ಕೊನೆಗೂ ಮಾತನಾಡಿದರು ರಶ್ಮಿಕಾ ಮಂದಣ್ಣ, ‘ಬ್ರೇಕಪ್’ ವಿಚಾರದ ಬಗ್ಗೆ ಹೇಳಿದ್ದೇನು?

Tuesday, September 18th, 2018
rashmika

ಬೆಂಗಳೂರು: ನಟ ರಕ್ಷಿತ್ ಶೆಟ್ಟಿ ಜೊತೆಗಿನ ಬ್ರೇಕಪ್ ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ನಟಿ ರಶ್ಮಿಕಾ ಮಂದಣ್ಣ ಮೌನ ಮುರಿದಿದ್ದು, ತಮ್ಮ ಅಧಿಕೃತ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಹಾಕುವ ಮೂಲಕ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ನಿನ್ನೆ ಸಂಜೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ರಶ್ಮಿಕಾ, ಒಂದು ನಾಣ್ಯಕ್ಕೆ ಎರಡು ಮುಖಗಳಿರುವಂತೆ, ಯಾವುದೇ ಕಥೆಗೂ, ವಿವಾದಕ್ಕೂ ಎರಡು ಆಯಾಮಗಳಿರುತ್ತವೆ. ಇದು ತಿಳಿಯದೇ ಯಾರೂ ಮಾತನಾಡಬಾರದು. ನಮ್ಮ ಪಾಡಿಗೆ ಕೆಲಸ ಮಾಡಿಕೊಂಡಿರಲು ಬಿಡಿ ಎಂದು ಮನವಿ […]

‘ಟಗರು’ ಚಿತ್ರದ ಶತದಿನೋತ್ಸವ..ಸಂತೋಷ್ ಚಿತ್ರಮಂದಿರದಲ್ಲಿ ಸಂಭ್ರಮಾಚರಣೆ..!

Monday, June 4th, 2018
tagaru-film

ಬೆಂಗಳೂರು: ಸೆಂಚೂರಿ ಸ್ಟಾರ್‌ ಶಿವರಾಜಕುಮಾರ್ ಅಭಿನಯದ `ಟಗರು’ ಚಿತ್ರ ಯಶಸ್ವಿಯಾಗಿ 100 ದಿನಗಳನ್ನು ಪೂರೈಸಿದೆ. ಈ ವರ್ಷ ಶತ ದಿನಗಳನ್ನು ಪೂರೈಸಿದ ಮೊದಲ ಚಿತ್ರವಾಗಿ `ಟಗರು’ ಹೊರಹೊಮ್ಮಿದೆ. ಚಿತ್ರತಂಡವು ಇದೇ ತಿಂಗಳು ದೊಡ್ಡ ಸಮಾರಂಭ ಮಾಡಿ, ಚಿತ್ರಕ್ಕೆ ದುಡಿದ ಕಲಾವಿದರು ಮತ್ತು ತಂತ್ರಜ್ಞರನ್ನು ಗೌರವಿಸಲಿದೆ. ಅದಕ್ಕೂ ಮುನ್ನ ಶಿವರಾಜಕುಮಾರ್ ಅಭಿಮಾನಿಗಳಿಂದ ಅಭಿಮಾನದ 100ನೇ ದಿನದ ಸಂಭ್ರಮಾಚರಣೆ ನಡೆಯಿತು. ಭಾನುವಾರ ಅಖಿಲ ಕರ್ನಾಟಕ ಡಾ. ಶಿವರಾಜಕುಮಾರ್ ಸೇನಾ ಸಮಿತಿ ಮತ್ತು ಗಂಡುಗಲಿ ಡಾ. ಶಿವರಾಜಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ […]

ಬಹುನಿರೀಕ್ಷಿತ ‘ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ’ ಕನ್ನಡ ಚಿತ್ರ ಮೇ 25 ರಂದು ರಾಜ್ಯಾದ್ಯಂತ ಬಿಡುಗಡೆ

