ಸಾಲದ ಭಯ : ಡೆತ್ ನೋಟ್ ಬರೆದಿಟ್ಟು ಯುವಕ ನೇಣು ಬಿಗಿದು ಆತ್ಮಹತ್ಯೆ

Thursday, December 30th, 2021
Vignesh

ಕುಂದಾಪುರ : ಡೆತ್ ನೋಟ್ ಬರೆದಿಟ್ಟು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಯುವಕನನ್ನು ಕುಂದಾಪುರದ ಹೆಮ್ಮಾಡಿಯ ವಿಘ್ನೇಶ್ ಎಂದು ಗುರುತಿಸಲಾಗಿದೆ. ಎಂಎನ್ ಸಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ವಿಘ್ನೇಶ್ ಸ್ನೇಹಿತರೊಂದಿಗೆ ಬಿಸಿನೆಸ್ ಆರಂಭಿಸಲು ಮೊಬೈಲ್ ಆಪ್ ಮೂಲಕ ಸಾಲ ಮಾಡಿದ್ದು, ಸಾಲ ಮರುಪಾವತಿ ಮಾಡಲಾಗದೇ ಮನೆಯ ಮುಂಭಾಗದಲ್ಲಿರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಡೆತ್ ನೋಟ್ ನಲ್ಲಿ ತಾನು ಸಾಲ ಮಾಡಿಕೊಂಡಿದ್ದಾಗಿ ಬರೆದಿರುವ ವಿಘ್ನೇಷ್ […]

ನಾಪತ್ತೆಯಾದ ಮಹಿಳೆ ಬಾವಿಯಲ್ಲಿ ಶವವಾಗಿ ಪತ್ತೆ..!

Thursday, July 12th, 2018
kundapur

ಕುಂದಾಪುರ: ನಾಪತ್ತೆಯಾದ ಮಹಿಳೆ ಇಂದು ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮದ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸಿಲ್ವಿಯಾ ಮಂಗಳವಾರದಂದು ನಾಪತ್ತೆಯಾಗಿದ್ದರು. ಇಂದು ಖಾಸಗಿ ತೋಟದಲ್ಲಿರುವ ಬಾವಿಯಲ್ಲಿ ಶವ ಪತ್ತೆಯಾಗಿದ್ದಾರೆ. ಕುಂದಾಪುರ ಪೊಲೀಸರಿಂದ ಪರಿಶೀಲನೆ ನಡೆಯುತ್ತಿದ್ದು, ಆತ್ಮಹತ್ಯೆ ಮಾಡಕೊಂಡಿರಬೇಕೆಂಬ ಶಂಕೆ ವ್ಯಕ್ತವಾಗಿದೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಕಲಚೇತನ ಮಕ್ಕಳ ಫಿಸಿಯೋಥೆರಪಿ ಕೇಂದ್ರ ಉದ್ಘಾಟನೆ..!

Friday, June 29th, 2018
udupi

ಉಡುಪಿ: ನವ್ಯಚೇತನ ಶಿಕ್ಷಣ ಸಂಶೋಧನೆ ಮತ್ತು ಕಲ್ಯಾಣ ಟ್ರಸ್ಟ್ ಉಡುಪಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ಆಶ್ರಯದಲ್ಲಿ ವಿಶೇಷ ಅಗತ್ಯತೆ ಇರುವ ವಿಕಲಚೇತನ ಮಕ್ಕಳ ಫಿಸಿಯೋಥೆರಪಿ ಕೇಂದ್ರವನ್ನು ಗುರುವಾರ ಉಡುಪಿ ಸಿಟಿ ಬಸ್ ನಿಲ್ದಾಣ ಬಳಿ ಇರುವ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟಿಸಲಾಯಿತು. ಕೇಂದ್ರವನ್ನು ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಈ ಕೇಂದ್ರದಿಂದ ವಿಕಲಚೇತನ ಮಕ್ಕಳ ಪೋಷಕರಿಗೆ ಹೆಚ್ಚಿನ ಅನುಕೂಲ ಸಿಗುವಂತಾಗಲಿ […]