ನವೀಕೃತ ಮಂಗಳಾ ಈಜುಕೊಳ ಉದ್ಘಾಟನೆ
Saturday, February 16th, 2019ಮಂಗಳೂರು : ಲೇಡಿಹಿಲ್ನಲ್ಲಿರುವ ಮಂಗಳಾ ಈಜುಕೊಳದ ಆಧುನಿಕ ನೀರು ಶುದ್ಧೀಕರಣ ಸ್ಥಾವರ ಹಾಗೂ ನವೀಕೃತ ಈಜುಕೊಳವನ್ನು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ನಗರದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳ ನಿರ್ಮಾಣಕ್ಕೆ ನಿವೇಶನದ ಕೊರತೆ ಎದುರಾಗಿದ್ದು, ಸೂಕ್ತ ಜಾಗಕ್ಕಾಗಿ ಹುಡುಕಾಟ ನಡೆಯುತ್ತಿದೆ. ನಿವೇಶನ ಲಭ್ಯವಾದಕ್ಷಣ ಈಜುಕೊಳ ನಿರ್ಮಾಣ ಮಾಡಿ ತರಬೇತಿಯೊಂದಿಗೆ ಇಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಯನ್ನು ನಡೆಸಲು ಚಿಂತಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಹೇಳಿದ್ದಾರೆ. ಮಂಗಳಾ ಈಜುಕೊಳ ಇದೀಗ […]