ಅನಧಿಕೃತ ನೀರು ಪಡೆಯುತ್ತಿರುವ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕ್ಕೆ ಸೂಚನೆ

Friday, December 24th, 2010
ಜಿಲ್ಲಾಧಿಕಾರಿ ಶ್ರೀ ಸುಭೋದ್ ಯಾದವ್

ಮಂಗಳೂರು :  ಮಹಾನಗರಪಾಲಿಕೆಗೆ ವಂಚಿಸಿ ಹೆಚ್ಚುವರಿ ನೀರು ಪಡೆಯತ್ತಿರುವವರ ಮೇಲೆ ನಿರ್ಧಾಕ್ಷಿಣ್ಯ ಕ್ರಮಕ್ಕೆ ಜಿಲ್ಲಾಧಿಕಾರಿ ಶ್ರೀ ಸುಭೋದ್ ಯಾದವ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅವರು ಇಂದು ತಮ್ಮಕಚೇರಿಯಲ್ಲಿ ಮಂಗಳೂರು ಮಹಾನಗರಪಾಲಿಕೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡುತ್ತಿದ್ದರು. ಮಹಾನಗರಪಾಲಿಕೆಯಿಂದ ಅದಿಕೃತವಾಗಿ ನೀರು ಸಂಪರ್ಕ ಪಡೆದು ಅನಧಿಕೃತವಾಗಿ ಯಥೇಚ್ಛವಾಗಿ ನೀರನ್ನು ಬಳಸುತ್ತಿರುವ ಉದ್ದಿಮೆ ಕೈಗಾರಿಕೆಗಳನ್ನು ಪತ್ತೆ ಹಚ್ಚಿ ಅಂತಹವರ ವಿರುದ್ಧ ಎಫ್ಐಆರ್ ದಾಖಲಿಸುವುದು ಸೇರಿದಂತೆ ದಂಡ ವಸೂಲು ಮಾಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಅತ್ಯಂತ ಕಡುಬಡವರಿಗೆ ನೀರು ಸಂಪರ್ಕ ಪಡೆಯಲು ಸಾಧ್ಯವಾಗುವಂತೆ […]

ಬಿ.ಎಸ್.ಯಡಿಯೂರಪ್ಪ ಉತ್ತರ ಸಮಾಧಾನ ತಂದಿಲ್ಲ : ಹಂಸರಾಜ್

Monday, December 20th, 2010
ರಾಜ್ಯಪಾಲ ಹಂಸರಾಜ್ ಮತ್ತು ಬಿ.ಎಸ್.ಯಡಿಯೂರಪ್ಪ

ಬೆಂಗಳೂರು : ರಾಜ್ಯಪಾಲರು ಅಕ್ರಮ ಗಣಿಗಾರಿಕೆ ಮತ್ತು ಭೂ ಹಗರಣದ ಕುರಿತು ಬರೆದಿರುವ ಪತ್ರಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಉತ್ತರ ಸಮಾಧಾನ ತಂದಿಲ್ಲ. ಹಾಗಾಗಿ ಸ್ಪಷ್ಟ ಉತ್ತರಕ್ಕಾಗಿ ಮತ್ತೆ ಪತ್ರ ಬರೆಯುವುದಾಗಿ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಹೇಳಿದ್ದಾರೆ. ಒಂದೆಡೆ ಅಕ್ರಮ ಗಣಿಗಾರಿಕೆ ನಡೆದಿಲ್ಲ ಅಂತಾರೆ. ಆದರೆ ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಯಿಂದ ಕೋಟಿ, ಕೋಟಿ ಲೂಟಿಯಾಗಿರುವುದು ನನ್ನ ಗಮನಕ್ಕೆ ಬಂದಿದೆ ಎಂದು ಹೇಳುತ್ತಾರೆ. ಆ ನಿಟ್ಟಿನಲ್ಲಿ ನಾನು ರಾಜ್ಯದ ರಾಜ್ಯಪಾಲನಾಗಿ ಉತ್ಸವ ಮೂರ್ತಿಯಂತಿರಲು ಸಾಧ್ಯವಿಲ್ಲ. ಸಂವಿಧಾನಬದ್ಧವಾಗಿ ನಾನು ಕರ್ತವ್ಯ […]

