ಆಧಾರ್ ತಿದ್ದುಪಡಿ: ಅಂಚೆ ಕಚೇರಿಗಳಲ್ಲೂ ಅವಕಾಶ
Thursday, August 31st, 2017ಮಂಗಳೂರು : ಆಧಾರ್ ಕಾರ್ಡ್ಗಳಲ್ಲಿರುವ ದೋಷಗಳನ್ನು ಸರಿಪಡಿಸಲು ಅಂಚೆ ಕಚೇರಿಗಳಲ್ಲೂ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ ತಿಳಿಸಿದ್ದಾರೆ. ಅವರು ಈ ಸಂಬಂಧ ತಮ್ಮ ಕಚೇರಿಯಲ್ಲಿ ಅಂಚೆ ಹಾಗೂ ಬಿಎಸ್ಎನ್ಎಲ್ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಪ್ರಸ್ತುತ ಸರಕಾರದ ವಿವಿಧ ಯೋಜನೆಗಳಿಗೆ ಆಧಾರ್ ಲಿಂಕಿಂಗ್ ಸಂದರ್ಭದಲ್ಲಿ ಆಧಾರ್ ಕಾರ್ಡ್ನಲ್ಲಿ ಮಾಹಿತಿ ತಾಳೆ ಹೊಂದದಿರುವುದರಿಂದ ಆಧಾರ್ ತಿದ್ದುಪಡಿಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ 23 ಅಂಚೆ ಕಚೇರಿಗಳಲ್ಲಿ ಆಧಾರ್ ತಪ್ಪುಗಳನ್ನು ಸರಿಪಡಿಸಲು ಕೇಂದ್ರ ತೆರೆಯಲು […]