ಬಡಗುತಿಟ್ಟು ಯಕ್ಷಗಾನದ ಶ್ರೇಷ್ಠ ಭಾಗವತ, ಸುಬ್ರಹ್ಮಣ್ಯ ಧಾರೇಶ್ವರ ನಿಧನ
Thursday, April 25th, 2024ಉಡುಪಿ : ಬಡಗುತಿಟ್ಟು ಯಕ್ಷಗಾನದ ಶ್ರೇಷ್ಠ ಭಾಗವತ, ಕರಾವಳಿಯ ಕೋಗಿಲೆ ಸುಬ್ರಹ್ಮಣ್ಯ ಧಾರೇಶ್ವರ(67) ಗುರುವಾರ ನಸುಕಿನ ಜಾವ ಬೆಂಗಳೂರಿನ ಪುತ್ರನ ಮನೆಯಲ್ಲಿ ನಿಧನ ಹೊಂದಿದರು. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಸುಬ್ರಹ್ಮಣ್ಯ ಧಾರೇಶ್ವರರು,. ಹೊಸ ಪ್ರಸಂಗಗಳನ್ನು ನಿರ್ದೇಶಿಸುವ ಮೂಲಕ ರಂಗ ಮಾಂತ್ರಿಕ ಹೆಸರು ಪಡೆದಿದ್ದರು. ಯಕ್ಷಗಾನ ರಂಗ ತಜ್ಞ ಭಾಗವತರೆನಿಸಿದ್ದ ಅವರು ಸುಮಾರು 47 ವರ್ಷಗಳ ಕಾಲ ಯಕ್ಷಗಾನ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ್ದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಧಾರೇಶ್ವರ, ಇಂದು ಮುಂಜಾನೆ […]