ಕಾರ್ಯಾಚರಣೆ ವೇಳೆ ಮೃತಪಟ್ಟ ಪೇದೆ ರಾಜಪ್ಪ ರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ

Saturday, April 6th, 2013
caonstable Rajappa

ಮಂಗಳೂರು : ಮುಲ್ಕಿ ಠಾಣಾ ವ್ಯಾಪ್ತಿಯ ಬಪ್ಪನಾಡು ಬಳಿ ತಪಾಸಣೆ ನಡೆಸುತ್ತಿದ್ದ ವೇಳೆ ಮೃತಪಟ್ಟ ಮುಲ್ಕಿ ಠಾಣಾ ಸಿಬ್ಬಂದಿ ರಾಜಪ್ಪ(೩೦) ಅವರಿಗೆ ಶುಕ್ರವಾರ ಸಂಜೆ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಆವರಣದಲ್ಲಿ ಅಂತಿಮ ನಮನ ಸಲ್ಲಿಸಲಾಯಿತು. ಈ ವೇಳೆ ಅವರ ಅಂತಿಮ ನಮನಕ್ಕೆ ಗರ್ಭಿಣಿ ಪತ್ನಿ ಹಾಗೂ ಮನೆಯವರು ಆಗಮಿಸಿದ್ದು, ಕುಟುಂಬದ ಆಕ್ರಂದನ ಮುಗಿಲು ಮುಟ್ಟುವಂತಿತ್ತು. ಪಶ್ಚಿಮ ವಲಯ ಐಜಿಪಿ ಸೇರಿದಂತೆ ಇತರ ಹಿರಿಯ ಪೊಲೀಸ್ ಅಧಿಕಾರಿಗಳು ಹೂಗುಚ್ಛ ಅರ್ಪಿಸುವ ಮುಖಾಂತರ ಮೃತ ಪೇದೆಯ ಆತ್ಮಕ್ಕೆ ಚಿರಶಾಂತಿ […]

ಎಕ್ಕೂರಿನಲ್ಲಿ ಬಸ್-ಬೈಕ್ ಡಿಕ್ಕಿ, ಸ್ಥಳದಲ್ಲೇ ಮೃತಪಟ್ಟ ಸಹೋದರರು

Thursday, April 4th, 2013
Two brothers killed at Yekkur

ಮಂಗಳೂರು : ಎಕ್ಕೂರಿನಲ್ಲಿ ಇಂದು ಬೆಳಗ್ಗೆ ಖಾಸಗಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೆ ಮೃತಪಟ್ಟ ಘಟನೆ ನಡೆದಿದೆ. ತೊಕ್ಕೋಟಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಶಾರದ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದ್ದು ಡಿಕ್ಕಿಯ ರಭಸಕ್ಕೆ ಸವಾರರಿಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಮೃತರನ್ನು ಉಮರ್ ರಶೀದ್, ಮಹಮ್ಮದ್ ನೌಶಾದ್ ಎಂದು ಗುರುತಿಸಲಾಗಿದ್ದು ಇವರಿಬ್ಬರು ತೊಕ್ಕೋಟಿನ ಮಹಮ್ಮದ್ ಎಂಬುವವರ ಮಕ್ಕಳಾಗಿದ್ದಾರೆ. ಉಮರ್ ರಶೀದ್ ಬಿ.ಕಾಂ ಪದವಿಧರನಾಗಿದ್ದು, ಮೆಡಿಕಲ್ ಶಾಪ್ ವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದು, ನೌಶಾದ್ […]

ಯೆಯ್ಯಾಡಿ : ಬೈಕ್ ಗೆ ಬೊಲೆರೋ ಡಿಕ್ಕಿ, ಚಾಲಕ ಪರಾರಿ

Tuesday, March 5th, 2013
Yeyyadi bike accsident

ಮಂಗಳೂರು : ಯೆಯ್ಯಾಡಿ ಸಮೀಪದ ಶರ್ಬತ್ ಕಟ್ಟೆ ಬಳಿ ಬೊಲೆರೋ ವಾಹನ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ವಾಹನ  ಚಾಲಕ ಪರಾರಿಯಾದ ಘಟನೆ ನಿನ್ನೆ  ರಾತ್ರಿ ಸಂಭವಿಸಿದೆ. ಮೃತ ವ್ಯಕ್ತಿ ಸ್ಥಳೀಯ ದಂಡಕೇರಿ ನಿವಾಸಿ ರಿತೇಶ್ (30) ಎನ್ನಲಾಗಿದೆ. ಅಪಘಾತದಿಂದ ಬೈಕ್ ನುಜ್ಜುಗುಜ್ಜಾಗಿದ್ದು,  ಕದ್ರಿ ಟ್ರಾಫಿಕ್ ಪೊಲೀಸ್ ಇನ್ಸ್ ಪೆಕ್ಟರ್ ನಾಗಾರಾಜ್ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದರು. ಪರಾರಿಯಾದ ವಾಹನ ಚಾಲಕನನ್ನು ಹಾಗೂ ವಾಹನವನ್ನು ಕಂಡು ಹಿಡಿಯಲು […]

