ಮಂಗಳೂರು : ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮಾರುಕಟ್ಟೆಯಲ್ಲಿ ಹೂ, ತರಕಾರಿಗಳಿಗೆ ಬೆಲೆ ಏರಿಕೆ
Friday, August 23rd, 2019ಮಂಗಳೂರು : ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮಾರುಕಟ್ಟೆಯಲ್ಲಿ ಹೂ, ಹಣ್ಣು-ತರಕಾರಿ ಬೆಲೆ ಸಿಕ್ಕಾಪಟ್ಟೆ ಹೆಚ್ಚಾಗಿದ್ದು, ಬೆಲೆ ಏರಿಕೆ ನಡುವೆಯೂ ಖರೀದಿ ಭರಾಟೆ ಜೋರಾಗಿತ್ತು. ಹಬ್ಬದ ತಯಾರಿ ಬಿರುಸಾಗಿದ್ದು, ಹೂ, ಹಣ್ಣು ವ್ಯಾಪಾರಸ್ಥರು ಬಿಡುವಿಲ್ಲದ ವ್ಯಾಪಾರದಲ್ಲಿ ತೊಡಗಿದ್ದಾರೆ. ಹಾಸನ, ತುಮಕೂರು, ಹಾವೇರಿ, ಬೆಂಗಳೂರು ಸೇರಿದಂತೆ ಹಲವೆಡೆಯಿಂದ 150ಕ್ಕೂ ಅಧಿಕ ಹೂವಿನ ವ್ಯಾಪಾರಿಗಳು ಆಗಮಿಸಿದ್ದಾರೆ. ಮಾರುಕಟ್ಟೆಯಲ್ಲಿ ಸೇವಂತಿಗೆ, ಜೀನಿಯಾ, ಕಾಕಡ, ಗುಲಾಬಿ, ಮಲ್ಲಿಗೆಗೆ ಬೇಡಿಕೆ ಹೆಚ್ಚಾಗಿದ್ದು, ಖರೀದಿಸಲು ಗ್ರಾಹಕರು ಮುಗಿಬೀಳುತ್ತಿದ್ದಾರೆ.