ಹೆಣ್ಣು ಮಗಳ ಮಾನ ಉಳಿಸಿದ ಆತ ಈಗ ಅಸಹಾಯಕ

Wednesday, November 4th, 2020
dinesh kottinja

ಮಂಗಳೂರು : ಕುಂಪನಮಜಲು ಎಂಬಲ್ಲಿ ಹಿಂದೂ ಹೆಣ್ಣುಮಗಳೊಬ್ಬಳ ಮೇಲೆ ಅತ್ಯಾಚಾರಕ್ಕೆ ಮುಂದಾದ ನಾಲ್ವರು ನೀಚರ ಬಗ್ಗೆ ಪೊಲೀಸರಿಗೆ ಮಾಹಿತಿ  ನೀಡಿ ಮಾರಣಾಂತಿಕ ಹಲ್ಲೆ ಗೊಳಗಾದ ಫೋಟೋಗ್ರಾಫರ್ ದಿನೇಶ್ ಕೊಟ್ಟಿಂಜೆ ಈಗ ಎಲ್ಲವನ್ನು ಕಳಕೊಂಡು ಅಸಹಾಯಕರಾಗಿದ್ದಾರೆ. ಅಕ್ಟೊಬರ್ 28ರಂದು ಫೋಟೋ ತೆಗೆಯುವ ನೆಪದಲ್ಲಿ ಸ್ಟುಡಿಯೋಗೆ  ಬಂದು ದಿನೇಶ್ ಅವರ ಹೊಟ್ಟೆಗೆ ಇರಿದು, ತಲೆಯಭಾಗಕ್ಕೆ ಹೊಡೆದು, ಅವರ ಬಲಗೈ ಹೆಬ್ಬೆರಳನ್ನು ಕತ್ತರಿಸಲಾಗಿತ್ತು. ಅವರು ಆಸ್ಪತ್ರೆಗೆ ದಾಖಲಾಗಿ ಆರುದಿನಗಳ ವರೆಗೆ ಅವರು ಬದುಕುಳಿಯುವ ಭರವಸೆ ಇರಲಿಲ್ಲ. ಈಗ ಚೇತರಿಸಿಕೊಂಡರು ಅವರು ಮುಂದಿನಂತಾಗಲು ಸಾಧ್ಯವಿಲ್ಲ. ಅವರು ಕೆಲಸ […]

ಪುಣಚಾ ಪಾಲಾಸತ್ತಡ್ಕ ದಲ್ಲಿ ಟಿಪ್ಪರ್ ಲಾರಿ ಪಲ್ಟಿ ಹೊಡೆದು ಚಾಲಕ ದಾರುಣ ಸಾವು

Wednesday, November 4th, 2020
Tipper

ವಿಟ್ಲ: ಪುಣಚಾ ಗ್ರಾಮದ ಪಾಲಾಸತ್ತಡ್ಕ ಎಂಬಲ್ಲಿ ಜಲ್ಲಿ ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಪಲ್ಟಿ ಹೊಡೆದು ಚಾಲಕ ದಾರುಣವಾಗಿ ಸಾವನ್ನಪ್ಪಿ,  ಕ್ಲೀನರ್ ಗೆ  ಗಾಯಗಳಾಗಿದೆ. ಪುಣಚಾ-ಪುತ್ತೂರು ರಸ್ತೆಯ ಪಾಲಾಸತ್ತಡ್ಕ ದಲ್ಲಿ ಬ್ರೇಕ್ ವೈಫಲ್ಲಕ್ಕೀಡಾದ ಟಿಪ್ಪರ್ ಲಾರಿ ರಸ್ತೆ ಬದಿ ಡಿಕ್ಕಿಹೊಡೆದು ಪಲ್ಟಿಯಾಗಿದೆ. ಅಪಘಾತದ ಸಂದರ್ಭ ಚಾಲಕ ರಫೀಕ್ ಟಿಪ್ಪರ್ ಲಾರಿಯಡಿಯಲ್ಲಿ ಸಿಲುಕಿ ಗಂಟೆಗಳ ಕಾಲ ಒದ್ದಾಡುತ್ತಿದ್ದರೂ ಟಿಪ್ಪರ್ ಮೇಲಕ್ಕೆತ್ತಲು ಸಾಧ್ಯವಾಗಲಿಲ್ಲ. ಬಳಿಕ ಕ್ರೇನ್ ಮೂಲಕ ಲಾರಿಯನ್ನು ಮೇಲಕ್ಕೆತ್ತಿ ದರೂ ಅಷ್ಟರಲ್ಲಾಗಲೇ ಚಾಲಕ ರಫೀಕ್ ಪ್ರಾಣ ಬಿಟ್ಟಿದ್ದಾರೆ. ಕ್ಲೀನರ್ ಗೆ ಸಣ್ಣ […]

