ಪ್ರಾಕೃತಿಕ ವಿಕೋಪ ಪರಿಹಾರ ವಿತರಣೆ ವಿಫಲ : ಈಶ್ವರ ಖಂಡ್ರೆ ಆರೋಪ

Thursday, December 26th, 2019
ishwar

ಮಡಿಕೇರಿ : ಕೊಡಗು ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿದ ಸಂತ್ರಸ್ತರಿಗೆ ಸೂಕ್ತ ಪರಿಹಾರ ಮತ್ತು ವಸತಿ ವ್ಯವಸ್ಥೆಗಳನ್ನು ಕಲ್ಪಸಿಕೊಡುವಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳೆರಡೂ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆರೋಪಿಸಿದ್ದಾರೆ. ಮಡಿಕೇರಿ ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಕ್ಷಣವೇ ಸಂತ್ರಸ್ತರಿಗೆ ಸೂಕ್ತ ಪರಿಹಾರ ಒದಗಿಸಲು ರಾಜ್ಯ ಸರ್ಕಾರ ಮುಂದಾಗದಿದ್ದಲ್ಲಿ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ […]

ಚಂದ್ರಗ್ರಹಣದಿಂದ ಮೈತ್ರಿ ಸರ್ಕಾರ ಕ್ಕೆ ಗಂಡಾಂತರ ; ಮುಖ್ಯಮಂತ್ರಿ ಆಪ್ತ ಜ್ಯೋತಿಷಿ ಭವಿಷ್ಯ

Monday, July 15th, 2019
Kumaraswamy

ಬೆಂಗಳೂರು:  ಜುಲೈ 17ರ ಚಂದ್ರಗ್ರಹಣ  ಮೈತ್ರಿ ಸರ್ಕಾರ ಕ್ಕೆ ಗಂಡಾಂತರ ತರಬಹುದು ಎಂದು ಮುಖ್ಯಮಂತ್ರಿ ಅವರ ಆಪ್ತ ಜ್ಯೋತಿಷಿಗಳು ಭವಿಷ್ಯ ನುಡಿದಿದ್ದಾರೆ. ಜುಲೈ 2ರಂದು ಸೂರ್ಯಗ್ರಹಣ ಸಂಭವಿಸಿದ್ದು, ಜು. 17ರಂದು ಚಂದ್ರಗ್ರಹಣವಾಗಲಿದೆ. ಅದೂ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿಕೇಳಿ ಮೇಷರಾಶಿಯವರು. ಈ ರಾಶಿಯವರಿಗೆ ಗಂಡಾಂತರವಿದೆ ಎಂಬುದು ದೇವೇಗೌಡರ ಕುಟುಂಬಕ್ಕೆ ಆತಂಕ ತಂದಿದೆ. ಈ ನಡುವೆ ಜುಲೈ ತಿಂಗಳಲ್ಲಿಯೇ ಮೈತ್ರಿ ಸರ್ಕಾರದ ವಿರುದ್ಧ ಬಂಡೆದ್ದು ಶಾಸಕರು ರಾಜೀನಾಮೆ ನೀಡುವ ಮೂಲಕ ಸರ್ಕಾರದ ಪತನಕ್ಕೆ ಮುಹೂರ್ತ ನಿಗದಿ ಮಾಡಿರುವುದು […]

ಶುರವಾಯ್ತು ನೋಡಿ, ಮೈತ್ರಿ ಸರ್ಕಾರದಲ್ಲಿ ಖಾತೆ ಹಂಚಿಕೆ ಹಗ್ಗಜಗ್ಗಾಟ

Saturday, May 26th, 2018
Kumara swamy

ಬೆಂಗಳೂರು : ಮೈತ್ರಿ ಸರ್ಕಾರ ನಡೆಸಿರುವ ಕಾಂಗ್ರೆಸ್- ಜೆಡಿಎಸ್ ನಾಯಕರು ಈಗಾಗಲೇ 22:12ರ ಅನುಪಾತದಲ್ಲಿ ಸಚಿವ ಸ್ಥಾನವನ್ನು ಪಡೆದಿದ್ದು, ಖಾತೆ ಹಂಚಿಕೆ ವಿಚಾರವಾಗಿ ಹಗ್ಗ ಜಗ್ಗಾಟ ನಡೆಸಿದ್ದಾರೆ. ಪ್ರಮುಖ ಖಾತೆ ನಮಗೇ ಬೇಕೆಂದು ದೇವೇಗೌಡರಿಗೆ ಈಗಾಗಲೇ ಕಾಂಗ್ರೆಸ್ಗೆ ಪಟ್ಟಿ ಕಳುಹಿಸಿದ್ದು, ಉಭಯ ಪಕ್ಷಗಳ ನಡುವೆ ಪೈಪೋಟಿ ಆರಂಭವಾಗಿದೆ. ಇನ್ನು ಹಣಕಾಸು, ಲೋಕೋಪಯೋಗಿ, ಸಮಾಜ ಕಲ್ಯಾಣ, ಇಂಧನ, ಗೃಹ ಇಲಾಖೆಗಳು ತಮಗೆ ಬಿಟ್ಟುಕೊಡುವಂತೆ ಕಾಂಗ್ರೆಸ್ ತಿಳಿಸಿದರೆ ಹಣಕಾಸು, ಲೋಕೋಪಯೋಗಿ, ಇಂಧನ ಖಾತೆಗೆ ಜೆಡಿಎಸ್ ಬೇಡಿಕೆ ಇಟ್ಟಿದೆ. ಸರ್ಕಾರ ರಚನೆಯಾಗಿನಿಂದ […]