Tuesday, May 22nd, 2018
ananth-nag-2

ಮಂಗಳೂರು: ಕಲರ್ಸ್‌ಆಫ್ ಆನೇಕಲ್‌ ಹೆಸರಿನಲ್ಲಿ ಸುದರ್ಶನ್‌, ರಾಮಮೂರ್ತಿ ಹಾಗೂ ದುಬೈಯ ಖ್ಯಾತ ಉದ್ಯಮಿ, ಹೆಸರಾಂತ ಗಾಯಕರು ಆಗಿರುವ ಹರೀಶ್ ಶೇರಿಗಾರ್ ಮತ್ತು ಅವರ ಧರ್ಮಪತ್ನಿ ಶರ್ಮಿಳಾ ಶೇರಿಗಾರ್ ಅವರ ಆಕ್ಮೇ ಮೂವೀಸ್ ಇಂಟರ್‌ನ್ಯಾಶನಲ್ ಬ್ಯಾನರ್‌ ಅಡಿಯಲ್ಲಿ ನಿರ್ಮಾಣಗೊಂಡಿರುವ ಖ್ಯಾತ ನಿರ್ದೇಶಕ ನರೇಂದ್ರಬಾಬು ಅವರ ನಿರ್ದೇಶನದಲ್ಲಿ ಮೂಡಿ ಬಂದಿರುವ ಬಹು ನಿರೀಕ್ಷಿತ ‘ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ’ ಕನ್ನಡ ಚಲನ ಚಿತ್ರ ಮೇ 25 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಿರ್ಮಾಪಕ ಹರೀಶ್ ಶೇರಿಗಾರ್ ತಿಳಿಸಿದ್ದಾರೆ. ಮಂಗಳವಾರ ಮಂಗಳೂರಿನ […]

ಟಾಲಿವುಡ್ ಮಲ್ಟಿಸ್ಟಾರ್ ಸಿನಿಮಾದಲ್ಲಿ ಸ್ಥಾನ ಗಿಟ್ಟಿಸಿದ ರಶ್ಮಿಕಾ ಮಂದಣ್ಣ

Wednesday, March 21st, 2018
rashmika-mandanna

ಕನ್ನಡದಲ್ಲಿ ಸದ್ಯ ಲಕ್ಕಿ ಸ್ಟಾರ್ ಆಗಿರುವ ನಟಿ ಅಂದರೆ ರಶ್ಮಿಕಾ ಮಂದಣ್ಣ. ‘ಕಿರಿಕ್ ಪಾರ್ಟಿ’ ಸಿನಿಮಾದ ಮೂಲಕ ಸೈಲೆಂಟ್ ಆಗಿ ಇಂಡಸ್ಟ್ರಿಗೆ ಬಂದ ರಶ್ಮಿಕಾ ನಂತರ ಒಂದರ ನಂತರ ಒಂದರಂತೆ ಕನ್ನಡದ ಬಿಗ್ ಸ್ಟಾರ್ ಗಳ ಜೊತೆಗೆ ಸಿನಿಮಾ ಮಾಡಿದರು. ಮಾತ್ರವಲ್ಲದೆ ಟಾಲಿವುಡ್ ನಲ್ಲಿ ಕೂಡ ರಶ್ಮಿಕಾ ಸಿನಿಮಾ ಮಾಡಿ ಬಂದರು. ರಕ್ಷಿತ್ ಶೆಟ್ಟಿ, ಪುನೀತ್ ರಾಜ್ ಕುಮಾರ್, ಗಣೇಶ್ ಬಳಿಕ ಇದೀಗ ದರ್ಶನ್ ಜೊತೆಗೆ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ಆದರೆ ಅತ್ತ ತೆಲುಗಿನಲ್ಲಿಯೂ ಈ ‘ಚಮಕ್’ […]

