ಶಿವಕುಮಾರ ಸ್ವಾಮೀಜಿ ಪೂರ್ಣ ಗುಣಮುಖರಾದ ಬಳಿಕ ಭಕ್ತರಿಗೆ ದರ್ಶನಕ್ಕೆ ವ್ಯವಸ್ಥೆ: ಜಿ. ಪರಮೇಶ್ವರ್

Monday, December 24th, 2018
g-parameshwara

ತುಮಕೂರು: ಡಾಕ್ಟರ್ ಶಿವಕುಮಾರ ಸ್ವಾಮೀಜಿ ಆರೋಗ್ಯವಾಗಿದ್ದಾರೆ. ಪೂರ್ಣ ಗುಣಮುಖರಾದ ಬಳಿಕ ಭಕ್ತರಿಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಅಲ್ಲಿಯವರೆಗೂ ಭಕ್ತಾದಿಗಳು ಸಹಕರಿಸಬೇಕು ಎಂದು ಉಪಮುಖ್ಯಮಂತ್ರಿ ಡಾಕ್ಟರ್ ಜಿ. ಪರಮೇಶ್ವರ್ ತಿಳಿಸಿದರು. ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ನಂತರ ಮಾತನಾಡಿದ ಡಿಸಿಎಂ, ಶ್ರೀಗಳು ಆರೋಗ್ಯವಾಗಿದ್ದಾರೆ. ಸಿದ್ದಗಂಗಾ ಶ್ರೀಗಳು ಆಸ್ಪತ್ರೆಯಿಂದ ಮರಳಿ ಬಂದ ಬಳಿಕ ಇದೇ ಮೊದಲ ಬಾರಿಗೆ ಮಠಕ್ಕೆ ಭೇಟಿ ಕೊಟ್ಟಿದ್ದೇನೆ. ಶ್ರೀಗಳ ಆರೋಗ್ಯ ಸುಧಾರಿಸಿದೆ. ಎಲ್ಲಾ ಹಾರ್ಮೋನ್ಸ್ ನಾರ್ಮಲ್ ಆಗಿ ಕೆಲಸ […]

ರಾಮಲಿಂಗಾರೆಡ್ಡಿ, ಬಿ.ಸಿ.ಪಾಟೀಲ್​​ ಅಸಮಾಧಾನ ಸ್ವಾಭಾವಿಕ: ಪರಮೇಶ್ವರ್

Saturday, December 22nd, 2018
parameshwar

ದೇವನಹಳ್ಳಿ: ಸಚಿವ ಸ್ಥಾನ ಹಂಚಿಕೆ ವೇಳೆ ಸ್ವಾಭಾವಿಕವಾಗಿ ಅಸಮಾಧಾನ ಇದ್ದೆ ಇರುತ್ತೆ. ಇವೆಲ್ಲವೂ ಸರಿ ಹೋಗುತ್ತೆ ಎಂದು ಡಿಸಿಎಂ ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು. ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಡಿಸಿಎಂ ಪರಮೇಶ್ವರ್ ಏರ್ಪೋರ್ಟ್ನಲ್ಲಿ ಮಾತನಾಡಿ, ವರಿಷ್ಠರು ಆರು ಸ್ಥಾನಗಳ ಜತೆಗೆ ಇಬ್ಬರ ಹೆಸರನ್ನು ಡ್ರಾಪ್ ಮಾಡಿ ಎಂಟು ಶಾಸಕರಿಗೆ ಸಚಿವ ಸ್ಥಾನ ನೀಡಲು ಸಮ್ಮತಿಸಿದ್ದಾರೆ.. ರಾಮಲಿಂಗಾರೆಡ್ಡಿ ಹಾಗೂ ಬಿಸಿ ಪಾಟೀಲ್ಗೆ ಸಚಿವ ಸ್ಥಾನ ತಪ್ಪಿದ ಹಿನ್ನೆಲೆ ಅವರು ಅಸಮಾಧಾನ ವ್ಯಕ್ತಪಡಿಸುವುದು ಸಾಮಾನ್ಯ. ಇವೆಲ್ಲವೂ ಸರಿ ಹೋಗುತ್ತದೆ ಎಂದರು. ಸಚಿವ […]

