ಪೊಲೀಸರ ಎದುರು  ಒಂದೂವರೆ ವರ್ಷದ ಮಗುವನ್ನು ನೆಲಕ್ಕೆಸೆದು ಕೊಲೆ ಮಾಡಲು ಯತ್ನಿಸಿದ ತಂದೆ

Wednesday, September 27th, 2023
ಪೊಲೀಸರ ಎದುರು  ಒಂದೂವರೆ ವರ್ಷದ ಮಗುವನ್ನು ನೆಲಕ್ಕೆಸೆದು ಕೊಲೆ ಮಾಡಲು ಯತ್ನಿಸಿದ ತಂದೆ

ಮಂಗಳೂರು : ಕದ್ರಿ ಠಾಣೆಯಲ್ಲಿ ಪೊಲೀಸರ ಎದುರಿನಲ್ಲಿನಲ್ಲಿಯೇ ಒಂದೂವರೆ ವರ್ಷದ ಮಗುವನ್ನು ಕುತ್ತಿಗೆ ಹಿಡಿದು ಎತ್ತಿ ನೆಲಕ್ಕೆಸೆದು ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. ವ್ಯಾಸನಗರದ ನಿವಾಸಿ ಮಹೇಶ್ ಆರೋಪಿಯಾಗಿದ್ದಾನೆ. ಈತ ಹಲವು ಸಮಯದಿಂದ ಪತ್ನಿ ಮಕ್ಕಳಿಗೆ ಕಿರುಕುಳ ನೀಡುತ್ತಿದ್ದ ಎಂದು ದೂರು ನೀಡಲಾಗಿದೆ. ಈತನ ಪತ್ನಿ ” ತನ್ನ ಇಬ್ಬರು ಮಕ್ಕಳನ್ನು ಮತ್ತು ತನ್ನನ್ನು ಕೊಲ್ಲುತ್ತೇನೆಂದು ಹಾಗೂ ಬೆಂಕಿ ಹಚ್ಚಿ ಸುಟ್ಟು ಹಾಕುತ್ತೇನೆಂದು ಬೆದರಿಸಿ ತನಗೆ ಹೊಡೆಯಲು ಬಂದಿದ್ದು ಆತನಿಂದ ತಪ್ಪಿಸಿಕೊಂಡು ಮಕ್ಕಳನ್ನು ಮನೆಯಲ್ಲಿಯೇ ಬಿಟ್ಟು […]

ಗ್ರಾಮ ಪಂಚಾಯತ್ ಸದಸ್ಯ ಶಂಕಿತ ಇಲಿ ಜ್ವರದಿಂದ ಸಾವು

Sunday, November 28th, 2021
Mahesh

ಸುಳ್ಯ  : ಗೋಳಿತ್ತೊಟ್ಟು ಗ್ರಾಮ ಪಂಚಾಯತ್ ಸದಸ್ಯ ಶಂಕಿತ ಇಲಿ ಜ್ವರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮೃತರನ್ನು  ಡೆಬ್ಬೇಲಿ ನಿವಾಸಿ ಮಹೇಶ್ (27)  ಎಂದು ಗುರುತಿಸಲಾಗಿದೆ. ಮಹೇಶ್‌ ಅವರಿಗೆ ಕೆಲ ದಿನದ ಹಿಂದೆ ತೀವ್ರ ಜ್ವರ ಕಾಣಿಸಿಕೊಂಡಿತ್ತು. ಜ್ವರ ಉಲ್ಬಣಗೊಂಡ ಹಿನ್ನೆಲೆ ನ.26ರಂದು ಸಂಜೆ ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ನಂತರ ರಾತ್ರಿ ವೇಳೆ ಅಲ್ಲಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಯಿತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದ ಅವರು ನ.27ರಂದು ಮೃತಪಟ್ಟಿದ್ದಾರೆ ಎಂದು ತಿಳಿದು […]