ಲಯನ್ಸ್ ಕ್ಲಬ್ ಕದ್ರಿ ಹಿಲ್ಸ್ ಆಶ್ರಯದಲ್ಲಿ ಪುರಭವನದಲ್ಲಿ ಸಿಂಹಗಳ ನಡುವೆ ಕನ್ನಡದ ಕಲರವ

Friday, December 17th, 2010
ಸಿಂಹಗಳ ನಡುವೆ ಕನ್ನಡದ ಕಲರವ

ಮಂಗಳೂರು : ಲಯನ್ಸ್ ಕ್ಲಬ್ ಕದ್ರಿ ಹಿಲ್ಸ್ ಆಶ್ರಯದಲ್ಲಿ ಮಂಗಳೂರಿನ ಪುರಭವನದಲ್ಲಿ ಇಂದು  ಬೆಳಗ್ಗೆ ಸಿಂಹಗಳ ನಡುವೆ ಕನ್ನಡದ ಕಲರವ ಎನ್ನುವ ಶೀರ್ಷಿಕೆಯಡಿ ಲಯನ್ಸ್ ಕನ್ನಡ ಸಾಹಿತ್ಯ-ಸಂಸ್ಕೃತಿ ಸಮ್ಮೇಳನವು    ನಡೆಯಿತು.    ಸಮ್ಮೇಳನಾಧ್ಯಕ್ಷರನ್ನು ಹಾಗೂ ಉದ್ಘಾಟಕರನ್ನೂ ಮೆರವಣಿಗೆ ಮೂಲಕ ಪುರಭವನಕ್ಕೆ ಕರೆ ತರಲಾಯಿತು. ಬಳಿಕ ಧ್ವಜಾರೋಹಣಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಲಯನ್ಸ್ ಕನ್ನಡ ಸಾಹಿತ್ಯ-ಸಂಸ್ಕೃತಿ ಸಮ್ಮೇಳನವನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಿದರು.  ಸಮ್ಮೇಳನದ ಸಮ್ಮೇಳನಾಧ್ಯಕ್ಷತೆಯನ್ನು ಹಿರಿಯ  ಸಾಹಿತಿ ಹೆಚ್.ದುಂಡಿರಾಜ್ ಅವರು ವಹಿಸಿದ್ದರು. ಉದ್ಘಾಟನೆ ಬಳಿಕ […]

ತುಳು ನಾಟಕ ರಂಗದ ಹಿರಿಯ ಕಲಾವಿದರಿಗೆ ಹಾಗೂ ತಜ್ಞರಿಗೆ ಸನ್ಮಾನ

Thursday, December 16th, 2010
ತುಳು ನಾಟಕ ಕಲಾವಿದರ ಒಕ್ಕೂಟ

ಮಂಗಳೂರು : ತುಳು ನಾಟಕ ಕಲಾವಿದರ ಒಕ್ಕೂಟ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಇವುಗಳ ಸಹಯೋಗದಲ್ಲಿ ತುಳು ನಾಟಕ ರಂಗದ ಹಿರಿಯ ಕಲಾವಿದರ ಹಾಗೂ ತಜ್ಞರ ಪ್ರಥಮ ಹಂತದ ಸನ್ಮಾನ ಸಮಾರಂಭವು ಇಂದು ಸಂಜೆ ಮಂಗಳೂರು ಪುರಭವನದಲ್ಲಿ ನಡೆಯಿತು. ಸನ್ಮಾನ ಸಮಾರಂಭದ ದೀಪ ಜ್ವಲನೆಯನ್ನು ಶರವು ಮಹಾಗಣಪತಿ ದೇವಸ್ಥಾನ, ಮಂಗಳೂರು ಇದರ ಆಡಳಿತ ಮೊಕ್ತೇಶರರಾದ ಎಸ್. ರಾಘವೇಂದ್ರ ಶಾಸ್ತ್ರಿ ನಡೆಸಿ ಕೊಟ್ಟರು. ಬಳಿಕ ಮಾತನಾಡಿದ ಅವರು ದೀಪ ಕತ್ತಲೆಯನ್ನು  ದೂರ ಸರಿಸಿ ಬೆಳಕನ್ನು ನೀಡುತ್ತದೆ, […]

