ದಕ್ಷಿಣ ಕನ್ನಡದಲ್ಲಿ ಮಕ್ಕಳ ಅಪಹರಣದ ಯಾವುದೇ ಜಾಲವಿಲ್ಲ: ಡಾ. ಸಂಜೀವ ಎಂ. ಪಾಟೀಲ

Monday, November 28th, 2016
Dcp-dr-sanjiv-m-patil

ಮಂಗಳೂರು: ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮಕ್ಕಳ ಅಪಹರಣದ ಯಾವುದೇ ಜಾಲವಿಲ್ಲ ಎಂದು ಡಿಸಿಪಿ ಡಾ. ಸಂಜೀವ ಎಂ. ಪಾಟೀಲ ಸ್ಪಷ್ಟಪಡಿಸಿದರು. ಜಿಲ್ಲೆಯಲ್ಲಿ ಮಕ್ಕಳ ಜಾಲ ಸಕ್ರಿಯವಾಗಿದೆ, ಮಕ್ಕಳ ಅಪಹರಣವಾಗುತ್ತದೆ ಎಂಬ ವದಂತಿ ಹಿನ್ನೆಲೆಯಲ್ಲಿ ಈ ಸ್ಪಷ್ಟೀಕರಣ ನೀಡಿರುವ ಡಿಸಿಪಿ, ಇಂತಹ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು ಎಂದು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಸಂದೇಶಗಳು ರವಾನೆಯಾಗುತ್ತಿವೆ. ಈ ಬಗ್ಗೆ ಈವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಇಂತಹ ಆಧಾರ ರಹಿತ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು. ಒಂದು ವೇಳೆ ಸಂಶಯಾಸ್ಪದ […]

ಚಾಕಲೇಟ್ ಆಮಿಷವೊಡ್ಡಿ ಮಕ್ಕಳ ಅಪಹರಣಕ್ಕೆ ಯತ್ನ: ತಪ್ಪಿಸಿಕೊಂಡ ಬಾಲಕ

Wednesday, November 23rd, 2016
child-kidnaping

ಮಂಗಳೂರು: 2 ದಿನಗಳ ಹಿಂದೆಯಷ್ಟೇ ಕಲಬುರಗಿಯನ್ನು ಬೆಚ್ಚಿ ಬೀಳಿಸುವ ರೀತಿ ಕಿಡ್ನಾಪ್‌ ಪ್ರಕರಣವೊಂದು ನಡೆದಿತ್ತು. ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ಒಂದು ವಾರದಿಂದ ಮಕ್ಕಳ ಅಪಹರಣಕಾರರ ಜಾಲವೊಂದು ಕರಾವಳಿ ಜಿಲ್ಲೆಯಾದ್ಯಂತ ಸುತ್ತಾಡುತ್ತಿದೆ ಎಂಬ ವಾಟ್ಸ್ಅಪ್ ಸಂದೇಶ ಜನರಲ್ಲಿ ಆತಂಕ ಮೂಡಿಸಿದ ಬೆನ್ನಲ್ಲೇ ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಬಾಲಕನೊಬ್ಬ ಅಪಹರಣಕಾರರಿಂದ ತಪ್ಪಿಸಿಕೊಂಡು ಪಾರಾದ ಘಟನೆ ನಡೆದಿದೆ. ಕರಿಯಂಗಳ ಗ್ರಾಮದ ಸಾಣೂರು ನಿವಾಸಿ ವಾಮನ ಎಂಬುವರ ಮಗ ನಿಖಿಲ್ […]