ಮಂಗಳೂರು ಜಿಲ್ಲಾಧಿಕಾರಿಯವರ ಕಚೇರಿ ಕಟ್ಟಡದಲ್ಲಿ ಚುನಾವಣಾ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ

Tuesday, April 2nd, 2024
election-staff

ಮಂಗಳೂರು : ನಗರದ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದವರು. ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿರುವ ಏಕಗವಾಕ್ಷಿ ಪದ್ದತಿ ತಂಡದ ಸದಸ್ಯರಾಗಿದ್ದರು. ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಅವರು ಇಂದು ಆತ್ಮಹತ್ಯೆಗೆ ಯತ್ನಿಸಿದ್ದರೆನ್ನಲಾಗಿದೆ. ತಕ್ಷಣ ಅವರನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ತಿಳಿದುಬಂದಿದೆ.

ಎ. 25-26 ರಂದು ಬೊರಿವಲಿ ಶ್ರೀ ಪಾಂಡವೇಶ್ವರ ದೇವಸ್ಥಾನದಲ್ಲಿ ನೂತನ ಶಿವಲಿಂಗ ಪ್ರತಿಷ್ಠಾಪನೆಯೊಂದಿಗೆ ಬ್ರಹ್ಮ ಕಲಶೋತ್ಸವ

Monday, April 1st, 2024
Mundapeshwara

ಮುಂಬಯಿ : ತುಳು ಕನ್ನಡಿಗರು ಸಮಾಜ ಸೇವೆ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಮುಂಬಯಿ ಮಹಾನಗರ ಹಾಗೂ ಉಪನಗರದಲ್ಲಿ ಮಾಡಿದ ಸಾಧನೆ ಅಪಾರ. ಅದೇ ರೀತಿ ಧಾರ್ಮಿಕ ಕ್ಷೇತ್ರದಲ್ಲಿಯೂ ಈ ಮಾಯಾನಗರಿಯಲ್ಲಿ ನಮ್ಮವರ ಕೊಡುಗೆ ತುಂಬಾ ಇದೆ.ಸುಮಾರು ಒಂದೂವರೆ ಶತಮಾನದ ಹಿಂದೆ ಕರ್ನಾಟಕ ಕರಾವಳಿಯಿಂದ ಉದ್ಯೋಗವನ್ನರಸಿ ಮುಂಬಯಿಗಾಗಮಿಸಿದ ನಮ್ಮ ಹಿರಿಯರು ಈ ನಗರದ ಉದ್ದಗಲಕ್ಕೂ ಚದುರಿಹೋಗಿದ್ದರು. ಎಲ್ಲರೂ ತುಳನಾಡಿನಿಂದಲೇ ಬಂದವರಾಗಿದ್ದರೂ ಕೂಡ ಪರಸ್ಪರ ಸಂಪರ್ಕವಿಲ್ಲದೇ ಇದ್ದ ಕಾರಣದಿಂದಾಗಿ ಯಾವುದೇ ಸಂದರ್ಭಗಳಲ್ಲಿಯೂ ಎಲ್ಲರೂ ಒಂದೆಡೆಯಲ್ಲಿ ಸೇರುತ್ತಿರಲಿಲ್ಲಾ. ಹೀಗಿರುವಾಗ ಈ ರೀತಿ […]

ಕಾಂಗ್ರೇಸ್ ಮುಖಂಡನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

Sunday, March 31st, 2024
padmanabha-samanth

ಬಂಟ್ವಾಳ : ಕಾಂಗ್ರೇಸ್ ಮುಖಂಡನ ಮೃತದೇಹ ಬಂಟ್ವಾಳದ ವಾಮದಪದವಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಂಚನೆ ಆರೋಪ ಎದುರಿಸುತ್ತಿದ್ದ ಯುವಕ ಆತ್ಮಹತ್ಯೆ ಎನ್ನಲಾಗುತ್ತಿದ್ದರೂ, ಸಾಮಾಜಿಕ ಜಾಲತಾಣದಲ್ಲಿ ಯುವಕನ ಕೊಲೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗುತ್ತಿದೆ. ವಾಮದಪದವು ತಿಮರಡ್ಡ ನಿವಾಸಿ ಪದ್ಮನಾಭ ಸಾಮಂತ ಆತ್ಮಹತ್ಯೆ ಮಾಡಿಕೊಂಡ ಯುವಕ. ಪದ್ಮನಾಭ ಸಾಮಂತನ ವಿರುದ್ಧ ಕಳೆದರಡು ದಿನಗಳ ಹಿಂದೆ ವಂಚನೆ ಆರೋಪ ಕೇಳಿ ಬಂದಿದೆ. ಯುವಕನೋರ್ವನಿಗೆ ಸರಕಾರಿ ಉದ್ಯೋಗ ದೊರಕಿಸಿಕೊಡುವುದಾಗಿ 1.50 ಲಕ್ಷ ಹಣವನ್ನು ಪಡೆದು ವಂಚಿಸಿರುವ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ […]

