ಉಡುಪಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 164ಕ್ಕೆ ಎರಿಕೆ, ಶುಕ್ರವಾರ 15 ಹೊಸ ಸೋಂಕು ಪ್ರಕರಣ ಪತ್ತೆ

Friday, May 29th, 2020
Udupi-covid

ಉಡುಪಿ: ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 164ಕ್ಕೆ ಎರಿಕೆಯಾಗಿದ್ದು, ಶುಕ್ರವಾರ 15 ಹೊಸ ಸೋಂಕು ಪ್ರಕರಣಗಳು ದೃಢವಾಗಿದೆ. ಸೋಂಕಿತರಲ್ಲಿ ಇಬ್ಬರು ಹತ್ತು ವರ್ಷಕ್ಕಿಂದ ಕಡಿಮೆ ವಯಸ್ಸಿನ ಮಕ್ಕಳಾಗಿದ್ದರೆ, ಇಬ್ಬರು 60 ವರ್ಷಕ್ಕಿಂದ ಮೇಲ್ಪಟ್ಟ ವೃದ್ಧರೂ ಸೇರಿದ್ದಾರೆ. ಇಂದಿನ ಎಲ್ಲಾ 14 ಪ್ರಕರಣಗಳೂ ಕೂಡಾ ಮಹಾರಾಷ್ಟ್ರದಿಂದ ಬಂದವರಿಂದಲೇ ವರದಿಯಾಗಿದೆ. ಇವರೆಲ್ಲರನ್ನೂ ನಿಗಧಿತ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗುತ್ತದೆ. ಇವರಲ್ಲಿ ಗ್ರೀನ್ ಜೋನ್ ನಲ್ಲಿದ್ದ ಜಿಲ್ಲೆಗೆ ಮಹಾರಾಷ್ಟ್ರದಿಂದ ಬರುತ್ತಿರುವವರಿಂದ ಸೋಂಕು ಪ್ರಕರಣ ಹೆಚ್ಚುತ್ತಿದೆ. ಕೇರಳ, ತೆಲಂಗಾಣ ಪ್ರಯಾಣಿಕರಲ್ಲೂ ಕೋವಿಡ್-19 ಸೋಂಕು ಕಾಣಿಸಿಕೊಂಡಿದ್ದು, ಆದರೆ ಮಹಾರಾಷ್ಟ್ರದ […]

ಹುಬ್ಬಳ್ಳಿಗೆ ಇನ್ಮೇಲೆ ವಿಮಾನ ಬರಲ್ಲ, ಇಲ್ಲಿಂದ ಹೋಗಲ್ಲ

Friday, May 29th, 2020
star Airlines

ವರದಿ: ಶಂಭು, ಮೆಗಾಮೀಡಿಯಾ ನ್ಯೂಸ್‌, ಹುಬ್ಬಳ್ಳಿ ಬ್ಯೂರೋ- ಹುಬ್ಬಳ್ಳಿ: ಲಾಕ್ ಡೌನ್‌ ನಿಂದ ಎರಡು ತಿಂಗಳುಗಳ ಕಾಲ ಬಂದ್‌ ಆಗಿದ್ದ ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕಳೆದ ಮೂರು ದಿನಗಳ ಹಿಂದೆ ಸ್ಟಾರ್‌ ಏರ್‌ ಲೈನ್ಸ್‌ ಸಂಸ್ಥೆಯು ಹುಬ್ಬಳ್ಳಿಯಿಂದ ಬೆಂಗಳೂರು, ದೆಹಲಿ ಮತ್ತು ಮುಂಬಯಿಗೆ ವಿಮಾನ ಸಂಚಾರ ಆರಂಭಿಸಿತ್ತು. ಆದರೀಗ ಕೇವಲ ಮೂರೇ ದಿನಗಳಲ್ಲಿ ಈ ಸಂಸ್ಥೆಯು ನಗರದಿಂದ ಸಂಚರಿಸುತ್ತಿದ್ದ ತನ್ನೆಲ್ಲ ವಿಮಾನಯಾನಗಳನ್ನು ದಿಢೀರ್‌ ಎಂದು ಬಂದ್‌ ಮಾಡಿದೆ. ಈ ಬಗ್ಗೆ ವಿಚಾರಿಸಿದರೆ, ಪ್ರಯಾಣಿಕರ ಕೊರತೆ ಹಾಗೂ […]

