ಕಾಟಿಪಳ್ಳದಲ್ಲಿ ಯುವಕನನ್ನು ತಲವಾರ್‌ನಿಂದ ಕಡಿದು ಪರಾರಿಯಾದ ತಂಡ

Wednesday, February 2nd, 2022
Mohammed Anas

ಮಂಗಳೂರು : ನಗರದ ಹೊರ ವಲಯದ ಸುರತ್ಕಲ್‌ನ ಕಾಟಿಪಳ್ಳ 6ನೇ ಬ್ಲಾಕ್‌ನಲ್ಲಿ ತಂಡವೊಂದು ಮಹಮ್ಮದ್ ಅನಾಸ್ (29) ಎಂಬವರನ್ನು ತಲವಾರ್‌ನಿಂದ ಕಡಿದು ಕೊಲೆಗೆ ಯತ್ನಿಸಿದೆ. ಮನೆ ಬಾಡಿಗೆ ವಿಚಾರದಲ್ಲಿ ಚಾರು, ರವೂಫ್, ಅಕ್ಕಿ, ಮುಸ್ತಫಾ ಮತ್ತಿತರರ ತಂಡ ಮಂಗಳವಾರ ರಾತ್ರಿ ತಲವಾರ್‌ನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿ ಪರಾರಿಯಾಗಿದೆ. ಕೈ, ತಲೆ ಹಾಗು ಕುತ್ತಿಗೆಯ ಭಾಗಕ್ಕೆ ಗಂಭೀರ ಗಾಯಗೊಂಡ ಮಹಮ್ಮದ್ ಅನಾಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಾರು ಮತ್ತು ರವೂಫ್ ವಾಸವಾಗಿದ್ದ ಬಾಡಿಗೆ […]

ಎನ್ಐಟಿಕೆ ವಿದ್ಯಾರ್ಥಿ ಸಾಲದ ಬಾಧೆಯಿಂದ ಆತ್ಮಹತ್ಯೆ

Sunday, December 26th, 2021
sourabh yadav

ಮಂಗಳೂರು :  ಎನ್ಐಟಿಕೆ ವಿದ್ಯಾರ್ಥಿಯೊಬ್ಬ ಸಾಲದ ಬಾಧೆಯಿಂದಾಗಿ ಆತ್ಮಹತ್ಯೆಗೆ ಶರಣಾದ ಘಟನೆ ಸುರತ್ಕಲ್ ನಲ್ಲಿ ನಡೆದಿದೆ. ಬಿಹಾರದ ಪಾಟ್ನಾ ಮೂಲದ ಸೌರವ್ ಕುಮಾರ್ ಯಾದವ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಎನ್ಐಟಿಕೆ ಕಾಲೇಜಿನಲ್ಲಿ ಬಿಟೆಕ್ನಲ್ಲಿ  ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ನಲ್ಲಿ ಎರಡನೇ ವರ್ಷದ ವ್ಯಾಸಂಗ ಮಾಡುತ್ತಿದ್ದ. ಸೌರಭ್, ತನ್ನ ಕೋಣೆಯಲ್ಲೇ ನೇಣು ಬಿಗಿದುಕೊಂಡಿದ್ದಾನೆ. ವಿದ್ಯಾಭ್ಯಾಸಕ್ಕಾಗಿ ಶೈಕ್ಷಣಿಕ ಸಾಲ ಪಡೆದಿದ್ದೆ ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದೇನೆ ಎಂಬುದಾಗಿ ಡೆತ್ನೋಟ್ನಲ್ಲಿ ಬರೆದಿದ್ದ. ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. […]