ಲಾಕ್ ಡೌನ್ ಸಂಕಷ್ಟದ್ದ ರೈತನಿಂದ 3000 ಕೆಜಿ ಈರುಳ್ಳಿ ಖರೀದಿಸಿದ ನಟ ಉಪೇಂದ್ರ

Monday, May 17th, 2021
onion

ಹಿರಿಯೂರು: ಲಾಕ್ ಡೌನ್ ನಿಂದ ಬೆಳೆದ ಬೆಳೆ ಮಾರಲಾಗದೆ ಸಂಕಷ್ಟದಲ್ಲಿದ್ದ ಹಿರಿಯೂರು ತಾಲ್ಲೂಕಿನ ಪಟ್ರೇಹಳ್ಳಿ ಗ್ರಾಮದ ಮಹೇಶ್ ಅವರ 60 ಚೀಲ ಈರುಳ್ಳಿಯನ್ನು ನಟ ಉಪೇಂದ್ರ ಖರೀದಿಸಿದ್ದಾರೆ. ಲಾಕ್ ಡೌನ್ ವೇಳೆ ವ್ಯಾಪಾರವಾಗದೇ ಸಂಕಷ್ಟದಲ್ಲಿರುವ ರೈತರಿಗೆ ನಟ ಉಪೇಂದ್ರ ಅವರು ” ನಮಗೆ ಅವಶ್ಯಕತೆ ಇರುವ ಬೆಳೆಯನ್ನು ನಿಮ್ಮ ಬಳಿ ಸೂಕ್ತ ಬೆಲೆಗೆ ಕೊಂಡು ಬೇಕಿರುವವರಿಗೆ ಹಂಚುತ್ತೇವೆ” ಎಂದು ತನ್ನ ಮೊಬೈಲ್ ನಂಬರ್ ನೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಕರೆ ನೀಡಿದ್ದರು. ಇದನ್ನು ಗಮನಿಸಿದ ಮಹೇಶ್ ಉಪೇಂದ್ರ ಅವರಿಗೆ ಕರೆ ಮಾಡಿ ವಿಚಾರಿಸಿ […]

ಇವಳ ಗಂಡನ ನೀವು ಎಲ್ಲಿಯಾದರೂ ಕಂಡಿರಾ? 

Friday, May 14th, 2021
Ambika

ಕೋಲಾರ: ಕೊರೋನಾ ಅಲೆಯಲ್ಲಿ ಬೀದಿ ಬೀದಿಗಳು ನಿರ್ಜನ. ಕಾಲೇಜು, ಕಚೇರಿಗಳೂ ಬಂದಾಗಿ ನಿಂತ ದೃಶ್ಯ. ಒಬ್ಬರನೊಬ್ಬರ ಮುಖ ನೋಡಲೂ ಅಳುಕುವ ಪರಿಸ್ಥಿತಿ. ಸಾರಿಗೆ ಸಂಚಾರವೂ ಇಲ್ಲ. ಮಾತನಾಡಲು ಇನ್ನೊಬ್ಬ ಎದುರು ಕಾಣ ಸಿಗುತ್ತಿಲ್ಲ. ಕೊರೋನಾ ಸೋಂಕಿನ ಭೀತಿಯಲ್ಲಿ ಮನುಜ ತನ್ನ ಸರಿಸಾಟಿ ಮನುಜನನ್ನೇ ದೂರ ಇಟ್ಟು ಬಿಟ್ಟಿರುವ ದುರಂತ ಪರಿಸ್ಥಿತಿ! ಆದರೆ ಇಂಥ ಅತ್ಯಂತ ಕ್ಲಿಷ್ಟ ದಿನಗಳಲ್ಲಿಯೂ ಇಲ್ಲೊಬ್ಬಾಕೆ ತನ್ನ ಗಂಡನನ್ನು ಹುಡುಕಿಕೊಂಡು ಊರೂರು ಅಲೆಯುತ್ತಿರುವ ಕತೆ ಅತ್ಯಂತ ವಿಧ್ರಾವಕ ಎನಿಸುತ್ತದೆ. ಸ್ವಯಂಕೃತ ಅಪರಾಧಕ್ಕೆ ಶಿಕ್ಷೆಯನ್ನೂ ತಾನೇ […]