ಮಂಗಳೂರು : ಕೇರಳ ಮೂಲದ ಉದ್ಯಮಿಯನ್ನು ಮನೆಯಲ್ಲೇ ಕೊಲೆಗೈದ ದುಷ್ಕರ್ಮಿಗಳು

Tuesday, November 3rd, 2020
Murder

ಮಂಗಳೂರು : ಕೇರಳ ಮೂಲದ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಚೂರಿಯಿಂದ ಹಾಡಹಗಲೇ ಇರಿದು ಹತ್ಯೆ ಮಾಡಿದ ಘಟನೆ ನಗರದ ಕಾವೂರಿನಲ್ಲಿ ಮಂಗಳವಾರ ನಡೆದಿದೆ. ಕಾವೂರು ಮಲ್ಲಿ ಲೇಔಟ್ ನಿವಾಸಿ ಸುರೇಂದ್ರನ್ (60) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ಮೂಲತಃ ಕೇರಳದವರಾದ ಸುರೇಂದ್ರನ್ ಅವರು ಹಲವು ವರ್ಷಗಳಿಂದ ಕಾವೂರು ಮಲ್ಲಿ ಲೇಔಟ್‌ನಲ್ಲೇ ಸ್ವಂತ ಮನೆ ಮಾಡಿ ತನ್ನ ಪತ್ನಿ ಜತೆ ವಾಸಿಸುತ್ತಿದ್ದರು. ಮಂಗಳವಾರ ಸುರೇಂದ್ರನ್ ನಗರಕ್ಕೆ ಹೋಗಿದ್ದರೆ, ಅವರ ಪತ್ನಿ ಫಾರ್ಮ್ ಉದ್ಯಮ ವ್ಯವಹಾರ ನೋಡಿಕೊಳ್ಳಲು ತೆರಳಿದ್ದರು. ಮಧ್ಯಾಹ್ನ 1 […]

ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅಯೋದ್ಯೆ ರಾಮ ಮಂದಿರ ಭೇಟಿ

Tuesday, November 3rd, 2020
Pejavar Seer

ಉಡುಪಿ :  ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ  ರವಿವಾರ ಟ್ರಸ್ಟ್ ಸಭೆಯಲ್ಲಿ ಭಾಗವಹಿಸಿದ ನಂತರ ಸೋಮವಾರ ಅಯೋಧ್ಯೆಯಲ್ಲಿ ರಾಮಲಲ್ಲಾನ ದರ್ಶನ ಪಡೆದ ರಲ್ಲದೇ ಬಳಿಕ ರಾಮಮಂದಿರ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ ಭರದಿಂದ ನಡೆಯುತ್ತಿರುವ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದರು. ಅಯೋದ್ಯೆ ರಾಮ ಮಂದಿರ ತೀರ್ಥಕ್ಷೇತ್ರ ಟ್ರಸ್ಟ್ ಕಾರ್ಯಾಲಯಕ್ಕೂ ಶ್ರೀಗಳು ಭೇಟಿ ನೀಡಿದರು. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ವಿಶ್ವಸ್ಥರೂ ಆಗಿರುವ ಅವರು ಇದೀಗ ಅಯೋಧ್ಯೆಗೆ ತೆರಳಿದ್ದು, ರವಿವಾರ ಟ್ರಸ್ಟ್ ಸಭೆಯಲ್ಲಿ ಭಾಗವಹಿಸಿದ ನಂತರ ಜನ್ಮಭೂಮಿಗೆ […]