ಸುರತ್ಕಲ್ : ಹಿಂದೂ ಎಂದು ನಂಬಿಸಿ ಮುಸ್ಲಿಂ ಯುವಕನ ಲವ್ ಜಿಹಾದ್

Tuesday, October 26th, 2021
ibrahim

ಮಂಗಳೂರು :  ಬೈಕಂಪಾಡಿಯ ಮೊಬೈಲ್‌ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಧರ್ಮದ ಯುವಕ ತಾನು ಹಿಂದೂ ಯುವಕ ಎಂದು ನಂಬಿಸಿ ಯುವತಿಯೋರ್ವಳಿಗೆ ಲವ್ ಜಿಹಾದ್ ಹೆಸರಿನಲ್ಲಿ ಮೋಸ ಮಾಡಿದ್ದಾನೆ ಎಂದು ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರವಾಗುವಂತೆ ಪೀಡಿಸಿ ಇದೀಗ ಇಬ್ಬರ ಜೊತೆಗಿನ ಫೋಟೋಗಳನ್ನು ತೋರಿಸಿ ಮತಾಂತರವಾಗದಿದ್ದಲ್ಲಿ ಅತ್ಯಾಚಾರವೆಸಗುವುದಾಗಿ ಬೆದರಿಕೆಯೊಡ್ದಿದ್ದು ಯುವತಿಯ ಜೊತೆ ಅಸಭ್ಯ ರೀತಿಯಲ್ಲಿ ವರ್ತಿಸಿ ಕಿರುಕುಳ ನೀಡುತ್ತಿರುತ್ತಿರುವುದಾಗಿ ಯುವತಿ ದೂರಿದ್ದಾಳೆ. ಇಬ್ರಾಹಿಮ್ ಎಂಬ ಮುಸ್ಲಿಂ ಯುವಕ ತನ್ನ ಧರ್ಮವನ್ನು ಮರೆಸಿ […]

ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ತಂದೆಯಿಂದ ನಿರಂತರ ಅತ್ಯಾಚಾರ

Thursday, June 17th, 2021
Girl Raped

ಮಂಗಳೂರು: ಇಬ್ಬರು ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳ ಮೇಲೆ 3 ವರ್ಷಗಳಿಂದ ಅತ್ಯಾಚಾರ ನಡೆಸುತ್ತಿದ್ದ ಸುರತ್ಕಲ್ ನ ವಿಕೃತ ಕಾಮುಕ ತಂದೆಯನ್ನು  ಪೊಲೀಸರು ಬಂಧಿಸಿದ್ದಾರೆ. ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಜಳಿಗೆ ಸದಾ ಹೊಡೆದು ಕಿರುಕುಳ ನೀಡುತ್ತಿದ್ದ ಈತ ಸಮಯ ಸಾಧಿಸಿ ಮಕ್ಕಳ ಮೇಲೆಯೇ ಅತ್ಯಾಚಾರ ನಡೆಸುತ್ತಿದ್ದ. ಇತ್ತೀಚೆಗೆ ಪತ್ನಿ ಮತ್ತು ಹೆಣ್ಣುಮಕ್ಕಳಿಗೆ ಹಲ್ಲೆ ನಡೆಸಿದ್ದು ಅವರು ತವರು ಮನೆಗೆ ತೆರಳಿದ್ದರು. ಈ ಸಂದರ್ಭ ಹೆಣ್ಣುಮಕ್ಕಳು ಮಾವನ ಬಳಿ ಈ ವಿಚಾರ ಹೇಳಿಕೊಂಡಿದ್ದರು. ಬಳಿಕ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ […]

ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಂಬುಲೆನ್ಸ್ ನೀಡಿದ ಕ್ರೆಡಾಯ್‌ ಮಂಗಳೂರು

Friday, May 14th, 2021
credai

ಮಂಗಳೂರು  : ಕ್ರೆಡಾಯ್ ಮಂಗಳೂರು ಘಟಕವು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಜನತೆಗೆ ಸೇವೆ ಸಲ್ಲಿಸುವ ಉದ್ದೇಶದಿಂದ ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆಂಬುಲೆನ್ಸ್ ಅನ್ನು ನೀಡಿದೆ. ಶಾಸಕ ಡಾ.ವೈ.ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಉಪಮೇಯರ್ ಸುಮಂಗಲಾ ರಾವ್, ಆಯುಕ್ತ ಅಕ್ಷಯ್ ಶ್ರೀಧರ್ ಅವರ ಉಪಸ್ಥಿತಿಯಲ್ಲಿ ಕ್ರೆಡಾಯ್ ಅಧ್ಯಕ್ಷ ಪುಪ್ಪರಾಜ್ ಜೈನ್ ಅವರು ಆಂಬುಲೆನ್ಸ್ ವಾಹನವನ್ನು ಹಸ್ತಾಂತರಿಸಿದರು. ಕೋವಿಡ್ 19ರ ಸಂಕಷ್ಟದ ಅವಧಿಯಲ್ಲಿ ಸಾರ್ವಜನಿಕರಿಗೆ ಈ ಆಂಬುಲೆನ್ಸ್ ಉಚಿತವಾಗಿ ಸೇವೆ ನೀಡಲಿದೆ. ಈ ವಾಹನದ […]

