ಗುಂಡು ಹಾರಿಸಿಕೊಂಡು ಸಿಆರ್ ಪಿಎಫ್ ಯೋಧ ಆತ್ಮಹತ್ಯೆ

Saturday, February 22nd, 2014
CRPF-jawan

ಮಂಗಳೂರು: ಹೊಟ್ಟೆಗೆ ಗುಂಡು ಹಾರಿಸಿಕೊಂಡು ಸಿಆರ್ ಪಿಎಫ್ ಯೋಧ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಎನ್‌ಎಂಪಿಟಿಯಲ್ಲಿ ಶನಿವಾರ ನಡೆದಿದೆ. ಇಂದು ಬೆಳಗ್ಗೆ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಯೋಧ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತ ಯೋಧನನ್ನು ಮಹಾರಾಷ್ಟ್ರ ಮೂಲದ 38 ವರ್ಷದ ಕೆ.ಟಿ ಸಂದೀಪ್ ಸರ್ಕಟೆ ಎಂದು ಗುರುತಿಸಲಾಗಿದೆ. ಈ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪಣಂಬೂರ್ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.