ಪ್ರೀತಿಸಿ ಮದುವೆಯಾಟ ಆಡಿದ ಗಂಡು ಹರಿಶಿನ ಮೈ ಆರುವ ಮುನ್ನವೇ ಇನ್ನೊಂದು ಮದುವೆ ಹಸಮಣೆಗೆ!

Thursday, May 13th, 2021
Kolara

ಕೋಲಾರ: ಪ್ರೀತಿಸಿ ಮದುವೆಯಾಟ ಆಡಿದ ಪತಿ ಮಹಾಶಯನೊಬ್ಬ ಅದರ ಬೆನ್ನಲ್ಲೇ ಇನ್ನೊಂದು ಪುನರ್ ವಿವಾಹಕ್ಕೆ ಮುಂದಾದ ವಿಚಿತ್ರ ಪ್ರಕರಣವೊಂದು ಇಲ್ಲಿದೆ. ಈ ಪ್ರಕರಣದಲ್ಲಿ ತನ್ನ ನೂತನ ಗಂಡನ ಹುಚ್ಚಾಟಕ್ಕೆ ಬೆಚ್ಚಿದ ನೂತನ ವಧು ಎಸ್ಪಿ ಕಚೇರಿ ಮುಂದೆ ಏಕಾಂಗಿಯಾಗಿ ಕುಳಿತು ಪ್ರತಿಭಟಿಸಿದ ಮುಂದುವರೆದ ಭಾಗವೂ ಇದ್ದು, ಸಧ್ಯಕ್ಕೆ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದೆ. ಕೋಲಾರ ತಾಲ್ಲೂಕಿನ ಅರಾಭಿಕೊತ್ತನೂರಿನ ಪಿಳ್ಳಪ್ಪನ ಮಗ ಮಹೇಶ್ ಅದೇ ಗ್ರಾಮದ ಮುನಿಯಪ್ಪನ ಮಗಳನ್ನು ಸುಮಾರು 4 ವರ್ಷಗಳ ಹಿಂದೆ ಮನೆಯಲ್ಲಿ ಯರೂ ಇಲ್ಲದ ಸಮಯ […]

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮತ್ತು ಪರಿಷ್ಕರಣೆ ಅಭಿಯಾನ : ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಚಾಲನೆ

Thursday, September 5th, 2019
madikeri-

ಮಡಿಕೇರಿ: ಇದೇ ಸೆ.1 ರಿಂದ ಅ.15 ರ ವರೆಗೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮತ್ತು ಪರಿಷ್ಕರಣೆ ಅಭಿಯಾನಕ್ಕೆ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಹಾಗೂ ಜಿ.ಪಂ.ಸಿಇಒ ಕೆ.ಲಕ್ಷ್ಮಿಪ್ರಿಯ ಅವರು ಭಿತ್ತಿಪತ್ರ (ಪೋಸ್ಟರ್‌) ಅನಾವರಣ ಮಾಡುವ ಮೂಲಕ ಭಾನುವಾರ ಚಾಲನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಅವರು ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಸಮಗ್ರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-2020 ರ ಸಂಬಂಧ ಮತದಾರರ ಪಟ್ಟಿಯ ಪರಿಶೀಲನಾ ಕಾರ್ಯಕ್ರಮನ್ನು […]