ಯಾವುದೇ ನಾಯಕರ ಮನೆ ಬಾಗಿಲಿಗೆ ಹೋಗಿ ಸಚಿವ ಮಾಡಿ ಅಂತ ಕೇಳಿಲ್ಲ: ರಾಮಲಿಂಗಾರೆಡ್ಡಿ

Wednesday, June 13th, 2018
ramlinga-reddy

ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶ ಪ್ರಕಟವಾದ ಹಿನ್ನೆಲೆ ರಾಮಲಿಂಗಾರೆಡ್ಡಿ ಮತ್ತು ಸೌಮ್ಯಾ ರೆಡ್ಡಿ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಮೊದಲಿಗೆ ಎಲ್ಲ ಕಾರ್ಯಕರ್ತರಿಗೂ ಧನ್ಯವಾದ ಸಲ್ಲಿಸಿದರು. ಈ ವೇಳೆ ರಾಮಲಿಂಗಾರೆಡ್ಡಿ ಮಾತನಾಡಿ, ಎಲ್ಲ ಪಕ್ಷಗಳು ಗೆಲ್ಲುವ ದೃಷ್ಟಿಯಿಂದ ಅಭ್ಯರ್ಥಿ ಹಾಕ್ತಾರೆ. ನಾವು ಗೆಲ್ಲುವ ಉದ್ದೇಶದಿಂದ ಸ್ಪರ್ಧೆ ಮಾಡಿದ್ವಿ ಅಂತ ಹೇಳಿದರು. ಕುಮಾರಸ್ವಾಮಿ ಮತ್ತು ದೇವೇಗೌಡರಿಗೆ ಹಾಗೂ ಜಯನಗರ ಕ್ಷೇತ್ರದ ಪ್ರತಿ ಕಾಂಗ್ರೆಸ್ ನಾಯಕರಿಗೆ, ಸ್ಥಳೀಯ ಕಾರ್ಪೋರೇಟರ್‌ಗೆ ಧನ್ಯವಾದಗಳನ್ನ ತಿಳಿಸಿ, ಕೊಟ್ಟ ಆಶ್ವಾಸನೆ ಈಡೇರಿಸುತ್ತೇವೆ. ನಮ್ದೇ ಸಮೀಶ್ರ ಸರ್ಕಾರ […]

ಸುಳ್ಳು ಹೇಳುವುದು ಬಿಜೆಪಿಯವರ ಹುಟ್ಟು ಗುಣ: ರಾಮಲಿಂಗಾರೆಡ್ಡಿ ವಾಗ್ದಾಳಿ

Tuesday, March 6th, 2018
ramlinga-reddy

ಮಂಗಳೂರು: ಬಿಜೆಪಿಯವರು ವಿನಾಕಾರಣ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಬಿಜೆಪಿಯವರಿಗೆ ಸುಳ್ಳು ಹೇಳುವುದು ಹುಟ್ಟು ಗುಣವೆಂದು ರಾಜ್ಯದ ಗೃಹ ಸಚಿವ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದರು. ಮುಲ್ಕಿ -ಹಳೆಯಂಗಡಿಯ ಓಂ ಅಪಾರ್ಟ್‌ಮೆಂಟ್‌ ಸಭಾಂಗಣದಲ್ಲಿ ಜರುಗಿದ ಮೂಡಬಿದ್ರಿ ಕ್ಷೇತ್ರದ ಮೂಲ್ಕಿ ಬ್ಲಾಕ್ ಕಾಂಗ್ರೆಸ್ಸಿನ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕಳೆದ ಐದು ವರ್ಷಗಳಲ್ಲಿ ರಾಜ್ಯದ 30 ಜಿಲ್ಲೆಗಳಲ್ಲಿ ಶಿಕ್ಷಣ, ರಸ್ತೆ, ನೀರಾವರಿ ಸೇರಿದಂತೆ […]

ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕರು

Monday, February 5th, 2018
ramalinga-reddy

ಬೆಂಗಳೂರು : ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಮೊದಲು ಅಪರಾಧ ಪ್ರಕರಣಗಳ ಸಭೆ ಮಾಡಲಿ ಆನಂತರ ಕರ್ನಾಟಕದ ವಿರುದ್ಧ ಮಾತನಾಡಲಿ ಎಂದು ಸಚಿವ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಅಪರಾಧಗಳ ರಾಜ್ಯ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದರು. ನರೇಂದ್ರ ಮೋದಿ ಅವರು 13 ವರ್ಷ ಗುಜರಾತ್‍ನಲ್ಲಿ ಮುಖ್ಯಮಂತ್ರಿಯಾಗಿದ್ದರು. ಗೋಧ್ರಾ ದುರಂತದಲ್ಲಿ ಕರಸೇವಕರು ಸುಟ್ಟು ಕರಕಲಾದರು. ಆಗ ಮೋದಿ ಅವರಿಗೆ ಜವಾಬ್ದಾರಿ ಇರಲಿಲ್ಲವೇ ಎಂದು ಪ್ರಶ್ನಿಸಿದರು. ಗುಜರಾತ್‍ನಲ್ಲಿ […]

ಕೇಂದ್ರ ಸಚಿವ ಜಾವಡೇಕರ್‌ ಹೇಳಿಕೆಗೆ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು

Wednesday, January 24th, 2018
jawadekar

ಮಂಗಳೂರು: ದೇಶದಲ್ಲಿಯೇ ಕಾಂಗ್ರೆಸ್ ಸರ್ಕಾರ ದರೋಡೆ, ದೌರ್ಜನ್ಯದಲ್ಲಿ ಎರಡನೇ ಸ್ಥಾನದಲ್ಲಿದೆ ಎಂಬ ಬಿಜೆಪಿ ಹೇಳಿಕೆಗೆ ಗೃಹ ಸಚಿವ ರಾಮಲಿಂಗಾರೆಡ್ಡಿ ತಿರುಗೇಟು ನೀಡಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿದ್ದ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿಕೆಗೆ ಪ್ರತಿಕ್ರಿಯಿಸಿದರು. ಕ್ರೈಂ ರೇಟ್‌ನಲ್ಲಿ ಕರ್ನಾಟಕ ಹತ್ತನೇ ಸ್ಥಾನದಲ್ಲಿದೆ. ಆದರೆ, ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಅಪರಾಧ ಪ್ರಕರಣ ಹೆಚ್ಚಿವೆ. ಕರ್ನಾಟಕದ ಬಗ್ಗೆ ಮತನಾಡುವ ಮೊದಲು ಉತ್ತರ ಪ್ರದೇಶದ ಸ್ಥಿತಿಯನ್ನು ಅವರು ಅರಿಯಬೇಕಿದೆ ಎಂದು ಟಾಂಗ್‌ ನೀಡಿದರು. […]