ಚಿಕ್ಕಮಗಳೂರು ಪೊಲೀಸರ ಭರ್ಜರಿ ಬೇಟೆ – ಭಾರಿ ಪ್ರಮಾಣದ ಖೋಟಾ ನೋಟು ವಶ

Monday, November 2nd, 2020
Counterfeit note

ವಿಟ್ಲ: ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಠಾಣಾ ವ್ಯಾಪ್ತಿಯ ಹಾಂದಿ ಸರ್ಕಲ್ ಬಳಿ ಅನುಮಾನಾಸ್ಪದವಾಗಿ ಬರುತ್ತಿದ್ದ ಪುತ್ತೂರು ನೋಂದಣಿಯ ಮಾರುತಿ ಕಾರನ್ನು ತಡೆದ ಪೊಲೀಸರ ತಂಡ ತನಿಖೆ ನಡೆಸಿದಾಗ ಬರೋಬ್ಬರಿ 5,5೦ಲಕ್ಷ (500ರ ನೋಟುಗಳು) ನಕಲಿ ನೋಟುಗಳು ಪತ್ತೆಯಾಗಿದೆ. ಕಾರಿನಲ್ಲಿದ್ದ ಬೆಳ್ತಂಗಡಿಯ ಸಂತೋಷ್ ಮತ್ತು ಸುರತ್ಕಲ್ ನ ನಝೀರ್ ಎಂಬಿಬ್ಬರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದಾಗ ಅಂತರ್ರಾಜ್ಯ ಖೋಟಾನೋಟು ಜಾಲ ಬೆಳಕಿಗೆ ಬಂದಿದೆ. ದೇಶದ್ರೋಹ ಪ್ರಕರಣದ ಕಿಂಗ್ ಪಿನ್ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಕರಾಯಿ […]

ಪೊಲೀಸರಿಗೆ ಮಾಹಿತಿ ನೀಡಿದ್ದೆ ಸ್ಟುಡಿಯೋ ಮಾಲೀಕ ನ ಕೊಲೆ ಯತ್ನಕ್ಕೆ ಕಾರಣವಾಯಿತೇ ?

Wednesday, October 28th, 2020
dinesh Shetty

ಬಂಟ್ವಾಳ : ಮೂವರು ದುಷ್ಕರ್ಮಿಗಳ ತಂಡ ಫರಂಗಿಪೇಟೆಯಲ್ಲಿ  ಫೊಟೋಗ್ರಾಫರ್ ಒಬ್ಬರ ಮೇಲೆ ದಾಳಿ ನಡೆಸಿ ಹತ್ಯೆಗೆ ಯತ್ನಿಸಿರುವ ಘಟನೆ ಬುಧವಾರ ರಾತ್ರಿ ವೇಳೆ ನಡೆದಿದೆ. ಫರಂಗಿಪೇಟೆಯಲ್ಲಿರುವ ಪೂಂಜಾ ಕಾಂಪ್ಲೆಕ್ಸ್ ನಲ್ಲಿರುವ ತೃಷಾ ಸ್ಟುಡಿಯೋ ಮಾಲಕ ದಿನೇಶ್ ಕೊಟ್ಟಿಂಜ ಎಂಬವರ ಮೇಲೆ ಅಪರಿಚಿತ ವ್ಯಕ್ತಿಗಳು ರಾತ್ರಿ ತಲವಾರು ದಾಳಿ ನಡೆಸಿದ್ದಾರೆ. ದಿನೇಶ ಅವರ ಹೊಟ್ಟೆಯಭಾಗಕ್ಕೆ ಮೊದಲು ಇರಿಯಲಾಗಿದೆ. ಹಲ್ಲೆಯನ್ನು ತಡೆಯಲೆತ್ನಿಸಿದ್ದಾಗ ಕೈ ಬೆರಳು ತುಂಡಾಗಿದೆ ಮತ್ತು ತಲೆಯ ಹಿಂಬದಿಗೆ ಗಂಭೀರ ಗಾಯಗಳಾಗಿದೆ. ಗಂಭೀರ ಸ್ಥಿತಿಯಲ್ಲಿ  ಗಾಯಗೊಂಡ ದಿನೇಶ್ ಅವರನ್ನು ಮಂಗಳೂರು ಎಜೆ  […]

