ಜಿಲ್ಲೆಗೆ 20 ಸಾವಿರ ಕ್ವಿಂಟಾಲ್ ಕುಚ್ಚಲಕ್ಕಿ: ಸಚಿವ ಕೋಟಾ

Friday, April 3rd, 2020
ಜಿಲ್ಲೆಗೆ 20 ಸಾವಿರ ಕ್ವಿಂಟಾಲ್ ಕುಚ್ಚಲಕ್ಕಿ: ಸಚಿವ ಕೋಟಾ

ಮಂಗಳೂರು  : ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡಿತರ ಕಾರ್ಡುದಾರರಿಗೆ ವಿತರಣೆ ಮಾಡಲು ದಕ್ಷಿಣ ಕನ್ನಡ ಜಿಲ್ಲೆಗೆ 20 ಸಾವಿರ ಕ್ವಿಂಟಾಲ್ ಕುಚ್ಚಲಕ್ಕಿ ಬಿಡುಗಡೆಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಪಡಿತರದಲ್ಲಿ ಕುಚ್ಚಲಕ್ಕಿ ನೀಡಬೇಕೆಂದು ವ್ಯಾಪಕ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಸರಕಾರ ಇದಕ್ಕೆ ಒಪ್ಪಿಗೆ ನೀಡಿದೆ. ಇದೀಗ ಲಭ್ಯವಿರುವ 20000 ಕ್ವಿಂಟಾಲ್ ಕುಚ್ಚಲಕ್ಕಿ ಜಿಲ್ಲೆಗೆ ಬಿಡುಗಡೆ ಮಾಡಲಾಗಿದೆ. ಮುಂದಿನ ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಕುಚ್ಚಲಕ್ಕಿ ಜಿಲ್ಲೆಗೆ ಬಿಡುಗಡೆಯಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ. 61302 […]

ಮಂಗಳೂರು : ಕೊರೋನಾ ಅಪ್ ಡೇಟ್ ನೀಡದ ಜಿಲ್ಲಾಡಳಿತ

Friday, April 3rd, 2020
corona

ಮಂಗಳೂರು  : ಕೋವಿಡ್‌- 19 ದೃಢಪಟ್ಟು ನಗರದ ವೆನ್ಲಾಕ್ ಜಿಲ್ಲಾಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಬಗ್ಗೆ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಯಾವುದೇ ರೀತಿಯ ಮಾಹಿತಿ ನೀಡುತ್ತಿಲ್ಲ. ಜಿಲ್ಲಾಡಳಿತದಿಂದ ಬಿಡುಗಡೆಗೊಳ್ಳುವ ಹೆಲ್ತ್‌ ಬುಲೆಟಿನ್‌ನಲ್ಲಿ ಒಂದು ಬಾರಿಯಷ್ಟೇ ಸೋಂಕಿತರ ಆರೋಗ್ಯ ಸುಧಾರಿಸುತ್ತಿದೆ ಎಂದು ಮಾಹಿತಿ ನೀಡಲಾಗಿತ್ತು. ಈ ನಡುವೆ, ಕೋವಿಡ್‌- 19 ಪಾಸಿಟಿವ್‌ ಕಂಡುಬಂದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 10 ತಿಂಗಳ ಶಿಶುವಿನ ಆರೋಗ್ಯ ಸುಧಾರಿಸುತ್ತಿರುವುದಾಗಿ ಮಗುವಿನ ಸಂಬಂಧಿಕರು ಹೇಳಿಕೊಂಡಿದ್ದಾರೆ. ಉಸಿರಾಟದ […]