ಗುರುಪುರ ಹೊಳೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Monday, March 4th, 2013
watery grave in Gurupur river

ಮಂಗಳೂರು : ಸ್ನೇಹಿತರ ಜೊತೆ ಗುರುಪುರ ಹೊಳೆಯ ಬಳಿಯ ಅದ್ಯಪಾಡಿ ಡ್ಯಾಂಗೆ ಈಜಲು ತೆರಳಿದ್ದ ವಿದ್ಯಾರ್ಥಿಯೊಬ್ಬ ನೀರಿನ ಸೆಳೆತಕ್ಕೆ ಸಿಲುಕಿ  ಮೃತ ಪಟ್ಟ ಘಟನೆ ಶನಿವಾರ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ನಗರದ ಎಸ್.ಡಿ.ಎಂ ಉದ್ಯಮಾಡಳಿತ ಕಾಲೇಜಿನ ಪ್ರಥಮ ವರ್ಷದ ಬಿಬಿಎಂ ವಿದ್ಯಾರ್ಥಿ ನಿಹಾಲ್ ಬಂಗೇರ(18) ಎನ್ನಲಾಗಿದೆ. ಈತ ಬೊಕ್ಕಪಟ್ಣದ ಕರ್ನಲ್‌ ಗಾರ್ಡನ್‌ ಕೇಶವ ಬಂಗೇರ ಮತ್ತು ರತ್ನ ಬಂಗೇರ ರ ಇಬ್ಬರು ಮಕ್ಕಳಲ್ಲಿ ಈತ ಹಿರಿಯವನಾಗಿದ್ದಾನೆ. ಶನಿವಾರ ಬೆಳಗ್ಗೆ ಆಂತರಿಕ ಮೌಲ್ಯಮಾಪನ ಪರೀಕ್ಷೆ ಮುಗಿದ ಬಳಿಕ ಮಧ್ಯಾಹ […]

ಕೊಲ್ಕತ್ತಾ ಮಾರುಕಟ್ಟೆ ಸಂಕೀರ್ಣದಲ್ಲಿ ಅಗ್ನಿ ದುರಂತ ಸಾವಿನ ಸಂಖ್ಯೆ19 ಕ್ಕೆ ಏರಿಕೆ

Wednesday, February 27th, 2013
Kolkata market complex

ಕೊಲ್ಕತ್ತಾ  : ಬುಧವಾರ ಕೇಂದ್ರ ಕೊಲ್ಕತ್ತಾ ದ ಸೀಲ್ಡಾ ಪ್ರದೇಶದಲ್ಲಿ ಗೋದಾಮು ಮತ್ತು ಕಚೇರಿ ಸಂಕೀರ್ಣಗಳಿರುವ ಮಾರುಕಟ್ಟೆಯಲ್ಲಿ ನಸುಕಿನ ಜಾವ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಸುಮಾರು 19 ಜನರು ಮೃತಪಟ್ಟಿದ್ದು, 12ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ  26 ತಂಡಗಳು ಸತತವಾಗಿ ಮೂರು ಗಂಟೆಗಳ ಸತತ ಪರಿಶ್ರಮದಿಂದ ಬೆಂಕಿಯನ್ನು ಶಮನಗೊಳಿಸಲು ಪ್ರಯತ್ನಿಸಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ನಸುಕಿನ ಜಾವ 4 ಗಂಟೆ ಸುಮಾರಿಗೆ ಈ ಬೆಂಕಿ ಆಕಸ್ಮಿಕ ಉಂಟಾಗಿದ್ದು, ಮೃತರಲ್ಲಿ […]