ಲವ್ ಜಿಹಾದ್ ಗೆ ಒಪ್ಪದಕ್ಕೆ ಗುಂಡಿಕ್ಕಿ ಯುವತಿಯ ಕೊಲೆ

Tuesday, October 27th, 2020
paridhabadh

ಚಂಡೀಗಢ: ತನ್ನ ಧರ್ಮಕ್ಕೆ ಮತಾಂತರವಾಗುವಂತೆ ಮೂರು ವರ್ಷದಿಂದ ಯುವತಿಗೆ ಬಲವಂತ ಮಾಡಿ ಕೊನೆಗೆ ಹುಡುಗಿ ಒಪ್ಪದೇ ಇದ್ದುದಕ್ಕೆ ಏಕಾಏಕಿ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ ಪ್ರಕರಣ ಹರಿಯಾಣದ ಫರಿದಾಬಾದ್ ನಲ್ಲಿ ನಡೆದಿದೆ. ಇದು ಲವ್ ಜಿಹಾದ್ ಎಂದು ಯುವತಿಯ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಅಂತಿಮ ವರ್ಷದ ಬಿ.ಕಾಂ ವಿದ್ಯಾರ್ಥಿನಿ ಪರೀಕ್ಷೆ ಮುಗಿಸಿ ಕಾಲೇಜಿನಿಂದ ಹೊರಗೆ ಬರುತ್ತಿದ್ದಂತೆ ದುರುಳರು ಆಕೆಯ ಮೇಲೆ ದಾಳಿ ನಡೆಸಿದ್ದಾರೆ. ಆರಂಭದಲ್ಲಿ ಅಪಹರಿಸಲು ಮುಂದಾಗಿದ್ದು, ಈ ವೇಳೆ ಯುವತಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾಗ ಗುಂಡು […]

ಸುರೇಂದ್ರ ಬಂಟ್ವಾಳ್ ಕೊಲೆ ಆರೋಪಿ ಸತೀಶ್ ಕುಲಾಲ್ ಮತ್ತು ಇನ್ನೊಬ್ಬ ಸಹಚರನ ಬಂಧನ

Sunday, October 25th, 2020
Surendra Bantwal

ಬಂಟ್ವಾಳ : ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆ.20ರಂದು ರಾತ್ರಿ ಸುರೇಂದ್ರ ಬಂಟ್ವಾಳ್ ನನ್ನು ಬಿ.ಸಿ.ರೋಡಿನ ಪ್ಲ್ಯಾಟ್ ನಲ್ಲಿ ಚೂರಿಯಿಂದ ಇರಿದು ಹತ್ಯೆಗೈದ ಪ್ರಕರಣದ ಪ್ರಮುಖ ಆರೋಪಿಗಳಾದ ಸುರೇಂದ್ರನ ಆಪ್ತ ಸ್ನೇಹಿತ ಬಂಟ್ವಾಳ ನಿವಾಸಿ ಸತೀಶ್ ಕುಲಾಲ್ ಮತ್ತು ಕಿನ್ನಿಗೋಳಿ ನಿವಾಸಿ ಗಿರೀಶ್ ಯಾನೆ ಗಿರಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಬ್ಬರು ಕಾಸರಗೋಡು ಕಡೆಯಿಂದ ಬಾಡಿಗೆ ವಾಹನದಲ್ಲಿ ಬಂಟ್ವಾಳ ಕಡೆ ಶನಿವಾರ ರಾತ್ರಿ ಬರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ಡಿವೈಎಸ್ಪಿ […]