ಆಹಾರದಲ್ಲಿ ವಿಷಹಾಕಿದ ದುಷ್ಕರ್ಮಿಗಳು, 10ಕ್ಕಿಂತ ಅಧಿಕ ನಾಯಿಗಳ ಸಾವು

Sunday, March 31st, 2024
Mundaje

ಬೆಳ್ತಂಗಡಿ : ದುಷ್ಕರ್ಮಿಗಳು ಆಹಾರದಲ್ಲಿ ವಿಷಹಾಕಿದ ಪರಿಣಾಮ ಸಾಕುನಾಯಿಗಳು ಸೇರಿದಂತೆ 10ಕ್ಕಿಂತ ಅಧಿಕ ನಾಯಿಗಳು ಸಾವನ್ನಪ್ಪಿದ ಘಟನೆ ಮುಂಡಾಜೆ ಗ್ರಾಮದ ಸೋಮಂತಡ್ಕದ ಅಗರಿ- ಹುರ್ತಾಜೆ ರಸ್ತೆಯಲ್ಲಿ ನಡೆದಿದೆ. ಶನಿವಾರ ರಾತ್ರಿ ಈ ರಸ್ತೆಯುದ್ದಕ್ಕೂ ಯಾರೋ ಯಾವುದು ಆಹಾರದಲ್ಲಿ ವಿಷವನ್ನು ಬೆರೆಸಿ ಅಲ್ಲಲ್ಲಿ ಎಸೆದು ಹೋಗಿದ್ದಾರೆ. ಅವುಗಳನ್ನು ತಿಂದಿರುವ ನಾಯಿಗಳು ಅಲ್ಲಲ್ಲಿ ಸತ್ತು ಬಿದ್ದಿವೆ ಎಂದು ತಿಳಿದುಬಂದಿದೆ. ಈಸ್ಟರ್ ಹಬ್ಬದಿಂದ ವಾಪಸ್ಸು ಬರುತ್ತಿದ್ದ ಜನರು ಇದನ್ನು ಗಮನಿಸಿ ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ ಅವರ ಗಮನಕ್ಕೆ ತಂದಿದ್ದಾರೆ. ಪರಿಶೀಲನೆ […]

ಮಂಗಳಾದೇವಿ ವಾರ್ಷಿಕ ಜಾತ್ರ ಮಹೋತ್ಸವ : ಮಕ್ಕಿಮನೆ ಕಲಾವೃಂದದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ

Saturday, March 30th, 2024
Makkimane

ಮಂಗಳೂರು: ಇತಿಹಾಸ ಪ್ರಸಿದ್ದ ಮಂಗಳೂರು ಮಹಾತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನ ವಾರ್ಷಿಕ ಜಾತ್ರ ಮಹೋತ್ಸವವು ಆರಂಭವಾಗಿದ್ದು ಗುರುವಾರ ಮಲ್ಲಿಕಾ ಕಲಾವೃಂದ ಕದ್ರಿ ಮಂಗಳೂರು ಆಶ್ರಯದಲ್ಲಿ ಸುದೇಶ್ ಜೈನ್ ಮಕ್ಕಿಮನೆ ನೇತೃತ್ವದಲ್ಲಿ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು, ಎಲ್ಲರ ಮೆಚ್ಚುಗೆ ಪಡೆಯಿತು. ಈ ಸಂದರ್ಭದಲ್ಲಿ ಸುಧಾಕರ ರಾವ್ ಪೇಜಾವರ, ಎಂ. ರವೀಂದ್ರ ಶೇಟ್, ರತ್ನಾಕರ ಜೈನ್ , ಮಾಧವ ಎಂ.ಎಸ್, ವಿನಯನಾಂದ , ಎಂ. ಶರತ್ ಶೇಟ್, ಎಂ. ದೀಪ್ತಿ ಶೇಟ್, ಕು. […]