ಕಾರ್ ಡಿಕ್ಕಿ ಓರ್ವಳ ಸಾವು ಮತ್ತೊಬ್ಬಳ ಸ್ಥಿತಿ ಗಂಭೀರ

Monday, February 25th, 2013
tragic incident

ಉಡುಪಿ : ಫೆಬ್ರವರಿ ೨೪  ರವಿವಾರ ದಂದು ತೆಂಕ ಬೋರ್ಡ್‌ ಶಾಲಾ ಸಮೀಪ ರಾಷ್ಟ್ರೀಯ ಹೆದ್ದಾರಿ ಬದಿ ಬಸ್ಸಿಗಾಗಿ ಕಾಯುತ್ತಿದ್ದ ಸಹೋದರಿಯರೀರ್ವರಿಗೆ ಮುಂಬೈನಿಂದ ಕೇರಳದ ಕುಂಬ್ಳೆಗೆ ತೆರಳುತ್ತಿದ್ದ ಮಾರುತಿ ಆಲ್ಟೋ ಕಾರೊಂದು  ಢಿಕ್ಕಿಯಾದ ಪರಿಣಾಮ ಸಾದಿಯಾ ಸದಫ್ (೧೩) ಎಂಬಾಕೆ ತೀವ್ರವಾಗಿ ಗಾಯಗೊಂಡು ಮೃತಪಟ್ಟ ಘಟನೆ ನಡೆದಿದೆ. ರವಿವಾರ ಮಧ್ಯಾಹ್ನ ತಂದೆ ಮೌಲಾನ ಮಹಮ್ಮದ್ ಶೌಕತ್ ಆಲಿ, ತಾಯಿ ಸಂಜರಿ ಖಾತೂನ್ ಮತ್ತು ತಂಗಿ ಸೈಮಾ ಪರ್ವಿನ್‌ಳೊಂದಿಗೆ ನತದೃಷ್ಟೆ ಸಾದಿಯಾ ಸದಫ್ ಉಚ್ಚಿಲಕ್ಕೆ ಸಮಾರಂಭವೊಂದಕ್ಕೆ ತೆರಳುವ ಸಲುವಾಗಿ ಬಸ್‌ಗಾಗಿ ಕಾಯುತ್ತಿದ್ದಳು. […]

ಸೌದಿ ಅರೇಬಿಯಾದಲ್ಲಿ ನಡೆದ ಅಪಘಾತದಲ್ಲಿ ಮಾಡುರಿನ ಯುವಕ ಬಲಿ

Saturday, February 23rd, 2013
Mohammad Saleem

ಮಂಗಳೂರು : ಮಾಡೂರು ಜಂಕ್ಷನ್ ನಿವಾಸಿ ಎಂ.ಯು.ಅಬ್ಬಾಸ್ ಅವರ ಪುತ್ರ ಮಹಮ್ಮದ್ ಸಲೀಂ ಎಂಬಾತ ಸೌದಿ ಅರೇಬಿಯಾದಲ್ಲಿ ನಡೆದ ಅಪಘಾತವೊಂದರಲ್ಲಿ ಮೃತಪಟ್ಟ ಘಟನೆ ಗುರುವಾರ ನಡೆದಿದೆ. ಈತ  ಮೂರು ತಿಂಗಳ ಹಿಂದೆಷ್ಟೇ ಉದ್ಯೋಗ ನಿಮಿತ್ತ ವಿದೇಶಕ್ಕೆ ತೆರಳಿದ್ದ.  ಕಮೀಸ್ ಮಿಶೀಯತ್ ನಗರದಲ್ಲಿ ಸೇಲ್ಸ್‌ಮೆನ್ ಆಗಿ ಕೆಲಸದಲ್ಲಿದ್ದ ಈತನಿಗೆ ಶುಕ್ರವಾರ ಕೆಲಸಕ್ಕೆ ರಜೆಯಿತ್ತು ಆದ ಕಾರಣ ಮೊನ್ನೆ ರಾತ್ರಿ ನಝ್ರಾನ್ ಎಂಬಲ್ಲಿ ಕ್ರಿಕೆಟ್ ಆಡಲೆಂದು ತನ್ನ ಸ್ನೇಹಿತರಾದ ಮಾಡೂರಿನ ಇಮ್ರಾನ್, ಸಲ್ಮಾನ್ ಮತ್ತು ಇನ್ನೋರ್ವ ಕೇರಳ ಮೂಲದ ಸ್ನೇಹಿತನ […]

ಪಡೀಲ್ : ಬೈಕ್ ಸವಾರರ ಮೇಲೆ ಟೆಂಪೋ ಹರಿದು ಇಬ್ಬರ ಸಾವು

Saturday, February 9th, 2013
mishap at Padil

ಮಂಗಳೂರು : ರಾಷ್ಟ್ರೀಯ ಹೆದ್ದಾರಿ 75ರಲ್ಲಿ  ಪಡೀಲು ಸಮೀಪ ಶುಕ್ರವಾರ ಮಧ್ಯಾಹ್ನ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರೆ, ಗಂಭೀರವಾಗಿ ಗಾಯಗೊಂಡಿದ್ದ ಸಹಸವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.ಕಾರ್ಕಳ ಮೂಲದ ಆನಂದ ದೇವಾಡಿಗ ಹಾಗೂ ಸಂತೋಷ್ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಸವಾರರು ಶುಕ್ರವಾರ ಮಧ್ಯಾಹ್ನ ಸುಮಾರು 2 ಗಂಟೆ ವೇಳೆಗೆ ಪಡೀಲು ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬೈಕ್ ಸ್ಕಿಡ್ ಆದ ಪರಿಣಾಮ ಬೈಕ್ ಸವಾರರು ಹೆದ್ದಾರಿಗೆ ಉರುಳಿ ಬಿದ್ದಿದ್ದರು. ಈ ಸಂದರ್ಭ […]