ಪಿಯುಸಿ: ಪಿಸಿಎಂಬಿ, ಇಂಗ್ಲೀಷ್‌ ಭಾಷಾ ಉತ್ತರ ಪತ್ರಿಕೆ ಮೌಲ್ಯಮಾಪನವಿಲ್ಲ

Thursday, May 28th, 2020
suresh-kumar

ಬೆಂಗಳೂರು: ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ಪ್ರಾರಂಭಿಸಲಾಗಿದ್ದು, ಯಾವುದೇ ಉಪನ್ಯಾಸಕರ ಸುರಕ್ಷತೆಗೆ ಭಂಗ ಬಾರದ ರೀತಿಯಲ್ಲಿ ಈ ಪ್ರಕ್ರಿಯೆಯನ್ನು ಆಯೋಜಿಸಲಾಗಿದೆ. ಕೊರೋನಾ ಸೃಷ್ಟಿಸಿರುವ ಅನಿವಾರ್ಯ ಸ್ಥಿತಿಯಲ್ಲಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗದ ರೀತಿಯಲ್ಲಿ ಮೌಲ್ಯಮಾಪನ ಕಾರ್ಯವನ್ನು ಕಾಲಮಿತಿಯಲ್ಲಿ ಪೂರೈಸಬೇಕಾದ ಅಗತ್ಯತೆಯನ್ನು ತಾವು ಸಹ ಒಪ್ಪುತ್ತೀರೆಂಬುದು ನನ್ನ ಭರವಸೆಯಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ. ಮೇ. 27 ರಿಂದ ಪ್ರಾರಂಭವಾಗಿರುವ ಮೌಲ್ಯಮಾಪನ ಪ್ರಕ್ರಿಯೆ ಪ್ರಸ್ತುತ ಲಭ್ಯವಿರುವ ಮೌಲ್ಯಮಾಪಕರ ಆಧಾರದ […]

ದಿನ ಭವಿಷ್ಯ : ನಿಮ್ಮಲ್ಲಿನ ಬೇಜವಾಬ್ದಾರಿತನದಿಂದ ಇಂದು ಕೆಲವು ಸಂಕಷ್ಟಗಳು ಈಡಾಗಬಹುದು

Thursday, May 28th, 2020
Guru-Raghavendra

ಶ್ರೀ ಗುರು ರಾಘವೇಂದ್ರ ಸ್ವಾಮಿಯ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ . ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150 ಮೇಷ ರಾಶಿ ಸಕಾರಾತ್ಮಕ ಚಿಂತೆಯ ಫಲಗಳಿಂದ ಶುಭಕರವಾದ ವಾತಾವರಣ ನಿರ್ಮಿಸಲಿದ್ದೀರಿ. ಯೋಜನೆಗಳಲ್ಲಿ ಉತ್ತಮ ರೀತಿಯ ಪಾಲ್ಗೊಳ್ಳುವಿಕೆ ಕಂಡುಬರುತ್ತದೆ. ವ್ಯವಹಾರ ನಿಮಿತ್ತ ಪ್ರಯಾಣ ಮಾಡಬೇಕಾದ ಸಂದರ್ಭ ಬರಲಿದೆ ಇದು ಲಾಭಾಂಶ ತಂದುಕೊಡುತ್ತದೆ. ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡುವುದು ಸೂಕ್ತ. ಸಂಗಾತಿಯ ಇಷ್ಟಾರ್ಥಗಳನ್ನು […]

