ಗುಂಡು ಹಾರಿಸಿಕೊಂಡು ಸಿಆರ್ ಪಿಎಫ್ ಯೋಧ ಆತ್ಮಹತ್ಯೆ

Saturday, February 22nd, 2014
CRPF-jawan

ಮಂಗಳೂರು: ಹೊಟ್ಟೆಗೆ ಗುಂಡು ಹಾರಿಸಿಕೊಂಡು ಸಿಆರ್ ಪಿಎಫ್ ಯೋಧ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ಎನ್‌ಎಂಪಿಟಿಯಲ್ಲಿ ಶನಿವಾರ ನಡೆದಿದೆ. ಇಂದು ಬೆಳಗ್ಗೆ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಯೋಧ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತ ಯೋಧನನ್ನು ಮಹಾರಾಷ್ಟ್ರ ಮೂಲದ 38 ವರ್ಷದ ಕೆ.ಟಿ ಸಂದೀಪ್ ಸರ್ಕಟೆ ಎಂದು ಗುರುತಿಸಲಾಗಿದೆ. ಈ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪಣಂಬೂರ್ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸರಕು ನಿರ್ವಹಣೆ : ಎನ್ಎಂಪಿಟಿ ದಾಖಲೆ

Friday, April 5th, 2013
NMPT Tamilvaanan

ಮಂಗಳೂರು : ನವ ಮಂಗಳೂರು ಬಂದರು ಮಂಡಳಿ (ಎನ್ಎಂಪಿಟಿ) 2012-13ನೇ ಸಾಲಿನಲ್ಲಿ ಅತ್ಯಧಿಕ ಸರಕು ನಿರ್ವಹಣೆ ಮಾಡುವ ಮೂಲಕ ಎನ್‌ಎಂಪಿಟಿಯಲ್ಲಿ ಇದುವರೆಗಿನ ಅತಿ ಹೆಚ್ಚು ಸರಕು ನಿರ್ವಹಣೆ ಮಾಡಿದ ದಾಖಲೆ ಸ್ಥಾಪಿಸಿದೆ ಎಂದು ಬಂದರು ಮಂಡಳಿ ಅಧ್ಯಕ್ಷ ತಮಿಳ್‌ವಾನನ್ ತಿಳಿಸಿದರು. ಬಂದರು ಮಂಡಳಿ ಆಡಳಿತ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಸಾಲಿನಲ್ಲಿ 32.94 ಮಿಲಿಯನ್ ಟನ್ ಸರಕು ನಿರ್ವಹಣೆ ಮಾಡಲಾಗಿದ್ದು, 2008 – 09ನೇ ಸಾಲಿನಲ್ಲಿ  36.69 ಮಿಲಿಯನ್‌ ಟನ್‌ ಸರಕು ನಿರ್ವಹಣೆ ಈ […]