಹೇಳಿಕೆ ನೀಡಿದ್ದಾರೆ. ಆದರೆ ಇಲ್ಲೇ ಇರುವುದು ವಿಷಯ. ಅನಿಲ್ ಅಂಬಾನಿ ಡಸಾಲ್ಟ್ನಿಂದಲೇ ಹಣ ಪಡೆದು ಜಮೀನು ಖರೀದಿಸಿದ್ದಾರೆ. 8 ಲಕ್ಷ ಮೌಲ್ಯದ ಲಾಸ್ ನಲ್ಲಿರುವ ಕಂಪನಿಯೊಂದಕ್ಕೆ 284 ಕೋಟಿ […]

ಒಂದೇ ವಾರದಲ್ಲಿ ಪೆಟ್ರೋಲ್ ಬೆಲೆ 2 ರೂ.. ಡೀಸೆಲ್​ ಬೆಲೆ 1ರೂ. ಇಳಿಕೆ

Saturday, October 27th, 2018
petrol

ನವದೆಹಲಿ: ಕಳೆದ ಒಂದುವಾರದಿಂದ ಹೆಚ್ಚು ಕಡಿಮೆ ಪೆಟ್ರೋಲ್ ಬೆಲೆಯಲ್ಲಿ ಪ್ರತಿ ಲೀಟರ್ 2 ರೂ. ಇಳಿಕೆಯಾಗಿದೆ. ಇನ್ನು ಡೀಸೆಲ್ ಬೆಲೆಯಲ್ಲಿ 1 ರೂ. ಇಳಿಕೆ ಕಂಡು ಬಂದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಇಳಿಕೆ ಕಂಡು ಬಂದ ಕಾರಣದಿಂದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಕಡಿತವಾಗಿದೆ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 80.85 ರೂ. ಹಾಗೂ ಡೀಸೆಲ್ 74.73 ರೂ. ಇದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಅತಿ ಹೆಚ್ಚು ಅಂದರೆ 84 ರೂ.ಗೆ ಏರಿಕೆ ಕಂಡು ಗ್ರಾಹಕರ […]

ಪ್ರಧಾನಿ ಮೋದಿಗೆ ಪ್ರತಿಷ್ಠಿತ ಸಿಯೋಲ್​ ಶಾಂತಿ ಪುರಸ್ಕಾರ

Wednesday, October 24th, 2018
narendra-modi

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 2018ರ ಸಿಯೋಲ್ ಶಾಂತಿ ಪುರಸ್ಕಾರಕ್ಕೆ ಪಾತ್ರರಾಗಿದ್ದಾರೆ. ವಿಶ್ವದ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾದ 14ನೇ ಗಣ್ಯರು ಎಂಬ ಹೆಗ್ಗಳಿಗೂ ಪಾತ್ರರಾಗಿದ್ದಾರೆ. ವಿದೇಶಾಂಗ ಇಲಾಖೆ ಈ ಬಗ್ಗೆ ದೃಢೀಕರಿಸಿದ್ದು, ಅಂತಾರಾಷ್ಟ್ರೀಯ ಸಹಕಾರ, ಜಾಗತಿಕ ಆರ್ಥಿಕಾಭಿವೃದ್ಧಿ, ಮಾನವ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿರುವುದರ ಜತೆಗೆ ಭ್ರಷ್ಟಾಚಾರ ನಿರ್ಮೂಲನೆ, ಸಾಮಾಜಿಕ ಸಮನ್ವಯದ ಮೂಲಕ ಜಗತ್ತಿನ ಅತ್ಯಂತ ವೇಗದ ಆರ್ಥಿಕಾಭಿವೃದ್ಧಿ ಹಾಗೂ ಪ್ರಜಾಪ್ರಭುತ್ವದ ಪ್ರಗತಿಗೆ ಶ್ರಮಿಸಿರುವ ಕಾರಣ ಈ ಪುರಸ್ಕಾರಕ್ಕೆ ಪ್ರಧಾನಿ ಭಾಜನರಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ಹೇಳಿದೆ. […]