ಆನ್​ಲೈನ್​ನಲ್ಲಿ ದುಬಾರಿ ಕ್ಯಾಮರಾಗಳನ್ನು ಬಾಡಿಗೆಗೆ ಪಡೆದು ವಂಚಿಸುತ್ತಿದ್ದ ಆರೋಪಿ ಬಂಧನ

Thursday, November 15th, 2018
online

ಬೆಂಗಳೂರು: ಆನ್ಲೈನ್ನಲ್ಲಿ ದುಬಾರಿ ಕ್ಯಾಮರಾಗಳನ್ನು ಬಾಡಿಗೆಗೆ ಪಡೆದು ವಂಚಿಸುತ್ತಿದ್ದ ಆರೋಪಿಯನ್ನ ಸಂಜಯನಗರ ಪೊಲೀಸರು ಬಂಧಿಸಿದ್ದಾರೆ. ಆಂಧ್ರ ಮೂಲದ ಮಹೇಶ್ ಬಂಧಿತ ಆರೋಪಿ. ಬೆಂಗಳೂರಿನ ಉತ್ತರ ವಿಭಾಗವನ್ನು ಟಾರ್ಗೆಟ್‌ ಮಾಡಿಕೊಂಡು ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ಸಂಜಯ್ ನಗರ ವ್ಯಾಪ್ತಿಯಲ್ಲಿ ಹೆಚ್ಚಾಗಿ ಆನ್ಲೈನ್ನಲ್ಲಿ ಹೆಚ್ಚಿನ ಬಾಡಿಗೆಯ ಆಮಿಷ ನೀಡಿ ಒಮ್ಮೆಗೆ ಮೂರ್ನಾಲ್ಕು ಕ್ಯಾಮೆರಾಗಳನ್ನು ಬಾಡಿಗೆಗೆ ಪಡೆಯುತ್ತಿದ್ದ. ಇತ್ತೀಚೆಗೆ ಮಹಾಲಕ್ಷ್ಮಿ ಲೇಔಟ್ನ ಮಹೇಶ್ ಎಂಬುವವರಿಂದ ಕಳೆದ ಸೆಪ್ಟೆಂಬರ್ನಲ್ಲಿ ಆರು ಲಕ್ಷ ಬೆಲೆ ಬಾಳುವ ನಿಕಾನ್, ಹಾಗೂ ಕ್ಯಾನನ್ ಕ್ಯಾಮರಾಗಳನ್ನು ಪಡೆದಿದ್ದ ನಂತರ […]

ಬಾಡಿಗೆಗೆ ಕಾರು ಪಡೆದು ಪರಾರಿ..ಆರೋಪಿ ಸೆರೆ!

Thursday, July 12th, 2018
rented-car

ಬೆಂಗಳೂರು: ಕಾರುಗಳನ್ನು ಬಾಡಿಗೆಗೆ ನೀಡುವ ಜೂಮ್ ಸಂಸ್ಥೆಗೆ ನಕಲಿ ದಾಖಲೆಗಳನ್ನು ನೀಡಿ, ಕಾರು ಪಡೆದ ವ್ಯಕ್ತಿಯೋರ್ವ ಕಾರು ಸಮೇತ ಪರಾರಿಯಾಗಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಪ್ರಕರಣದ ಬೆನ್ನತ್ತಿದ್ದ ಅಶೋಕನಗರ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಗರದಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಮಹೇಶ್ ನೂತನ್ ಕುಮಾರ್ ಎಂಬಾತ ಅಶೋಕ ನಗರದ ಜೂಮ್ ಸಂಸ್ಥೆಯಿಂದ ಐ 20 ಕಾರನ್ನು ಬಾಡಿಗೆಗೆ ಪಡೆದಿದ್ದ. ದಾಖಲೆಗಳನ್ನು ನೀಡುವಾಗ ಸಾಯಿಕುಮಾರ್ ಎಂಬ ಹೆಸರಿನ ನಕಲಿ ದಾಖಲೆಗಳನ್ನು ನೀಡಿದ್ದ ಎಂದು ಆರೋಪಿಸಲಾಗಿದೆ. ಮೂಲತಃ […]