ಕಾಪು ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಸಿಬ್ಬಂದಿ ನೇಣು ಬಿಗಿದು ಆತ್ಮಹತ್ಯೆ

Saturday, March 30th, 2024
Jyoti

ಕಾಪು : ಕಾಪು ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು ನೇಣಿಗೆ ಶರಣಾದ ಘಟನೆ ಶನಿವಾರ ಮಾರ್ಚ್ 30 ರಂದು ನಡೆದಿದೆ. ಕಾಪು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಬಾಗಲಕೋಟೆ ಮೂಲದ ಜ್ಯೋತಿ (29) ಮೃತ ಪೊಲೀಸ್ ಆಗಿದ್ದು, ಆತ್ಮಹತ್ಯೆ ಮಾಡಿಕೊಂಡವರು. ಶುಕ್ರವಾರ ಎಂದಿನಂತೆ ಕರ್ತವ್ಯ ನಿರ್ವಹಿಸಿದ್ದ ಅವರು ರಾತ್ರಿ ಕ್ವಾಟ್ರಸ್ ಗೆ ಮರಳಿದ್ದು ಶನಿವಾರ ಬೆಳಿಗ್ಗೆ ನೇಣಿಗೆ ಶರಣಾಗಿರುವುದಾಗಿ ತಿಳಿದು ಬಂದಿದೆ.ಮೃತ ಪೊಲೀಸ್ ಸಿಬ್ಬಂದಿಯ ಪತಿ ಕೆ.ಎಸ್.ಆರ್.ಟಿ.ಸಿ ಸಿಬ್ಬಂದಿ ಅವರು ಬೆಳಿಗ್ಗೆ ಕರ್ತವ್ಯಕ್ಕೆ ಹೋಗಲೆಂದು ಹೊರಟಿದ್ದು […]

25 ಲ.ರೂ. ಲಂಚ ಪ್ರಕರಣ : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಯುಕ್ತರಿಗೆ 14 ದಿನಗಳ ನ್ಯಾಯಾಂಗ ಬಂಧನ

Tuesday, March 26th, 2024
25 ಲ.ರೂ. ಲಂಚ ಪ್ರಕರಣ : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಯುಕ್ತರಿಗೆ 14 ದಿನಗಳ ನ್ಯಾಯಾಂಗ ಬಂಧನ

ಮಂಗಳೂರು : ಟಿಡಿಆರ್‌ಗೆ ಸಂಬಂಧಿಸಿದಂತೆ ಉದ್ಯಮಿಯಿಂದ 25 ಲ.ರೂ. ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಯುಕ್ತ ಮನ್ಸೂರ್‌ ಆಲಿಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಟಿಡಿಆರ್‌ಗೆ ಸಂಬಂಧಿಸಿದಂತೆ ಮಾ.23ರಂದು ನಗರದ ಮಂಗಳಾ ಕ್ರೀಡಾಂಗಣದ ಬಳಿ ದಲ್ಲಾಳಿಯ ಮೂಲಕ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ದಲ್ಲಾಳಿ ಮುಹಮ್ಮದ್ ಸಲೀಂಗೂ ನ್ಯಾಯಾಂಗ 14 ದಿನಗಳ ಬಂಧನ ವಿಧಿಸಲಾಗಿದೆ.

ಕಾಂಗ್ರೆಸ್ ಅಭ್ಯರ್ಥಿ ಸುಮಾರು 50ರಿಂದ 60 ಸಾವಿರ ಮತಗಳ ಅಂತರದಿಂದ ಗೆಲ್ಲಲಿದ್ದಾರೆ : ಹರೀಶ್ ಕುಮಾರ್

Tuesday, March 26th, 2024
Harish-Kumar-congress

ಮಂಗಳೂರು : ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ದ.ಕ. ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗಾಗಿ ತಯಾರಿ ನಡೆದಿದ್ದು, ಸುಮಾರು 50ರಿಂದ 60 ಸಾವಿರ ಮತಗಳ ಅಂತರದಿಂದ ಪಕ್ಷದ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೇಳಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯ ಬಳಿಕ ಲೋಕಸಭಾ ಚುನಾವಣೆಗೆ ತಯಾರಿ ನಡೆದಿದೆ. ಗ್ಯಾರಂಟಿ ಕಾರ್ಯಕ್ರಮಗಳ ಬಗ್ಗೆ ಬೂತ್ ಮಟ್ಟದ ಕಾರ್ಯಕರ್ತರಿಗೆ ತರಬೇತಿ ನೀಡುವ ಕೆಲಸ ಮಾಡಲಾಗಿದೆ. ಪ್ರತಿ ಬ್ಲಾಕ್ ಮಟ್ಟದಲ್ಲಿ ಕಾರ್ಯಕರ್ತರ ಸಭೆ ನಡೆಯಲಿದ್ದು, ಎ.3ಕ್ಕೆ ದ.ಕ. ಜಿಲ್ಲಾ […]