ಶನಿವಾರ ಅಸತೋಮ ಸದ್ಗಮಯ ಚಿತ್ರದ ಹಾಡುಗಳ ದ್ವನಿಸುರುಳಿ ಬಿಡುಗಡೆ

Tuesday, March 13th, 2018
AsathomaSadgamaya

ಮಂಗಳೂರು : ಐಕೇರ್ ಮೂವೀಸ್ ಬ್ಯಾನರಿನಡಿಯಲ್ಲಿ ಅಶ್ವಿನ್ ಪಿರೇರಾರವರು ನಿರ್ಮಿಸುತ್ತಿರುವ ಅಸತೋಮ ಸದ್ಗಮಯ ಚಿತ್ರದ ಹಾಡುಗಳ ದ್ವನಿಸುರುಳಿಯು ಇದೇ ಶನಿವಾರ ದಿನಾಂಕ 17-03-18ರಂದು ಬೆಂಗಳೂರಿನ ಚಾಮುಂಡೇಶ್ವರಿ ಸ್ಟುಡೀಯೋದಲ್ಲಿ ಬಿಡುಗಡೆಗೊಳ್ಳಲಿದೆ. ಚಿತ್ರದಲ್ಲಿ ಒಟ್ಟು ಐದು ಹಾಡುಗಳಿದ್ದು ವಹಾಬ್ ಸಲೀಂರವರು ಎಲ್ಲಾ ಹಾಡುಗಳಿಗೂ ಸಾಹಿತ್ಯ ಬರೆದು ಸಂಗೀತ ನೀಡಿದ್ದಾರೆ. ಚಿತ್ರದ ಎಲ್ಲಾ ಹಾಡುಗಳು ವಿಬಿನ್ನವಾಗಿದ್ದು ಮಕ್ಕಳಿಂದ ಹಿಡಿದು ಯುವಕರ ತನಕ, ಮಹಿಳೆಯರಿಂದ ಹಿಡಿದು ಫಿಲಾಸಫಿ ಬಯಸುವವರ ತನಕ ಎಲ್ಲಾ ಕೆಟಗರಿಯವರಿಗೂ ಇಷ್ಟವಾಗುವಂತಹ ಹಾಡುಗಳು ಇದರಲ್ಲಿ ಇವೆ ಎನ್ನುತ್ತಾರೆ ಸಂಗೀತ ನಿರ್ದೇಶಕರು. ಈ […]

ಸ್ಯಾಂಡಲ್‌ವುಡ್‌ನ ಈ ನಿರ್ಮಾಪಕ ಯಾರೆಂದು ಗುರುತಿಸುವಿರಾ?

Thursday, December 21st, 2017
rishab-shetty

ಮಂಗಳೂರು: ಈ ಫೋಟೋದಲ್ಲಿರುವ ವ್ಯಕ್ತಿ ಯಾರು ಹೇಳಿ ನೋಡೋಣ… ಕೊಳಕು ಬಟ್ಟೆ, ಕಳಾಹೀನ ಮುಖ, ನೋಡಿದ ಕೂಡಲೇ ಭಿಕ್ಷುಕ ಎನ್ನುವುದು ತಿಳಿಯುತ್ತದೆ. ಆದ್ರೆ ಅಷ್ಟೇ ಭಯ ಕೂಡಾ ಹುಟ್ಟಿಸುತ್ತಿದ್ದಾನೀತ. ಈತ ಯಾರು ಎಂದು ನೀವು ಗೆಸ್ ಕೂಡಾ ಮಾಡೋಕೆ ಸಾಧ್ಯವಿಲ್ಲ. ನಟ-ನಿರ್ದೇಶಕ ರಿಷಭ್ ಶೆಟ್ಟಿ ಇದೇ ಮೊದಲ ಬಾರಿಗೆ ನಿರ್ಮಾಪಕರಾಗಿದ್ದಾರೆ. ಅವರ ನಿರ್ಮಾಣದ ‘ಕಥಾ ಸಂಗಮ’ ಚಿತ್ರ ಈಗಾಗಲೇ ಸಾಕಷ್ಟು ಕುತೂಹಲ ಕೆರಳಿಸಿದೆ. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ರಿಗೆ ಗೌರವಾರ್ಪಣೆಯಾಗಿ ರೆಡಿಯಾಗ್ತಿರೋ ಈ ವಿಶಿಷ್ಟ ಚಿತ್ರ ಅನೇಕ […]

