ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶಿಸಿ, ಮುತ್ತಿಗೆ ಹಾಕಲು ಯತ್ನ

Saturday, February 17th, 2024
BJP-protest

ಮಂಗಳೂರು: ರಾಜ್ಯ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶಿಸಿ, ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಹೊರವಲಯ ಬೋಂದೆಲ್ ಬಳಿ ಇಂದು ನಡೆಯಿತು. ಅಡ್ಯಾರ್ ನ ಸಹ್ಯಾದಿ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಭಿತ್ತಿಪತ್ರ ಹಿಡಿದು ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರು, ಕಾರನ್ನು ತಡೆದು ಮುತ್ತಿಗೆ ಹಾಕಲು ಯತ್ನಿಸಿದರು. ಜೆರೋಸಾ ಶಾಲೆಯಲ್ಲಿ […]

ಇಲ್ಲಿನ ಬಡವರಿಗೆ ಅಧಿಕಾರ ಕೊಟ್ಟಿದ್ದು ಕಾಂಗ್ರೆಸ್ ಪಾರ್ಟಿ : ಮಲ್ಲಿಕಾರ್ಜುನ್ ಖರ್ಗೆ

Saturday, February 17th, 2024
Kharge

ಮಂಗಳೂರು: ಮಂಗಳೂರಿನ ಜನ ಮುಂಜಾನೆ ಎದ್ದ ಕೂಡಲೇ ಕಾಂಗ್ರೆಸ್‌ಗೆ ಬೈತಾರೆ. ಧರ್ಮದ ಹೆಸರಲ್ಲಿ ಶ್ರೀಮಂತರು ಬಡವರನ್ನು ತುಳಿಯುತ್ತಿದ್ದಾರೆ. ಮಂಗಳೂರು ಉಡುಪಿಯಲ್ಲಿ ಸೇತುವೆ ನಿರ್ಮಾಣ ಮಾಡಿದ್ದು ಕಾಂಗ್ರೆಸ್ ಕಾಲದಲ್ಲಿ. ಬಂದರು ನಿರ್ಮಾಣ, ವಿಮಾನ ನಿಲ್ದಾಣ ಆಗಿದ್ದು ಕಾಂಗ್ರೆಸ್ ಕಾಲದಲ್ಲಿ. ಎಲ್ಲಾ ಬೃಹತ್ ಯೋಜನೆಗಳೂ ಕಾಂಗ್ರೆಸ್ ಕಾಲದಲ್ಲಿಯೇ ಆಗಿದ್ದು. ಮಣಿಪಾಲ ಶೈಕ್ಷಣಿಕ ಅಭಿವೃದ್ಧಿ, ಬ್ಯಾಂಕ್‌ಗಳನ್ನು ಕೊಟ್ಟಿರೋದೂ ಕಾಂಗ್ರೆಸ್ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹೇಳಿದರು. ಮಂಗಳೂರಿನ ಅಡ್ಯಾರ್​ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಶನಿವಾರ ನಡೆದ ಕಾಂಗ್ರೆಸ್​ ಸಮಾವೇಶದಲ್ಲಿ ಮಾತನಾಡಿದ […]

ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ

Wednesday, February 14th, 2024
ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ

ಬೆಂಗಳೂರು: ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ ಮಾಡುವುದಾಗಿ ಸರ್ಕಾರ ಘೋಷಣೆ ಮಾಡಿದೆ. ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ನ ಸದಸ್ಯ ಮಧು ಜಿ ಮಾದೇಗೌಡ ಪ್ರಶ್ನೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಉತ್ತರ ನೀಡಿದರು. ಹೈ ಸೆಕ್ಯುರಿಟಿ‌ ನಂಬರ್ ಪ್ಲೇಟ್ ಅಳವಡಿಕೆಗೆ ಫೆಬ್ರವರಿ 17, 2024ಕಕ್ಕೆ ಗಡುವು ಮುಕ್ತಾಯವಾಗಲಿದೆ. ಹೀಗಾಗಿ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ […]

ಉಡುಪಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹುಟ್ಟುಹಬ್ಬ ಆಚರಣೆ

Wednesday, February 14th, 2024
ಉಡುಪಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹುಟ್ಟುಹಬ್ಬ ಆಚರಣೆ

ಉಡುಪಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರ ಜನ್ಮದಿನದ ಪ್ರಯುಕ್ತ ಬೈಂದೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶೇಖರ್ ಪೂಜಾರಿಯವರ ನೇತೃತ್ವದಲ್ಲಿ ಕುಂದಾಪುರ ತಾಲೂಕು ಮೂಡುಬಗೆಯ ವಾಗ್ಜ್ಯೋತಿ ಶ್ರವಣದೋಷವುಳ್ಳ ಮಕ್ಕಳ ವಸತಿ ಶಾಲೆ ಯ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ ಹಾಗೂ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡುವುದರ ಮೂಲಕ ಆಚರಿಸಲಾಯಿತು. ಶ್ರವಣದೋಷವುಳ್ಳ ಮಕ್ಕಳಿಂದ ಸಚಿವರಿಗೆ ವಿಷ್ಸಚಿವೆ […]

