ರೈತರ ಸಮಸ್ಯೆಗಳಿಗೆ ಪಕ್ಷಾತೀತವಾಗಿ ಸ್ಪಂದನೆ: ಡಾ. ಜಯಮಾಲಾ

Monday, December 24th, 2018
jayamala

ಉಡುಪಿ: ರೈತರು ದೇಶದ ಬೆನ್ನುಲುಬು, ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಪಕ್ಷಾತೀತವಾಗಿ ಪರಿಹರಿಸಲು ಎಲ್ಲಾ ಜನಪ್ರತಿನಿಧಿಗಳು ಪ್ರಯತ್ನಿಸಬೇಕು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ತಿಳಿಸಿದ್ದಾರೆ. ಅವರು ಭಾನುವಾರ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ , ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಹಾಗೂ ಕೃಷಿ ಸಂಬಂದಿತ ಇಲಾಖೆಗಳು ಹಾಗೂ ಕೃಷಿಕ ಸಮಾಜದ ವತಿಯಿಂದ ಆಯೋಜಿಸಿದ್ದ ಅಂತಾರಾಷ್ಟ್ರೀಯ ರೈತರ ದಿನಾಚರಣೆ ಮತ್ತು […]

ಬಿಜೆಪಿ ಶಾಸಕ ರಘುಪತಿ ಭಟ್ ಅಧ್ಯಕ್ಷತೆಯಲ್ಲಿ ನವೆಂಬರ್ 10 ರಂದು ಉಡುಪಿಯಲ್ಲಿ ಟಿಪ್ಪು ಜಯಂತಿ ಆಚರಣೆ

Wednesday, November 7th, 2018
Raghupathi

ಉಡುಪಿ : ದಕ್ಷಿಣ ಕನ್ನಡದಲ್ಲಿ ಶಾಸಕರು ಟಿಪ್ಪು ಜಯಂತಿಗೆ ವಿರೋಧ ವ್ಯಕ್ತ ಪಡಿಸುತ್ತಿದ್ದರೂ ಉಡುಪಿಯಲ್ಲಿ ಮಾತ್ರ ಬಿಜೆಪಿ ಶಾಸಕರ ಅಧ್ಯಕ್ಷತೆಯಲ್ಲಿಯೇ ಟಿಪ್ಪು ಜಯಂತಿ ಆಚರಣೆ ನಡೆಯಲಿದೆ. ಉಡುಪಿಯಲ್ಲಿ ನವೆಂಬರ್ 10 ರಂದು  ಶಾಸಕ ರಘುಪತಿ ಭಟ್ ಅಧ್ಯಕ್ಷತೆಯಲ್ಲಿ ಟಿಪ್ಪು ಜಯಂತಿ ನಡೆಯಲಿದೆ. ಟಿಪ್ಪು ಜಯಂತಿಯ ಬಗ್ಗೆ ತೀವೃ ವಿರೋಧ ವ್ಯಕ್ತ ಪಡಿಸುತ್ತಿರುವ ಬಿಜೆಪಿಯ ಸಂಸದೆ ಶೋಭಾ ಕರಂದ್ಲಾಜೆ ಮುಖ್ಯ ಅತಿಥಿಯಾಗಿದ್ದಾರೆ. ಅವರ ಜೊತೆ ಬಿಜೆಪಿ ಶಾಸಕ ರಾದ  ಕುಂದಾಪುರ ವಿಧಾನ ಸಭಾ ಕ್ಷೇತ್ರದ ಹಾಲಾಡಿ ಶ್ರೀನಿವಾಸ ಶೆಟ್ಟಿ, […]