ಬಿಜೆಪಿ ಒಂದು ಡ್ರಾಮಾ ಕಂಪನಿ…ಮೋದಿ ಅದರ ಮಾಲೀಕ, ಶಾ ಮ್ಯಾನೇಜರ್‌

Friday, January 12th, 2018
narendra-modi

ಮಂಗಳೂರು: ಬಿಜೆಪಿಯೊಂದು ಡ್ರಾಮಾ ಕಂಪನಿ. ನರೇಂದ್ರ ಮೋದಿ ಅದರ ಮಾಲೀಕರಾದರೆ, ಅಮಿತ್ ಶಾ ಮ್ಯಾನೇಜರ್ ಎಂದು ಗೃಹಸಚಿವ ರಾಮಲಿಂಗಾರೆಡ್ಡಿ ಟೇಕಿಸಿದ್ದಾರೆ. ನಗರದ ಶಕ್ತಿನಗರದಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ವಸತಿ ಸಂಕೀರ್ಣಕ್ಕೆ ಕಟ್ಟಡ ನಿರ್ಮಾಣ ಶಿಲಾನ್ಯಾಸ, ಫಲಕ ಅನಾವರಣಗೊಳಿಸಿದ ಬಳಿಕ ಮಾತನಾಡಿದರು. ಈಸ್ಟ್ ಇಂಡಿಯಾ ಕಂಪನಿ ಕೂಡಾ ದೇಶವನ್ನು ಇದೇ ರೀತಿ ಕೊಳ್ಳೆ ಹೊಡೆದಿತ್ತು. ಬಿಜೆಪಿಯವರು ಹಣ ನೀಡಿ ಮತದಾರರನ್ನು ಖರೀದಿಸುವ ಭ್ರಮೆಯಲ್ಲಿದ್ದಾರೆ. ಆದರೆ, ಕರ್ನಾಟಕದ ಮತದಾರರು ಸ್ವಾಭಿಮಾನಿಗಳು. ಬಿಜೆಪಿ ನಾಟಕ ಇಲ್ಲಿ ನಡೆಯಲ್ಲ. ಇದನ್ನು ಪ್ರಧಾನಿ ಮೋದಿ […]

ದೇಶದಲ್ಲೇ ಅಗ್ರ ಸಾರಿಗೆ ಸಂಸ್ಥೆ ಕೆಎಸ್‍ಆರ್‍ಟಿಸಿ- ಸಾರಿಗೆ ಸಚಿವ

Saturday, July 15th, 2017
Sullia Bus

ಮಂಗಳೂರು  : ಕೆಎಸ್‍ಆರ್‍ಟಿಸಿ ಸಾರಿಗೆಯು ದೇಶದ ಸಾರ್ವಜನಿಕ ಸಾರಿಗೆ ಸಂಸ್ಥೆಗಳಲ್ಲೇ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಕಾರ್ಯಾಚರಿಸುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಅವರು ಶನಿವಾರ ಸುಳ್ಯದಲ್ಲಿ ನೂತನ ಕೆಎಸ್‍ಆರ್‍ಟಿಸಿ ಡಿಪೋ ಉದ್ಘಾಟಿಸಿ ಮಾತನಾಡಿದರು. ಪಾರದರ್ಶಕತೆ ಆಡಳಿತ ಹಾಗೂ ಪ್ರಯಾಣಿಕರ ಹಿತಾಸಕ್ತಿಯನ್ನು ಗಮನದಲ್ಲಿರಿಸಿ ಬಸ್‍ಗಳ ಓಡಾಟಕ್ಕೆ ಕೆಎಸ್‍ಆರ್‍ಟಿಸಿ ಆದ್ಯತೆ ನೀಡುತ್ತಿದೆ. ಕಳೆದ ಎರಡು ವರ್ಷಗಳಲ್ಲಿ ಸಂಸ್ಥೆಯ ಜನಪರ ಸೇವೆಗಳಿಗಾಗಿ 100ಕ್ಕೂ ಅಧಿಕ ಪ್ರಶಸ್ತಿಗಳು ದೊರೆತಿದ್ದು, ಮುಂದಿನ ದಿನಗಳಲ್ಲಿ ಸಾರಿಗೆ ಸಂಸ್ಥೆಯನ್ನು ಇನ್ನಷ್ಟು ಪ್ರಯಾಣಿಕ ಸ್ನೇಹಿಯಾಗಿಸಲು […]