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ, 2022 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

Wednesday, February 14th, 2024
ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ, 2022 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

ಉಡುಪಿ : ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣ ನಡೆದು 90 ದಿನಗಳು ಪೂರ್ಣಗೊಂಡು ಚಾರ್ಜ್ ಶೀಟ್ ನ್ನು ಉಡುಪಿ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಉಡುಪಿಯ ನೇಜಾರು ಸಮೀಪದ ತೃಪ್ತಿ ಲೇ ಔಟ್ ನಲ್ಲಿ ತಾಯಿ ಮತ್ತು ಮಕ್ಕಳ ಭೀಕರ ಹತ್ಯೆ ಮಾಡಲಾಗಿತ್ತು. ಇದೀಗ ಪೊಲೀಸ್ ತನಿಖೆ ಪೂರ್ಣಗೊಂಡಿದ್ದು‌ 244 ಸಾಕ್ಷಿಗಳನ್ನು ಸಂಗ್ರಹಿಸಿದ್ದಾರೆ. ಎಫ್ ಎಸ್ ಎಲ್ ವರದಿಯೂ ಕೈ ಸೇರಿದೆ. ಮಾರ್ಗ ‌ಮಧ್ಯೆ ಬಿಸಾಕಿರುವ ಬಟ್ಟೆ ಆರೋಪಿಯದ್ದೆ ಎನ್ನುವುದು ಎಫ್ ಎಸ್ ಎಲ್ ವರದಿಯಿಂದ […]

ಉರ್ವ ಶ್ರೀ ಮಾರಿಯಮ್ಮ ದೇವರ ಪುನರ್ ಪ್ರತಿಷ್ಟೆ ಸಂಭ್ರಮ, ಸೊಬಗು – ವಿಡಿಯೋ

Tuesday, February 13th, 2024
Urwa-Mariyamma

ಮಂಗಳೂರು : ಸುಮಾರು 600 ವರ್ಷಗಳ ಇತಿಹಾಸವಿರುವ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಬ್ರಹ್ಮಕಲಶದ ಸಂಭ್ರಮ ಆರಂಭಗೊಂಡಿದೆ. ಫೆಬ್ರವರಿ 13ರ ಮಂಗಳವಾರ ಬಾಲಾಲಯದಲ್ಲಿದ್ದ ಶ್ರೀ ಮಾರಿಯಮ್ಮ ದೇವರನ್ನು ಗರ್ಭಗುಡಿಗೆ ವಾದ್ಯಘೋಷಗಳೊಂದಿಗೆ ತಂದು ವಿಜೃಂಭಣೆಯಿಂದ ಪುನರ್ ಪ್ರತಿಷ್ಠಾಪಿಸಲಾಯಿತು. ಈ ಸಂದರ್ಭ ಪ್ರತಿಷ್ಠಾಕಲಶ, ಪಂಚಬ್ರಹ್ಮ ಮಹಾಮಂತ್ರ ಹೋಮ ನಡೆಯಿತು. ಬ್ರಹ್ಮಕಲಶದ ವಿಧಿ ವಿಧಾನಗಳು ಫೆಬ್ರವರಿ 11 ರಿಂದ 15 ರ ವರೆಗೆ ನಡೆದು ಫೆಬ್ರವರಿ 15 ರಂದು ಬೆಳಗ್ಗೆ 8.12 ರ ಸುಮೂಹೂರ್ತದಲ್ಲಿ ಶ್ರೀ ಮಾರಿಯಮ್ಮ ದೇವರಿಗೆ ಬ್ರಹ್ಮಕಲಶಾಭಿಷೇಕ ನಡೆಯಲಿದೆ. […]

ಶಿಕ್ಷಕನ ಅವಮಾನ ತಾಳಲಾರದೆ ಇಲಿ ಪಾಷಾಣ ಸೇವಿಸಿದ್ದ ವಿದ್ಯಾರ್ಥಿನಿ ಮೃತ್ಯು

Tuesday, February 13th, 2024
trisha

ಬೆಳ್ತಂಗಡಿ : ಶಿಕ್ಷಕ ಕಳುಹಿಸಿದ ಮೊಬೈಲ್ ಸಂದೇಶದಿಂದ ಅವಮಾನಗೊಂಡು ವಿಷ (ಇಲಿ ಪಾಷಾಣ) ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಧರ್ಮಸ್ಥಳದ ಪಿಜತ್ತಡ್ಕದ ಕಿಶೋರ್-ಸೌಮ್ಯಾ ದಂಪತಿ ಪುತ್ರಿ ತ್ರಿಶಾ(16) ಮೃತ ವಿದ್ಯಾರ್ಥಿನಿ. ಫೆ.7ರಂದು ವಿಷ ಸೇವಿಸಿದ್ದ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾಳೆ. ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ […]

