ನಟ ಶಿವರಾಜ್‌ಕುಮಾರ್ ಕುಟುಂಬ ಮಂಗಳೂರಲ್ಲಿ

Friday, January 20th, 2017
shivarajKumar

ಮಂಗಳೂರು:  ಕನ್ನಡ ಚಿತ್ರರಂಗದ ಹ್ಯಾಟ್ರಿಕ್‌ ಹೀರೋ ಡಾ. ಶಿವರಾಜ್‌ಕುಮಾರ್ ಕುಟುಂಬ ಸಮೇತ  ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಶುಕ್ರವಾರ ಭೇಟಿ ನೀಡಿ ದೇವರ ದರ್ಶನ ಪಡೆದರು. ಶಿವರಾಜ್ ಕುಮಾರ್, ಪತ್ನಿ ಗೀತಾ ಶಿವರಾಜ್ ಕುಮಾರ್, ಪುತ್ರಿ ನಿವೇದಿತಾ, ನಿರ್ಮಾಪಕ ಕೆ.ಪಿ. ಶ್ರೀಕಾಂತ್, ದೇವಸ್ಥಾನದ ಆಡಳಿತ ಮಂಡಳಿ ವ್ಯವಸ್ಥಾಪಕ ಸಾಯಿರಾಂ, ವ್ಯವಸ್ಥಾಪಕ ವಿನೀತ್, ರಾಜೇಶ್ ಭಟ್ ಅವರೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು. ಶಿವರಾಜ್‌‌ಕುಮಾರ್ ಕುಟುಂಬ ಶ್ರೀ ಕ್ಷೇತ್ರ ಕೊಲ್ಲೂರು, ಉಡುಪಿ ಶ್ರೀ ಕೃಷ್ಣ ಮಠಕ್ಕೆ  ಭೇಟಿ ನೀಡಿದ್ದಾರೆ.