ಪುತ್ತೂರು ಜೋಡಿ ಆತ್ಮಹತ್ಯೆ ಪ್ರೀತಿಗೆ ಯುವಕನ ತಾಯಿಯೇ ವಿಲನ್ ಆದಳು !

Saturday, December 29th, 2012
Chetan Navya

ಮಂಗಳೂರು : ಪರಸ್ಪರ ಪ್ರೀತಿಸುತ್ತಿದ್ದ ಜೋಡಿಯೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ತಾಜಾ ಘಟನೆ ಪುತ್ತೂರು ಪೇಟೆಯ ಹೊರವಲಯದ ಚಿಕ್ಕಮುಡ್ನೂರು ಗ್ರಾಮದ ಕರ್ಮಲ ಎಂಬಲ್ಲಿಂದ ಬೆಳಕಿಗೆ ಬಂದಿದೆ. ಪರಸ್ಪರ ಪ್ರೀತಿಸುತ್ತಿದ್ದ ಅವರ ವಿವಾಹಕ್ಕೆ ಯುವಕನ ಮನೆಯವರು ವಿರೋಧ ವ್ಯಕ್ತಪಡಿಸಿರುವುದೇ ಆತ್ಮಹತ್ಯೆಗೆ ಕಾರಣ ಎನ್ನುವ ಮಾತುಗಳೇ ಜಾಸ್ತಿಯಾಗಿ ಕೇಳಿ ಬರುತ್ತಿದೆ. ಚಿಕ್ಕಮುಡ್ನೂರು ಗ್ರಾಮದ ಕರ್ಮಲ ನಿವಾಸಿ ರುಕ್ಮಯ್ಯ ಗೌಡ ಅವರ ಪುತ್ರ ಚೇತನ್ (26) ಮತ್ತು ಚಿಕ್ಕಮುಡ್ನೂರು ಗ್ರಾಮದ ಕೆಮ್ಮಾಯಿ ನಿವಾಸಿ ವಿಶ್ವನಾಥ ಗೌಡ ಅವರ ಪುತ್ರಿ ನವ್ಯ […]

ನಕ್ಸಲರ ಮಧ್ಯೆ ಭೀಕರ ಗುಂಡಿನ ಕಾಳಗ ಪೋಲಿಸ್ ಪೇದೆ ಬಲಿ

Sunday, October 9th, 2011
Mahadeva S Mane

ಬೆಳ್ತಂಗಡಿ : ಬೆಳ್ತಂಗಡಿ ಸಮೀಪದ ಸವಣಾಳು ಬಳಿ ಶನಿವಾರ ಮಧ್ಯರಾತ್ರಿ ನಕ್ಸಲ್ ನಿಗ್ರಹ ಪಡೆ ಮತ್ತು ನಕ್ಸಲರ ಮಧ್ಯೆ ಭೀಕರ ಗುಂಡಿನ ಕಾಳಗ ನಡೆದಿದ್ದು ನಕ್ಸಲ್ ನಿಗ್ರಹ ಪಡೆ ಪೇದೆ ಮಾನೆ ಗುಂಡಿಗೆ ಬಲಿಯಾಗಿದ್ದಾರೆ.ನಕ್ಸಲರ ಗುಂಡೇಟಿನಿಂದ ಸ್ಥಳದಲ್ಲೇ ಸಾವನ್ನಪ್ಪಿದ ಕಾನ್ಸ್‌ಟೇಬಲ್ ಮಹದೇವ ಎಸ್.ಮಾನೆ (40 ವರ್ಷ) ಬಿಜಾಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಚಡಚಣ ಗ್ರಾಮದವರು. ಬೆಳ್ತಂಗಡಿಯಿಂದ ಹದಿನೇಳು ಕಿ.ಮೀ ದೂರದಲ್ಲಿರುವ ಸವಣಾಳು ಗ್ರಾಮದ ಬಳಿ ಅರಣ್ಯ ಪ್ರದೇಶದಲ್ಲಿ ನಕ್ಸಲರು ಕಾಣಿಸಿಕೊಂಡಿದ್ದಾರೆ ಎಂಬ ಮಾಹಿತಿ ಪಡೆದ ಸ್ಥಳೀಯ ಪೊಲೀಸರು […]