ಸಸ್ಪೆನ್ಸ್, ಥ್ರಿಲ್ಲರ್‌ ಸಿನಿಮಾ ‘ನಿಶ್ಯಬ್ದ 2’

Saturday, November 4th, 2017
nishyabda

ಮಂಗಳೂರು: ರಾಕಿಗೆ ಅಪ್ಪನ ಮೇಲೆ ಪ್ರೀತಿ. ಅಪ್ಪನಿಗೆ ಕಿಡ್ನಿ ವೈಫಲ್ಯ. ಚಿಕಿತ್ಸೆ ಕೊಡಿಸಲು ಅವನ ಬಳಿ ದುಡ್ಡಿಲ್ಲ. ಹಣಕ್ಕಾಗಿ ಕಳ್ಳತನಕ್ಕೆ ಇಳಿಯುತ್ತಾನೆ. ಆತನೊಂದಿಗೆ ಕೈಜೋಡಿಸುವ ಪೆಟ್ರೋಲ್ ಪ್ರಸನ್ನನದ್ದೂ ಇದೇ ವೃತ್ತಿ. ಶ್ರದ್ಧಾಳಿಗೆ ಸಾಲಗಾರರ ಕಾಟ. ಮನೆ ಉಳಿಸಿಕೊಳ್ಳಲು ಹೆಣಗಾಡುವ ಆಕೆಗೂ ಹಣ ಬೇಕು. ಹಣ ದೋಚಲು ಹೋಗುವ ಈ ಮೂವರು ಅಚಾನಕ್‌ ಆಗಿ ಮಿಲಿಟರಿಯ ಮಾಜಿ ಅಧಿಕಾರಿಯ ಮನೆಯಲ್ಲಿ ಸಿಕ್ಕಿಹಾಕಿಕೊಳ್ಳುತ್ತಾರೆ. ದುಡ್ಡಿನ ಹಿಂದೆ ಬಿದ್ದ ಈ ಮೂವರ ಬದುಕಿನ ತವಕ, ತಲ್ಲಣ ಇಟ್ಟುಕೊಂಡು ‘ನಿಶ್ಯಬ್ದ 2’ ಸಿನಿಮಾ […]

ರಂಗ್‌ರಂಗ್‌ದ ದಿಬ್ಬಣ ಕರಾವಳಿಯಾದ್ಯಂತ ತೆರೆಗೆ; ಕರಾವಳಿಯ ಪ್ರತಿಭಾವಂತರೇ ನಿರ್ಮಿಸಿದ ಸಿನಿಮಾ

Saturday, November 4th, 2017
rang rangda dibbana

ಮಂಗಳೂರು: ವಾರಿನ್ ಕಂಬೈನ್ಸ್ ಲಾಂಛನದಲ್ಲಿ ತಯಾರಾಗಿರುವ ಶರತ್ ಕೋಟ್ಯಾನ್ ನಿರ್ಮಾಣದ ಕೃಷ್ಣಪ್ರಸಾದ್ ಉಪ್ಪಿನಕೋಟೆ ನಿರ್ದೇಶನದ ರಂಗ್ ರಂಗ್‌ದ ದಿಬ್ಬಣ ನವಂಬರ್ 3ರಂದು ಮಂಗಳೂರಿನ ಜ್ಯೋತಿ ಮಂದಿರದಲ್ಲಿ ಬಿಡುಗಡೆಗೊಂಡಿತು. ಜೆಪ್ಪಿನಮೊಗರು ವನದುರ್ಗೆ ಮಂತ್ರ ಮೂರ್ತಿ ದೈವಸ್ಥಾನದ ಮೊಕ್ತೇಸರರಾದ ಯೋಗೀಶ್ ಭಟ್ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ‘ರಂಗ್ ರಂಗ್‌ದ ದಿಬ್ಬಣ’ ತುಳು ಸಿನಿಮಾ ನೂರು ದಿನಗಳ ಯಶಸ್ವಿ ಪ್ರದರ್ಶನ ಕಾಣಲಿ ಎಂದು ಶುಭ ಹಾರೈಸಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎ.ಸಿ. ಭಂಡಾರಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ತುಳು […]