ಪ್ರಭು ಶ್ರೀರಾಮನ ಅವಹೇಳನ : ಸಂತ ಜೆರೋಸಾ ಶಾಲೆಯ ಶಿಕ್ಷಕಿ ಅಮಾನತು

Monday, February 12th, 2024
st gerosa school

ಮಂಗಳೂರು : ಅಯೋಧ್ಯಾ ಹಾಗೂ ಶ್ರೀರಾಮನ ಅವಹೇಳನ ಮಾಡಿದ ಆರೋಪದಲ್ಲಿ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ಆಡಳಿತ ಮಂಡಳಿ ಅಮಾನತು ಮಾಡಿದೆ. ಫೆಬ್ರವರಿ 8ರಂದು ‘Work is worship’ ಎಂಬ ವಿಷಯ ಬಗ್ಗೆ ಪಾಠ ಮಾಡಿದ್ದ ಶಿಕ್ಷಕಿ ಸಿಸ್ಟರ್ ಪ್ರಭಾ ಅಯೋಧ್ಯೆ ರಾಮಮಂದಿರ ಹಾಗೂ ಪ್ರಭು ಶ್ರೀರಾಮನ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ತಮ್ಮ ಪೋಷಕರ ಬಳಿ ಹೇಳಿಕೊಂಡಿದ್ದರು. ನಂತರ ಪೋಷಕರು ಮತ್ತು ಹಿಂದೂ ಕಾರ್ಯಕರ್ತರು ಶಿಕ್ಷಕಿ ವಿರುದ್ಧ ಆಕ್ರೋಶ ಹೊರಹಾಕಿದ್ದರು. […]

ಇಬ್ಬರು ಕಲಾವಿದರಿಗೆ ‘ಬಳ್ಕೂರು ಯಕ್ಷ ಕುಸುಮ’ ಪುರಸ್ಕಾರ

Monday, February 12th, 2024
yaksha-kusuma

ಮಂಗಳೂರು : ಯಕ್ಷರಂಗವು ನನ್ನ ಬದುಕಿಗೆ ಅಭಿಮಾನಗಳ ಪ್ರೀತಿ ಮತ್ತು ಹೊಸತನದ ಸ್ಪೂರ್ತಿಯನ್ನು ನೀಡಿದೆ ಅದು ಮರೆಯಲಾದ ಅವಿಸ್ಮರಣೀ ಕ್ಷಣಗಳು ಎಂದು ರಾಷ್ಟ್ರ ಪ್ರಶಸ್ತಿ ವಿಜೇತ ಯಕ್ಷಗಾನ ಕಲಾವಿದ 96 ವಯಸ್ಸಿನ ಸೂರಿಕುಮೇರು ಕೆ ಗೋವಿಂದ ಭಟ್ ಹೇಳಿದರು. ಅವರು ಬಳ್ಕೂರು ಯಕ್ಷ ಕುಸುಮ ಪ್ರತಿಷ್ಠಾನ ಮತ್ತು ರಂಗಸ್ಥಳ ಮಂಗಳೂರು (ರಿ) ಇವರ ಆಶ್ರಯದಲ್ಲಿ ಶ್ರೀಕ್ಷೇತ್ರ ಕುದ್ರೋಳಿ ಭಗವತೀ ದೇವಸ್ಥಾನದ ‘ಕೂಟಕಳಮ್ ಆಡಿಟೋರಿಯಂ ನಲ್ಲಿ ನಡೆದ ಯಕ್ಷಗಾನ ಕಾರ್ಯಕ್ರಮದಲ್ಲಿ ‘ಬಳ್ಕೂರು ಯಕ್ಷ ಕುಸುಮ’ ಪುರಸ್ಕಾರವನ್ನು ಸ್ವೀಕರಿಸಿ ಮಾತನಾಡಿದರು. […]

ಪತ್ರಕರ್ತರ ಗ್ರಾಮ ವಾಸ್ತವ್ಯ‌ ಕಾರ್ಯಕ್ರಮ ರಾಜ್ಯಕ್ಕೆ ಮಾದರಿ-ಸ್ಪೀಕರ್ ಯು.ಟಿ.ಖಾದರ್

Monday, February 12th, 2024
Journalist

ಕೊಲ್ಲಮೊಗ್ರ: ತಮ್ಮ ಒತ್ತಡದ ಕೆಲಸದ ಮಧ್ಯೆಯೂ ಗ್ರಾಮ ವಾಸ್ಯವ್ಯ ಮಾಡಿ ಆ ಊರಿನ ಸಮಸ್ಯೆಗಳನ್ನು ಅರಿತು ಪರಿಹಾರಕ್ಕಾಗಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಪತ್ರಕರ್ತರು ಮಾಡಿದ ಗ್ರಾಮ ವಾಸ್ತವ್ಯ ರಾಜ್ಯಕ್ಕೆ ಮಾದರಿಯಾಗಿದೆ ಎಂದು ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದ್ದಾರೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್, ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ.ಜಿಲ್ಲಾ ಪಂಚಾಯತ್, ದ.ಕ.ಪೊಲೀಸ್ ಇಲಾಖೆ, ಸುಳ್ಯ ತಾಲೂಕು ಆಡಳಿತ, ಹರಿಹರ, ಕೊಲ್ಲಮೊಗರು […]