ಉಡುಪಿ ಮಸೀದಿಯಲ್ಲಿ ರಘುಪತಿ ಭಟ್ ಮತಯಾಚನೆ

Friday, May 4th, 2018
raghupati-bhat

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಶಾಸಕ ಕೆ.ರಘುಪತಿ ಭಟ್ ಉಡುಪಿ ಜಾಮಿಯ ಮಸೀದಿಯ ಆವರಣದಲ್ಲಿ ಇಂದು ಜುಮಾ ನಮಾಝಿನ ಬಳಿಕ ಮತ ಯಾಚನೆ ಮಾಡಿದರು. ಮುಸ್ಲಿಮರ ಮತ ಬಿಜೆಪಿಗೆ ಅಗತ್ಯ ಇಲ್ಲ ಎಂಬ ಈಶ್ವರಪ್ಪ ಅವರ ಹೇಳಿಕೆ ಕುರಿತ ಸುದ್ದಿಗಾರ ಪ್ರಶ್ನೆಗೆ ಈ ವೇಳೆ ಉತ್ತರಿಸಿದ ರಘುಪತಿ ಭಟ್, ಮುಸ್ಲಿಮರ ಮತ ಬಿಜೆಪಿಗೆ ಅಗತ್ಯ ಇಲ್ಲ ಅಂತ ನಾನು ಎಲ್ಲೂ ಹೇಳಿಲ್ಲ. ಹಾಗೆ ಇದಿದ್ದರೆ ನಾನು ಇಂದು ಇಲ್ಲಿಗೆ ಬರುತ್ತಿರಲಿಲ್ಲ. ನಮಗೆ […]

ಪ್ರಮೋದ್ ಮಧ್ವರಾಜ್‌ರಿಂದ ಕಾರ್ಯಕರ್ತರ ನಿರ್ಲಕ್ಷ್ಯ : ರಘುಪತಿ ಭಟ್

Thursday, May 3rd, 2018
raghupathi-batt

ಉಡುಪಿ: ಪ್ರಮೋದ್ ಮಧ್ವರಾಜ್ ಶಾಸಕರಾಗಿದ್ದ ಅವಧಿಯಲ್ಲಿ ತೋರಿದ ಅಗೌರವ ಹಾಗೂ ನಿರ್ಲಕ್ಷದಿಂದ ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ವನ್ನು ತೊರೆದು ಬಿಜೆಪಿ ಸೇರ್ಪಡೆಗೊಳ್ಳುತ್ತಿದ್ದಾರೆ. ಇದು ಚುನಾವಣೆಗೆ ನಿಲ್ಲುವ ರಾಜಕೀಯ ನಾಯಕರಿಗೆ ಒಂದು ಪಾಠ ಎಂದು ಉಡುಪಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ರಘುಪತಿ ಭಟ್ ಹೇಳಿದ್ದಾರೆ. ಉಡುಪಿ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಬಿಜೆಪಿ ಸೇರ್ಪಡೆಗೊಳ್ಳುವ ಸಮಾರಂಭದಲ್ಲಿ ಅವರು ಮಾತನಾಡುತಿ ದ್ದರು. ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಮುಖಂಡ ಬಿರ್ತಿ ರಾಜೇಶ್ ಶೆಟ್ಟಿ ಮಾತನಾಡಿದರು. ವೇದಿಕೆಯಲ್ಲಿ […]

ಬಿಜೆಪಿ ಅಭ್ಯರ್ಥಿ ರಘುಪತಿ ಭಟ್ ನಾಮಪತ್ರ ಸಲ್ಲಿಕೆ

Tuesday, April 24th, 2018
raghupathi-bhat

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಶಾಸಕ ಕೆ.ರಘುಪತಿ ಭಟ್ ಇಂದು ನಾಮಪತ್ರ ಸಲ್ಲಿಸಿದರು. ಕರಂಬಳ್ಳಿ ವೆಂಕಟರಮಣ ದೇವಸ್ಥಾನ, ರಥಬೀದಿಯ ಭೂತರಾಜ ದೇವ ಸ್ಥಾನ, ಅನಂತೇಶ್ವರ ಹಾಗೂ ಚಂದ್ರವೌಳಿಶ್ವರ, ಶ್ರೀಕೃಷ್ಣ ಮಠ, ಮುಖ್ಯಪ್ರಾಣ ದರ್ಶನ, ಪರ್ಯಾಯ ಸ್ವಾಮೀಜಿಯ ಆಶೀರ್ವಾದ ಪಡೆದ ರಘುಪತಿ ಭಟ್, ಚಿತ್ತರಂಜನ್ ಸರ್ಕಲ್‌ನಲ್ಲಿ ನಡೆದ ಕಾರ್ಯಕರ್ತರ ಸಮಾವೇಶದ ಬಳಿಕ ಪಾದಯಾತ್ರೆಯ ಮೂಲಕ ಚುನಾವಣಾ ಕಚೇರಿಗೆ ಆಗಮಿಸಿದರು. ತನ್ನ ಪತ್ನಿ ಶಿಲ್ಪಾ ಜೊತೆ ಬಂದ ರಘುಪತಿ ಭಟ್, ಚುನಾವಣಾ ಕಚೇರಿ ಯಲ್ಲಿದ್ದ ತಾಯಿ […]

