ಮುಸುಕುಹಾಕಿ ಕಾರಿನಲ್ಲಿ ಬಂದು ಗೋವುಗಳ ಕಳ್ಳತನಕ್ಕೆ ಯತ್ನಿಸಿದ ತಂಡ

Sunday, March 27th, 2022
Cow Thief

ಕಡಬ : ಮಲಗಿದ್ದ ಗೋವುಗಳನ್ನು ಮುಸುಕುಧಾರಿ ತಂಡವೊಂದು ಕಳ್ಳತನಕ್ಕೆ ಯತ್ನಿಸಿದ ಘಟನೆ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಕುಕ್ಕೆ ಸುಬ್ರಹ್ಮಣ್ಯದ ಆಂಜನೇಯ ಗುಡಿ ಬಳಿ ಈ ಘಟನೆ ನಡೆದಿದ್ದು, ಮಾ.25ರಂದು ಸಿಸಿ ಕೆಮರಾ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಮಲಗಿದ್ದ ಗೋವನ್ನು ಕಾರಿನಲ್ಲಿ ಬಂದ ತಂಡ ಹಿಡಿಯಲು ಯತ್ನಿಸಿದ್ದು, ಗೋವು ತಪ್ಪಿಸಿಕೊಂಡಿರುವುದು ಸಿಸಿ ಕೆಮರಾದಲ್ಲಿ ಸೆರೆಯಾಗಿರುವ ಕೆಲವು ದೃಶ್ಯ ವೈರಲ್‌ ಆಗಿದೆ.

ಮನೆಮಂದಿಯನ್ನು ಕಟ್ಟಿಹಾಕಿ ಮುಸುಕುಧಾರಿಗಳ ತಂಡದಿಂದ ಚಿನ್ನಾಭರಣ ಮತ್ತು13 ಲಕ್ಷ ನಗದು ದರೋಡೆ

Friday, June 26th, 2020
Achuta Bhat

ಬೆಳ್ತಂಗಡಿ  : ರಾತ್ರಿ ಹೊತ್ತು ನಾಯಿ ಬೊಗಳಿದ ಶಬ್ದ ಕೇಳಿ ಬಾಗಿಲು ತೆಗೆದಾಗ ನಾಲ್ವರು ಮುಸುಕುಧಾರಿಗಳ ತಂಡವೊಂದು ಮನೆಯೊಳಗೆ ನುಗ್ಗಿ ಮನೆಮಂದಿಯನ್ನು ಕಟ್ಟಿಹಾಕಿ ಚಿನ್ನಾಭರಣ ದೋಚಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಬಳಿ ನಡೆದಿದೆ. ಧರ್ಮಸ್ಥಳ ಗ್ರಾಮದ ನೀರಚಿಲುವೆ ಬಳಿಯ ಅಚ್ಯುತ ಭಟ್ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಗುರುವಾರ  ಮಧ್ಯರಾತ್ರಿ ಸುಮಾರು 2.30 ರ ಸುಮಾರಿಗೆ ಮನೆಗೆ ನುಗ್ಗಿದ ಕಳ್ಳರು ಮನೆ ಮಂದಿಯನ್ನು‌ ಕಟ್ಟಿ ಹಾಕಿ ಸುಮಾರು 13 ಲಕ್ಷ ನಗದು ಸಹಿತ 40 ಪವನ್ […]