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಸೂಲಿಬೆಲೆಗೆ ದೊರೆಯುವ ಸಾಧ್ಯತೆ

Saturday, March 16th, 2024
chakravarti-sulibale

ಮಂಗಳೂರು : ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಸೂಲಿಬೆಲೆಗೆ ದೊರೆಯುವ ಸಾಧ್ಯತೆ ಇದೆ ಎನ್ನಲಾಗಿದ್ದು, ಹಾಲಿ ಸಂಸದ ಅನಂತಕುಮಾರ್ ಹೆಗಡೆಗೆ ಟಿಕೆಟ್ ದೊರೆಯುವುದು ಅನುಮಾನ ಎಂಬ ಮಾತು ಕೇಳಿಬರುತ್ತಿದೆ. ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಬಿಜೆಪಿಯಿಂದ ಲೋಕಸಭೆ ಚುನಾವಣೆ ಟಿಕೆಟ್ ದೊರೆಯುವ ಸಾಧ್ಯತೆ ಇದೆ ಎಂದು ಇತ್ತೀಚೆಗೆ ವರದಿಗಳಾಗಿದ್ದವು. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಇದೀಗ ಚಕ್ರವರ್ತಿ ಸೂಲಿಬೆಲೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಮಾತನಾಡಿದ ಅವರು, ಚುನಾವಣೆ […]

ಕೆ.ಎಸ್‌.ಈಶ್ವರಪ್ಪ ಭೇಟಿ, ಬಿಜೆಪಿಗೆ ಬಂಡಾಯ ನಿಲ್ಲುವ ಸೂಚನೆ ನೀಡಿದ ಸತ್ಯಜಿತ್ ಸುರತ್ಕಲ್‌

Saturday, March 16th, 2024
Satyajith

ಮಂಗಳೂರು : ಈ ಬಾರಿ ಜಿಲ್ಲೆಯಲ್ಲಿ ಓಡಾಡಿ ತನ್ನ ಕಾರ್ಯಕರ್ತರನ್ನು ಸಂಘಟಿಸಿ ಹಲವು ಸಭೆಗಳನ್ನು ನಡೆಸಿ ಪಕ್ಷದ ಗಮನ ಸೆಳೆಯುವ ಪ್ರಯತ್ನ ಮಾಡಿ ವಿಫಲರಾದ ಸತ್ಯಜಿತ್ ಸುರತ್ಕಲ್‌ ಪಕ್ಷೇತರವಾಗಿ ಸ್ಪರ್ಧಿಸಿ ಬಿಜೆಪಿಗೆ ಬಂಡಾಯ ನಿಲ್ಲುವ ಸೂಚನೆ ನೀಡಿದ್ದಾರೆ. ಅದಕ್ಕಾಗಿ ಪಕ್ಷೇತರರಾಗಿ ಶಿವಮೊಗ್ಗದಿಂದ ಸ್ಪರ್ಧಿಗೆ ಸಿದ್ಧತೆ ಮಾಡಿಕೊಂಡಿರುವ ಕೆ.ಎಸ್‌.ಈಶ್ವರಪ್ಪಅವರನ್ನು ಭೇಟಿಮಾಡಿದ್ದಾರೆ. ಕೆ.ಎಸ್‌. ಈಶ್ವರಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ ಸತ್ಯಜಿತ್ ಸುರತ್ಕಲ್ ಈಶ್ವರಪ್ಪ ಅವರ ಬೆಂಬಲಕ್ಕೆ ತಾವು ಇರುವುದಾಗಿ ಬರವಸೆ ನೀಡಿದ್ದಾರೆ. ಟಿಕೆಟ್ ಕೈ ತಪ್ಪಿದ್ದಕ್ಕಾಗಿ ಮಾಜಿ ಮುಖ್ಯಮಂತ್ರಿ […]