ನಾಯಿಯನ್ನು ಬೈಕ್‌ನ ಹಿಂಬದಿಗೆ ಕಟ್ಟಿ ರಸ್ತೆಯುದ್ದಕ್ಕೂ ಎಳೆದುಕೊಂಡು ಹೋದ ದುರುಳರು

Friday, April 23rd, 2021
Dog Draging

ಮಂಗಳೂರು : ನಾಯಿಯನ್ನು ಬೈಕ್‌ನ ಹಿಂಬದಿಗೆ ಕಟ್ಟಿ  ರಸ್ತೆಯುದ್ದಕ್ಕೂ ಎಳೆದುಕೊಂಡು ಹೋಗಿರುವ ಅಮಾನುಷ ಘಟನೆ ಎನ್‌ಐಟಿಕೆ ಸುರತ್ಕಲ್‌ ಮುಖ್ಯ ರಸ್ತೆಯಲ್ಲಿ ನಡೆದಿದೆ. ಪ್ರಸ್ತುತ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು ನಾಯಿಗೆ ಹಿಂಸೆ ನೀಡಿ ಸಂತೋಷ ಪಡುವ ಈ ಕಿಡಿಗೇಡಿಗಳ ವಿರುದ್ದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಘಟನೆಯು 2021 ರ ಏಪ್ರಿಲ್ 15 ರಂದು ನಡೆದಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮಂಗಳೂರು ಡಿಸಿಪಿ ಹರಿರಾಮ್ ಶಂಕರ್, “ಈ ಪ್ರಕರಣದ ಬಗ್ಗೆ ಪರಿಶೀಲನೆ […]

ಸುರತ್ಕಲ್‌ ಸಮುದ್ರ ತೀರದಲ್ಲಿ ಕೆಟ್ಟು ನಿಂತ ಡ್ರಜ್ಜರ್ ನಲ್ಲಿ ಕಾವಲುಗಾರನ ಶವ

Monday, April 5th, 2021
dredger

ಮಂಗಳೂರು : ಸುರತ್ಕಲ್‌ನ ಸಮುದ್ರ ತೀರದಲ್ಲಿ ಕೆಟ್ಟು ನಿಂತ ಡ್ರಜ್ಜರ್ ನಲ್ಲಿ ಕಾವಲುಗಾರನ ಶವ ಪತ್ತೆಯಾಗಿದೆ. ಸುರತ್ಕಲ್‌ನ ಗುಡ್ಡಗಾಡು ಕೊಪ್ಲ ಬಳಿಯ ಸಮುದ್ರದಲ್ಲಿ ಕೆಟ್ಟು ನಿಂತ ಡ್ರಜ್ಜರ್ ಭಗವತಿ ಪ್ರೇಮ್ ನಲ್ಲಿ ಶವ ಪತ್ತೆಯಾಗಿದೆ. ಈ ಡ್ರಜ್ಜರ್ ಒಡೆಯಲು ಕಂಪನಿಯೊಂದು ಗುತ್ತಿಗೆ ಪಡೆದಿದೆ. ಇದನ್ನು ನೋಡಿಕೊಳ್ಳಲು ಕಾವಲುಗಾರರನ್ನು ನೇಮಿಸಲಾಗಿತ್ತು. ಈ ಕಾವಲುಗಾರರಲ್ಲಿ ಉತ್ತರ ಕರ್ನಾಟಕ ಮೂಲದ ಶಂಕರ್ (32) ಎಂಬುವರು ರಾತ್ರಿ ಪಾಳಿ ಕೆಲಸ ಮಾಡುತ್ತಿದ್ದರು. ಆದರೆ, ಇಂದು ಬೆಳಗ್ಗೆ ಡ್ರಜ್ಜರ್ನಲ್ಲಿ ಅವರ ಶವ ಪತ್ತೆಯಾಗಿದೆ. ಈ ಸಂಬಂಧ ಸುರತ್ಕಲ್ ಠಾಣಾ […]