ಶರಣ್ ಅಭಿನಯದ ‘ಸತ್ಯ ಹರಿಶ್ಚಂದ್ರ’ ಚಿತ್ರದ ಟ್ರೈಲರ್ ಬಿಡುಗಡೆ

Thursday, October 12th, 2017
sathya harischandra

ಬೆಂಗಳೂರು: ಸ್ಯಾಂಡಲ್ವುಡ್ ನಟ ಶರಣ್ ಹಾಗೂ ಚಿಕ್ಕಣ್ಣ ಅಭಿನಯದ ಸತ್ಯ ಹರಿಶ್ಚಂದ್ರ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಶರಣ್ ಗೆ ಜೋಡಿಯಾಗಿ ಸಂಚಿತಾ ಪಡುಕೋಣೆ ನಟಿಸಿದ್ದಾರೆ. ಚಿತ್ರವನ್ನು ದಯಾಳ್ ಪದ್ಮನಾಭನ್ ನಿರ್ದೇಶಿಸಿದ್ದಾರೆ.

ಅಮಿತಾಬ್‌ ಬಚ್ಚನ್‌ 75ನೇ ವಸಂತಕ್ಕೆ ಹೆಜ್ಜೆ

Wednesday, October 11th, 2017
big-b

ಮುಂಬೈ: ಬಾಲಿವುಡ್‌ ಬಿಗ್‌ ಬಿ ಅಮಿತಾಬ್‌ ಬಚ್ಚನ್‌ 75ನೇ ವಸಂತಕ್ಕೆ ಕಾಲಿಟಿದ್ದಾರೆ. ಬಚ್ಚನ್‌ ಹುಟ್ಟುಹಬ್ಬಕ್ಕೆ ಬಾಲಿವುಡ್‌ನ ಅನೇಕ ಹಿರಿ–ಕಿರಿಯರು ಸಾಮಾಜಿಕ ಜಾಲತಾಣಗಳ ಮೂಲಕ ಶುಭಾಶಯ ಕೋರಿದ್ದಾರೆ.ತಮ್ಮ ಹುಟ್ಟುಹಬ್ಬ ಆಚರಣೆಗಾಗಿ ಬಚ್ಚನ್‌ ಕುಟುಂಬ ಸಮೇತ ಮಾಲ್ಡೀವ್ಸ್‌‌ಗೆ ತೆರಳಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಕಳೆದ ವರ್ಷ ಕೂಡಾ ಬಚ್ಚನ್‌ ಕುಟುಂಬದೊಂದಿಗೆ ಮಾಲ್ಡೀವ್ಸ್‌ನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಬಚ್ಚನ್‌ ತಮ್ಮ ಪುತ್ರ ಅಭಿಷೇಕ್, ಸೊಸೆ ಐಶ್ವರ್ಯಾ ರೈ ಮತ್ತು ಮೊಮ್ಮಗಳು ಆರಾಧ್ಯಾ ಜತೆಗೆ ಮಂಗಳವಾರ ಮುಂಬೈ ವಿಮಾನ ನಿಲ್ದಾಣದೊಳಗೆ ಹೋಗುತ್ತಿರುವ ಚಿತ್ರಗಳನ್ನು ಕೆಲ […]