ಕೊರೋನಾ ಬಂದೈತೀ ಅಣ್ಣಾ ಎಚ್ಚರಗೊಳ್ಳಣ್ಣ

Wednesday, April 1st, 2020
corona

ನಮ್ಮ ನಾಡಿಗೆ ಕೊರೋನಾ ಬಂದೈತೀ ಅಣ್ಣಾ ಎಚ್ಚರಗೊಳ್ಳಣ್ಣ ಭಯ – ಭೀತಿ ಯಾಕಣ್ಣ ಸ್ವಚ್ಛತೆಯಾ ಕಾಪಾಡಣ್ಣ . ಮಾಸ್ಕನು ಮುಖಕ್ಕೆ ಧರಿಸು ಒಳಗಿನ ಅಹಂ ನೀ ಸರಿಸು , ಸ್ವಚ್ಛತೆಯ ನೀ ಸ್ಮರಿಸು ಬಳಿ ಸುಳಿಯಲ್ಲಾ ಯಾವ ವೈರಸ್ಸು . ಅಕ್ಕ ಪಕ್ಕದವರಿಗೆ ತಿಳಿಸು ಈ ನಾಡನು ನೀ ಉಳಿಸು ವಿದೇಶದಲ್ಲಿ ಹೆಚ್ಚು ಹರಡೈತೀ ಸಾವಿನ ಸಂಖ್ಯಿ ಮುಗಿಲು ಮುಟೈತೀ, ಯಾಮಾರಿದರ ನಿನ್ನ ಬಳಿಗೂ ಬರುತೈತೀ ಸಾವಿನ ಭಯ ತರುತೈತೀ ನಿನ್ನ ಸ್ವಯಂ ಸ್ವಚ್ಛತೆಯೇ ಇದಕ್ಕ ಮದ್ದು […]

ಉಡುಪಿ ಜಿಲ್ಲೆಯಲ್ಲಿ ಮತ್ತೆ ಎರಡು ಕೋವಿಡ್ 19 ಪಾಸಿಟಿವ್ ಪ್ರಕರಣ ಪತ್ತೆ

Sunday, March 29th, 2020
covid udupi

ಉಡುಪಿ: ಜಿಲ್ಲೆಯಲ್ಲಿ ಮೊದಲ ಕೋವಿಡ್ 19 ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾದ ನಾಲ್ಕು ದಿನಗಳ ಬಳಿಕ ಇಂದು ಮತ್ತೆ ಎರಡು ಮಂದಿಯಲ್ಲಿ ಈ ಸೋಂಕು ಪಾಸಿಟಿವ್ ವರದಿ ಬಂದಿದೆ. ದಕ್ಷಿಣ ಕನ್ನಡದಲ್ಲಿ ಕೋವಿಡ್ 19 ಸೋಂಕು ಪೀಡಿತರ ಪ್ರಕರಣಗಳು ಹೆಚ್ಚಾಗುತ್ತಿದ್ದರೂ, ಉಡುಪಿಯಲ್ಲಿ ಮಾತ್ರ ಈ ಮಾಹಾಮಾರಿ ನಿಯಂತ್ರಣದಲ್ಲಿತ್ತು. ಆದರೆ ಇಂದು ಮತ್ತೆ ಎರಡು ಪ್ರಕರಣಗಳು ಪತ್ತೆಯಾಗಿರುವುದು ಸಹಜವಾಗಿಯೇ ಜಿಲ್ಲೆಯ ಜನರ ಆತಂಕವನ್ನು ಹೆಚ್ಚು ಮಾಡಿದೆ. ಒಟ್ಟು ತಪಾಸಣೆ 1,992 ಮಂದಿ. 14+28 ದಿನಗಳ ಮನೆ ನಿಗಾ ಪೂರೈಸಿದವರು  1,055. […]

ಸ್ಯಾನಿಟೈಸರ್ಸ್ ಮತ್ತು ಮಾಸ್ಕ್ ಗಳ ನಿರ್ಮಾಣಕ್ಕೆ ಖೈದಿಗಳ ಬಳಕೆ

Saturday, March 28th, 2020
mask

ಬೆಂಗಳೂರು :  ವೈರಸ್ ನಿಯಂತ್ರಣದಲ್ಲಿ ಸ್ಯಾನಿಟೈಸರ್ಸ್ ಮತ್ತು ಮಾಸ್ಕ್ ಗಳ ಪಾತ್ರ ಗಣನೀಯವಾಗಿದ್ದು, ಇದೇ ಕಾರಣಕ್ಕೆ ಸ್ಯಾನಿಟೈಸರ್ಸ್ ಮತ್ತು ಮಾಸ್ಕ್ ಗಳ ತಯಾರಿಕಾ ಸಂಸ್ಥೆಗಳು ಇವುಗಳ ತಯಾರಿಕೆಯನ್ನು ಗಣನೀಯ ಪ್ರಮಾಣದಲ್ಲಿ ಹೆಚ್ಚಳ ಮಾಡಿವೆ. ಇದಾಗ್ಯೂ ದೇಶದಲ್ಲಿ ಸ್ಯಾನಿಟೈಸರ್ಸ್ ಮತ್ತು ಮಾಸ್ಕ್ ಗಳ ಗಣನೀಯ ಕೊರತೆ ಕಾಣುತ್ತಿದೆ. ಇದೇ ಕಾರಣಕ್ಕೆ ದೇಶದ ಜೈಲುಗಳಲ್ಲಿರುವ ಲಕ್ಷಾಂತರ ಖೈದಿಗಳು ಇದೀಗ ಸ್ಯಾನಿಟೈಸರ್ಸ್ ಮತ್ತು ಮಾಸ್ಕ್ ಗಳ ತಯಾರಿಕೆಯಲ್ಲಿ ತೊಡಗಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಖೈದಿಗಳಿಂದ ಪ್ರತಿನಿತ್ಯ 15 ಸಾವಿರ ಮಾಸ್ಕ್ […]

ಪೋಲೀಸರು, ಆರೋಗ್ಯ ಅಧಿಕಾರಿಗಳು, ಮಾಧ್ಯಮದವರಿಗಾಗಿ ಉಚಿತ ಪೆಟ್ರೋಲ್ ಮತ್ತು ಡಿಸೇಲ್

Saturday, March 28th, 2020
Bharath padubidre

ಉಡುಪಿ  : ಇದು ಸರಕಾರದ ಕೊಡುಗೆಯಲ್ಲ ಕೊರೊನಾ ವೈರಸ್‌ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರಿಗೆ ಹಾಗೂ ಮಾಧ್ಯಮದವರಿಗೆ ಪಡುಬಿದ್ರಿ ಕಂಚಿನಡ್ಕದ ಭಾರತ್ ಪೆಟ್ರೋಲಿಯಮ್ ಸಂಸ್ಥೆ ಉಚಿತ ಪೆಟ್ರೋಲ್, ಡಿಸೇಲ್‌ ವಿತರಣೆ ಮಾಡುತ್ತಿದೆ. ಜಗಜೀವನ್ ಚೌಟ ಇವರ ಮಾಲಿಕತ್ವದ ಪೆಟ್ರೋಲ್ ಬಂಕ್‌ನಲ್ಲಿ ಸಾಮಾಜಿಕ ಕಳಕಳಿಯಿಂದ ಶನಿವಾರ ಬೆಳಿಗ್ಗೆ 9 ರಿಂದ ಮದ್ಯಾಹ್ನ 12 ಗಂಟೆ ವರೆಗೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ಕೊರೋನಾ ಸೋಕು ಸಂಬಂಧಿ ಕರ್ತವ್ಯ ದಲ್ಲಿರುವ ಪೋಲೀಸರು, ಆರೋಗ್ಯ ಅಧಿಕಾರಿಗಳು ಹಾಗೂ ಮಾಧ್ಯಮದವರಿಗಾಗಿ ಉಚಿತ ಪೆಟ್ರೋಲ್ […]

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಕೋವಿಡ್ 19 ಪ್ರಕರಣ ಪತ್ತೆ

Sunday, March 22nd, 2020
wenlock

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಕೋವಿಡ್ 19 ಪ್ರಕರಣ ಪತ್ತೆಯಾಗಿದ್ದು, ಮಾರ್ಚ್ 19ರಂದು ದುಬಾಯಿಯಿಂದ ಬಂದ ವಿಮಾನದಲ್ಲಿದ್ದ 22 ವರ್ಷದ ಯುವಕನಲ್ಲಿ ಕೋವಿಡ್ 19 ಪ್ರಕರಣ ದೃಢಪಟ್ಟ ವರದಿ ಲಭಿಸಿದೆ. ದುಬಾಯಿಯಿಂದ ಮಾರ್ಚ್ 19ರಂದು ನಗರದ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದ 22 ವರ್ಷದ ಭಟ್ಕಳ ಮೂಲದ ಯುವಕನನ್ನು ಅಂದು ತಪಾಸಣೆ ನಡೆಸಿ ಆತನ ಗಂಟಲ ಸ್ರಾವದ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಮತ್ತು ಆ ದಿನವೇ ಈತನನ್ನು ನಗರದ ವೆನ್ಲಾಕ್ ಆಸ್ಪತ್ರೆಯ ಐಸೊಲೇಷನ್ ವಾರ್ಡ್ನಲ್ಲಿ ದಾಖಲಿಸಲಾಗಿತ್ತು. ಆ […]