ರಾಜ್ಯಮಟ್ಟದ ಟಿ-20 ಕ್ರಿಕೆಟ್ ಟೂರ್ನಿ: ಆಳ್ವಾಸ್‌ಗೆ ಪ್ರಶಸ್ತಿ

Friday, January 19th, 2018
alwas-cricket

ಮೂಡುಬಿದಿರೆ : ಬಾಳೆಹೊನ್ನೂರಿನಲ್ಲಿ ನಡೆದ ರಾಜ್ಯಮಟ್ಟದ ಟಿ-20 ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯಾಟದಲ್ಲಿ ಆಳ್ವಾಸ್ ಜೂನಿಯರ್ ತಂಡವು ಆಳ್ವಾಸ್ ಸೀನಿಯರ್ ತಂಡದ ಎದುರು ೩ ವಿಕೆಟ್‌ಗಳ ಜಯವನ್ನು ಗಳಿಸಿ ಪ್ರಶಸ್ತಿಯನ್ನು ಪಡೆಯಿತು. ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಹಾಗೂ ಬೆಸ್ಟ್ ಬೌಲರ್ ಪ್ರಶಸ್ತಿಯನ್ನು ಆಳ್ವಾಸ್ ಜೂನಿಯರ್ ತಂಡದ ಅಭಿಲಾಷ್ ಶೆಟ್ಟಿ ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ರಾಹುಲ್ ಇಂಜಲಿಕರ್ ಪಡೆದರು.ಆಳ್ವಾಸ್ ಸೀನಿಯರ್ ತಂಡದ ಲಾಲ್ ಸಚಿನ್ ಬೆಸ್ಟ್ ಬ್ಯಾಟ್ಸ್‌ಮನ್ ಪ್ರಶಸ್ತಿಯನ್ನು ಪಡೆದರು. ಸೆಮಿಫೈನಲ್ ಪಂದ್ಯಾಟದಲ್ಲಿ ಆಳ್ವಾಸ್ ಸೀನಿಯರ್ ತಂಡವು ಮಹೇಶ್ […]

ಯುವಕನಿಂದ ಶಿಕ್ಷಕಿ ಮೇಲೆ ಆಸಿಡ್ ದಾಳಿ

Saturday, February 1st, 2014
Acid Attack

ದಾವಣಗೆರೆ: ಹರಿಹರ ತಾಲೂಕಿನ ಕೊಕ್ಕನೂರಿನ ಖಾಸಗಿ ಶಾಲೆ ಶಿಕ್ಷಕಿ ಕವಿತಾ ಎಂಬುವರ ಮೇಲೆ ಮಹೇಶ್ ಎಂಬ ಯುವಕ ಶುಕ್ರವಾರ ಆ್ಯಸಿಡ್ ದಾಳಿ ನಡೆಸಿದ್ದಾನೆ. ಮುಖ, ಕೈ, ಕಣ್ಣುಗಳಿಗೆ ಆ್ಯಸಿಡ್ ಬಿದ್ದಿದ್ದು, ಎಡಗಣ್ಣಿಗೆ ತೀವ್ರ ಘಾಸಿಯಾಗಿದೆ. ತನ್ನನ್ನು ಪ್ರೀತಿಸುವಂತೆ ಆತ ಶಿಕ್ಷಕಿಯನ್ನು ಪೀಡಿಸುತ್ತಿದ್ದ ಎನ್ನಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಶಿಕ್ಷಕಿಯನ್ನು ದಾವಣಗೆರೆಯ ಎಸ್‌ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕವಿತಾ ಜತೆಗಿದ್ದ ಎಲ್‌ಕೆಜಿ ವಿದ್ಯಾರ್ಥಿ ರಘುವಿನ ಮೇಲೂ ಆ್ಯಸಿಡ್ ಬಿದ್ದಿದೆ. ಈ ಮಗುವಿಗೆ ಬಾಪೂಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕವಿತಾ ಮತ್ತು ಮಹೇಶ್ […]