ತಂದೆಯ ಲಾರಿಯ ಚಕ್ರದಡಿ ಸಿಲುಕಿ ಎಂಟು ವರ್ಷದ ಬಾಲಕ ಮೃತ್ಯು

Thursday, March 11th, 2021
Marshid

ಬೆಳ್ತಂಗಡಿ : ತನ್ನ ತಂದೆಯೇ ಚಲಾಯಿಸುತ್ತಿದ್ದ ಲಾರಿಯ ಚಕ್ರದಡಿ ಸಿಲುಕಿ ಎಂಟು ವರ್ಷದ ಬಾಲಕನೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ಬುಧವಾರ ಸಂಜೆ ಮೂಡುಬಿದಿರೆಯಲ್ಲಿ ನಡೆದಿದೆ. ಉಜಿರೆ ಅತ್ತಾಜೆ‌ ನಿವಾಸಿ ಇಬ್ರಾಹಿಂ ಇಬ್ಬಿ ಅವರ ಪುತ್ರ, ಉಜಿರೆ ಹಳೆಪೇಟೆ ಬದ್ರುಲ್ ಹುದಾ ಮದರಸದ‌ ಮೂರನೇ ತರಗತಿ ವಿದ್ಯಾರ್ಥಿ ಮುರ್ಷಿದ್ (8) ಮೃತಪಟ್ಟ ಬಾಲಕ. ಉಜಿರೆ ಅತ್ತಾಜೆ ಇಬ್ರಾಹಿಂ ಮತ್ತು ರಹಿಮತ್ ದಂಪತಿಯ ಇಬ್ಬರು ಮಕ್ಕಳಲ್ಲಿ‌ ಮುರ್ಷಿದ್ ಮೊದಲನೆಯವನಾಗಿದ್ದ. ತಂದೆ ಮೂಡುಬಿದಿರೆಯ ಕಲ್ಲಿನ‌ಕೋರೆಗೆ ಹೋಗುವಾಗ ಬಾಲಕನೂ ಜತೆಗೆ ತೆರಳಿದ್ದನೆಂದು ಹೇಳಲಾಗಿದೆ. ತಂದೆಯೇ ಚಾಲಕನಾಗಿ ಲಾರಿ […]

ಮುಲ್ಕಿಯಲ್ಲಿ ಲಾರಿ ಢಿಕ್ಕಿ ಹೊಡೆದು ಬಾಲಕ ಮೃತ್ಯು

Monday, May 21st, 2018
Mulki Bus accident

ಮುಲ್ಕಿ :  ಮಿನಿಬಸ್ ಮತ್ತ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತಕ್ಕೆ ಹೆದ್ದಾರಿ ಬದಿಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಬಾಲಕ ಮೃತಪಟ್ಟು ಕುಟುಂಬದ ಸದಸ್ಯರು ಗಾಯಗೊಂಡ ಘಟನೆ ರವಿವಾರ ರಾತ್ರಿ ಮುಲ್ಕಿಯ ಬಪ್ಪನಾಡು ದೇವಸ್ಥಾನದ ಎದುರು ನಡೆದಿದೆ. ಮೃತ ಬಾಲಕನನ್ನು ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಮೆಣಸಗಿ ಗ್ರಾಮದ ನಿವಾಸಿ ರಕ್ಷಿತ್ ಕುಮಾರ್ (12) ಎಂದು ಗುರುತಿಸಲಾಗಿದೆ. ಮುಲ್ಕಿಯ ಬಪ್ಪನಾಡು ಬಳಿಯ ಅಪಾರ್ಟ್‌ಮೆಂಟ್ ಒಂದರ ವಾಚ್ ಮ್ಯಾನ್ ಮುತ್ತು ಎಂಬವರು ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಮುಲ್ಕಿಯ ಬಪ್ಪನಾಡು […]