ನಿಗದಿತ ವೇಳೆಯಲ್ಲಿ ನ್ಯಾಯಬೆಲೆ ಅಂಗಡಿಗಳು ತೆರೆದಿರಬೇಕು: ಜಿಲ್ಲಾಧಿಕಾರಿ ಸೂಚನೆ

Wednesday, December 15th, 2010
ಜಿಲ್ಲಾಧಿಕಾರಿ ಶ್ರೀ ಸುಬೋಧ್ ಯಾದವ್

ಮಂಗಳೂರು : ನ್ಯಾಯಬೆಲೆ ಅಂಗಡಿಗಳು ಬೆಳಗ್ಗೆ 8ರಿಂದ 12ಗಂಟೆಯವರೆಗೆ, ಸಂಜೆ 4ರಿಂದ 8 ಗಂಟೆಯವರೆಗೆ ತೆರೆದಿರಬೇಕು. ಅಂಗಡಿಗಳಲ್ಲಿರುವ ಪದಾರ್ಥಗಳು ಮತ್ತು ಬೆಲೆ ಬಗ್ಗೆ ಸವಿವರ ಬೋರ್ಡ್ ಹಾಕಿರಬೇಕು; ತೂಕದಲ್ಲಿ ವ್ಯತ್ಯಾಸವಿದೆ ಎಂಬ ಆರೋಪಗಳು ಬರಬಾರದು ಎಂದು ಜಿಲ್ಲಾಧಿಕಾರಿ ಶ್ರೀ ಸುಬೋಧ್ ಯಾದವ್ ಅವರು ಹೇಳಿದರು. ಅವರಿಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಮನ್ವಯ ಸಮಿತಿ ಪ್ರಗತಿ ಪರಿಶೀಲನೆ ಸಭೆಯನ್ನು ದ್ದೇಶಿಸಿ ಮಾತನಾಡುತ್ತಿದ್ದರು. ಪಡಿತರ ವಿತರಣೆ ವ್ಯವಸ್ಥೆಯಲ್ಲಿ ಸಾರ್ವಜನಿಕರಿಂದ ಯಾವುದೇ ದೂರುಗಳು ಬರಬಾರದು ಎಂದು ಹೇಳಿದ ಅವರು, ಎರಡು ತಿಂಗಳಿಗೊಮ್ಮೆ […]

ಹಿಂದೂ ಸಮಾಜೋತ್ಸವದ ಕಾರ್ಯಲಯ ಉದ್ಘಾಟನೆ

Tuesday, December 14th, 2010
ಹಿಂದೂ ಸಮಾಜೋತ್ಸವದ ಕಾರ್ಯಲಯ

ಮಂಗಳೂರು: ಜನವರಿ 2 ರಂದು ಹನುಮತ್ ಶಕ್ತಿ ಜಾಗರಣಾ ಸಮಿತಿ ಮಂಗಳೂರು ಇದರ ವತಿಯಿಂದ ಮಂಗಳೂರಿನ ನೆಹರೂ ಮೈದಾನಿನಲ್ಲಿ ನಡೆಯಲಿರುವ ಹಿಂದೂ ಸಮಾಜೋತ್ಸವದ ಕಾರ್ಯಾಲಯವನ್ನು ಇಂದು ಬೆಳಿಗ್ಗೆ ನಗರದ ಬಂಟ್ಸ್ ಹಾಸ್ಟೆಲ್ ಸಮೀಪ ಡಾ. ಪ್ರಭಾಕರ ಭಟ್ ಕಲ್ಲಡ್ಕ ಇವರು ಉದ್ಘಾಟಿಸಿದರು. ಹಿಂದೂಗಳು ಎಚ್ಚೆತ್ತುಕೊಂಡಲ್ಲಿ ಸಮಾಜದ ಅಭಿವೃದ್ಧಿಸಾಧ್ಯ, ಭಾರತದ ಪ್ರತಿಯೊಬ್ಬ ಪ್ರಜೆಯೂ ಹಿಂದುತ್ವವನ್ನು ಗೌರವಿಸಬೇಕು ಹಿಂದೂ ಸಮಾಜೋತ್ಸವಗಳು ಪರರಿಗೆ ಮಾರ್ಗದರ್ಶನವಾಗುವಂತೆ ಕಾರ್ಯಕರ್ತರು ಶ್ರಮವಹಿಸಬೇಕಿದೆ ಎಂದು ಡಾ. ಪ್ರಭಾಕರ ಭಟ್ ಕಲ್ಲಡ್ಕ ತನ್ನ ಉದ್ಘಾಟನಾ ಭಾಷಣದಲ್ಲಿ ಹೇಳಿದರು. ಕೊಲ್ಯ […]