ಸುರತ್ಕಲ್: ಪ್ರಯಾಣಿಕನ ಜೀವ ಉಳಿಸಲು ಆಸ್ಪತ್ರೆ ಅಲೆದಾಡಿದ ಬಸ್ ನಿರ್ವಾಹಕ

Friday, November 20th, 2020
Ganesh

ಮಂಗಳೂರು  : ತನ್ನ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕ ಜೀವ ಉಳಿಸಲು ನಿರ್ವಾಹಕನೋರ್ವ ಆಸ್ಪತ್ರೆ ಸೇರಿಸಿ ಚಿಕಿತ್ಸೆ ಕೊಡಿಸಲು ಸ್ವತಹ ಮುಂದಾಗಿ ಮಾನವೀಯತೆ ಮೆರೆದಿದ್ದಾರೆ. ಗಣೇಶ್ ಅವರು ಕಳೆದ  ನವಂಬರ್ 16 ರಂದು ಬೆಳಗ್ಗೆ ಎಂದಿನಂತೆ  ಬಜಪೆ ಕೈಕಂಬ ಮಾರ್ಗವಾಗಿ ಸಂಚರಿಸುವ ಶಾನ್ ಎಂಬ ಸರ್ವಿಸ್ ಬಸ್ ನಲ್ಲಿ ತನ್ನ ಕರ್ತವ್ಯ ನಿರ್ವಹಿಸುತ್ತಿದ್ದರು. ಆ ದಿನ ಪ್ರಯಾಣಿಸುತ್ತಿದ್ದ ಉತ್ತರಪ್ರದೇಶದ ವಾರಣಾಸಿ ನಿವಾಸಿ ರಾಜೇಶ್ ಚೌಹಾನ್ (40) ಸುರತ್ಕಲ್ ಸಮೀಪದ ಕಾಟಿಪಳ್ಳ ಬಳಿ ದಿಢೀರ್ ಅಸ್ವಸ್ಥಗೊಂಡು ಕುಸಿದು ಬಿದ್ದರು.ತಕ್ಷಣ ಗಣೇಶ್ […]

ಮಠದಕೆರೆಯಲ್ಲಿ ಸ್ನೇಹಿತರೊಂದಿಗೆ ಈಜಲು ಹೋದ ಯುವಕ ಮೃತ್ಯು

Monday, November 9th, 2020
Matadakere

ಮಂಗಳೂರು : ಬೆಳುವಾಯಿ ಗ್ರಾಪಂ ವ್ಯಾಪ್ತಿಯ ಮಠದಕೆರೆಯಲ್ಲಿ ಸ್ನೇಹಿತರೊಂದಿಗೆ ಈಜಲು ಹೋದ ಯುವಕನೊಬ್ಬ ಮುಳುಗಿ ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ. ಸುರತ್ಕಲ್ ಸಮೀಪದ ಕಾಟಿಪಳ್ಳ ನಿವಾಸಿ ನಿಹಾಲ್ ಶಾ ( 20 ) ಮೃತಪಟ್ಟ ಯುವಕ. ನಿಹಾಲ್ ಶಾ ತನ್ನ ಏಳು ಮಂದಿ ಸ್ನೇಹಿತರೊಡನೆ ಭಾನುವಾರ ಸಾಯಂಕಾಲ ಮಠದಕೆರೆಗೆ ಈಜಲು ಬಂದಿದ್ದ. ಈಜುವಾಗ ಏಕಾಏಕಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಬೆಳುವಾಯಿಯ ಅಂಥೋಣಿ ಎಂಬುವರು ನಿಹಾಲ್ ಶಾ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಈ ಸಂಬಂಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ […]

ಸುರತ್ಕಲ್ ಅಪಾರ್ಟ್‌ಮೆಂಟ್‌ನಲ್ಲಿ ದರೋಡೆ, ನಾಲ್ವರು ಆರೋಪಿಗಳ ಬಂಧನ

Tuesday, September 22nd, 2020
VikasKumar

ಮಂಗಳೂರು : ಅಪಾರ್ಟ್‌ಮೆಂಟ್‌ನಲ್ಲಿ  ಯಾರು ಇಲ್ಲದೆ ಇರುವುದನ್ನು ಗಮನಿಸಿ ಸುರತ್ಕಲ್ ಇಡ್ಯಾದಲ್ಲಿ  ಆಗಸ್ಟ್‌ನಲ್ಲಿ ನಡೆದ ಕಳ್ಳತನಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಳ್ಳತನದ ಪ್ರಮುಖ ಸೂತ್ರಧಾರ ಆರೋಪಿ ಅದೇ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ನಿವೃತ್ತ ಸೈನಿಕನಾಗಿದ್ದು, ಪ್ರಕರಣದ ಇನ್ನಿಬ್ಬರು ಆರೋಪಿಗಳ ಪತ್ತೆ ಕಾರ್ಯ ಮುಂದವರಿದಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಪ್ರಕರಣದ ಕುರಿತಂತೆ ಮಾಹಿತಿ ನೀಡಿದ ಅವರು, ಆಗಸ್ಟ್ 17ರಂದು ಇಡ್ಯಾ ಗ್ರಾಮದ ಜಾರ್ಡಿನ್ ಅಪಾರ್ಟ್ ಮೆಂಟ್‌ನಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ […]