ಮಂಗಳೂರು : ಡಿಕೆಶಿ ಬಂಧನ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

Wednesday, September 4th, 2019
pratibhatane

ಮಂಗಳೂರು : ಕಾಂಗ್ರೆಸ್ ಮುಖಂಡ ಡಿ.ಕೆ ಶಿವಕುಮಾರ್ ಬಂಧನ ವಿರೋಧಿಸಿ ಕೈ ಕಾರ್ಯಕರ್ತರು ಹಲವೆಡೆ ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ಕಾಂಗ್ರೆಸ್ ಶಾಸಕರು ಸೇರಿದಂತೆ ಕಾರ್ಯಕರ್ತರನ್ನು ವಶಕ್ಕೆ ಪಡೆದರು. ದ.ಕ ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಬಿಜೆಪಿ, ಕಾಂಗ್ರೆಸ್-ಜೆಡಿಎಸ್‌ನ 17 ಶಾಸಕರನ್ನು ಕೋಟಿ ಕೋಟಿ ಆಮಿಷ ನೀಡಿ ಮುಂಬೈಗೆ ಕಳುಹಿಸಿದಾಗ ಇಡಿ, ಐಟಿ ಎಲ್ಲಿ ಹೋಗಿತ್ತು? ಎಂದು ಪ್ರಶ್ನಿಸಿದರು. ಮಾಜಿ ಸಚಿವ […]

ಕೊಲ್ಲೂರು : ದೇವಳದ ಸಾಕಾನೆ ಇಂದಿರಾ ಸಾವು

Wednesday, August 14th, 2019
indira-elephant

ಕೊಲ್ಲೂರು : ದೇವಳದ ಸಾಕಾನೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಜ್ವರದಿಂದ ಬಳಲುತ್ತಿದ್ದ ಸಾಕಾನೆ ಇಂದಿರಾ ಮೃತಪಟ್ಟಿದೆ. ಕಳೆದ 20 ದಿನಗಳಿಂದ 62 ವರ್ಷ ಪ್ರಾಯದ ಆನೆ ಇಂದಿರಾ ಜ್ವರದಿಂದ ಬಳಲುತ್ತಿತ್ತು. ಆನೆ ಜ್ವರದಿಂದ ಬಳಲುತ್ತಿದ್ದರೂ ಕೂಡ ಮಾವುತ ಬಾಬಣ್ಣ ವಿಶೇಷವಾದ ಮುತುವರ್ಜಿಯನ್ನು ವಹಿಸಿಕೊಂಡಿರಲಿಲ್ಲ. ಅಲ್ಲದೆ, ದೇವಾಲಯದ ಆಡಳಿತಮಂಡಳಿಯೂ ಕೂಡ ಯಾವುದೇ ಲಕ್ಷ್ಯವನ್ನು ವಹಿಸಿಕೊಂಡಿರಲಿಲ್ಲ ಎಂದು ಸ್ಥಳೀಯ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದಿರಾ ಆನೆಯನ್ನು ಬಾಳೆಹೊನ್ನೂರಿನಿಂದ ತರಲಾಗಿತ್ತು. ಕೇರಳ ಮೂಲದ ಟಿಂಬರ್ ಮರ್ಚೆಂಟ್ ಈ ಆನೆಯನ್ನು ದಾನ ನೀಡಿದ್ದರು. […]

ಕಾಫಿನಾಡಿನಲ್ಲಿ ಮತ್ತೆ ವರುಣನ ಆಗಮನ..ಜಿಲ್ಲೆಯಾದ್ಯಂತ ಭಾರಿ ಮಳೆ..!

Tuesday, June 19th, 2018
heavy-rain

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮತ್ತೆ ವರುಣನ ಆಗಮನವಾಗಿದೆ. ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದ್ದು, ಮಲೆನಾಡಿನ ಹಲವೆಡೆ ಮಳೆ ಸುರಿಯುತ್ತಿದೆ. ಚಾರ್ಮಾಡಿ ಘಾಟಿಯಲ್ಲಿಯೂ ಹೆಚ್ಚು ಮಳೆಯಾಗುತ್ತಿದೆ. ಅಷ್ಟೇ ಅಲ್ಲದೇ ರಸ್ತೆ ಕಾಣದಂತೆ ಮಂಜು ಆವರಿಸಿದೆ. ಮಂಜಿನ ಜೊತೆಯೇ ಮಳೆ ಸುರಿಯುತ್ತಿರುವುದರಿಂದ ರಸ್ತೆ ಸಂಚಾರದಲ್ಲಿ ವ್ಯತ್ಯಯವಾಗಿದ್ದು, ಪ್ರಯಾಣಿಕರಿಗೆ ಕೊಂಚ ತೊಂದರೆಯುಂಟಾಗಿದೆ. ಇನ್ನು ಕೊಪ್ಪ, ಶೃಂಗೇರಿ, ಬಾಳೆಹೊನ್ನೂರು, ಮೂಡಿಗೆರೆ, ಚಾರ್ಮಾಡಿ ಘಾಟ್ ಭಾಗದಲ್ಲಿ ವರುಣನ ಆರ್ಭಟ ಜೋರಾಗಿದೆ.

ಜಿಲ್ಲೆಯಲ್ಲಿ ವರುಣನ ಆರ್ಭಟ…ಮುಳುಗಡೆ ಭೀತಿಯಲ್ಲಿ ಶೃಂಗೇರಿ ದೇಗುಲ!

Thursday, June 14th, 2018
shringeri-rain

ಚಿಕ್ಕಮಗಳೂರು: ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪರಿಣಾಮ ಶೃಂಗೇರಿ ದೇವಸ್ಥಾನದ ಮೆಟ್ಟಿಲುಗಳ ತನಕ ನೀರು ಬಂದಿದ್ದು ಮುಳುಗಡೆ ಭೀತಿಯಲ್ಲಿದೆ. ಇದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಇನ್ನು ಕಳಸ ಸಮೀಪದ ಹಳುವಳ್ಳಿ ಎಂಬಲ್ಲಿ ರಸ್ತೆಗೆ ನೀರು ನುಗ್ಗಿದ್ದು, ಕಳಸ- ಬಾಳೆಹೊನ್ನೂರು ಸಂಪರ್ಕ ಕಡಿತವಾಗಿದೆ. ನೆಲ್ಲಿಬೀಡು, ಕುದುರೆಮುಖದಲ್ಲಿ ಸೇತುವೆಯ ಮೇಲೆ ನೀರು ಹರಿದ ಪರಿಣಾಮ ಕಳಸ-ಕುದುರೆಮುಖ-ಮಂಗಳೂರು ರಸ್ತೆ ಸಂಪರ್ಕ ಕೂಡಾ ಕಡಿತಗೊಂಡಿದೆ. ಅಲ್ಲದೆ ಕಳಸ-ಹೊರನಾಡು,ಕಳಸ-ಕಳಕೋಡು ಸಂಪರ್ಕ ಕೂಡಾ ಕಡಿತಗೊಂಡಿದೆ. ಕುದುರೆಮುಖ ಅಯ್ಯಪ್ಪ […]