ಬಿಎಸ್ಎನ್ಎಲ್ ಪ್ರಧಾನ ಕಛೇರಿ ಎದುರು ಸಿಐಟಿಯು ವತಿಯಿಂದ ದರಣಿ

Tuesday, December 14th, 2010
ಬಿಎಸ್ಎನ್ಎಲ್ ಪ್ರಧಾನ ಕಛೇರಿ ಎದುರು ಸಿಐಟಿಯು ವತಿಯಿಂದ ದರಣಿ

ಮಂಗಳೂರು; ಬಿಎಸ್ಎನ್ಎಲ್ ದಿನಕೂಲಿ ಕಾರ್ಮಿಕರ ಕೆಲಸದ ಭದ್ರತೆಗಾಗಿ ಸಿಐಟಿಯು ವತಿಯಿಂದ ಒಂದು ದಿನದ ಧರಣಿ ಸತ್ಯಾಗ್ರಹವು ಇಂದು ಬೆಳಿಗ್ಗೆ ನಗರದ ಬಿಎಸ್ಎನ್ಎಲ್ ಪ್ರಧಾನ ಕಛೇರಿ ಮುಂದುಗಡೆ ನಡೆಯಿತು. ಕೇಂದ್ರ ಸರಕಾರದ ಅಧೀನತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿಎಸ್ಎನ್ಎಲ್ ಪ್ರಧಾನ ಕಛೇರಿ ಹಾಗೂ ಎಲ್ಲಾ ಎಕ್ಸ್ಚೇಂಚ್ ಕೇಂದ್ರಗಳಲ್ಲಿ ದಿನಕೂಲಿ ಕಾರ್ಮಿಕರಿಗಾಗಿ ಗುತ್ತಿಗೆದಾರರ ಅಡಿಯಲ್ಲಿ ಕಳೆದ 12 ವರ್ಷಗಳಿಂದ ವೇತನ ಹೊರತು ಪಡಿಸಿ ಯಾವುದೇ ಸವಲತ್ತುಗಳಿಲ್ಲದೆ ದುಡಿಯುತ್ತಿದ್ದಾರೆ. ಕೆಲಸದ ಒತ್ತಡಗಳ ಮಧ್ಯೆ ಗ್ರಾಹಕರಿಗೆ ಅನುಕೂಲವಾಗುವಂತೆ ಸದಾ ದುಡಿಯುತ್ತಿರುವ ಈ ಕಾರ್ಮಿಕರಿಗೆ ಕೆಲಸದ ಭದ್ರತೆಯಿಲ್ಲ […]

ಶ್ರೀವಿಶ್ವೇಶತೀರ್ಥ ಶ್ರೀಪಾದರ ಅಭಿವಂದನಾ ಸಮಾವೇಶದಲ್ಲಿ ವಿಶ್ವ ಶಾಂತಿಯ ಸಂದೇಶ

Saturday, December 11th, 2010
ಸಂತ ಸಮಾವೇಶ

ಉಡುಪಿ : ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ಶ್ರೀಪಾದರ 80 ವರ್ಷದ ಅಭಿವಂದನಾ ಸಂತ ಸಮಾವೇಶ ವನ್ನು ಶುಕ್ರವಾರ ಸಂಜೆ  ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷ ಅಶೋಕ್ ಸಿಂಘಾಲ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು  ಅವರು ಕಾಂಚಿ ಶಂಕರಾಚಾರ್ಯರ ಮೇಲೆ ಕೊಲೆ ಆರೋಪ, ಆರೆಸ್ಸೆಸ್‌-ವಿ.ಹಿಂ.ಪಂ., ನಾಯಕರಿಗೆ ಹಿಂದು ಉಗ್ರಗಾಮಿ ಗಳೆಂಬ ಹಣೆಪಟ್ಟಿ ಕಟ್ಟಿರುವುದು, ಉಗ್ರಗಾಮಿಗಳನ್ನು ರಕ್ಷಿಸಲು, ನ್ಪೋಟ ನಡೆದಾಗ ಹಿಂದು ಉಗ್ರ ಗಾಮಿಗಳಿಂದ ನಡೆಯಿತೆಂಬ ಪುಕಾರು ಹುಟ್ಟಿಸುವುದೇ ಮೊದಲಾದ ಯತ್ನಗಳು ವ್ಯವಸ್ಥಿತ ವಾಗಿ ನಡೆಯುತ್ತಿದೆ. ಅಯೋಧ್ಯೆ, ತಿರುಪತಿಯಂತಹ […]