ಹುಬ್ಬಳ್ಳಿ ಯಲ್ಲಿ ಸರಳವಾಗಿ ರಂಜಾನ್ ಆಚರಣೆ

Monday, May 25th, 2020
Hubli-Ramzan

ಹುಬ್ಬಳ್ಳಿ : ಅಲ್ತಾಫ್ ನಗರ ಮದೀನಾ ಮಸೀದಿಯಲ್ಲಿ ಮೌಲಾನಾ ಅಬ್ದುಲ್ ಹಕೀಮ್ ತಹಶಿಲ್ದಾರ ಅವರಿಂದ ನಮಾಜ ಪ್ರಾರ್ಥನೆ ಸಲ್ಲಿಸಿಲಾಯಿತು.  ಈದ್- ಉಲ್ಲ್ – ಪೀತರ್ ನಮಾಜ ವು ಬೆಳಿಗ್ಗೆ 9-30 ಕ್ಕೆ ಕೇವಲ 5 ಜನರು ಮಾತ್ರ ನಮಾಜ ಸಲ್ಲಿಸಿದರು. ಕರೋನಾ ವೈರಸ್ ನಿಂದ ದೇಶ ಎದುರಿಸುತ್ತಿರುವ ಸಂಕಷ್ಟ ಗಳು ದೂರವಾಗಿ ಜನರು ನೆಮ್ಮದಿ ಜೀವನವನ್ನು ನಡೆಯುವಂತೆ ಆಗಲೇಂದು ಪ್ರಾರ್ಥನೆ ಮಾಡಲಾಯಿತು. ಅದರಂತೆ ಓಣಿಯ ಮುತವಲ್ಲಿ ಹಾಗೂ ಪಾಲಿಕೆಯ ಹಿರಿಯ ಸದಸ್ಯರು, ಅಂಜುಮನ್-ಏ-ಇಸ್ಲಾಂ ಸಂಸ್ಥೆಯ ಉಪಾಧ್ಯಕ್ಷರು ಶ್ರೀ ಅಲ್ತಾಫ್ […]

ಉಡುಪಿ ಜಿಲ್ಲೆಯಲ್ಲಿ ಎಂಟು ಮಕ್ಕಳು ಸೇರಿ 16 ಜನರಿಗೆ ಕೊರೋನಾ ಸೋಂಕು ದೃಢ

Monday, May 25th, 2020
Udupi Covid19

ಉಡುಪಿ: ಜಿಲ್ಲೆಯಲ್ಲಿ ಮತ್ತೆ 16 ಜನರಿಗೆ ಕೊರೋನಾ ಸೋಂಕು ದೃಢವಾಗಿದೆ. ಇದರಿಂದ ಕಳೆದ 24 ಗಂಟೆಯಲ್ಲಿ ಜಿಲ್ಲೆಯಲ್ಲಿ ಸೋಂಕು ದೃಢವಾದವರ ಸಂಖ್ಯೆ32 ಕ್ಕೆ ಏರಿಕೆಯಾಗಿದೆ. ಇದರಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ ಶತಕ ದಾಟಿದ್ದು 108 ಆಗಿದೆ. ಇಂದು ಸಂಜೆ ವರದಿಯಾದ 16 ಪ್ರಕರಣಗಳ ಪೈಕಿ 13 ಪ್ರಕರಣಗಳು ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ಇದರಲ್ಲಿ ಒಂದು ವರ್ಷದ ಮಗುವೂ ಸೇರಿದೆ. ಸೋಂಕಿತ ಸಂಖ್ಯೆ 1435ರ ಸಂಪರ್ಕದಿಂದ 65 ವರ್ಷದ ಮಹಿಳೆಗೆ ಸೋಂಕು ತಾಗಿದ್ದು, ಕಂಟೈನ್ ಮೆಂಟ್ ಪ್ರದೇಶಕ್ಕೆ ಭೇಟಿ ನೀಡಿದ […]