ಸುರೇಂದ್ರ ಬಡ್ಡಿ ವ್ಯವಹಾರದ ಪಾಪದ ಹಣವನ್ನು ಕಿಶನ್ ಹೆಗ್ಡೆ ಕೊಲೆಗೆ ಬಳಸಿದ್ದ, ಅದಕ್ಕಾಗಿ ಕೊಲೆ ಶಂಕೆ

Thursday, October 22nd, 2020
suresh Kulal

ಬಂಟ್ವಾಳ : ಕಿಶನ್ ಹೆಗ್ಡೆ ಕೊಲೆಗೆ ಪ್ರತಿಕಾರವಾಗಿ ಸುರೇಂದ್ರ ಬಂಟ್ವಾಳ್ ಅವರನ್ನು ಕೊಲೆ ಮಾಡಲಾಗಿದೆ ಎನ್ನುವ ಬಗ್ಗೆ ಮಹತ್ವದ ಸುಳಿವು ಸಿಕ್ಕಿದ್ದು,  ಸುರೇಂದ್ರನ ಆಪ್ತ ಸ್ನೇಹಿತ  ಎಂದು ಹೇಳಿಕೊಂಡು ಒಬ್ಬ ವ್ಯಕ್ತಿ ಆಡಿಯೋ ಕಳಿಸಿದ್ದು ಪೊಲೀಸರು ಸುಳಿವಿನ ಬೆನ್ನು ಹತ್ತಿದ್ದಾರೆ. ರೌಡಿ ಶೀಟರ್, ನಟ ಸುರೇಂದ್ರ ಭಂಡಾರಿ ಬಂಟ್ವಾಳ್ ಹತ್ಯೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ಎರಡು ಪ್ರತ್ಯೇಕ ತಂಡ ರಚಿಸಿ ಹಂತಕರ ಬೇಟೆ ಆರಂಭಿಸಿದ್ದಾರೆ. ಸುರೇಂದ್ರ ಬಂಟ್ವಾಳ್ ಅವರ ಆಪ್ತ ಸ್ನೇಹಿತ ಸತೀಶ್ ಕುಲಾಲ್ ಎಂದು ಹೇಳಿಕೊಂಡು ಒಬ್ಬ ವ್ಯಕ್ತಿ ಆಡಿಯೋ ಸಂದೇಶದ  […]

ಬೈಕ್ ನಲ್ಲಿ ಬಂದು ಬಾರ್ ಮಾಲೀಕನನ್ನ ಹತ್ಯೆಗೈದ ದುಷ್ಕರ್ಮಿಗಳು

Friday, October 16th, 2020
Manish Shetty

ಬೆಂಗಳೂರು: ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಬಾರ್ ಮಾಲೀಕನನ್ನ ಹತ್ಯೆಗೈದಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ರಾತ್ರಿ ನಡೆದಿದೆ. ನಗರದ ಪ್ರತಿಷ್ಠಿತ ಬ್ರಿಗೇಡ್ ರಸ್ತೆಗೆ ಹೊಂದಿಕೊಂಡಿರುವ ಆರ್‌.ಎಚ್‌.ಪಿ ರಸ್ತೆಯಲ್ಲಿರುವ ಡ್ಯೂಯೆಟ್ ಬಾರ್‌ ಮಾಲೀಕ ಮನೀಶ್ ಶೆಟ್ಟಿ (45 ವರ್ಷ) ಎಂಬುವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮೂಲಗಳ ಪ್ರಕಾರ ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಮನೀಷ್ ಅವರ ಬಾರ್ ಮುಂಭಾಗದಲ್ಲೇ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಅವರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಗುಂಡೇಟಿನಿಂದ […]