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಮೈತ್ರಿ ಇಲ್ಲ: ದೇವೇಗೌಡ

Friday, December 10th, 2010
ದೇವೇಗೌಡ

ಬೆಂಗಳೂರು  : ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಯಾವುದೇ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ  ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ತಿಳಿಸಿದ್ದಾರೆ. ಕಾಂಗ್ರೆಸ್ ಜತೆಗೆ ಮೈತ್ರಿಯ ಪ್ರಶ್ನೆಯೇ ಇಲ್ಲ ಜೆಡಿಎಸ್ ಏಕಾಂಗಿಯಾಗಿ ಸ್ಪರ್ಧಿಸಲಿದ್ದು ಎಲ್ಲಾ ಜಿಲ್ಲೆಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ ಎಂದು ದೇವೇಗೌಡ ತಿಳಿಸಿದ್ದಾರೆ. ರಾಜಕೀಯ ಪಕ್ಷವಾಗಿ ನೇರವಾಗಿ ಜನರ ಮುಂದೆ ಹೋಗುತ್ತೇವೆ. ಹೊಂದಾಣಿಕೆ ಮಾಡಿಕೊಳ್ಳದಿದ್ದರೆ ಜಾತ್ಯತೀತ ಮತ ವಿಭಜನೆಯಾಗಿ ಬಿಜೆಪಿಗೆ ಅನುಕೂಲವಾಗುತ್ತದೆ ಎಂಬ ಅಭಿಪ್ರಾಯವಿದೆ ಎಂದು ಪತ್ರಕರ್ತರಿಗೆ ತಿಳಿಸಿದರು. ಅಭಿವೃದ್ಧಿಯೇ ಮೂಲಮಂತ್ರ ಎಂದ ಬಿಜೆಪಿ […]

ಮಂಗಳೂರು ನಗರ ಕಾಂಗ್ರೇಸ್ ಸಮಿತಿಯ ಅಧ್ಯಕ್ಷರಾಗಿ ಕೆ.ಆಶ್ರಫ್ ಪದಗ್ರಹಣ

Thursday, December 9th, 2010
ನಗರ ಕಾಂಗ್ರೇಸ್ ಸಮಿತಿಯ ಅಧ್ಯಕ್ಷರಾಗಿ ಕೆ.ಆಶ್ರಫ್ ಪದಗ್ರಹಣ

ಮಂಗಳೂರು : ಮಾಜಿ ಮೇಯರ್ ಕೆ. ಅಶ್ರಫ್ ಅವರು ಮಂಗಳೂರು ನಗರ ಕಾಂಗ್ರೇಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಇಂದು ಸಂಜೆ ಮಂಗಳೂರಿನ  ಭಾರತೀಯ ಸ್ಕೌಟ್ ಮತ್ತು ಗೈಡ್ಸ್ ಭವನ ಲಾಲ್ಭಾಗ್ ಇಲ್ಲಿ ನಡೆದ ಸಮಾರಂಭದಲ್ಲಿ ಹಿಂದಿನ ಮಂಗಳೂರು ಉತ್ತರ ಕಾಂಗ್ರೇಸ್ ಸಮಿತಿ ಅಧ್ಯಕ್ಷ ಸುರೇಶ್ ಬಲ್ಲಾಳ್ ಇವರಿಂದ ಬಿ. ಜನಾರ್ಧನ ಪೂಜಾರಿ ಇವರ ಸಮ್ಮಖದಲ್ಲಿ ಪದಗ್ರಹಣ ನಡೆಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಕೇಂದ್ರ ಸಚಿವ ಬಿ. ಜನಾರ್ಧನ ಪೂಜಾರಿ ದೀಪ ಬೇಳಗಿಸುವುದರ ಮೂಲಕ ನೆರವೇರಿಸಿದರು. ಬಳಿಕ ಮಾತನಾಡಿದ […]