ಆಕುರ್ಲಿಯಲ್ಲಿ ಕಟ್ಟಡ ಕಾರ್ಮಿಕರನ್ನು ವಂಚಕರಿಂದ ರಕ್ಷಿಸಿದ ಮುಂಬಯಿ ನಗರ ಸೇವಕ ಮತ್ತು ಭಜನಾ ಮಂಡಳಿ ಸದಸ್ಯರು

Sunday, May 24th, 2020
Panwail

ಮುಂಬಯಿ : ಪನ್ವೇಲ್ ಪರಿಸರದ ಆಕುರ್ಲಿಯಲ್ಲಿ ಸುಮಾರು 46 ಮಂದಿ ಬಿಹಾರ್ ರಾಜ್ಜದ ಕಟ್ಟಡ ಕಾರ್ಮಿಕರು ಸಾಮಾನು ವಿತರಿಸುವ ಟೆಂಪೋದಲ್ಲಿ ತಮ್ಮ ಊರಿಗೆ ತೆರಳಲು ಡಿಮಾರ್ಟ್ ಬದಿಯಲ್ಲಿರುವ ಮೈದಾನದಲ್ಲಿ ಸಿದ್ಧತೆ ನಡೆಸಿದ್ದರು. ವಿಷಯ ತಿಳಿದು ರಾತ್ರಿ ಸುಮಾರು 8 ಗಂಟೆಗೆ ಅವರಿಗೆ ಸಹಾಯ ಮಾಡುವ ಉದ್ದೇಶದಿಂದ ಕೂಡಲೇ ಕಾರ್ಯಪ್ರವರ್ತರಾದ ಪನ್ವೇಲ್ ನಗರಸೇವಕರಾದ ಸಂತೋಷ್ ಜಿ ಶೆಟ್ಟಿ , ಶ್ರೀ ಭಾಸ್ಕರ್ ಶೆಟ್ಟಿ ಪದ್ಮ, , ಶ್ರೀ ಗುರು ಶೆಟ್ಟಿ ಕಾಪು ಮತ್ತು ಶ್ರೀ ಸುಧಾಕರ್ ಪೂಜಾರಿ ಕೆಮ್ಥೂರ್ […]

ಮಳೆಗಾಲ: ಪ್ರಾಕೃತಿಕ ದುರಂತದಿಂದ ಹಾನಿ ತಪ್ಪಿಸಲು ಈಗಿನಿಂದಲೇ ಕ್ರಮ -ಜಿಲ್ಲಾಧಿಕಾರಿ 

Saturday, May 23rd, 2020
rain-DC

ಮಂಗಳೂರು : ಕಳೆದ ವರ್ಷದಲ್ಲಿ ಅಪಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡು ರಸ್ತೆ, ಸೇತುವೆ ಸೇರಿದಂತೆ ಅನೇಕ ರೀತಿ ಮೂಲ ಸೌಕರ್ಯಗಳಿಗೆ ಹಾನಿ ಉಂಟಾಗಿತ್ತು. ಪ್ರಸುತ್ತ ಸಾಲಿನಲ್ಲಿ ಕಳೆದ ಸಾಲಿಗಿಂತ ಹೆಚ್ಚುವರಿ ಮಳೆಯಾದರೆ ಸಮರ್ಥವಾಗಿ ನಿಭಾಯಿಸಲು ಅಗತ್ಯವಾದ ಸಿದ್ಧತೆಗಳನ್ನು ಆಯಾ ಇಲಾಖೆಯ ಅಧಿಕಾರಿಗಳು ಮಾಡಿಕೊಂಡಿರಬೇಕು. ದಕ್ಷಿಣ ಕನ್ನಡ ಜಿಲ್ಲಾಡಳಿತ ಈ ನಿಟ್ಟಿನಲ್ಲಿ ಈಗಾಗಲೇ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ […]