ವಾಹನ ಅಪಘಾತ: ಹತ್ತು ವರ್ಷಗಳಿಂದ ಚಿಕಿತ್ಸೆಯಲ್ಲಿದ್ದ ಬಾಲಕ ಮೃತ್ಯು

Monday, May 16th, 2016
ವಾಹನ ಅಪಘಾತ: ಹತ್ತು ವರ್ಷಗಳಿಂದ ಚಿಕಿತ್ಸೆಯಲ್ಲಿದ್ದ ಬಾಲಕ ಮೃತ್ಯು

ಉಪ್ಪಳ: ಹತ್ತು ವರ್ಷಗಳ ಹಿಂದೆ ನಡೆದ ವಾಹನ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆಯಲ್ಲಿದ್ದ ಬಾಲಕ ಮೃತಪಟ್ಟ ಘಟನೆ ನಡೆದಿದೆ. ಜನತಾದಳ ಮಾಜಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ,ಮಂಗಲ್ಪಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಟಿಂಬರ್ ಅಬ್ದುಲ್ಲ&ಆಯಿಷಾ ದಂಪತಿಗಳ ಪುತ್ರ ಉಪ್ಪಳ ಮಣ್ಣಂಗುಳಿ ಸುಹನಾ ಮಂಝಿಲ್ ನಿವಾಸಿ ಮುಹಮ್ಮದ್ ಫಯಾಸ್(12)ಮೃತ ಬಾಲಕನಾಗಿದ್ದಾನೆ. ಹತ್ತು ವರ್ಷಗಳ ಹಿಂದೆ ಮಣ್ಣಂಗುಳಿಯಲ್ಲಿ ಮನೆ ಬಳಿ ರಸ್ತೆ ಬದಿ ಆಟವಾಡುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಚಿಕಿತ್ಸೆಯಲ್ಲಿದ್ದನು.ಆದರೆ ಕಳೆದ ಎರಡು ವಾರಗಳ ಹಿಂದೆ ಬಾಲಕನಿಗೆ ನ್ಯುಮೋನಿಯಾ ಬಾಧಿಸಿದ್ದರಿಂದ ಮಂಗಳೂರಿನ […]

ಕುದ್ರೋಳಿ : ಎತ್ತಿನಹೊಳೆ ಯೋಜನೆ ಕೈಬಿಡಲು ಪೂಜಾರಿ ಉರುಳು ಸೇವೆ

Saturday, October 17th, 2015
Poojary Urulu seva

ಮಂಗಳೂರು : ಎತ್ತಿನ ಹೊಳೆ ಯೋಜನೆ ಜಾರಿ ಮಾಡುವುದನ್ನು ವಿರೋಧಿಸಿ ಹಿರಿಯ ಕಾಂಗ್ರೆಸ್‌ ನಾಯಕ , ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರಿಂದು ಶುಕ್ರವಾರ ಕುದ್ರೋಳಿ ಶ್ರೀ ಗೋಕರ್ಣ ನಾಥೇಶ್ವರನಸನ್ನಿಧಿಯಲ್ಲಿ ಉರುಳು ಸೇವೆ ಮಾಡುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟಿಸಿದರು. ದೇವಸ್ತಾನದಲ್ಲಿ ನವರಾತ್ರಿ ಆಚರಣೆ ನಡೆಯುತ್ತಿದ್ದು,ಲೋಕಕಲ್ಯಾಣಾರ್ಥವಾಗಿ ಮತ್ತು ಎತ್ತಿನಹೊಳೆ ಯೋಜನೆ ಕೈಬಿಡಲು ಪೂಜಾರಿ ಅವರ ನೇತ್ರತ್ವದಲ್ಲಿ ಬ್ರಹ್ಮ ಕಲಶೋತ್ಸವವನ್ನೂ ನಡೆಸಲಾಗುತ್ತಿದೆ. ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಗೋಕರ್ಣನಾಥ ಕ್ಷೇತ್ರದಲ್ಲಿ ಶುಕ್ರವಾರ ದೇವಸ್ಥಾನದಲ್ಲಿ ಬ್ರಹ್ಮಕಲಶ ಜರಗಿತು. ಮಧ್ಯಾಹ್ನದ ವೇಳೆಗೆ […]

ಎತ್ತಿನಹೊಳೆ ಯೋಜನೆ ವಿರುದ್ಡ ಪಂಪ್ ವೆಲ್ ಸರ್ಕಲ್ ನಲ್ಲಿ ಅ.15 ರಂದು ರಸ್ತೆ ತಡೆ

Monday, October 12th, 2015
Yethinahole Horata

ಮಂಗಳೂರು: ಎತ್ತಿನಹೊಳೆ ಯೋಜನೆಯನ್ನು ದ.ಕ ಜಿಲ್ಲೆಯ ಜನತೆ ತೀವ್ರವಾಗಿ ವಿರೋದಿಸುತ್ತಿದ್ದರೂ ರಾಜ್ಯ ಸರಕಾರ ಕಡೆಗಣಿಸಿದುದ್ದರಿಂದ ಅ.15 ರಂದು ಮಂಗಳೂರಿನ ಪಂಪ್ ವೆಲ್ ನಲ್ಲಿ ರಸ್ತೆ ತಡೆ ಮತ್ತು ಜೈಲ್ ಭರೋ ನಡೆಸಲಾಗುವುದು ಎಂದು ನೇತ್ರಾವತಿ ನದಿ ಸಂರಕ್ಷಣಾ ಒಕ್ಕೂಟದ ಅಧ್ಯಕ್ಷ ಡಾ.ನಿರಂಜನ್ ರೈ ತಿಳಿಸಿದ್ದಾರೆ. ಅವರು ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಆ ದಿನ ಬೆಳಿಗ್ಗೆ 10.30ಕ್ಕೆ ಪಂಪ್ ವೆಲ್ ನಲ್ಲಿ ರಸ್ತೆ ತಡೆ ಹಮ್ಮಿಕೊಳ್ಳಲಾಗಿದೆ. ಈ ಹೋರಾಟದಲ್ಲಿ ಪಕ್ಷ ಬೇದ ಮರೆತು ಎಲ್ಲರೂ ಒಟ್ಟಾಗ ಬೇಕೆಂದು ಅವರು […]