ಎದುರಾಳಿ ರಘುಪತಿ ಭಟ್ ತಾಯಿ ಕಾಲಿಗೆ ಬಿದ್ದ ಪ್ರಮೋದ್ ಮಧ್ವರಾಜ್

Monday, April 23rd, 2018
pramod-congress

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಸಚಿವ ಪ್ರಮೋದ್ ಮಧ್ವರಾಜ್ ಇಂದು ನಾಮಪತ್ರ ಸಲ್ಲಿಸಿದರು. ತಮ್ಮ ಅಪಾರ ಬೆಂಬಲಿಗರೊಂದಿಗೆ ಆಗಮಿಸಿದ ಮಧ್ವರಾಜ್ ಉಡುಪಿಯ ತಾಲೂಕು ಚುನಾವಣಾಧಿಕಾರಿ ಕೆಂಪೇಗೌಡ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ತಾಯಿ ಮನೋರಮಾ ಮಧ್ವರಾಜ್ ಜೊತೆ ಪ್ರಮೋದ್ ತಮ್ಮ ನಾಮಪತ್ರ ಸಲ್ಲಿಸಲು ಆಗಮಿಸಿದ್ದರು. ಕಾಂಗ್ರೆಸ್ ನಲ್ಲಿ ಶಾಸಕಿಯಾಗಿ, ಸಚಿವೆಯಾಗಿ ಬಳಿಕ ಬಿಜೆಪಿ ಸಂಸದೆಯಾಗಿದ್ದ ಮನೋರಮಾ ಮಧ್ವರಾಜ್ ಪುತ್ರ ಪ್ರಮೋದ್ ನಾಮಪತ್ರ ಸಲ್ಲಿಕೆ ವೇಳೆ ಹಾಜರಿದ್ದುದು ವಿಶೇಷವಾಗಿತ್ತು. ಅದಕ್ಕಿಂತಲೂ ವಿಶೇಷ ಎಂದರೆ ಪ್ರಮೋದ್ ಮಧ್ವರಾಜ್ […]

ಉಡುಪಿ ವಿದಾನಸಭಾ ಚುನಾವಣೆ : ಸುಧಾಕರ್ ಶೆಟ್ಟಿಯವರಿಗೆ ಟಿಕೆಟ್

Saturday, April 6th, 2013
Sudhakar Shetty

ಉಡುಪಿ : ಹತ್ತು ವರ್ಷಗಳ ಹಿಂದೆ ಉಡುಪಿ ಶಾಸಕ ರಘುಪತಿ ಭಟ್ ರಿಂದ ಟಿಕೇಟ್ ವಂಚಿತರಾಗಿದ್ದ  ಸುಧಾಕರ್ ಶೆಟ್ಟಿಯವರಿಗೆ ಇದೀಗ ರಘುಪತಿ ಭಟ್ ರ ಕಾರಣದಿಂದಲೇ ಉಡುಪಿ ವಿದಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷ ಟಿಕೆಟ್ ನೀಡಿದೆ. ರಾಸಲೀಲೆ ಪ್ರಕರಣದ ಹಿನ್ನಲೆಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ನಿರಾಕರಿಸಿದ್ದ  ಉಡುಪಿ ಶಾಸಕ ರಘುಪತಿ ಭಟ್  ಕಾರ್ಯಕರ್ತರ ಒತ್ತಡಕ್ಕೆ ಮಣಿದು ಪಕ್ಷ ಅವರಿಗೆ ಸ್ಪರ್ಧಿಸಲು ಅವಕಾಶ ನೀಡಿದರೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದ್ದರು. ಆದರೆ ಇದೀಗ ಪಕ್ಷ ರಘುಪತಿ ಭಟ್ ಗೆ ಸ್ಪರ್ಧಿಸಲು ಅವಕಾಶ […]