ಕೂಳೂರು ಹಳೇ ಸೇತುವೆ ದುರಸ್ತಿ ಬಳಿಕ ಉದ್ಘಾಟನೆ, ಹೊಸ ಸೇತುವೆ ಶೀಘ್ರ ನಿರ್ಮಿಸಲು ಕ್ರಮ : ನಳಿನ್

Wednesday, May 20th, 2020
kulooru-bridge

ಕೂಳೂರು:  ನೂತನ ತಂತ್ರಜ್ಞಾನದೊಂದಿಗೆ ಕೂಳೂರು ಹಳೇ ಸೇತುವೆ ದುರಸ್ತಿಯಾಗಿದ್ದು ಬುಧವಾರ ಸಾಂಕೇತಿಕವಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿದರು. ಮೈಕ್ರೋ ಕೊನ್ಟೆಸ್ಟ್ ತಂತ್ರಜ್ಞಾನದೊಂದಿಗೆ ಇದನ್ನು 38ಲಕ್ಷ ರೂ.ವೆಚ್ಚದಲ್ಲಿ ದುರಸ್ತಿ ಗೊಳಿಸಲಾಗಿದ್ದು ಈ ಸೇತುವೆ ಜೀರ್ಣಾವಸ್ಥೆಯಲ್ಲಿತ್ತು.ಇದನ್ನು ದುರಸ್ತಿ ಮಾಡದೆ ನೂತನ ಸೇತುವೆ ನಿರ್ಮಾಣಕ್ಕಿಳಿದರೆ ವಾಹನ ಓಡಾಟಕ್ಕೆ ಸಮಸ್ಯೆ ಆಗುತ್ತಿದೆ. ಹೀಗಾಗಿ ಇದನ್ನು ದುರಸ್ತಿ ಗೊಳಿಸಲಾಗಿದೆ, ಹೊಸ ಸೇತುವೆ ಶೀಘ್ರ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಇದೇ ವೇಳೆ ಗುರುಪುರ ಸೇತುವೆ ಕುರಿತಂತೆ ಉತ್ತರಿಸಿದ ಅವರು ಸೇತುವೆ ಕೆಲಸ […]

ಬಂಟ್ವಾಳ : ಟಿಪ್ಪು ನಗರದಲ್ಲಿ ಎರಡು ದನದ ತಲೆ, ಎರಡು ಕಿಂಟ್ವಾಲ್ ಮಾಂಸ, ಜಾನುವಾರು ಕಡಿಯುವ ಸಲಕರಣೆ ವಶ

Tuesday, May 19th, 2020
Cow-shulter

ಬಂಟ್ವಾಳ :  ಅಕ್ರಮ ಕಸಾಯಿಖಾನೆಗೆ ಪೊಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ಮಂಗಳವಾರ ನಡೆದಿದೆ. ಲೊರೆಟ್ಟೋ ನಿವಾಸಿಗಳಾದ ಉಮ್ಮರ್ ಫಾರೂಕ್, ಆದಂ ಮತ್ತು ಆಸ್ಬಕ್ ಬಂಧಿತ ಆರೋಪಿಗಳು. ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಲೊರೆಟ್ಟೋ ಟಿಪ್ಪು ನಗರದಲ್ಲಿ ಶಂಶುದ್ದೀನ್ ಎಂಬಾತನ ಮನೆಯ ಬಳಿಯ ಅಕ್ರಮ ಕಟ್ಟಡದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಹತ್ಯೆ ಮಾಡಿ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಮುಂಜಾನೆ ಬಂಟ್ವಾಳ ನಗರ ಠಾಣಾ ಎಸ್.ಐ.ಅವಿನಾಶ್ ನೇತೃತ್ವದಲ್ಲಿ ಬಂಟ್ವಾಳ ಪೊಲೀಸರ ತಂಡ […]