ಪಿವಿ ಸಿಂಧುಗೆ ಬ್ಯಾಡ್​ಟೈಮ್: ಸರಣಿ ಸೋಲಿನಿಂದ ನಿರಾಸೆ ಮೂಡಿಸಿದ ಸ್ಟಾರ್ ಪ್ಲೇಯರ್

Wednesday, October 17th, 2018
p-v-sindhu

ನವದೆಹಲಿ: ಭಾರತದ ಟಾಪ್ ಬ್ಯಾಡ್ಮಿಂಟನ್ ಸ್ಟಾರ್ ಪಿವಿ ಸಿಂಧುಗೆ ಸದ್ಯ ಟೈಮ್ ಸರಿಯಿಲ್ಲ. ಏಷ್ಯನ್ ಗೇಮ್ಸ್ನಲ್ಲಿ ಬೆಳ್ಳಿ ಪದಕ ಗೆದ್ದುಕೊಂಡಿದ್ದ ಸಿಂಧು ಸದ್ಯ ಎಲ್ಲಾ ಪಂದ್ಯಗಳಲ್ಲೂ ಊಹಿಸದ ಶಾಕ್ಗಳಿಗೆ ಒಳಗಾಗುತ್ತಿದ್ದಾರೆ. ಏಷ್ಯನ್ ಗೇಮ್ಸ್ ನಂತರ ಪಿ ವಿ ಸಿಂಧು ಪ್ರದರ್ಶನ ಹೇಳಿಕೊಳ್ಳುವ ಮಟ್ಟದಲ್ಲಿ ಇಲ್ಲ. ಆಡುತ್ತಿರುವ ಪ್ರತೀ ಪಂದ್ಯಗಳಲ್ಲೂ ಆರಂಭದಲ್ಲೇ ಸೋತು ಟೂರ್ನಿಯಿಂದ ಹೊರ ಬೀಳುತ್ತಿದ್ದಾರೆ. ಪ್ರಸ್ತುತ ಡೆನ್ಮಾರ್ಕ್ ಓಪನ್ ಟೂರ್ನಿಯಲ್ಲಿ ಪಾಲ್ಗೊಂಡಿದ್ದ ಸಿಂಧು ಇಂದು ನಡೆದ ಮಹಿಳೆಯರ ಸಿಂಗಲ್ಸ್ನ ಮೊದಲ ಸುತ್ತಿನಲ್ಲೇ ಸೋಲು ಅನುಭವಿಸಿದ್ದಾರೆ. ಈ […]

ಮಹಿಳೆಯರ ಸಮಸ್ಯೆ ಪರಿಹರಿಸಲೆಂದೇ ಸರ್ಕಾರ ಕೆಲಸ ಮಾಡ್ತಿದೆ: ನರೇಂದ್ರ ಮೋದಿ

Saturday, October 13th, 2018
prime-minister

ನವದೆಹಲಿ: ನಮ್ಮ ಸರ್ಕಾರ ಮಹಿಳೆಯರ ಸಮಸ್ಯೆಗಳನ್ನ ತೊಲಗಿಸುವ ಸಲುವಾಗಿಯೇ ಕೆಲಸ ಮಾಡುತ್ತಿದೆ. ರಾತ್ರಿ ಪಾಳಯದಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಕೆಲಸದ ಸಮಯದಲ್ಲಿ ಭದ್ರತೆ ಒದಗಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ. ನವದೆಹಲಿಯಲ್ಲಿ ಎನ್ಎಚ್ಆರ್ಸಿ ಬೆಳ್ಳಿಹಬ್ಬದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಣ್ಣ ಮನಸಿನ ವ್ಯಕ್ತಿಗಳು ಮಗು ಹೆಣ್ಣಾಗಿದ್ದರೆ ಗರ್ಭತೆಗೆಯಿಸುವ ಕೆಲಸ ಮಾಡ್ತಿದ್ದಾರೆ. ಇದನ್ನ ನಿಲ್ಲಿಸಲು ಕಠಿಣ ಕಾನೂನು ಜಾರಿ ಮಾಡಲಾಗಿದೆ. ಇನ್ನು ಎಲ್ಲ ರಾಜ್ಯಗಳಲ್ಲಿ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆ ಜಾರಿಗೆ ತಂದಿದ್ದೇವೆ. ಇದರಿಂದ ಹೆಣ್ಣುಮಗುವಿನ ಜನನ […]