ಪರೀಕ್ಷೆ ಇಲ್ಲದೆ ಪಾಸ್‌ ಇಲ್ಲ : ಸಾರ್ವಜನಿಕ ಶಿಕ್ಷಣ ಇಲಾಖೆ ಸ್ಪಷ್ಟನೆ

Wednesday, March 18th, 2020
exam

ಬೆಂಗಳೂರು : ಕೊರೊನಾ ವೈರಸ್‌ ಸೋಂಕು ಭೀತಿ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಆದರೆ 7 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೇ ಮುಂದಿನ ತರಗತಿಗಳಿಗೆ ಬಡ್ತಿ ನೀಡುವ ಪ್ರಸ್ತಾಪ ಸದ್ಯಕ್ಕಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. ಈ ಬಗ್ಗೆ ವಿವರಣೆ ನೀಡಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ. ಕೆ.ಜಿ. ಜಗದೀಶ್‌, ಈಗಾಗಲೇ 1 ರಿಂದ 6ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಸಂಪೂರ್ಣವಾಗಿ ರಜೆ ಘೋಷಣೆ ಮಾಡಲಾಗಿದೆ. 7ರಿಂದ 9 ನೇ ತರಗತಿ […]

ಕೊರೊನಾ ತಡೆಗಟ್ಟಲು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸರ್ವ ವ್ಯವಸ್ಥೆ

Wednesday, March 18th, 2020
sindhu

ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇದುವರೆಗೆ 29,053 ಜನರು ಹಾಗೂ ನವಮಂಗಳೂರು ಬಂದರಿನಲ್ಲಿ 5,543 ಜನರನ್ನು ತಪಾಸಣೆ ಮಾಡಲಾಗಿದೆ. ದ.ಕ. ಜಿಲ್ಲೆಯಲ್ಲಿ ಕೊರೊನಾ ಶಂಕಿತರ ಮೇಲೆ ನಿಗಾ ವಹಿಸಲು ವೆನ್ಲಾಕ್ ನಲ್ಲಿ ನಿಗಾವಣಾ (ಕ್ವಾರಂಟೈನ್‌) ವಾರ್ಡ್‌ 10 ಹಾಗೂ ಪ್ರತ್ಯೇಕತಾ (ಐಸೋಲೇಶನ್‌) 6 ವಾರ್ಡ್‌ ಮಾಡಲಾಗಿದೆ. ತಾಲೂಕುಗಳಲ್ಲಿರುವ ನಿಗಾ ವಾರ್ಡ್‌ನಲ್ಲಿ 167, ಪ್ರತ್ಯೇಕತಾ ವಾರ್ಡ್‌ಗಳಾಗಿ 120ನ್ನು ಸಿದ್ಧಪಡಿಸಲಾಗಿದೆ. ಇಎಸ್‌ಐ ಆಸ್ಪತ್ರೆಯಲ್ಲಿ 100 ಬೆಡ್‌ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿ ಇದುವರೆಗಿನ 46 ಮಾದರಿ ಟೆಸ್ಟ್‌ ನಡೆಸಲಾಗಿದ್ದು, […]

ಬಂದ್‌ ವಿಸ್ತರಣೆ ಮೊಟಕು ಸಂಪುಟ ಸಭೆಯಲ್ಲಿ ತೀರ್ಮಾನ

Wednesday, March 18th, 2020
sriramulu

ಮಂಗಳೂರು : ರಾಜ್ಯದಲ್ಲಿ ಶಾಲಾ ಕಾಲೇಜು, ಮಾಲ್‌ಗ‌ಳು, ಸಿನೆಮಾ ಮಂದಿರಗಳ ಬಂದ್‌ ವಿಸ್ತರಣೆಗೆ ಸಂಬಂಧಿಸಿ ಮುಖ್ಯಮಂತ್ರಿ ಸಭೆ ನಡೆಸಿ ಸೂಕ್ತ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಇಲ್ಲಿಯವರೆಗೆ 10 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಪೈಕಿ ಕಲ್ಬುರ್ಗಿಯ ವ್ಯಕ್ತಿ ಮೃತಪಟ್ಟಿದ್ದಾರೆ. ಅವರ ಸಂಬಂಧಿಕರ ನಾಲ್ವರ ಪೈಕಿ ಈಗ ಒಬ್ಬರಿಗೆ ಪಾಸಿಟಿವ್‌ ಬಂದಿದೆ. ದ.ಕ. ಜಿಲ್ಲೆಯಲ್ಲಿ 115 ಜನರನ್ನು ಅತ್ಯಂತ ಸೂಕ್ಷ್ಮವಾಗಿ ತಪಾಸಣೆ ನಡೆಸಲಾಗಿದೆ. […]